Homeಮುಖಪುಟ60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ 'ಬರ್ಖಾ ದತ್'

60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’

ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪಡೆದಿರುವ ಪತ್ರಕರ್ತೆ 'ಬರ್ಖಾ ದತ್' ಲಾಕ್ ಡೌನ್ ಆದ ನಂತರ ನಿರಂತರವಾಗಿ 60 ದಿನಗಳಿಗಿಂತಲೂ ಹೆಚ್ಚು ಕಾಲ ರಸ್ತೆಯಲ್ಲಿದ್ದೇ ವಲಸೆ ಕಾರ್ಮಿಕರ ಕತೆಯನ್ನು ದೇಶದ ಮುಂದಿಡುತ್ತಿದ್ದಾರೆ.

- Advertisement -
- Advertisement -

ಕೊರೊನಾ ಭಯಕ್ಕೆ ಲಾಕ್ ಡೌನ್ ಆಗಿ ದೇಶದ ಭಾಗಶಃ ಜನರು ಮನೆಯೊಳಗೆ ಕುಳಿತಿರುವಾಗ ಇವರೊಬ್ಬರು ಮಾತ್ರ “ಹೆದ್ದಾರಿಗಳಲ್ಲಿ ಪಾದಗಳಲ್ಲಿ ರಕ್ತ ಸುರಿಸುತ್ತಾ ಹತಾಶರಾಗಿ ನಡೆಯುತ್ತಿರುವ ಕಾರ್ಮಿಕರ ಕಡೆಗೆ ತಮ್ಮ ಕ್ಯಾಮರಾ ಕಣ್ಣನ್ನು ತಿರುಗಿಸಿ, ವಲಸೆ ಕಾರ್ಮಿಕರ ದಾರುಣ ಕತೆಯನ್ನು ದೇಶದ ಎದುರಿಗೆ ಬಿಚ್ಚಿಡುತ್ತಿದ್ದಾರೆ. ಲಾಕ್ ಡೌನ್ ಆಗಿದಂದಿನಿಂದ 60 ದಿನಗಳಿಗಿಂತ ಹೆಚ್ಚು ಕಾಲ ರಸ್ತೆಯಲ್ಲೇ ಇದ್ದು ಪತ್ರಕರ್ತರಾಗಿ ತಮ್ಮ ಬದ್ದತೆಯನ್ನು ಎತ್ತಿ ಹಿಡಿದಿದ್ದಾರೆ. ಅವರೇ ಪ್ರಸಿದ್ದ ಪತ್ರಕರ್ತೆ “ಬರ್ಖಾ ದತ್.”

18 ಡಿಸೆಂಬರ್ 1971 ರಂದು ಜನಿಸಿದ ಬರ್ಖಾ ದತ್, ಲೇಖಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಜನವರಿ 2017 ರವರೆಗೂ ಅವರು 21 ವರ್ಷಗಳ ಕಾಲ ಎನ್ಡಿಟಿವಿ ಯಲ್ಲಿ ಕಾರ್ಯ ನಿರ್ವಹಿಸಿದ್ದರು. 1999 ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾರ್ಗಿಲ್ ಯುದ್ದದ ವರದಿಯನ್ನು ಯುದ್ದ ಭೂಮಿಯಲ್ಲಿದ್ದೇ ವರದಿ ಮಾಡಿದ ನಂತರ ಬರ್ಖಾ ದತ್ ಹೆಚ್ಚು ಪ್ರಸಿದ್ದಿ ಗಳಿಸಿದರು. ಇವರು ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಸೇರಿದಂತೆ, ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಸದ್ಯ ಬರ್ಖಾ ದತ್ ಅವರು ಮೋಜೊ ಟಿವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಲಾಕ್ ಡೌನ್‌ ಪ್ರಾರಂಭದಿಂದಲೂ ವಲಸೆ ಕಾರ್ಮಿಕರೊಂದಿಗೆ ಪ್ರಯಾಣಿಸಿ ಅವರ ಬಗೆಗಿನ ವರದಿಗಳನ್ನು ದೇಶದ ಮುಂದೆ ಇಡುತ್ತಿದ್ದಾರೆ.

