Homeಮುಖಪುಟ60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ 'ಬರ್ಖಾ ದತ್'

60 ದಿನಗಳಿಂದ ರಸ್ತೆಯಲ್ಲಿದ್ದು ವಲಸೆ ಕಾರ್ಮಿಕರ ಮನಕಲಕುವ ಕತೆ ಹೇಳುತ್ತಿರುವ ದಿಟ್ಟ ಪತ್ರಕರ್ತೆ ‘ಬರ್ಖಾ ದತ್’

ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪಡೆದಿರುವ ಪತ್ರಕರ್ತೆ 'ಬರ್ಖಾ ದತ್' ಲಾಕ್ ಡೌನ್ ಆದ ನಂತರ ನಿರಂತರವಾಗಿ 60 ದಿನಗಳಿಗಿಂತಲೂ ಹೆಚ್ಚು ಕಾಲ ರಸ್ತೆಯಲ್ಲಿದ್ದೇ ವಲಸೆ ಕಾರ್ಮಿಕರ ಕತೆಯನ್ನು ದೇಶದ ಮುಂದಿಡುತ್ತಿದ್ದಾರೆ.

- Advertisement -
- Advertisement -

ಕೊರೊನಾ ಭಯಕ್ಕೆ ಲಾಕ್ ಡೌನ್ ಆಗಿ ದೇಶದ ಭಾಗಶಃ ಜನರು ಮನೆಯೊಳಗೆ ಕುಳಿತಿರುವಾಗ ಇವರೊಬ್ಬರು ಮಾತ್ರ “ಹೆದ್ದಾರಿಗಳಲ್ಲಿ ಪಾದಗಳಲ್ಲಿ ರಕ್ತ ಸುರಿಸುತ್ತಾ ಹತಾಶರಾಗಿ ನಡೆಯುತ್ತಿರುವ ಕಾರ್ಮಿಕರ ಕಡೆಗೆ ತಮ್ಮ ಕ್ಯಾಮರಾ ಕಣ್ಣನ್ನು ತಿರುಗಿಸಿ, ವಲಸೆ ಕಾರ್ಮಿಕರ ದಾರುಣ ಕತೆಯನ್ನು ದೇಶದ ಎದುರಿಗೆ ಬಿಚ್ಚಿಡುತ್ತಿದ್ದಾರೆ. ಲಾಕ್ ಡೌನ್ ಆಗಿದಂದಿನಿಂದ 60 ದಿನಗಳಿಗಿಂತ ಹೆಚ್ಚು ಕಾಲ ರಸ್ತೆಯಲ್ಲೇ ಇದ್ದು ಪತ್ರಕರ್ತರಾಗಿ ತಮ್ಮ ಬದ್ದತೆಯನ್ನು ಎತ್ತಿ ಹಿಡಿದಿದ್ದಾರೆ. ಅವರೇ ಪ್ರಸಿದ್ದ ಪತ್ರಕರ್ತೆ “ಬರ್ಖಾ ದತ್.”

18 ಡಿಸೆಂಬರ್ 1971 ರಂದು ಜನಿಸಿದ ಬರ್ಖಾ ದತ್, ಲೇಖಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಜನವರಿ 2017 ರವರೆಗೂ ಅವರು 21 ವರ್ಷಗಳ ಕಾಲ ಎನ್ಡಿಟಿವಿ ಯಲ್ಲಿ ಕಾರ್ಯ ನಿರ್ವಹಿಸಿದ್ದರು. 1999 ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾರ್ಗಿಲ್ ಯುದ್ದದ ವರದಿಯನ್ನು ಯುದ್ದ ಭೂಮಿಯಲ್ಲಿದ್ದೇ ವರದಿ ಮಾಡಿದ ನಂತರ ಬರ್ಖಾ ದತ್ ಹೆಚ್ಚು ಪ್ರಸಿದ್ದಿ ಗಳಿಸಿದರು. ಇವರು ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಸೇರಿದಂತೆ, ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಸದ್ಯ ಬರ್ಖಾ ದತ್ ಅವರು ಮೋಜೊ ಟಿವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಲಾಕ್ ಡೌನ್‌ ಪ್ರಾರಂಭದಿಂದಲೂ ವಲಸೆ ಕಾರ್ಮಿಕರೊಂದಿಗೆ ಪ್ರಯಾಣಿಸಿ ಅವರ ಬಗೆಗಿನ ವರದಿಗಳನ್ನು ದೇಶದ ಮುಂದೆ ಇಡುತ್ತಿದ್ದಾರೆ.

ಕಳೆದ ಶನಿವಾರ, ಲಕ್ನೋದಿಂದ 200 ಕಿಲೋಮೀಟರ್ ದೂರದಲ್ಲಿರುವ ಔರಿಯಾದಲ್ಲಿ 26 ವಲಸೆ ಕಾರ್ಮಿಕರು ಮುಂಜಾನೆ 3.30 ರ ಸುಮಾರಿಗೆ ಅಫಘಾತವಾಗಿ ಸಾವನ್ನಪ್ಪಿದ್ದರು. ಘಟನೆಯಲ್ಲಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಆದರೆ ಉತ್ತರ ಪ್ರದೇಶ ಸರ್ಕಾರ ಈ ವಲಸೆ ಕಾರ್ಮಿಕರ ಶವಗಳನ್ನು ತೆರೆದ ಟ್ರಕ್‌ನಲ್ಲಿ ಐಸ್ ಚಪ್ಪಡಿಗಳ ಮೇಲೆ ಪ್ಲಾಸ್ಟಿಕ್ ಚೀಲಗಳಲ್ಲಿ ಸುತ್ತಿ ವಾರಸುದಾರರ ಮನೆಗೆ ಸಾಗಹಾಕಲು ನೋಡಿತು.

