Homeಕರೋನಾ ತಲ್ಲಣಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ರೋಗದ ದಾಳಿ ಇನ್ನೂ ಮುಗಿದಿಲ್ಲ. ಆದರೆ ಈ ವಿಶ್ವ ನಾಯಕರು ಈಗಾಗಲೇ ಮಾರಣಾಂತಿಕ ಕೊರೋನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ವಿಫಲವಾದ ಕಾರಣ ಇತಿಹಾಸದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

- Advertisement -
- Advertisement -

ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲರಾದ ಐವರು ವಿಶ್ವನಾಯಕರ ಆಡಳಿತ ಶೈಲಿ ಕುರಿತು ಇಲ್ಲಿ ವಿಶ್ಲೇಷಣೆಯಿದೆ. ಭಾರತೀಯರಾದ ಪ್ರೊ. ಸುಮಿತ್ ಗಂಗೂಲಿ ಸೇರಿದಂತೆ ಹಲವು ದೇಶಗಳ ತಜ್ಞರು, ಪ್ರೊಫೆಸ್‌ರ್‌ಗಳು ಮತ್ತು ವೈದ್ಯರ ನಡುವೆ ನಡೆದ ಚರ್ಚೆಯನ್ನು ‘ದಿ ವೈರ್’ ಸಂಗ್ರಹಿಸಿ ಕೊಟ್ಟಿದೆ.

‘ಕೆಲವು ಪ್ರಸ್ತುತ ಮತ್ತು ಮಾಜಿ ವಿಶ್ವ ನಾಯಕರು ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅಲಕ್ಷ್ಯ ಮಾಡುವ ಮೂಲಕ, ವಿಜ್ಞಾನವನ್ನು ಕಡೆಗಣಿಸುವ ಮೂಲಕ, ಸಾಮಾಜಿಕ ದೂರ ಮತ್ತು ಮಾಸ್ಕ್‌ಗಳಂತಹ ಆರೋಗ್ಯದ ಮಧ್ಯಸ್ಥಿಕೆಗಳನ್ನು ನಿರ್ಲಕ್ಷಿಸುವ ಮೂಲಕ ತಮ್ಮ ದೇಶದಲ್ಲಿ ಕೊರೊನಾ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಈ ಪಟ್ಟಿಯಲ್ಲಿರುವ ಐವರೂ ಪುರುಷ ಸಿಂಹಗಳೇ! ಭಾರತದ ನರೇಂದ್ರ ಮೋದಿ ಅದರಲ್ಲಿ ಒಬ್ಬರು ಎನ್ನುತ್ತಾರೆ’ ಇಂಡಿಯಾನಾ ವಿಶ್ವವಿದ್ಯಾಲಯದ ಪ್ರೊ. ಸುಮಿತ್ ಗಂಗೂಲಿ.

ಭಾರತವು ಜಾಗತಿಕ ಸಾಂಕ್ರಾಮಿಕದ ಹೊಸ ಕೇಂದ್ರಬಿಂದುವಾಗಿದ್ದು, ಮೇ 2021 ರ ಹೊತ್ತಿಗೆ ದಿನಕ್ಕೆ ಸುಮಾರು 4 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ. ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳು ಸಾಯುತ್ತಿದ್ದಾರೆ, ಏಕೆಂದರೆ ಆಮ್ಲಜನಕವಿಲ್ಲ ಮತ್ತು ಚಿಕಿತ್ಸೆಗೆ ಅಗತ್ಯವಾದ ಔಷಧಿಗಳಿಲ್ಲ ಮತ್ತು ವೆಂಟಿಲೇಟರ್‌ಗಳೂ ಇಲ್ಲ. ಜೊತೆಗೆ ಉಚಿತ ಹಾಸಿಗೆಗಳೇ ಲಭ್ಯವಿಲ್ಲ.

ದೇಶದ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸುತ್ತಾರೆ: ಪ್ರಧಾನಿ ನರೇಂದ್ರ ಮೋದಿ!

ಜನವರಿ 2021ರಲ್ಲಿ, ಮೋದಿ ಜಾಗತಿಕ ವೇದಿಕೆಯಲ್ಲಿ ಭಾರತವು “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಿ ಗೆದ್ದಿದೆ” ಎಂದು ಘೋಷಿಸಿದರು. ಮಾರ್ಚ್‌ನಲ್ಲಿ ಅವರ ಆರೋಗ್ಯ ಸಚಿವರು ಸಾಂಕ್ರಾಮಿಕ ರೋಗವು “ಎಂಡ್ ಗೇಮ್” ತಲುಪುತ್ತಿದೆ ಎಂದು ಘೋಷಿಸಿದರು. ವಾಸ್ತವವಾಗಿ ಭಾರತದಲ್ಲಿ ಮತ್ತು ವಿಶ್ವಾದ್ಯಂತ ಕೊರೊನಾ ಶಕ್ತಿಯನ್ನು ಪಡೆಯುತ್ತಿತ್ತು. ಆದರೆ ಮೋದಿ ಸರ್ಕಾರವು ಸಂಭವನೀಯ ಆಕಸ್ಮಿಕಗಳಿಗೆ ಯಾವುದೇ ಸಿದ್ಧತೆಗಳನ್ನು ಮಾಡಲಿಲ್ಲ.

