Homeಕರೋನಾ ತಲ್ಲಣಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ರೋಗದ ದಾಳಿ ಇನ್ನೂ ಮುಗಿದಿಲ್ಲ. ಆದರೆ ಈ ವಿಶ್ವ ನಾಯಕರು ಈಗಾಗಲೇ ಮಾರಣಾಂತಿಕ ಕೊರೋನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ವಿಫಲವಾದ ಕಾರಣ ಇತಿಹಾಸದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

- Advertisement -
- Advertisement -

ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲರಾದ ಐವರು ವಿಶ್ವನಾಯಕರ ಆಡಳಿತ ಶೈಲಿ ಕುರಿತು ಇಲ್ಲಿ ವಿಶ್ಲೇಷಣೆಯಿದೆ. ಭಾರತೀಯರಾದ ಪ್ರೊ. ಸುಮಿತ್ ಗಂಗೂಲಿ ಸೇರಿದಂತೆ ಹಲವು ದೇಶಗಳ ತಜ್ಞರು, ಪ್ರೊಫೆಸ್‌ರ್‌ಗಳು ಮತ್ತು ವೈದ್ಯರ ನಡುವೆ ನಡೆದ ಚರ್ಚೆಯನ್ನು ‘ದಿ ವೈರ್’ ಸಂಗ್ರಹಿಸಿ ಕೊಟ್ಟಿದೆ.

‘ಕೆಲವು ಪ್ರಸ್ತುತ ಮತ್ತು ಮಾಜಿ ವಿಶ್ವ ನಾಯಕರು ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅಲಕ್ಷ್ಯ ಮಾಡುವ ಮೂಲಕ, ವಿಜ್ಞಾನವನ್ನು ಕಡೆಗಣಿಸುವ ಮೂಲಕ, ಸಾಮಾಜಿಕ ದೂರ ಮತ್ತು ಮಾಸ್ಕ್‌ಗಳಂತಹ ಆರೋಗ್ಯದ ಮಧ್ಯಸ್ಥಿಕೆಗಳನ್ನು ನಿರ್ಲಕ್ಷಿಸುವ ಮೂಲಕ ತಮ್ಮ ದೇಶದಲ್ಲಿ ಕೊರೊನಾ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಈ ಪಟ್ಟಿಯಲ್ಲಿರುವ ಐವರೂ ಪುರುಷ ಸಿಂಹಗಳೇ! ಭಾರತದ ನರೇಂದ್ರ ಮೋದಿ ಅದರಲ್ಲಿ ಒಬ್ಬರು ಎನ್ನುತ್ತಾರೆ’ ಇಂಡಿಯಾನಾ ವಿಶ್ವವಿದ್ಯಾಲಯದ ಪ್ರೊ. ಸುಮಿತ್ ಗಂಗೂಲಿ.

ಭಾರತವು ಜಾಗತಿಕ ಸಾಂಕ್ರಾಮಿಕದ ಹೊಸ ಕೇಂದ್ರಬಿಂದುವಾಗಿದ್ದು, ಮೇ 2021 ರ ಹೊತ್ತಿಗೆ ದಿನಕ್ಕೆ ಸುಮಾರು 4 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ. ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳು ಸಾಯುತ್ತಿದ್ದಾರೆ, ಏಕೆಂದರೆ ಆಮ್ಲಜನಕವಿಲ್ಲ ಮತ್ತು ಚಿಕಿತ್ಸೆಗೆ ಅಗತ್ಯವಾದ ಔಷಧಿಗಳಿಲ್ಲ ಮತ್ತು ವೆಂಟಿಲೇಟರ್‌ಗಳೂ ಇಲ್ಲ. ಜೊತೆಗೆ ಉಚಿತ ಹಾಸಿಗೆಗಳೇ ಲಭ್ಯವಿಲ್ಲ.

ದೇಶದ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸುತ್ತಾರೆ: ಪ್ರಧಾನಿ ನರೇಂದ್ರ ಮೋದಿ!

ಜನವರಿ 2021ರಲ್ಲಿ, ಮೋದಿ ಜಾಗತಿಕ ವೇದಿಕೆಯಲ್ಲಿ ಭಾರತವು “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಿ ಗೆದ್ದಿದೆ” ಎಂದು ಘೋಷಿಸಿದರು. ಮಾರ್ಚ್‌ನಲ್ಲಿ ಅವರ ಆರೋಗ್ಯ ಸಚಿವರು ಸಾಂಕ್ರಾಮಿಕ ರೋಗವು “ಎಂಡ್ ಗೇಮ್” ತಲುಪುತ್ತಿದೆ ಎಂದು ಘೋಷಿಸಿದರು. ವಾಸ್ತವವಾಗಿ ಭಾರತದಲ್ಲಿ ಮತ್ತು ವಿಶ್ವಾದ್ಯಂತ ಕೊರೊನಾ ಶಕ್ತಿಯನ್ನು ಪಡೆಯುತ್ತಿತ್ತು. ಆದರೆ ಮೋದಿ ಸರ್ಕಾರವು ಸಂಭವನೀಯ ಆಕಸ್ಮಿಕಗಳಿಗೆ ಯಾವುದೇ ಸಿದ್ಧತೆಗಳನ್ನು ಮಾಡಲಿಲ್ಲ.

