Homeಕರೋನಾ ತಲ್ಲಣಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ರೋಗದ ದಾಳಿ ಇನ್ನೂ ಮುಗಿದಿಲ್ಲ. ಆದರೆ ಈ ವಿಶ್ವ ನಾಯಕರು ಈಗಾಗಲೇ ಮಾರಣಾಂತಿಕ ಕೊರೋನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ವಿಫಲವಾದ ಕಾರಣ ಇತಿಹಾಸದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

- Advertisement -
- Advertisement -

ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲರಾದ ಐವರು ವಿಶ್ವನಾಯಕರ ಆಡಳಿತ ಶೈಲಿ ಕುರಿತು ಇಲ್ಲಿ ವಿಶ್ಲೇಷಣೆಯಿದೆ. ಭಾರತೀಯರಾದ ಪ್ರೊ. ಸುಮಿತ್ ಗಂಗೂಲಿ ಸೇರಿದಂತೆ ಹಲವು ದೇಶಗಳ ತಜ್ಞರು, ಪ್ರೊಫೆಸ್‌ರ್‌ಗಳು ಮತ್ತು ವೈದ್ಯರ ನಡುವೆ ನಡೆದ ಚರ್ಚೆಯನ್ನು ‘ದಿ ವೈರ್’ ಸಂಗ್ರಹಿಸಿ ಕೊಟ್ಟಿದೆ.

‘ಕೆಲವು ಪ್ರಸ್ತುತ ಮತ್ತು ಮಾಜಿ ವಿಶ್ವ ನಾಯಕರು ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅಲಕ್ಷ್ಯ ಮಾಡುವ ಮೂಲಕ, ವಿಜ್ಞಾನವನ್ನು ಕಡೆಗಣಿಸುವ ಮೂಲಕ, ಸಾಮಾಜಿಕ ದೂರ ಮತ್ತು ಮಾಸ್ಕ್‌ಗಳಂತಹ ಆರೋಗ್ಯದ ಮಧ್ಯಸ್ಥಿಕೆಗಳನ್ನು ನಿರ್ಲಕ್ಷಿಸುವ ಮೂಲಕ ತಮ್ಮ ದೇಶದಲ್ಲಿ ಕೊರೊನಾ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಈ ಪಟ್ಟಿಯಲ್ಲಿರುವ ಐವರೂ ಪುರುಷ ಸಿಂಹಗಳೇ! ಭಾರತದ ನರೇಂದ್ರ ಮೋದಿ ಅದರಲ್ಲಿ ಒಬ್ಬರು ಎನ್ನುತ್ತಾರೆ’ ಇಂಡಿಯಾನಾ ವಿಶ್ವವಿದ್ಯಾಲಯದ ಪ್ರೊ. ಸುಮಿತ್ ಗಂಗೂಲಿ.

ಭಾರತವು ಜಾಗತಿಕ ಸಾಂಕ್ರಾಮಿಕದ ಹೊಸ ಕೇಂದ್ರಬಿಂದುವಾಗಿದ್ದು, ಮೇ 2021 ರ ಹೊತ್ತಿಗೆ ದಿನಕ್ಕೆ ಸುಮಾರು 4 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ. ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳು ಸಾಯುತ್ತಿದ್ದಾರೆ, ಏಕೆಂದರೆ ಆಮ್ಲಜನಕವಿಲ್ಲ ಮತ್ತು ಚಿಕಿತ್ಸೆಗೆ ಅಗತ್ಯವಾದ ಔಷಧಿಗಳಿಲ್ಲ ಮತ್ತು ವೆಂಟಿಲೇಟರ್‌ಗಳೂ ಇಲ್ಲ. ಜೊತೆಗೆ ಉಚಿತ ಹಾಸಿಗೆಗಳೇ ಲಭ್ಯವಿಲ್ಲ.

ದೇಶದ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸುತ್ತಾರೆ: ಪ್ರಧಾನಿ ನರೇಂದ್ರ ಮೋದಿ!

ಜನವರಿ 2021ರಲ್ಲಿ, ಮೋದಿ ಜಾಗತಿಕ ವೇದಿಕೆಯಲ್ಲಿ ಭಾರತವು “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಿ ಗೆದ್ದಿದೆ” ಎಂದು ಘೋಷಿಸಿದರು. ಮಾರ್ಚ್‌ನಲ್ಲಿ ಅವರ ಆರೋಗ್ಯ ಸಚಿವರು ಸಾಂಕ್ರಾಮಿಕ ರೋಗವು “ಎಂಡ್ ಗೇಮ್” ತಲುಪುತ್ತಿದೆ ಎಂದು ಘೋಷಿಸಿದರು. ವಾಸ್ತವವಾಗಿ ಭಾರತದಲ್ಲಿ ಮತ್ತು ವಿಶ್ವಾದ್ಯಂತ ಕೊರೊನಾ ಶಕ್ತಿಯನ್ನು ಪಡೆಯುತ್ತಿತ್ತು. ಆದರೆ ಮೋದಿ ಸರ್ಕಾರವು ಸಂಭವನೀಯ ಆಕಸ್ಮಿಕಗಳಿಗೆ ಯಾವುದೇ ಸಿದ್ಧತೆಗಳನ್ನು ಮಾಡಲಿಲ್ಲ.