ದೇಶದಲ್ಲಿ ಕೋವಿಡ್ ಎರಡನೆ ಅಲೆ ತೀವ್ರವಾಗುವ ಸಂದರ್ಭದಲ್ಲಿ ಮೋದಿ ಮತ್ತು ಅವರ ಪಕ್ಷದ ಇತರ ಸದಸ್ಯರು ಏಪ್ರಿಲ್ ಚುನಾವಣೆಗೆ ಮುಂಚಿತವಾಗಿ ಹೊರಾಂಗಣ ಪ್ರಚಾರ ರ‍್ಯಾಲಿಗಳನ್ನು ನಡೆಸಿದರು. ಆ ರ‍್ಯಾಲಿಗಳಲ್ಲಿ ಮಾಸ್ಕ್ ಇರಲಿಲ್ಲ, ದೈಹಿಕ ಅಂತರ ಇರಲು ಸಾಧ್ಯವೇ? ಜನವರಿಯಿಂದ ಮಾರ್ಚ್‌ವರೆಗೆ ಲಕ್ಷಾಂತರ ಜನರನ್ನು ಸೆಳೆಯುವ ಕುಂಭಮೇಳ ಉತ್ಸವಕ್ಕೂ ಮೋದಿ ಅವಕಾಶ ನೀಡಿದರು. ಸಾರ್ವಜನಿಕ ಆರೋಗ್ಯ ಅಧಿಕಾರಿಗಳು, ತಜ್ಞರು ಈಗ ಉತ್ಸವವು ಒಂದು ಸೂಪರ್-ಸ್ಪ್ರೆ ಡರ್ ಆಗಿದೆ ಎನ್ನುತ್ತಿದ್ದಾರೆ.

ಕಳೆದ ವರ್ಷ ಮೋದಿಯವರು ತಮ್ಮ ಯಶಸ್ಸನ್ನು ತಿಳಿಸಿದಂತೆ, ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಭಾರತವು 10 ದಶಲಕ್ಷಕ್ಕೂ ಹೆಚ್ಚಿನ ಲಸಿಕೆ ಪ್ರಮಾಣವನ್ನು ನೆರೆಯ ದೇಶಗಳಿಗೆ ಕಳುಹಿಸಿತು. ಭಾರತದ 139 ಕೋಟಿ ಜನರಲ್ಲಿ ಕೇವಲ 1.9% ರಷ್ಟು ಜನರು ಮೇ ಆರಂಭದಲ್ಲಿ ಸಂಪೂರ್ಣ ಲಸಿಕೆ ಪಡೆದಿದ್ದಾರೆ.

ಬ್ರೆಜಿಲ್‌ನ ಜೈರ್ ಬೋಲ್ಸನಾರೊ

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಅವರು ಕೋವಿಡ್ ಬಗ್ಗೆ ತೀವ್ರ ನಿರ್ಲಕ್ಷ್ಯ ಮಾಡಿದರು. ಕೊರೊನಾ ‘ಬರೀ ಜ್ವರ ಬಿಡಿ’ ಎಂದು ಪರಿಸ್ಥಿತಿಯನ್ನ ಹದಗೆಡಿಸಿದರು.

