Homeಮುಖಪುಟ60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ 'ಬರ್ಖಾ ದತ್'

60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’

ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪಡೆದಿರುವ ಪತ್ರಕರ್ತೆ 'ಬರ್ಖಾ ದತ್' ಲಾಕ್ ಡೌನ್ ಆದ ನಂತರ ನಿರಂತರವಾಗಿ 60 ದಿನಗಳಿಗಿಂತಲೂ ಹೆಚ್ಚು ಕಾಲ ರಸ್ತೆಯಲ್ಲಿದ್ದೇ ವಲಸೆ ಕಾರ್ಮಿಕರ ಕತೆಯನ್ನು ದೇಶದ ಮುಂದಿಡುತ್ತಿದ್ದಾರೆ.

- Advertisement -
- Advertisement -

ಕೊರೊನಾ ಭಯಕ್ಕೆ ಲಾಕ್ ಡೌನ್ ಆಗಿ ದೇಶದ ಭಾಗಶಃ ಜನರು ಮನೆಯೊಳಗೆ ಕುಳಿತಿರುವಾಗ ಇವರೊಬ್ಬರು ಮಾತ್ರ “ಹೆದ್ದಾರಿಗಳಲ್ಲಿ ಪಾದಗಳಲ್ಲಿ ರಕ್ತ ಸುರಿಸುತ್ತಾ ಹತಾಶರಾಗಿ ನಡೆಯುತ್ತಿರುವ ಕಾರ್ಮಿಕರ ಕಡೆಗೆ ತಮ್ಮ ಕ್ಯಾಮರಾ ಕಣ್ಣನ್ನು ತಿರುಗಿಸಿ, ವಲಸೆ ಕಾರ್ಮಿಕರ ದಾರುಣ ಕತೆಯನ್ನು ದೇಶದ ಎದುರಿಗೆ ಬಿಚ್ಚಿಡುತ್ತಿದ್ದಾರೆ. ಲಾಕ್ ಡೌನ್ ಆಗಿದಂದಿನಿಂದ 60 ದಿನಗಳಿಗಿಂತ ಹೆಚ್ಚು ಕಾಲ ರಸ್ತೆಯಲ್ಲೇ ಇದ್ದು ಪತ್ರಕರ್ತರಾಗಿ ತಮ್ಮ ಬದ್ದತೆಯನ್ನು ಎತ್ತಿ ಹಿಡಿದಿದ್ದಾರೆ. ಅವರೇ ಪ್ರಸಿದ್ದ ಪತ್ರಕರ್ತೆ “ಬರ್ಖಾ ದತ್.”

18 ಡಿಸೆಂಬರ್ 1971 ರಂದು ಜನಿಸಿದ ಬರ್ಖಾ ದತ್, ಲೇಖಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಜನವರಿ 2017 ರವರೆಗೂ ಅವರು 21 ವರ್ಷಗಳ ಕಾಲ ಎನ್ಡಿಟಿವಿ ಯಲ್ಲಿ ಕಾರ್ಯ ನಿರ್ವಹಿಸಿದ್ದರು. 1999 ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾರ್ಗಿಲ್ ಯುದ್ದದ ವರದಿಯನ್ನು ಯುದ್ದ ಭೂಮಿಯಲ್ಲಿದ್ದೇ ವರದಿ ಮಾಡಿದ ನಂತರ ಬರ್ಖಾ ದತ್ ಹೆಚ್ಚು ಪ್ರಸಿದ್ದಿ ಗಳಿಸಿದರು. ಇವರು ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಸೇರಿದಂತೆ, ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಸದ್ಯ ಬರ್ಖಾ ದತ್ ಅವರು ಮೋಜೊ ಟಿವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಲಾಕ್ ಡೌನ್‌ ಪ್ರಾರಂಭದಿಂದಲೂ ವಲಸೆ ಕಾರ್ಮಿಕರೊಂದಿಗೆ ಪ್ರಯಾಣಿಸಿ ಅವರ ಬಗೆಗಿನ ವರದಿಗಳನ್ನು ದೇಶದ ಮುಂದೆ ಇಡುತ್ತಿದ್ದಾರೆ.