ದೇಶದಲ್ಲಿ ಕೋವಿಡ್ ಎರಡನೆ ಅಲೆ ತೀವ್ರವಾಗುವ ಸಂದರ್ಭದಲ್ಲಿ ಮೋದಿ ಮತ್ತು ಅವರ ಪಕ್ಷದ ಇತರ ಸದಸ್ಯರು ಏಪ್ರಿಲ್ ಚುನಾವಣೆಗೆ ಮುಂಚಿತವಾಗಿ ಹೊರಾಂಗಣ ಪ್ರಚಾರ ರ‍್ಯಾಲಿಗಳನ್ನು ನಡೆಸಿದರು. ಆ ರ‍್ಯಾಲಿಗಳಲ್ಲಿ ಮಾಸ್ಕ್ ಇರಲಿಲ್ಲ, ದೈಹಿಕ ಅಂತರ ಇರಲು ಸಾಧ್ಯವೇ? ಜನವರಿಯಿಂದ ಮಾರ್ಚ್‌ವರೆಗೆ ಲಕ್ಷಾಂತರ ಜನರನ್ನು ಸೆಳೆಯುವ ಕುಂಭಮೇಳ ಉತ್ಸವಕ್ಕೂ ಮೋದಿ ಅವಕಾಶ ನೀಡಿದರು. ಸಾರ್ವಜನಿಕ ಆರೋಗ್ಯ ಅಧಿಕಾರಿಗಳು, ತಜ್ಞರು ಈಗ ಉತ್ಸವವು ಒಂದು ಸೂಪರ್-ಸ್ಪ್ರೆ ಡರ್ ಆಗಿದೆ ಎನ್ನುತ್ತಿದ್ದಾರೆ.

ಕಳೆದ ವರ್ಷ ಮೋದಿಯವರು ತಮ್ಮ ಯಶಸ್ಸನ್ನು ತಿಳಿಸಿದಂತೆ, ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಭಾರತವು 10 ದಶಲಕ್ಷಕ್ಕೂ ಹೆಚ್ಚಿನ ಲಸಿಕೆ ಪ್ರಮಾಣವನ್ನು ನೆರೆಯ ದೇಶಗಳಿಗೆ ಕಳುಹಿಸಿತು. ಭಾರತದ 139 ಕೋಟಿ ಜನರಲ್ಲಿ ಕೇವಲ 1.9% ರಷ್ಟು ಜನರು ಮೇ ಆರಂಭದಲ್ಲಿ ಸಂಪೂರ್ಣ ಲಸಿಕೆ ಪಡೆದಿದ್ದಾರೆ.

ಬ್ರೆಜಿಲ್‌ನ ಜೈರ್ ಬೋಲ್ಸನಾರೊ

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಅವರು ಕೋವಿಡ್ ಬಗ್ಗೆ ತೀವ್ರ ನಿರ್ಲಕ್ಷ್ಯ ಮಾಡಿದರು. ಕೊರೊನಾ ‘ಬರೀ ಜ್ವರ ಬಿಡಿ’ ಎಂದು ಪರಿಸ್ಥಿತಿಯನ್ನ ಹದಗೆಡಿಸಿದರು.

