Homeಕರೋನಾ ತಲ್ಲಣಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ರೋಗದ ದಾಳಿ ಇನ್ನೂ ಮುಗಿದಿಲ್ಲ. ಆದರೆ ಈ ವಿಶ್ವ ನಾಯಕರು ಈಗಾಗಲೇ ಮಾರಣಾಂತಿಕ ಕೊರೋನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ವಿಫಲವಾದ ಕಾರಣ ಇತಿಹಾಸದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

- Advertisement -
- Advertisement -

ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲರಾದ ಐವರು ವಿಶ್ವನಾಯಕರ ಆಡಳಿತ ಶೈಲಿ ಕುರಿತು ಇಲ್ಲಿ ವಿಶ್ಲೇಷಣೆಯಿದೆ. ಭಾರತೀಯರಾದ ಪ್ರೊ. ಸುಮಿತ್ ಗಂಗೂಲಿ ಸೇರಿದಂತೆ ಹಲವು ದೇಶಗಳ ತಜ್ಞರು, ಪ್ರೊಫೆಸ್‌ರ್‌ಗಳು ಮತ್ತು ವೈದ್ಯರ ನಡುವೆ ನಡೆದ ಚರ್ಚೆಯನ್ನು ‘ದಿ ವೈರ್’ ಸಂಗ್ರಹಿಸಿ ಕೊಟ್ಟಿದೆ.

‘ಕೆಲವು ಪ್ರಸ್ತುತ ಮತ್ತು ಮಾಜಿ ವಿಶ್ವ ನಾಯಕರು ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅಲಕ್ಷ್ಯ ಮಾಡುವ ಮೂಲಕ, ವಿಜ್ಞಾನವನ್ನು ಕಡೆಗಣಿಸುವ ಮೂಲಕ, ಸಾಮಾಜಿಕ ದೂರ ಮತ್ತು ಮಾಸ್ಕ್‌ಗಳಂತಹ ಆರೋಗ್ಯದ ಮಧ್ಯಸ್ಥಿಕೆಗಳನ್ನು ನಿರ್ಲಕ್ಷಿಸುವ ಮೂಲಕ ತಮ್ಮ ದೇಶದಲ್ಲಿ ಕೊರೊನಾ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಈ ಪಟ್ಟಿಯಲ್ಲಿರುವ ಐವರೂ ಪುರುಷ ಸಿಂಹಗಳೇ! ಭಾರತದ ನರೇಂದ್ರ ಮೋದಿ ಅದರಲ್ಲಿ ಒಬ್ಬರು ಎನ್ನುತ್ತಾರೆ’ ಇಂಡಿಯಾನಾ ವಿಶ್ವವಿದ್ಯಾಲಯದ ಪ್ರೊ. ಸುಮಿತ್ ಗಂಗೂಲಿ.

ಭಾರತವು ಜಾಗತಿಕ ಸಾಂಕ್ರಾಮಿಕದ ಹೊಸ ಕೇಂದ್ರಬಿಂದುವಾಗಿದ್ದು, ಮೇ 2021 ರ ಹೊತ್ತಿಗೆ ದಿನಕ್ಕೆ ಸುಮಾರು 4 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ. ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳು ಸಾಯುತ್ತಿದ್ದಾರೆ, ಏಕೆಂದರೆ ಆಮ್ಲಜನಕವಿಲ್ಲ ಮತ್ತು ಚಿಕಿತ್ಸೆಗೆ ಅಗತ್ಯವಾದ ಔಷಧಿಗಳಿಲ್ಲ ಮತ್ತು ವೆಂಟಿಲೇಟರ್‌ಗಳೂ ಇಲ್ಲ. ಜೊತೆಗೆ ಉಚಿತ ಹಾಸಿಗೆಗಳೇ ಲಭ್ಯವಿಲ್ಲ.

ದೇಶದ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸುತ್ತಾರೆ: ಪ್ರಧಾನಿ ನರೇಂದ್ರ ಮೋದಿ!

ಜನವರಿ 2021ರಲ್ಲಿ, ಮೋದಿ ಜಾಗತಿಕ ವೇದಿಕೆಯಲ್ಲಿ ಭಾರತವು “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಿ ಗೆದ್ದಿದೆ” ಎಂದು ಘೋಷಿಸಿದರು. ಮಾರ್ಚ್‌ನಲ್ಲಿ ಅವರ ಆರೋಗ್ಯ ಸಚಿವರು ಸಾಂಕ್ರಾಮಿಕ ರೋಗವು “ಎಂಡ್ ಗೇಮ್” ತಲುಪುತ್ತಿದೆ ಎಂದು ಘೋಷಿಸಿದರು. ವಾಸ್ತವವಾಗಿ ಭಾರತದಲ್ಲಿ ಮತ್ತು ವಿಶ್ವಾದ್ಯಂತ ಕೊರೊನಾ ಶಕ್ತಿಯನ್ನು ಪಡೆಯುತ್ತಿತ್ತು. ಆದರೆ ಮೋದಿ ಸರ್ಕಾರವು ಸಂಭವನೀಯ ಆಕಸ್ಮಿಕಗಳಿಗೆ ಯಾವುದೇ ಸಿದ್ಧತೆಗಳನ್ನು ಮಾಡಲಿಲ್ಲ.