ಕಳೆದ ಶನಿವಾರ, ಲಕ್ನೋದಿಂದ 200 ಕಿಲೋಮೀಟರ್ ದೂರದಲ್ಲಿರುವ ಔರಿಯಾದಲ್ಲಿ 26 ವಲಸೆ ಕಾರ್ಮಿಕರು ಮುಂಜಾನೆ 3.30 ರ ಸುಮಾರಿಗೆ ಅಫಘಾತವಾಗಿ ಸಾವನ್ನಪ್ಪಿದ್ದರು. ಘಟನೆಯಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಆದರೆ ಉತ್ತರ ಪ್ರದೇಶ ಸರ್ಕಾರ ಈ ವಲಸೆ ಕಾರ್ಮಿಕರ ಶವಗಳನ್ನು ತೆರೆದ ಟ್ರಕ್‌ನಲ್ಲಿ ಐಸ್ ಚಪ್ಪಡಿಗಳ ಮೇಲೆ ಪ್ಲಾಸ್ಟಿಕ್ ಚೀಲಗಳಲ್ಲಿ ಸುತ್ತಿ ವಾರಸುದಾರರ ಮನೆಗೆ ಸಾಗಹಾಕಲು ನೋಡಿತು.

ಈ ವಿಷಯದ ಬಗ್ಗೆ ಬರ್ಖಾ ಅವರ ವರದಿಯ ನಂತರವೇ, ಸಾಮಾಜಿಕ ಜಾಲತಾಣಗಳು ಹಾಗೂ ಇತರ ಪ್ರಮುಖ ಸುದ್ದಿ ತಾಣಗಳು ಅದನ್ನು ವರದಿ ಮಾಡಿದವು. ಘಟನೆಯನ್ನು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕಟುವಾಗಿ ಟೀಕಿಸಿದ್ದರು. ಇವರ ವರದಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ನಂತರ ಎಚ್ಚತ್ತ ಆಡಳಿತವನ್ನು ಶವವನ್ನು ಆಂಬುಲೆನ್ಸ್‌ಗಳಿಗೆ ಸ್ಥಳಾಂತರಿಸಿ ಕೊಂಡೊಯ್ಯಿತು.

ಟ್ರಕ್‌ನ ಹಿಂಭಾಗದಲ್ಲಿ ಆಸನಕ್ಕಾಗಿ ಒಬ್ಬ ಪ್ರಯಾಣಿಕರಿಗೆ 3,000 ರೂಪಾಯಿಗಳನ್ನು ವಿಧಿಸುವ ಕಥೆಯೊಂದಿಗೆ ವಲಸೆ ಕಾರ್ಮಿಕರು ಕತೆಯನ್ನು ಅವರು ದೇಶದ ಮುಂದೆ ಅವರು ತೆರೆದಿಟ್ಟಿದ್ದರು.

ಏಷ್ಯಾದಲ್ಲೇ ಅತ್ಯಂತ ದೊಡ್ಡ ಸ್ಲಂ ಆದ ಧಾರವಿಯಲ್ಲಿ, ಎರಡು ಬಾರಿ ಕೊರೊನಾ ನೆಗೆಟಿವ್ ಪರೀಕ್ಷೆಗೆ ಒಳಪಟ್ಟಿದ್ದರೂ ಬಿಎಂಸಿ ನೌಕರನೊಬ್ಬ ಸಾವನ್ನಪ್ಪಿದ್ದರು. ಅವರ ಮರಣದ 3 ದಿನಗಳ ನಂತರ, ಅವರು ಕೊರೊನಾ ಸೋಂಕಿತ ಎಂದು ಕಂಡುಬಂದಿತ್ತು. ಆ ಸಮಯದಲ್ಲಿ ಅವರ ಕುಟುಂಬದ ಇತರ ಇಬ್ಬರಿಗೂ ಸಹ ಕೊರೊನಾ ಸೋಂಕು ಇರುವುದು ದೃಡಪಟ್ಟಿತ್ತು. ಇದರ ಬಗ್ಗೆ ಬರ್ಖಾ ದತ್ ವಿಶೇಷ ತನಿಖಾ ವರದಿಯನ್ನು ಮಾಡಿದ್ದರು.