ದೇಶದಲ್ಲಿ ಕೋವಿಡ್ ಎರಡನೆ ಅಲೆ ತೀವ್ರವಾಗುವ ಸಂದರ್ಭದಲ್ಲಿ ಮೋದಿ ಮತ್ತು ಅವರ ಪಕ್ಷದ ಇತರ ಸದಸ್ಯರು ಏಪ್ರಿಲ್ ಚುನಾವಣೆಗೆ ಮುಂಚಿತವಾಗಿ ಹೊರಾಂಗಣ ಪ್ರಚಾರ ರ‍್ಯಾಲಿಗಳನ್ನು ನಡೆಸಿದರು. ಆ ರ‍್ಯಾಲಿಗಳಲ್ಲಿ ಮಾಸ್ಕ್ ಇರಲಿಲ್ಲ, ದೈಹಿಕ ಅಂತರ ಇರಲು ಸಾಧ್ಯವೇ? ಜನವರಿಯಿಂದ ಮಾರ್ಚ್‌ವರೆಗೆ ಲಕ್ಷಾಂತರ ಜನರನ್ನು ಸೆಳೆಯುವ ಕುಂಭಮೇಳ ಉತ್ಸವಕ್ಕೂ ಮೋದಿ ಅವಕಾಶ ನೀಡಿದರು. ಸಾರ್ವಜನಿಕ ಆರೋಗ್ಯ ಅಧಿಕಾರಿಗಳು, ತಜ್ಞರು ಈಗ ಉತ್ಸವವು ಒಂದು ಸೂಪರ್-ಸ್ಪ್ರೆ ಡರ್ ಆಗಿದೆ ಎನ್ನುತ್ತಿದ್ದಾರೆ.

ಕಳೆದ ವರ್ಷ ಮೋದಿಯವರು ತಮ್ಮ ಯಶಸ್ಸನ್ನು ತಿಳಿಸಿದಂತೆ, ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಭಾರತವು 10 ದಶಲಕ್ಷಕ್ಕೂ ಹೆಚ್ಚಿನ ಲಸಿಕೆ ಪ್ರಮಾಣವನ್ನು ನೆರೆಯ ದೇಶಗಳಿಗೆ ಕಳುಹಿಸಿತು. ಭಾರತದ 139 ಕೋಟಿ ಜನರಲ್ಲಿ ಕೇವಲ 1.9% ರಷ್ಟು ಜನರು ಮೇ ಆರಂಭದಲ್ಲಿ ಸಂಪೂರ್ಣ ಲಸಿಕೆ ಪಡೆದಿದ್ದಾರೆ.

ಬ್ರೆಜಿಲ್‌ನ ಜೈರ್ ಬೋಲ್ಸನಾರೊ

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಅವರು ಕೋವಿಡ್ ಬಗ್ಗೆ ತೀವ್ರ ನಿರ್ಲಕ್ಷ್ಯ ಮಾಡಿದರು. ಕೊರೊನಾ ‘ಬರೀ ಜ್ವರ ಬಿಡಿ’ ಎಂದು ಪರಿಸ್ಥಿತಿಯನ್ನ ಹದಗೆಡಿಸಿದರು.