ದೇಶದಲ್ಲಿ ಕೋವಿಡ್ ಎರಡನೆ ಅಲೆ ತೀವ್ರವಾಗುವ ಸಂದರ್ಭದಲ್ಲಿ ಮೋದಿ ಮತ್ತು ಅವರ ಪಕ್ಷದ ಇತರ ಸದಸ್ಯರು ಏಪ್ರಿಲ್ ಚುನಾವಣೆಗೆ ಮುಂಚಿತವಾಗಿ ಹೊರಾಂಗಣ ಪ್ರಚಾರ ರ‍್ಯಾಲಿಗಳನ್ನು ನಡೆಸಿದರು. ಆ ರ‍್ಯಾಲಿಗಳಲ್ಲಿ ಮಾಸ್ಕ್ ಇರಲಿಲ್ಲ, ದೈಹಿಕ ಅಂತರ ಇರಲು ಸಾಧ್ಯವೇ? ಜನವರಿಯಿಂದ ಮಾರ್ಚ್‌ವರೆಗೆ ಲಕ್ಷಾಂತರ ಜನರನ್ನು ಸೆಳೆಯುವ ಕುಂಭಮೇಳ ಉತ್ಸವಕ್ಕೂ ಮೋದಿ ಅವಕಾಶ ನೀಡಿದರು. ಸಾರ್ವಜನಿಕ ಆರೋಗ್ಯ ಅಧಿಕಾರಿಗಳು, ತಜ್ಞರು ಈಗ ಉತ್ಸವವು ಒಂದು ಸೂಪರ್-ಸ್ಪ್ರೆ ಡರ್ ಆಗಿದೆ ಎನ್ನುತ್ತಿದ್ದಾರೆ.

ಕಳೆದ ವರ್ಷ ಮೋದಿಯವರು ತಮ್ಮ ಯಶಸ್ಸನ್ನು ತಿಳಿಸಿದಂತೆ, ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಭಾರತವು 10 ದಶಲಕ್ಷಕ್ಕೂ ಹೆಚ್ಚಿನ ಲಸಿಕೆ ಪ್ರಮಾಣವನ್ನು ನೆರೆಯ ದೇಶಗಳಿಗೆ ಕಳುಹಿಸಿತು. ಭಾರತದ 139 ಕೋಟಿ ಜನರಲ್ಲಿ ಕೇವಲ 1.9% ರಷ್ಟು ಜನರು ಮೇ ಆರಂಭದಲ್ಲಿ ಸಂಪೂರ್ಣ ಲಸಿಕೆ ಪಡೆದಿದ್ದಾರೆ.

ಬ್ರೆಜಿಲ್‌ನ ಜೈರ್ ಬೋಲ್ಸನಾರೊ

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಅವರು ಕೋವಿಡ್ ಬಗ್ಗೆ ತೀವ್ರ ನಿರ್ಲಕ್ಷ್ಯ ಮಾಡಿದರು. ಕೊರೊನಾ ‘ಬರೀ ಜ್ವರ ಬಿಡಿ’ ಎಂದು ಪರಿಸ್ಥಿತಿಯನ್ನ ಹದಗೆಡಿಸಿದರು.

