Homeಮುಖಪುಟ60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ 'ಬರ್ಖಾ ದತ್'

60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’

ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪಡೆದಿರುವ ಪತ್ರಕರ್ತೆ 'ಬರ್ಖಾ ದತ್' ಲಾಕ್ ಡೌನ್ ಆದ ನಂತರ ನಿರಂತರವಾಗಿ 60 ದಿನಗಳಿಗಿಂತಲೂ ಹೆಚ್ಚು ಕಾಲ ರಸ್ತೆಯಲ್ಲಿದ್ದೇ ವಲಸೆ ಕಾರ್ಮಿಕರ ಕತೆಯನ್ನು ದೇಶದ ಮುಂದಿಡುತ್ತಿದ್ದಾರೆ.

- Advertisement -
- Advertisement -

ಕೊರೊನಾ ಭಯಕ್ಕೆ ಲಾಕ್ ಡೌನ್ ಆಗಿ ದೇಶದ ಭಾಗಶಃ ಜನರು ಮನೆಯೊಳಗೆ ಕುಳಿತಿರುವಾಗ ಇವರೊಬ್ಬರು ಮಾತ್ರ “ಹೆದ್ದಾರಿಗಳಲ್ಲಿ ಪಾದಗಳಲ್ಲಿ ರಕ್ತ ಸುರಿಸುತ್ತಾ ಹತಾಶರಾಗಿ ನಡೆಯುತ್ತಿರುವ ಕಾರ್ಮಿಕರ ಕಡೆಗೆ ತಮ್ಮ ಕ್ಯಾಮರಾ ಕಣ್ಣನ್ನು ತಿರುಗಿಸಿ, ವಲಸೆ ಕಾರ್ಮಿಕರ ದಾರುಣ ಕತೆಯನ್ನು ದೇಶದ ಎದುರಿಗೆ ಬಿಚ್ಚಿಡುತ್ತಿದ್ದಾರೆ. ಲಾಕ್ ಡೌನ್ ಆಗಿದಂದಿನಿಂದ 60 ದಿನಗಳಿಗಿಂತ ಹೆಚ್ಚು ಕಾಲ ರಸ್ತೆಯಲ್ಲೇ ಇದ್ದು ಪತ್ರಕರ್ತರಾಗಿ ತಮ್ಮ ಬದ್ದತೆಯನ್ನು ಎತ್ತಿ ಹಿಡಿದಿದ್ದಾರೆ. ಅವರೇ ಪ್ರಸಿದ್ದ ಪತ್ರಕರ್ತೆ “ಬರ್ಖಾ ದತ್.”

18 ಡಿಸೆಂಬರ್ 1971 ರಂದು ಜನಿಸಿದ ಬರ್ಖಾ ದತ್, ಲೇಖಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಜನವರಿ 2017 ರವರೆಗೂ ಅವರು 21 ವರ್ಷಗಳ ಕಾಲ ಎನ್ಡಿಟಿವಿ ಯಲ್ಲಿ ಕಾರ್ಯ ನಿರ್ವಹಿಸಿದ್ದರು. 1999 ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾರ್ಗಿಲ್ ಯುದ್ದದ ವರದಿಯನ್ನು ಯುದ್ದ ಭೂಮಿಯಲ್ಲಿದ್ದೇ ವರದಿ ಮಾಡಿದ ನಂತರ ಬರ್ಖಾ ದತ್ ಹೆಚ್ಚು ಪ್ರಸಿದ್ದಿ ಗಳಿಸಿದರು. ಇವರು ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಸೇರಿದಂತೆ, ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಸದ್ಯ ಬರ್ಖಾ ದತ್ ಅವರು ಮೋಜೊ ಟಿವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಲಾಕ್ ಡೌನ್‌ ಪ್ರಾರಂಭದಿಂದಲೂ ವಲಸೆ ಕಾರ್ಮಿಕರೊಂದಿಗೆ ಪ್ರಯಾಣಿಸಿ ಅವರ ಬಗೆಗಿನ ವರದಿಗಳನ್ನು ದೇಶದ ಮುಂದೆ ಇಡುತ್ತಿದ್ದಾರೆ.