ಆರೋಗ್ಯ ಸಚಿವಾಲಯದ ಆಡಳಿತಾತ್ಮಕ ವಿಷಯಗಳಾದ ಕ್ಲಿನಿಕಲ್ ಪ್ರೋಟೋಕಾಲ್‌ಗಳು, ಡೇಟಾ ಬಹಿರಂಗಪಡಿಸುವಿಕೆ ಮತ್ತು ಲಸಿಕೆ ಸಂಗ್ರಹಣೆಗಳಲ್ಲಿ ಬೋಲ್ಸೊನಾರೊ ಹಸ್ತಕ್ಷೇಪ ಮಾಡಿ, ಅವೈಜ್ಞಾನಿಕ ನಿರ್ಧಾರಗಳನ್ನು ತೆಗೆದುಕೊಂಡರು. ಧಾರ್ಮಿಕ ಸ್ಥಳಗಳಲ್ಲಿ ಮಾಸ್ಕ್ ಬಳಸುವುದನ್ನು ಕಡ್ಡಾಯಗೊಳಿಸುವ ಮತ್ತು ಸಾಂಕ್ರಾಮಿಕ ರೋಗದಿಂದ ಶಾಶ್ವತವಾಗಿ ಹಾನಿಗೊಳಗಾದ ಆರೋಗ್ಯ ವೃತ್ತಿಪರರಿಗೆ ಪರಿಹಾರ ನೀಡುವ ಶಾಸನವನ್ನು ಅವರು ರದ್ದು ಮಾಡಿದರು. ಸಾಮಾಜಿಕ ದೂರವನ್ನು ಉತ್ತೇಜಿಸುವ ಆಡಳಿತದ ಪ್ರಯತ್ನಗಳಿಗೆ ಅವರು ಅಡ್ಡಿಯುಂಟು ಮಾಡಿದರು. ಸ್ಪಾಗಳು ಮತ್ತು ಜಿಮ್‌ಗಳು ಸೇರಿದಂತೆ ಅನೇಕ ವ್ಯವಹಾರಗಳನ್ನು “ಅಗತ್ಯ” ಎಂದು ತೆರೆಯಲು ಅನುಮತಿ ನೀಡಿದರು. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬೋಲ್ಸೊನಾರೊ ಸಾಬೀತಾಗದ ಔಷಧಿಗಳನ್ನು, ಮುಖ್ಯವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಆಕ್ರಮಣಕಾರಿಯಾಗಿ ಉತ್ತೇಜಿಸಿದರು.

ಬೆಲಾರಸ್‌ನ ಅಲೆಕ್ಸಾಂಡರ್ ಲುಕಾಶೆಂಕೊ

ಬೆಲಾರಸ್‌ನ ದೀರ್ಘಕಾಲದ ಸರ್ವಾಧಿಕಾರಿ ನಾಯಕ ಅಲೆಕ್ಸಾಂಡರ್ ಲುಕಾಶೆಂಕೊ ಕೋವಿಡ್ ದುರಂತದ ಬೆದರಿಕೆಯನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಸಾಂಕ್ರಾಮಿಕ ರೋಗದ ಆರಂಭದಲ್ಲಿ, ಇತರ ದೇಶಗಳು ಲಾಕ್‌ಡೌನ್‌ಗಳನ್ನು ಜಾರಿಗೊಳಿಸುತ್ತಿದ್ದಂತೆ, ಲುಕಾಶೆಂಕೊ ಕೋವಿಡ್ ಹರಡುವುದನ್ನು ತಡೆಯಲು ಯಾವುದೇ ನಿರ್ಬಂಧಿತ ಕ್ರಮಗಳನ್ನು ಜಾರಿಗೊಳಿಸದಿರಲು ನಿರ್ಧರಿಸಿದರು. ಬದಲಾಗಿ, ವೋಡ್ಕಾ ಕುಡಿಯುವುದರಿಂದ, ಸೌನಾಕ್ಕೆ ಭೇಟಿ ನೀಡುವುದರಿಂದ ಮತ್ತು ಹೊಲಗಳಲ್ಲಿ ಕೆಲಸ ಮಾಡುವುದರಿಂದ ವೈರಸ್ ತಡೆಗಟ್ಟಬಹುದು ಎಂದು ಅವರು ಹೇಳಿದ್ದಾರೆ.

ಅಮೆರಿಕದ ಡೊನಾಲ್ಡ್ ಟ್ರಂಪ್

ಟ್ರಂಪ್ ಅಧಿಕಾರದಿಂದ ಹೊರಗುಳಿದಿದ್ದಾರೆ. ಆದರೆ ಸಾಂಕ್ರಾಮಿಕ ರೋಗವನ್ನು ಅವರು ತಪ್ಪಾಗಿ ನಿರ್ವಹಿಸಿದ್ದು ಅಮೆರಿಕಾದ ಮೇಲೆ- ವಿಶೇಷವಾಗಿ ಕಪ್ಪು ವರ್ಣದ ಸಮುದಾಯಗಳ ಮೇಲೆ- ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತಿದೆ.

ಸಾಂಕ್ರಾಮಿಕ ರೋಗದ ಆರಂಭಿಕ ನಿರಾಕರಣೆ, ಮಾಸ್ಕ್ ಮತ್ತು ಚಿಕಿತ್ಸೆಗಳ ಬಗ್ಗೆ ತಪ್ಪು ಸಂದೇಶಗಳನ್ನು ಅವರು ನೀಡುತ್ತ ಬಂದರು. ಮೋದಿಯವರಂತೆ ಅವರಿಗೂ ಚುನಾವಣೆ ಗೆಲ್ಲುವುದಷ್ಟೇ ಮುಖ್ಯವಾಗಿತ್ತು.