ಆರೋಗ್ಯ ಸಚಿವಾಲಯದ ಆಡಳಿತಾತ್ಮಕ ವಿಷಯಗಳಾದ ಕ್ಲಿನಿಕಲ್ ಪ್ರೋಟೋಕಾಲ್‌ಗಳು, ಡೇಟಾ ಬಹಿರಂಗಪಡಿಸುವಿಕೆ ಮತ್ತು ಲಸಿಕೆ ಸಂಗ್ರಹಣೆಗಳಲ್ಲಿ ಬೋಲ್ಸೊನಾರೊ ಹಸ್ತಕ್ಷೇಪ ಮಾಡಿ, ಅವೈಜ್ಞಾನಿಕ ನಿರ್ಧಾರಗಳನ್ನು ತೆಗೆದುಕೊಂಡರು. ಧಾರ್ಮಿಕ ಸ್ಥಳಗಳಲ್ಲಿ ಮಾಸ್ಕ್ ಬಳಸುವುದನ್ನು ಕಡ್ಡಾಯಗೊಳಿಸುವ ಮತ್ತು ಸಾಂಕ್ರಾಮಿಕ ರೋಗದಿಂದ ಶಾಶ್ವತವಾಗಿ ಹಾನಿಗೊಳಗಾದ ಆರೋಗ್ಯ ವೃತ್ತಿಪರರಿಗೆ ಪರಿಹಾರ ನೀಡುವ ಶಾಸನವನ್ನು ಅವರು ರದ್ದು ಮಾಡಿದರು. ಸಾಮಾಜಿಕ ದೂರವನ್ನು ಉತ್ತೇಜಿಸುವ ಆಡಳಿತದ ಪ್ರಯತ್ನಗಳಿಗೆ ಅವರು ಅಡ್ಡಿಯುಂಟು ಮಾಡಿದರು. ಸ್ಪಾಗಳು ಮತ್ತು ಜಿಮ್‌ಗಳು ಸೇರಿದಂತೆ ಅನೇಕ ವ್ಯವಹಾರಗಳನ್ನು “ಅಗತ್ಯ” ಎಂದು ತೆರೆಯಲು ಅನುಮತಿ ನೀಡಿದರು. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬೋಲ್ಸೊನಾರೊ ಸಾಬೀತಾಗದ ಔಷಧಿಗಳನ್ನು, ಮುಖ್ಯವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಆಕ್ರಮಣಕಾರಿಯಾಗಿ ಉತ್ತೇಜಿಸಿದರು.

ಬೆಲಾರಸ್‌ನ ಅಲೆಕ್ಸಾಂಡರ್ ಲುಕಾಶೆಂಕೊ

ಬೆಲಾರಸ್‌ನ ದೀರ್ಘಕಾಲದ ಸರ್ವಾಧಿಕಾರಿ ನಾಯಕ ಅಲೆಕ್ಸಾಂಡರ್ ಲುಕಾಶೆಂಕೊ ಕೋವಿಡ್ ದುರಂತದ ಬೆದರಿಕೆಯನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಸಾಂಕ್ರಾಮಿಕ ರೋಗದ ಆರಂಭದಲ್ಲಿ, ಇತರ ದೇಶಗಳು ಲಾಕ್‌ಡೌನ್‌ಗಳನ್ನು ಜಾರಿಗೊಳಿಸುತ್ತಿದ್ದಂತೆ, ಲುಕಾಶೆಂಕೊ ಕೋವಿಡ್ ಹರಡುವುದನ್ನು ತಡೆಯಲು ಯಾವುದೇ ನಿರ್ಬಂಧಿತ ಕ್ರಮಗಳನ್ನು ಜಾರಿಗೊಳಿಸದಿರಲು ನಿರ್ಧರಿಸಿದರು. ಬದಲಾಗಿ, ವೋಡ್ಕಾ ಕುಡಿಯುವುದರಿಂದ, ಸೌನಾಕ್ಕೆ ಭೇಟಿ ನೀಡುವುದರಿಂದ ಮತ್ತು ಹೊಲಗಳಲ್ಲಿ ಕೆಲಸ ಮಾಡುವುದರಿಂದ ವೈರಸ್ ತಡೆಗಟ್ಟಬಹುದು ಎಂದು ಅವರು ಹೇಳಿದ್ದಾರೆ.

ಅಮೆರಿಕದ ಡೊನಾಲ್ಡ್ ಟ್ರಂಪ್

ಟ್ರಂಪ್ ಅಧಿಕಾರದಿಂದ ಹೊರಗುಳಿದಿದ್ದಾರೆ. ಆದರೆ ಸಾಂಕ್ರಾಮಿಕ ರೋಗವನ್ನು ಅವರು ತಪ್ಪಾಗಿ ನಿರ್ವಹಿಸಿದ್ದು ಅಮೆರಿಕಾದ ಮೇಲೆ- ವಿಶೇಷವಾಗಿ ಕಪ್ಪು ವರ್ಣದ ಸಮುದಾಯಗಳ ಮೇಲೆ- ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತಿದೆ.

ಸಾಂಕ್ರಾಮಿಕ ರೋಗದ ಆರಂಭಿಕ ನಿರಾಕರಣೆ, ಮಾಸ್ಕ್ ಮತ್ತು ಚಿಕಿತ್ಸೆಗಳ ಬಗ್ಗೆ ತಪ್ಪು ಸಂದೇಶಗಳನ್ನು ಅವರು ನೀಡುತ್ತ ಬಂದರು. ಮೋದಿಯವರಂತೆ ಅವರಿಗೂ ಚುನಾವಣೆ ಗೆಲ್ಲುವುದಷ್ಟೇ ಮುಖ್ಯವಾಗಿತ್ತು.