ಕಳೆದ ಶನಿವಾರ, ಲಕ್ನೋದಿಂದ 200 ಕಿಲೋಮೀಟರ್ ದೂರದಲ್ಲಿರುವ ಔರಿಯಾದಲ್ಲಿ 26 ವಲಸೆ ಕಾರ್ಮಿಕರು ಮುಂಜಾನೆ 3.30 ರ ಸುಮಾರಿಗೆ ಅಫಘಾತವಾಗಿ ಸಾವನ್ನಪ್ಪಿದ್ದರು. ಘಟನೆಯಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಆದರೆ ಉತ್ತರ ಪ್ರದೇಶ ಸರ್ಕಾರ ಈ ವಲಸೆ ಕಾರ್ಮಿಕರ ಶವಗಳನ್ನು ತೆರೆದ ಟ್ರಕ್‌ನಲ್ಲಿ ಐಸ್ ಚಪ್ಪಡಿಗಳ ಮೇಲೆ ಪ್ಲಾಸ್ಟಿಕ್ ಚೀಲಗಳಲ್ಲಿ ಸುತ್ತಿ ವಾರಸುದಾರರ ಮನೆಗೆ ಸಾಗಹಾಕಲು ನೋಡಿತು.

ಈ ವಿಷಯದ ಬಗ್ಗೆ ಬರ್ಖಾ ಅವರ ವರದಿಯ ನಂತರವೇ, ಸಾಮಾಜಿಕ ಜಾಲತಾಣಗಳು ಹಾಗೂ ಇತರ ಪ್ರಮುಖ ಸುದ್ದಿ ತಾಣಗಳು ಅದನ್ನು ವರದಿ ಮಾಡಿದವು. ಘಟನೆಯನ್ನು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕಟುವಾಗಿ ಟೀಕಿಸಿದ್ದರು. ಇವರ ವರದಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ನಂತರ ಎಚ್ಚತ್ತ ಆಡಳಿತವನ್ನು ಶವವನ್ನು ಆಂಬುಲೆನ್ಸ್‌ಗಳಿಗೆ ಸ್ಥಳಾಂತರಿಸಿ ಕೊಂಡೊಯ್ಯಿತು.

ಟ್ರಕ್‌ನ ಹಿಂಭಾಗದಲ್ಲಿ ಆಸನಕ್ಕಾಗಿ ಒಬ್ಬ ಪ್ರಯಾಣಿಕರಿಗೆ 3,000 ರೂಪಾಯಿಗಳನ್ನು ವಿಧಿಸುವ ಕಥೆಯೊಂದಿಗೆ ವಲಸೆ ಕಾರ್ಮಿಕರು ಕತೆಯನ್ನು ಅವರು ದೇಶದ ಮುಂದೆ ಅವರು ತೆರೆದಿಟ್ಟಿದ್ದರು.

ಏಷ್ಯಾದಲ್ಲೇ ಅತ್ಯಂತ ದೊಡ್ಡ ಸ್ಲಂ ಆದ ಧಾರವಿಯಲ್ಲಿ, ಎರಡು ಬಾರಿ ಕೊರೊನಾ ನೆಗೆಟಿವ್ ಪರೀಕ್ಷೆಗೆ ಒಳಪಟ್ಟಿದ್ದರೂ ಬಿಎಂಸಿ ನೌಕರನೊಬ್ಬ ಸಾವನ್ನಪ್ಪಿದ್ದರು. ಅವರ ಮರಣದ 3 ದಿನಗಳ ನಂತರ, ಅವರು ಕೊರೊನಾ ಸೋಂಕಿತ ಎಂದು ಕಂಡುಬಂದಿತ್ತು. ಆ ಸಮಯದಲ್ಲಿ ಅವರ ಕುಟುಂಬದ ಇತರ ಇಬ್ಬರಿಗೂ ಸಹ ಕೊರೊನಾ ಸೋಂಕು ಇರುವುದು ದೃಡಪಟ್ಟಿತ್ತು. ಇದರ ಬಗ್ಗೆ ಬರ್ಖಾ ದತ್ ವಿಶೇಷ ತನಿಖಾ ವರದಿಯನ್ನು ಮಾಡಿದ್ದರು.