ಆಫ್ರಿಕನ್ ಅಮೆರಿಕನ್ನರು ಮತ್ತು ಲ್ಯಾಟಿನೋಗಳು ಯುಎಸ್ ಜನಸಂಖ್ಯೆಯ ಕೇವಲ 31%ರಷ್ಟಿದ್ದಾರೆ. ಅವರು ಕೋವಿಡ್ ಪ್ರಕರಣಗಳಲ್ಲಿ 55% ಕ್ಕಿಂತ ಹೆಚ್ಚು ಇದ್ದಾರೆ. ಬಿಳಿಯರ ಮರಣ ಪ್ರಮಾಣಕ್ಕಿಂತ ಕಪ್ಪು ವರ್ಣದವರ ಮರಣ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಿತ್ತು.
ನಿರುದ್ಯೋಗ ಏರಿಕೆಯಲ್ಲೂ ಟ್ರಂಪ್ ಕಾರಣವಾದರು. ಇದು ಹೆಚ್ಚಾಗಿ ತಟ್ಟಿದ್ದು ಬಿಳಿಯರಲ್ಲದ ಅಮೆರಿಕನ್ ಪ್ರಜೆಗಳಿಗೆ.

ಮೆಕ್ಸಿಕೊದ ಆಂಡ್ರೆಸ್

ಮೆಕ್ಸಿಕೊವು ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಸಾವಿನ ಪ್ರಮಾಣವನ್ನು ಹೊಂದಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಇದು 6,17,000 ಸಾವುಗಳನ್ನು ಅನುಭವಿಸಿದೆ. ಭಾರತ ಮತ್ತು ಅಮೆರಿಕ ಕೂಡ ಸಾವಿನ ಸಂಖ್ಯೆಯಲ್ಲಿ ಮುಂದಿವೆ.

ಮೆಕ್ಸಿಕೊದ ದೀರ್ಘಕಾಲದ, ವಿಪರೀತ ಕೋವಿಡ್ ಏಕಾಏಕಿಗಳಿಗೆ ಅಸಮರ್ಪಕ ರಾಷ್ಟ್ರೀಯ ನಾಯಕತ್ವ ಕಾರಣವಾಗಿದೆ.

ಸಾಂಕ್ರಾಮಿಕ ರೋಗದುದ್ದಕ್ಕೂ, ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಮೆಕ್ಸಿಕೊದ ಪರಿಸ್ಥಿತಿಯ ಸಂಕಷ್ಟವನ್ನು ಮುಚ್ಚಿ ಇಡಲು ನೋಡಿದರು. ಆರಂಭದಲ್ಲಿ, ಅವರು ರಾಷ್ಟ್ರವ್ಯಾಪಿ ಲಾಕ್ ಡೌನ್ ಜಾರಿಗೆ ವಿರೋಧಿಸಿದರು ಮತ್ತು ಅಂತಿಮವಾಗಿ ಮಾರ್ಚ್ 23, 2020 ರಂದು ಮೆಕ್ಸಿಕೊ ಎರಡು ತಿಂಗಳ ಕಾಲ ಸ್ಥಗಿತಗೊಳ್ಳುವಂತೆ ಮಾಡಿದರು. ಅವರು ಆಗಾಗ್ಗೆ ಮಾಸ್ಕ್ ಧರಿಸಲು ನಿರಾಕರಿಸಿದರು.

ಸಾಂಕ್ರಾಮಿಕ ರೋಗವು ಸ್ಫೋಟಗೊಳ್ಳುವ ಮೊದಲೇ, ಲೋಪೆಜ್ ಒಬ್ರಡಾರ್ ಜಾರಿಗೆ ತಂದ ಹಣಕಾಸು ನೀತಿ ಆರೋಗ್ಯ ಬಿಕ್ಕಟ್ಟನ್ನು ಇನ್ನಷ್ಟು ದುಸ್ತರವಾಗಿಸಿದೆ. ನಮ್ಮಲ್ಲಿ ಮೋದಿಯವರ ನೋಟ್‌ಬ್ಯಾನ್, ಅವೈಜ್ಞಾನಿಕ ಜಿಎಸ್‌ಟಿ ನೀತಿಗಳು ಕೂಡ ಭಾರತಕ್ಕೆ ಈಗ ಕಾಡುತ್ತಿವೆ.

(ಕೃಪೆ: ದಿ ವೈರ್)


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...