ಕಳೆದ ಶನಿವಾರ, ಲಕ್ನೋದಿಂದ 200 ಕಿಲೋಮೀಟರ್ ದೂರದಲ್ಲಿರುವ ಔರಿಯಾದಲ್ಲಿ 26 ವಲಸೆ ಕಾರ್ಮಿಕರು ಮುಂಜಾನೆ 3.30 ರ ಸುಮಾರಿಗೆ ಅಫಘಾತವಾಗಿ ಸಾವನ್ನಪ್ಪಿದ್ದರು. ಘಟನೆಯಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಆದರೆ ಉತ್ತರ ಪ್ರದೇಶ ಸರ್ಕಾರ ಈ ವಲಸೆ ಕಾರ್ಮಿಕರ ಶವಗಳನ್ನು ತೆರೆದ ಟ್ರಕ್‌ನಲ್ಲಿ ಐಸ್ ಚಪ್ಪಡಿಗಳ ಮೇಲೆ ಪ್ಲಾಸ್ಟಿಕ್ ಚೀಲಗಳಲ್ಲಿ ಸುತ್ತಿ ವಾರಸುದಾರರ ಮನೆಗೆ ಸಾಗಹಾಕಲು ನೋಡಿತು.

ಈ ವಿಷಯದ ಬಗ್ಗೆ ಬರ್ಖಾ ಅವರ ವರದಿಯ ನಂತರವೇ, ಸಾಮಾಜಿಕ ಜಾಲತಾಣಗಳು ಹಾಗೂ ಇತರ ಪ್ರಮುಖ ಸುದ್ದಿ ತಾಣಗಳು ಅದನ್ನು ವರದಿ ಮಾಡಿದವು. ಘಟನೆಯನ್ನು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕಟುವಾಗಿ ಟೀಕಿಸಿದ್ದರು. ಇವರ ವರದಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ನಂತರ ಎಚ್ಚತ್ತ ಆಡಳಿತವನ್ನು ಶವವನ್ನು ಆಂಬುಲೆನ್ಸ್‌ಗಳಿಗೆ ಸ್ಥಳಾಂತರಿಸಿ ಕೊಂಡೊಯ್ಯಿತು.

ಟ್ರಕ್‌ನ ಹಿಂಭಾಗದಲ್ಲಿ ಆಸನಕ್ಕಾಗಿ ಒಬ್ಬ ಪ್ರಯಾಣಿಕರಿಗೆ 3,000 ರೂಪಾಯಿಗಳನ್ನು ವಿಧಿಸುವ ಕಥೆಯೊಂದಿಗೆ ವಲಸೆ ಕಾರ್ಮಿಕರು ಕತೆಯನ್ನು ಅವರು ದೇಶದ ಮುಂದೆ ಅವರು ತೆರೆದಿಟ್ಟಿದ್ದರು.

ಏಷ್ಯಾದಲ್ಲೇ ಅತ್ಯಂತ ದೊಡ್ಡ ಸ್ಲಂ ಆದ ಧಾರವಿಯಲ್ಲಿ, ಎರಡು ಬಾರಿ ಕೊರೊನಾ ನೆಗೆಟಿವ್ ಪರೀಕ್ಷೆಗೆ ಒಳಪಟ್ಟಿದ್ದರೂ ಬಿಎಂಸಿ ನೌಕರನೊಬ್ಬ ಸಾವನ್ನಪ್ಪಿದ್ದರು. ಅವರ ಮರಣದ 3 ದಿನಗಳ ನಂತರ, ಅವರು ಕೊರೊನಾ ಸೋಂಕಿತ ಎಂದು ಕಂಡುಬಂದಿತ್ತು. ಆ ಸಮಯದಲ್ಲಿ ಅವರ ಕುಟುಂಬದ ಇತರ ಇಬ್ಬರಿಗೂ ಸಹ ಕೊರೊನಾ ಸೋಂಕು ಇರುವುದು ದೃಡಪಟ್ಟಿತ್ತು. ಇದರ ಬಗ್ಗೆ ಬರ್ಖಾ ದತ್ ವಿಶೇಷ ತನಿಖಾ ವರದಿಯನ್ನು ಮಾಡಿದ್ದರು.