ಆರೋಗ್ಯ ಸಚಿವಾಲಯದ ಆಡಳಿತಾತ್ಮಕ ವಿಷಯಗಳಾದ ಕ್ಲಿನಿಕಲ್ ಪ್ರೋಟೋಕಾಲ್‌ಗಳು, ಡೇಟಾ ಬಹಿರಂಗಪಡಿಸುವಿಕೆ ಮತ್ತು ಲಸಿಕೆ ಸಂಗ್ರಹಣೆಗಳಲ್ಲಿ ಬೋಲ್ಸೊನಾರೊ ಹಸ್ತಕ್ಷೇಪ ಮಾಡಿ, ಅವೈಜ್ಞಾನಿಕ ನಿರ್ಧಾರಗಳನ್ನು ತೆಗೆದುಕೊಂಡರು. ಧಾರ್ಮಿಕ ಸ್ಥಳಗಳಲ್ಲಿ ಮಾಸ್ಕ್ ಬಳಸುವುದನ್ನು ಕಡ್ಡಾಯಗೊಳಿಸುವ ಮತ್ತು ಸಾಂಕ್ರಾಮಿಕ ರೋಗದಿಂದ ಶಾಶ್ವತವಾಗಿ ಹಾನಿಗೊಳಗಾದ ಆರೋಗ್ಯ ವೃತ್ತಿಪರರಿಗೆ ಪರಿಹಾರ ನೀಡುವ ಶಾಸನವನ್ನು ಅವರು ರದ್ದು ಮಾಡಿದರು. ಸಾಮಾಜಿಕ ದೂರವನ್ನು ಉತ್ತೇಜಿಸುವ ಆಡಳಿತದ ಪ್ರಯತ್ನಗಳಿಗೆ ಅವರು ಅಡ್ಡಿಯುಂಟು ಮಾಡಿದರು. ಸ್ಪಾಗಳು ಮತ್ತು ಜಿಮ್‌ಗಳು ಸೇರಿದಂತೆ ಅನೇಕ ವ್ಯವಹಾರಗಳನ್ನು “ಅಗತ್ಯ” ಎಂದು ತೆರೆಯಲು ಅನುಮತಿ ನೀಡಿದರು. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬೋಲ್ಸೊನಾರೊ ಸಾಬೀತಾಗದ ಔಷಧಿಗಳನ್ನು, ಮುಖ್ಯವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಆಕ್ರಮಣಕಾರಿಯಾಗಿ ಉತ್ತೇಜಿಸಿದರು.

ಬೆಲಾರಸ್‌ನ ಅಲೆಕ್ಸಾಂಡರ್ ಲುಕಾಶೆಂಕೊ

ಬೆಲಾರಸ್‌ನ ದೀರ್ಘಕಾಲದ ಸರ್ವಾಧಿಕಾರಿ ನಾಯಕ ಅಲೆಕ್ಸಾಂಡರ್ ಲುಕಾಶೆಂಕೊ ಕೋವಿಡ್ ದುರಂತದ ಬೆದರಿಕೆಯನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಸಾಂಕ್ರಾಮಿಕ ರೋಗದ ಆರಂಭದಲ್ಲಿ, ಇತರ ದೇಶಗಳು ಲಾಕ್‌ಡೌನ್‌ಗಳನ್ನು ಜಾರಿಗೊಳಿಸುತ್ತಿದ್ದಂತೆ, ಲುಕಾಶೆಂಕೊ ಕೋವಿಡ್ ಹರಡುವುದನ್ನು ತಡೆಯಲು ಯಾವುದೇ ನಿರ್ಬಂಧಿತ ಕ್ರಮಗಳನ್ನು ಜಾರಿಗೊಳಿಸದಿರಲು ನಿರ್ಧರಿಸಿದರು. ಬದಲಾಗಿ, ವೋಡ್ಕಾ ಕುಡಿಯುವುದರಿಂದ, ಸೌನಾಕ್ಕೆ ಭೇಟಿ ನೀಡುವುದರಿಂದ ಮತ್ತು ಹೊಲಗಳಲ್ಲಿ ಕೆಲಸ ಮಾಡುವುದರಿಂದ ವೈರಸ್ ತಡೆಗಟ್ಟಬಹುದು ಎಂದು ಅವರು ಹೇಳಿದ್ದಾರೆ.

ಅಮೆರಿಕದ ಡೊನಾಲ್ಡ್ ಟ್ರಂಪ್

ಟ್ರಂಪ್ ಅಧಿಕಾರದಿಂದ ಹೊರಗುಳಿದಿದ್ದಾರೆ. ಆದರೆ ಸಾಂಕ್ರಾಮಿಕ ರೋಗವನ್ನು ಅವರು ತಪ್ಪಾಗಿ ನಿರ್ವಹಿಸಿದ್ದು ಅಮೆರಿಕಾದ ಮೇಲೆ- ವಿಶೇಷವಾಗಿ ಕಪ್ಪು ವರ್ಣದ ಸಮುದಾಯಗಳ ಮೇಲೆ- ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತಿದೆ.

ಸಾಂಕ್ರಾಮಿಕ ರೋಗದ ಆರಂಭಿಕ ನಿರಾಕರಣೆ, ಮಾಸ್ಕ್ ಮತ್ತು ಚಿಕಿತ್ಸೆಗಳ ಬಗ್ಗೆ ತಪ್ಪು ಸಂದೇಶಗಳನ್ನು ಅವರು ನೀಡುತ್ತ ಬಂದರು. ಮೋದಿಯವರಂತೆ ಅವರಿಗೂ ಚುನಾವಣೆ ಗೆಲ್ಲುವುದಷ್ಟೇ ಮುಖ್ಯವಾಗಿತ್ತು.