ಆಫ್ರಿಕನ್ ಅಮೆರಿಕನ್ನರು ಮತ್ತು ಲ್ಯಾಟಿನೋಗಳು ಯುಎಸ್ ಜನಸಂಖ್ಯೆಯ ಕೇವಲ 31%ರಷ್ಟಿದ್ದಾರೆ. ಅವರು ಕೋವಿಡ್ ಪ್ರಕರಣಗಳಲ್ಲಿ 55% ಕ್ಕಿಂತ ಹೆಚ್ಚು ಇದ್ದಾರೆ. ಬಿಳಿಯರ ಮರಣ ಪ್ರಮಾಣಕ್ಕಿಂತ ಕಪ್ಪು ವರ್ಣದವರ ಮರಣ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಿತ್ತು.
ನಿರುದ್ಯೋಗ ಏರಿಕೆಯಲ್ಲೂ ಟ್ರಂಪ್ ಕಾರಣವಾದರು. ಇದು ಹೆಚ್ಚಾಗಿ ತಟ್ಟಿದ್ದು ಬಿಳಿಯರಲ್ಲದ ಅಮೆರಿಕನ್ ಪ್ರಜೆಗಳಿಗೆ.

ಮೆಕ್ಸಿಕೊದ ಆಂಡ್ರೆಸ್

ಮೆಕ್ಸಿಕೊವು ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಸಾವಿನ ಪ್ರಮಾಣವನ್ನು ಹೊಂದಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಇದು 6,17,000 ಸಾವುಗಳನ್ನು ಅನುಭವಿಸಿದೆ. ಭಾರತ ಮತ್ತು ಅಮೆರಿಕ ಕೂಡ ಸಾವಿನ ಸಂಖ್ಯೆಯಲ್ಲಿ ಮುಂದಿವೆ.

ಮೆಕ್ಸಿಕೊದ ದೀರ್ಘಕಾಲದ, ವಿಪರೀತ ಕೋವಿಡ್ ಏಕಾಏಕಿಗಳಿಗೆ ಅಸಮರ್ಪಕ ರಾಷ್ಟ್ರೀಯ ನಾಯಕತ್ವ ಕಾರಣವಾಗಿದೆ.

ಸಾಂಕ್ರಾಮಿಕ ರೋಗದುದ್ದಕ್ಕೂ, ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಮೆಕ್ಸಿಕೊದ ಪರಿಸ್ಥಿತಿಯ ಸಂಕಷ್ಟವನ್ನು ಮುಚ್ಚಿ ಇಡಲು ನೋಡಿದರು. ಆರಂಭದಲ್ಲಿ, ಅವರು ರಾಷ್ಟ್ರವ್ಯಾಪಿ ಲಾಕ್ ಡೌನ್ ಜಾರಿಗೆ ವಿರೋಧಿಸಿದರು ಮತ್ತು ಅಂತಿಮವಾಗಿ ಮಾರ್ಚ್ 23, 2020 ರಂದು ಮೆಕ್ಸಿಕೊ ಎರಡು ತಿಂಗಳ ಕಾಲ ಸ್ಥಗಿತಗೊಳ್ಳುವಂತೆ ಮಾಡಿದರು. ಅವರು ಆಗಾಗ್ಗೆ ಮಾಸ್ಕ್ ಧರಿಸಲು ನಿರಾಕರಿಸಿದರು.

ಸಾಂಕ್ರಾಮಿಕ ರೋಗವು ಸ್ಫೋಟಗೊಳ್ಳುವ ಮೊದಲೇ, ಲೋಪೆಜ್ ಒಬ್ರಡಾರ್ ಜಾರಿಗೆ ತಂದ ಹಣಕಾಸು ನೀತಿ ಆರೋಗ್ಯ ಬಿಕ್ಕಟ್ಟನ್ನು ಇನ್ನಷ್ಟು ದುಸ್ತರವಾಗಿಸಿದೆ. ನಮ್ಮಲ್ಲಿ ಮೋದಿಯವರ ನೋಟ್‌ಬ್ಯಾನ್, ಅವೈಜ್ಞಾನಿಕ ಜಿಎಸ್‌ಟಿ ನೀತಿಗಳು ಕೂಡ ಭಾರತಕ್ಕೆ ಈಗ ಕಾಡುತ್ತಿವೆ.

(ಕೃಪೆ: ದಿ ವೈರ್)


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...