1947 ರಲ್ಲಿ ವಿಭಜನೆಯಾದ ನಂತರ ಭಾರತ ಕಂಡ ಅತಿದೊಡ್ಡ ಸಾಮೂಹಿಕ ವಲಸೆಯ ಹೃದಯ ಕಲಕುವ ಕಥೆಗಳನ್ನು ಮಾತ್ರ ಇವರು ನೀಡುತ್ತಿಲ್ಲ. ಕೊರೊನಾದಂತಹ ಬಿಕ್ಕಟ್ಟಿನಲ್ಲಿಯೂ ಕೆಲವು ಕೋಮುವಾದ ಹರಡುವ ನಿರೂಪಕರಿಗೆ ವಿರುದ್ದವಾಗಿ ಭರವಸೆ ತುಂಬುವ ಹಾಗೂ ಸೌಹಾರ್ಧದ ಹೃದಯಂಗಮ ಕಥೆಗಳನ್ನು ಸಹ ದೇಶದ ಮುಂದೆ ಇಡುತ್ತಿದ್ದಾರೆ.

ಲಾಕ್ ಡೌನ್ ನಿಂದ ಉಂಟಾದ ಯುದ್ಧದಂತಹ ಪರಿಸ್ಥಿತಿಯಲ್ಲಿ, ಹಸಿವೆಂದರೆ ಏನೆಂದು ಕಂಡ 12 ವರ್ಷದ ಬಾಲಕಿಯ, “ತಾನು ದೊಡ್ಡವಳಾದರೆ ಹಸಿವು ತಣಿಸುತ್ತೇನೆ” ಎನ್ನುವ ಕನಸುಗಳ ಕತೆಯನ್ನು ಬರ್ಖಾ ದೇಶಕ್ಕೆ ಹೇಳುತ್ತಾರೆ.

ತಮ್ಮ 63 ದಿನಗಳ ಪ್ರಯಾಣದುದ್ದಕ್ಕೂ ಭರವಸೆ, ಹತಾಶೆ, ದುಃಖ, ಸಾವು ನೋವಿನ ಈ ರೀತಿಯ ನೂರಾರು ಕಥೆಗಳನ್ನು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದಾಸೀನತೆಯನ್ನು ದೇಶದ ಮುಂದೆ ತೋರಿಸುತ್ತಾರೆ.

ಕೊರೊನಾದಂತಹ ಸಾಂಕ್ರಮಿಕ ರೋಗದ ಸಮಯದಲ್ಲಿ 60 ದಿನಗಳಿಗಿಂತ ಹೆಚ್ಚು ಕಾಲ ರಸ್ತೆಯಲ್ಲಿ ಇದ್ದು ವರದಿ ಮಾಡುವುದೆಂದರೆ ಅದು ಮನೆಯಲ್ಲಿದ್ದು ಓದಿದಂತೆ, ಕೇಳಿದಂತೆ ಸುಲಭ ಮಾತೇನಲ್ಲ ಎಂದು ಬಹಳಷ್ಟು ಜನರು ಇವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1999 ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾಗರಿಕ ರಾಷ್ಟ್ರದ ಮುಖವಾಗಿದ್ದ ಬರ್ಖಾ ದತ್, ಕೊರೊನಾ ಕಾಲದ ಯುದ್ಧದಲ್ಲಿ ನಾಗರಿಕರ ಧ್ವನಿಯಾಗಿ ಮತ್ತೊಮ್ಮೆ ನಮ್ಮೆದುರಿಗೆ ನಿಂತದ್ದಾರೆ. ಆದರೆ ಕಿವುಡರಲ್ಲದ ಆದರೆ ಕಿವುಡರಂತೆ ನಟಿಸುತ್ತಿರುವ ಆಡಳಿತಗಾರರು ಇನ್ನೂ ಹಾಗೆಯೆ ಇದ್ದಾರೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಕೃಪೆ:ಸ್ಕೂಪ್ ವೂಪ್


ಓದಿ:  ಕೊರೊನಾ ಬಿಕ್ಕಟ್ಟು: ವಿರೋಧ ಪಕ್ಷವೆಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿತು?


ಓದಿ: ತಾನು ಮಾಡುವ ಮಹಾನ್‌ ತಪ್ಪುಗಳಿಗೆ ಮೋದಿ ಬೆಲೆತೆರದೆ ಉಳಿದುಕೊಳ್ಳುವುದಾದರೂ ಹೇಗೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...