ಆಫ್ರಿಕನ್ ಅಮೆರಿಕನ್ನರು ಮತ್ತು ಲ್ಯಾಟಿನೋಗಳು ಯುಎಸ್ ಜನಸಂಖ್ಯೆಯ ಕೇವಲ 31%ರಷ್ಟಿದ್ದಾರೆ. ಅವರು ಕೋವಿಡ್ ಪ್ರಕರಣಗಳಲ್ಲಿ 55% ಕ್ಕಿಂತ ಹೆಚ್ಚು ಇದ್ದಾರೆ. ಬಿಳಿಯರ ಮರಣ ಪ್ರಮಾಣಕ್ಕಿಂತ ಕಪ್ಪು ವರ್ಣದವರ ಮರಣ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಿತ್ತು.
ನಿರುದ್ಯೋಗ ಏರಿಕೆಯಲ್ಲೂ ಟ್ರಂಪ್ ಕಾರಣವಾದರು. ಇದು ಹೆಚ್ಚಾಗಿ ತಟ್ಟಿದ್ದು ಬಿಳಿಯರಲ್ಲದ ಅಮೆರಿಕನ್ ಪ್ರಜೆಗಳಿಗೆ.

ಮೆಕ್ಸಿಕೊದ ಆಂಡ್ರೆಸ್

ಮೆಕ್ಸಿಕೊವು ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಸಾವಿನ ಪ್ರಮಾಣವನ್ನು ಹೊಂದಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಇದು 6,17,000 ಸಾವುಗಳನ್ನು ಅನುಭವಿಸಿದೆ. ಭಾರತ ಮತ್ತು ಅಮೆರಿಕ ಕೂಡ ಸಾವಿನ ಸಂಖ್ಯೆಯಲ್ಲಿ ಮುಂದಿವೆ.

ಮೆಕ್ಸಿಕೊದ ದೀರ್ಘಕಾಲದ, ವಿಪರೀತ ಕೋವಿಡ್ ಏಕಾಏಕಿಗಳಿಗೆ ಅಸಮರ್ಪಕ ರಾಷ್ಟ್ರೀಯ ನಾಯಕತ್ವ ಕಾರಣವಾಗಿದೆ.

ಸಾಂಕ್ರಾಮಿಕ ರೋಗದುದ್ದಕ್ಕೂ, ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಮೆಕ್ಸಿಕೊದ ಪರಿಸ್ಥಿತಿಯ ಸಂಕಷ್ಟವನ್ನು ಮುಚ್ಚಿ ಇಡಲು ನೋಡಿದರು. ಆರಂಭದಲ್ಲಿ, ಅವರು ರಾಷ್ಟ್ರವ್ಯಾಪಿ ಲಾಕ್ ಡೌನ್ ಜಾರಿಗೆ ವಿರೋಧಿಸಿದರು ಮತ್ತು ಅಂತಿಮವಾಗಿ ಮಾರ್ಚ್ 23, 2020 ರಂದು ಮೆಕ್ಸಿಕೊ ಎರಡು ತಿಂಗಳ ಕಾಲ ಸ್ಥಗಿತಗೊಳ್ಳುವಂತೆ ಮಾಡಿದರು. ಅವರು ಆಗಾಗ್ಗೆ ಮಾಸ್ಕ್ ಧರಿಸಲು ನಿರಾಕರಿಸಿದರು.

ಸಾಂಕ್ರಾಮಿಕ ರೋಗವು ಸ್ಫೋಟಗೊಳ್ಳುವ ಮೊದಲೇ, ಲೋಪೆಜ್ ಒಬ್ರಡಾರ್ ಜಾರಿಗೆ ತಂದ ಹಣಕಾಸು ನೀತಿ ಆರೋಗ್ಯ ಬಿಕ್ಕಟ್ಟನ್ನು ಇನ್ನಷ್ಟು ದುಸ್ತರವಾಗಿಸಿದೆ. ನಮ್ಮಲ್ಲಿ ಮೋದಿಯವರ ನೋಟ್‌ಬ್ಯಾನ್, ಅವೈಜ್ಞಾನಿಕ ಜಿಎಸ್‌ಟಿ ನೀತಿಗಳು ಕೂಡ ಭಾರತಕ್ಕೆ ಈಗ ಕಾಡುತ್ತಿವೆ.

(ಕೃಪೆ: ದಿ ವೈರ್)


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...