ಆರೋಗ್ಯ ಸಚಿವಾಲಯದ ಆಡಳಿತಾತ್ಮಕ ವಿಷಯಗಳಾದ ಕ್ಲಿನಿಕಲ್ ಪ್ರೋಟೋಕಾಲ್‌ಗಳು, ಡೇಟಾ ಬಹಿರಂಗಪಡಿಸುವಿಕೆ ಮತ್ತು ಲಸಿಕೆ ಸಂಗ್ರಹಣೆಗಳಲ್ಲಿ ಬೋಲ್ಸೊನಾರೊ ಹಸ್ತಕ್ಷೇಪ ಮಾಡಿ, ಅವೈಜ್ಞಾನಿಕ ನಿರ್ಧಾರಗಳನ್ನು ತೆಗೆದುಕೊಂಡರು. ಧಾರ್ಮಿಕ ಸ್ಥಳಗಳಲ್ಲಿ ಮಾಸ್ಕ್ ಬಳಸುವುದನ್ನು ಕಡ್ಡಾಯಗೊಳಿಸುವ ಮತ್ತು ಸಾಂಕ್ರಾಮಿಕ ರೋಗದಿಂದ ಶಾಶ್ವತವಾಗಿ ಹಾನಿಗೊಳಗಾದ ಆರೋಗ್ಯ ವೃತ್ತಿಪರರಿಗೆ ಪರಿಹಾರ ನೀಡುವ ಶಾಸನವನ್ನು ಅವರು ರದ್ದು ಮಾಡಿದರು. ಸಾಮಾಜಿಕ ದೂರವನ್ನು ಉತ್ತೇಜಿಸುವ ಆಡಳಿತದ ಪ್ರಯತ್ನಗಳಿಗೆ ಅವರು ಅಡ್ಡಿಯುಂಟು ಮಾಡಿದರು. ಸ್ಪಾಗಳು ಮತ್ತು ಜಿಮ್‌ಗಳು ಸೇರಿದಂತೆ ಅನೇಕ ವ್ಯವಹಾರಗಳನ್ನು “ಅಗತ್ಯ” ಎಂದು ತೆರೆಯಲು ಅನುಮತಿ ನೀಡಿದರು. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬೋಲ್ಸೊನಾರೊ ಸಾಬೀತಾಗದ ಔಷಧಿಗಳನ್ನು, ಮುಖ್ಯವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಆಕ್ರಮಣಕಾರಿಯಾಗಿ ಉತ್ತೇಜಿಸಿದರು.

ಬೆಲಾರಸ್‌ನ ಅಲೆಕ್ಸಾಂಡರ್ ಲುಕಾಶೆಂಕೊ

ಬೆಲಾರಸ್‌ನ ದೀರ್ಘಕಾಲದ ಸರ್ವಾಧಿಕಾರಿ ನಾಯಕ ಅಲೆಕ್ಸಾಂಡರ್ ಲುಕಾಶೆಂಕೊ ಕೋವಿಡ್ ದುರಂತದ ಬೆದರಿಕೆಯನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಸಾಂಕ್ರಾಮಿಕ ರೋಗದ ಆರಂಭದಲ್ಲಿ, ಇತರ ದೇಶಗಳು ಲಾಕ್‌ಡೌನ್‌ಗಳನ್ನು ಜಾರಿಗೊಳಿಸುತ್ತಿದ್ದಂತೆ, ಲುಕಾಶೆಂಕೊ ಕೋವಿಡ್ ಹರಡುವುದನ್ನು ತಡೆಯಲು ಯಾವುದೇ ನಿರ್ಬಂಧಿತ ಕ್ರಮಗಳನ್ನು ಜಾರಿಗೊಳಿಸದಿರಲು ನಿರ್ಧರಿಸಿದರು. ಬದಲಾಗಿ, ವೋಡ್ಕಾ ಕುಡಿಯುವುದರಿಂದ, ಸೌನಾಕ್ಕೆ ಭೇಟಿ ನೀಡುವುದರಿಂದ ಮತ್ತು ಹೊಲಗಳಲ್ಲಿ ಕೆಲಸ ಮಾಡುವುದರಿಂದ ವೈರಸ್ ತಡೆಗಟ್ಟಬಹುದು ಎಂದು ಅವರು ಹೇಳಿದ್ದಾರೆ.

ಅಮೆರಿಕದ ಡೊನಾಲ್ಡ್ ಟ್ರಂಪ್

ಟ್ರಂಪ್ ಅಧಿಕಾರದಿಂದ ಹೊರಗುಳಿದಿದ್ದಾರೆ. ಆದರೆ ಸಾಂಕ್ರಾಮಿಕ ರೋಗವನ್ನು ಅವರು ತಪ್ಪಾಗಿ ನಿರ್ವಹಿಸಿದ್ದು ಅಮೆರಿಕಾದ ಮೇಲೆ- ವಿಶೇಷವಾಗಿ ಕಪ್ಪು ವರ್ಣದ ಸಮುದಾಯಗಳ ಮೇಲೆ- ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತಿದೆ.

ಸಾಂಕ್ರಾಮಿಕ ರೋಗದ ಆರಂಭಿಕ ನಿರಾಕರಣೆ, ಮಾಸ್ಕ್ ಮತ್ತು ಚಿಕಿತ್ಸೆಗಳ ಬಗ್ಗೆ ತಪ್ಪು ಸಂದೇಶಗಳನ್ನು ಅವರು ನೀಡುತ್ತ ಬಂದರು. ಮೋದಿಯವರಂತೆ ಅವರಿಗೂ ಚುನಾವಣೆ ಗೆಲ್ಲುವುದಷ್ಟೇ ಮುಖ್ಯವಾಗಿತ್ತು.