1947 ರಲ್ಲಿ ವಿಭಜನೆಯಾದ ನಂತರ ಭಾರತ ಕಂಡ ಅತಿದೊಡ್ಡ ಸಾಮೂಹಿಕ ವಲಸೆಯ ಹೃದಯ ಕಲಕುವ ಕಥೆಗಳನ್ನು ಮಾತ್ರ ಇವರು ನೀಡುತ್ತಿಲ್ಲ. ಕೊರೊನಾದಂತಹ ಬಿಕ್ಕಟ್ಟಿನಲ್ಲಿಯೂ ಕೆಲವು ಕೋಮುವಾದ ಹರಡುವ ನಿರೂಪಕರಿಗೆ ವಿರುದ್ದವಾಗಿ ಭರವಸೆ ತುಂಬುವ ಹಾಗೂ ಸೌಹಾರ್ಧದ ಹೃದಯಂಗಮ ಕಥೆಗಳನ್ನು ಸಹ ದೇಶದ ಮುಂದೆ ಇಡುತ್ತಿದ್ದಾರೆ.

ಲಾಕ್ ಡೌನ್ ನಿಂದ ಉಂಟಾದ ಯುದ್ಧದಂತಹ ಪರಿಸ್ಥಿತಿಯಲ್ಲಿ, ಹಸಿವೆಂದರೆ ಏನೆಂದು ಕಂಡ 12 ವರ್ಷದ ಬಾಲಕಿಯ, “ತಾನು ದೊಡ್ಡವಳಾದರೆ ಹಸಿವು ತಣಿಸುತ್ತೇನೆ” ಎನ್ನುವ ಕನಸುಗಳ ಕತೆಯನ್ನು ಬರ್ಖಾ ದೇಶಕ್ಕೆ ಹೇಳುತ್ತಾರೆ.

ತಮ್ಮ 63 ದಿನಗಳ ಪ್ರಯಾಣದುದ್ದಕ್ಕೂ ಭರವಸೆ, ಹತಾಶೆ, ದುಃಖ, ಸಾವು ನೋವಿನ ಈ ರೀತಿಯ ನೂರಾರು ಕಥೆಗಳನ್ನು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದಾಸೀನತೆಯನ್ನು ದೇಶದ ಮುಂದೆ ತೋರಿಸುತ್ತಾರೆ.

ಕೊರೊನಾದಂತಹ ಸಾಂಕ್ರಮಿಕ ರೋಗದ ಸಮಯದಲ್ಲಿ 60 ದಿನಗಳಿಗಿಂತ ಹೆಚ್ಚು ಕಾಲ ರಸ್ತೆಯಲ್ಲಿ ಇದ್ದು ವರದಿ ಮಾಡುವುದೆಂದರೆ ಅದು ಮನೆಯಲ್ಲಿದ್ದು ಓದಿದಂತೆ, ಕೇಳಿದಂತೆ ಸುಲಭ ಮಾತೇನಲ್ಲ ಎಂದು ಬಹಳಷ್ಟು ಜನರು ಇವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1999 ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾಗರಿಕ ರಾಷ್ಟ್ರದ ಮುಖವಾಗಿದ್ದ ಬರ್ಖಾ ದತ್, ಕೊರೊನಾ ಕಾಲದ ಯುದ್ಧದಲ್ಲಿ ನಾಗರಿಕರ ಧ್ವನಿಯಾಗಿ ಮತ್ತೊಮ್ಮೆ ನಮ್ಮೆದುರಿಗೆ ನಿಂತದ್ದಾರೆ. ಆದರೆ ಕಿವುಡರಲ್ಲದ ಆದರೆ ಕಿವುಡರಂತೆ ನಟಿಸುತ್ತಿರುವ ಆಡಳಿತಗಾರರು ಇನ್ನೂ ಹಾಗೆಯೆ ಇದ್ದಾರೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಕೃಪೆ:ಸ್ಕೂಪ್ ವೂಪ್


ಓದಿ:  ಕೊರೊನಾ ಬಿಕ್ಕಟ್ಟು: ವಿರೋಧ ಪಕ್ಷವೆಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿತು?


ಓದಿ: ತಾನು ಮಾಡುವ ಮಹಾನ್‌ ತಪ್ಪುಗಳಿಗೆ ಮೋದಿ ಬೆಲೆತೆರದೆ ಉಳಿದುಕೊಳ್ಳುವುದಾದರೂ ಹೇಗೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...