1947 ರಲ್ಲಿ ವಿಭಜನೆಯಾದ ನಂತರ ಭಾರತ ಕಂಡ ಅತಿದೊಡ್ಡ ಸಾಮೂಹಿಕ ವಲಸೆಯ ಹೃದಯ ಕಲಕುವ ಕಥೆಗಳನ್ನು ಮಾತ್ರ ಇವರು ನೀಡುತ್ತಿಲ್ಲ. ಕೊರೊನಾದಂತಹ ಬಿಕ್ಕಟ್ಟಿನಲ್ಲಿಯೂ ಕೆಲವು ಕೋಮುವಾದ ಹರಡುವ ನಿರೂಪಕರಿಗೆ ವಿರುದ್ದವಾಗಿ ಭರವಸೆ ತುಂಬುವ ಹಾಗೂ ಸೌಹಾರ್ಧದ ಹೃದಯಂಗಮ ಕಥೆಗಳನ್ನು ಸಹ ದೇಶದ ಮುಂದೆ ಇಡುತ್ತಿದ್ದಾರೆ.

ಲಾಕ್ ಡೌನ್ ನಿಂದ ಉಂಟಾದ ಯುದ್ಧದಂತಹ ಪರಿಸ್ಥಿತಿಯಲ್ಲಿ, ಹಸಿವೆಂದರೆ ಏನೆಂದು ಕಂಡ 12 ವರ್ಷದ ಬಾಲಕಿಯ, “ತಾನು ದೊಡ್ಡವಳಾದರೆ ಹಸಿವು ತಣಿಸುತ್ತೇನೆ” ಎನ್ನುವ ಕನಸುಗಳ ಕತೆಯನ್ನು ಬರ್ಖಾ ದೇಶಕ್ಕೆ ಹೇಳುತ್ತಾರೆ.

ತಮ್ಮ 63 ದಿನಗಳ ಪ್ರಯಾಣದುದ್ದಕ್ಕೂ ಭರವಸೆ, ಹತಾಶೆ, ದುಃಖ, ಸಾವು ನೋವಿನ ಈ ರೀತಿಯ ನೂರಾರು ಕಥೆಗಳನ್ನು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದಾಸೀನತೆಯನ್ನು ದೇಶದ ಮುಂದೆ ತೋರಿಸುತ್ತಾರೆ.

ಕೊರೊನಾದಂತಹ ಸಾಂಕ್ರಮಿಕ ರೋಗದ ಸಮಯದಲ್ಲಿ 60 ದಿನಗಳಿಗಿಂತ ಹೆಚ್ಚು ಕಾಲ ರಸ್ತೆಯಲ್ಲಿ ಇದ್ದು ವರದಿ ಮಾಡುವುದೆಂದರೆ ಅದು ಮನೆಯಲ್ಲಿದ್ದು ಓದಿದಂತೆ, ಕೇಳಿದಂತೆ ಸುಲಭ ಮಾತೇನಲ್ಲ ಎಂದು ಬಹಳಷ್ಟು ಜನರು ಇವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1999 ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾಗರಿಕ ರಾಷ್ಟ್ರದ ಮುಖವಾಗಿದ್ದ ಬರ್ಖಾ ದತ್, ಕೊರೊನಾ ಕಾಲದ ಯುದ್ಧದಲ್ಲಿ ನಾಗರಿಕರ ಧ್ವನಿಯಾಗಿ ಮತ್ತೊಮ್ಮೆ ನಮ್ಮೆದುರಿಗೆ ನಿಂತದ್ದಾರೆ. ಆದರೆ ಕಿವುಡರಲ್ಲದ ಆದರೆ ಕಿವುಡರಂತೆ ನಟಿಸುತ್ತಿರುವ ಆಡಳಿತಗಾರರು ಇನ್ನೂ ಹಾಗೆಯೆ ಇದ್ದಾರೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಕೃಪೆ:ಸ್ಕೂಪ್ ವೂಪ್


ಓದಿ:  ಕೊರೊನಾ ಬಿಕ್ಕಟ್ಟು: ವಿರೋಧ ಪಕ್ಷವೆಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿತು?


ಓದಿ: ತಾನು ಮಾಡುವ ಮಹಾನ್‌ ತಪ್ಪುಗಳಿಗೆ ಮೋದಿ ಬೆಲೆತೆರದೆ ಉಳಿದುಕೊಳ್ಳುವುದಾದರೂ ಹೇಗೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...