ಆಫ್ರಿಕನ್ ಅಮೆರಿಕನ್ನರು ಮತ್ತು ಲ್ಯಾಟಿನೋಗಳು ಯುಎಸ್ ಜನಸಂಖ್ಯೆಯ ಕೇವಲ 31%ರಷ್ಟಿದ್ದಾರೆ. ಅವರು ಕೋವಿಡ್ ಪ್ರಕರಣಗಳಲ್ಲಿ 55% ಕ್ಕಿಂತ ಹೆಚ್ಚು ಇದ್ದಾರೆ. ಬಿಳಿಯರ ಮರಣ ಪ್ರಮಾಣಕ್ಕಿಂತ ಕಪ್ಪು ವರ್ಣದವರ ಮರಣ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಿತ್ತು.
ನಿರುದ್ಯೋಗ ಏರಿಕೆಯಲ್ಲೂ ಟ್ರಂಪ್ ಕಾರಣವಾದರು. ಇದು ಹೆಚ್ಚಾಗಿ ತಟ್ಟಿದ್ದು ಬಿಳಿಯರಲ್ಲದ ಅಮೆರಿಕನ್ ಪ್ರಜೆಗಳಿಗೆ.

ಮೆಕ್ಸಿಕೊದ ಆಂಡ್ರೆಸ್

ಮೆಕ್ಸಿಕೊವು ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಸಾವಿನ ಪ್ರಮಾಣವನ್ನು ಹೊಂದಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಇದು 6,17,000 ಸಾವುಗಳನ್ನು ಅನುಭವಿಸಿದೆ. ಭಾರತ ಮತ್ತು ಅಮೆರಿಕ ಕೂಡ ಸಾವಿನ ಸಂಖ್ಯೆಯಲ್ಲಿ ಮುಂದಿವೆ.

ಮೆಕ್ಸಿಕೊದ ದೀರ್ಘಕಾಲದ, ವಿಪರೀತ ಕೋವಿಡ್ ಏಕಾಏಕಿಗಳಿಗೆ ಅಸಮರ್ಪಕ ರಾಷ್ಟ್ರೀಯ ನಾಯಕತ್ವ ಕಾರಣವಾಗಿದೆ.

ಸಾಂಕ್ರಾಮಿಕ ರೋಗದುದ್ದಕ್ಕೂ, ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಮೆಕ್ಸಿಕೊದ ಪರಿಸ್ಥಿತಿಯ ಸಂಕಷ್ಟವನ್ನು ಮುಚ್ಚಿ ಇಡಲು ನೋಡಿದರು. ಆರಂಭದಲ್ಲಿ, ಅವರು ರಾಷ್ಟ್ರವ್ಯಾಪಿ ಲಾಕ್ ಡೌನ್ ಜಾರಿಗೆ ವಿರೋಧಿಸಿದರು ಮತ್ತು ಅಂತಿಮವಾಗಿ ಮಾರ್ಚ್ 23, 2020 ರಂದು ಮೆಕ್ಸಿಕೊ ಎರಡು ತಿಂಗಳ ಕಾಲ ಸ್ಥಗಿತಗೊಳ್ಳುವಂತೆ ಮಾಡಿದರು. ಅವರು ಆಗಾಗ್ಗೆ ಮಾಸ್ಕ್ ಧರಿಸಲು ನಿರಾಕರಿಸಿದರು.

ಸಾಂಕ್ರಾಮಿಕ ರೋಗವು ಸ್ಫೋಟಗೊಳ್ಳುವ ಮೊದಲೇ, ಲೋಪೆಜ್ ಒಬ್ರಡಾರ್ ಜಾರಿಗೆ ತಂದ ಹಣಕಾಸು ನೀತಿ ಆರೋಗ್ಯ ಬಿಕ್ಕಟ್ಟನ್ನು ಇನ್ನಷ್ಟು ದುಸ್ತರವಾಗಿಸಿದೆ. ನಮ್ಮಲ್ಲಿ ಮೋದಿಯವರ ನೋಟ್‌ಬ್ಯಾನ್, ಅವೈಜ್ಞಾನಿಕ ಜಿಎಸ್‌ಟಿ ನೀತಿಗಳು ಕೂಡ ಭಾರತಕ್ಕೆ ಈಗ ಕಾಡುತ್ತಿವೆ.

(ಕೃಪೆ: ದಿ ವೈರ್)


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...