ಈ ವಿಷಯದ ಬಗ್ಗೆ ಬರ್ಖಾ ಅವರ ವರದಿಯ ನಂತರವೇ, ಸಾಮಾಜಿಕ ಜಾಲತಾಣಗಳು ಹಾಗೂ ಇತರ ಪ್ರಮುಖ ಸುದ್ದಿ ತಾಣಗಳು ಅದನ್ನು ವರದಿ ಮಾಡಿದವು. ಘಟನೆಯನ್ನು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕಟುವಾಗಿ ಟೀಕಿಸಿದ್ದರು. ಇವರ ವರದಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ನಂತರ ಎಚ್ಚತ್ತ ಆಡಳಿತವನ್ನು ಶವವನ್ನು ಆಂಬುಲೆನ್ಸ್‌ಗಳಿಗೆ ಸ್ಥಳಾಂತರಿಸಿ ಕೊಂಡೊಯ್ಯಿತು.

ಟ್ರಕ್‌ನ ಹಿಂಭಾಗದಲ್ಲಿ ಆಸನಕ್ಕಾಗಿ ಒಬ್ಬ ಪ್ರಯಾಣಿಕರಿಗೆ 3,000 ರೂಪಾಯಿಗಳನ್ನು ವಿಧಿಸುವ ಕಥೆಯೊಂದಿಗೆ ವಲಸೆ ಕಾರ್ಮಿಕರು ಕತೆಯನ್ನು ಅವರು ದೇಶದ ಮುಂದೆ ಅವರು ತೆರೆದಿಟ್ಟಿದ್ದರು.

ಏಷ್ಯಾದಲ್ಲೇ ಅತ್ಯಂತ ದೊಡ್ಡ ಸ್ಲಂ ಆದ ಧಾರವಿಯಲ್ಲಿ, ಎರಡು ಬಾರಿ ಕೊರೊನಾ ನೆಗೆಟಿವ್ ಪರೀಕ್ಷೆಗೆ ಒಳಪಟ್ಟಿದ್ದರೂ ಬಿಎಂಸಿ ನೌಕರನೊಬ್ಬ ಸಾವನ್ನಪ್ಪಿದ್ದರು. ಅವರ ಮರಣದ 3 ದಿನಗಳ ನಂತರ, ಅವರು ಕೊರೊನಾ ಸೋಂಕಿತ ಎಂದು ಕಂಡುಬಂದಿತ್ತು. ಆ ಸಮಯದಲ್ಲಿ ಅವರ ಕುಟುಂಬದ ಇತರ ಇಬ್ಬರಿಗೂ ಸಹ ಕೊರೊನಾ ಸೋಂಕು ಇರುವುದು ದೃಡಪಟ್ಟಿತ್ತು. ಇದರ ಬಗ್ಗೆ ಬರ್ಖಾ ದತ್ ವಿಶೇಷ ತನಿಖಾ ವರದಿಯನ್ನು ಮಾಡಿದ್ದರು.

1947 ರಲ್ಲಿ ವಿಭಜನೆಯಾದ ನಂತರ ಭಾರತ ಕಂಡ ಅತಿದೊಡ್ಡ ಸಾಮೂಹಿಕ ವಲಸೆಯ ಹೃದಯ ಕಲಕುವ ಕಥೆಗಳನ್ನು ಮಾತ್ರ ಇವರು ನೀಡುತ್ತಿಲ್ಲ. ಕೊರೊನಾದಂತಹ ಬಿಕ್ಕಟ್ಟಿನಲ್ಲಿಯೂ ಕೆಲವು ಕೋಮುವಾದ ಹರಡುವ ನಿರೂಪಕರಿಗೆ ವಿರುದ್ದವಾಗಿ ಭರವಸೆ ತುಂಬುವ ಹಾಗೂ ಸೌಹಾರ್ಧದ ಹೃದಯಂಗಮ ಕಥೆಗಳನ್ನು ಸಹ ದೇಶದ ಮುಂದೆ ಇಡುತ್ತಿದ್ದಾರೆ.

ಲಾಕ್ ಡೌನ್ ನಿಂದ ಉಂಟಾದ ಯುದ್ಧದಂತಹ ಪರಿಸ್ಥಿತಿಯಲ್ಲಿ, ಹಸಿವೆಂದರೆ ಏನೆಂದು ಕಂಡ 12 ವರ್ಷದ ಬಾಲಕಿಯ, “ತಾನು ದೊಡ್ಡವಳಾದರೆ ಹಸಿವು ತಣಿಸುತ್ತೇನೆ” ಎನ್ನುವ ಕನಸುಗಳ ಕತೆಯನ್ನು ಬರ್ಖಾ ದೇಶಕ್ಕೆ ಹೇಳುತ್ತಾರೆ.

ತಮ್ಮ 63 ದಿನಗಳ ಪ್ರಯಾಣದುದ್ದಕ್ಕೂ ಭರವಸೆ, ಹತಾಶೆ, ದುಃಖ, ಸಾವು ನೋವಿನ ಈ ರೀತಿಯ ನೂರಾರು ಕಥೆಗಳನ್ನು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದಾಸೀನತೆಯನ್ನು ದೇಶದ ಮುಂದೆ ತೋರಿಸುತ್ತಾರೆ.

ಕೊರೊನಾದಂತಹ ಸಾಂಕ್ರಮಿಕ ರೋಗದ ಸಮಯದಲ್ಲಿ 60 ದಿನಗಳಿಗಿಂತ ಹೆಚ್ಚು ಕಾಲ ರಸ್ತೆಯಲ್ಲಿ ಇದ್ದು ವರದಿ ಮಾಡುವುದೆಂದರೆ ಅದು ಮನೆಯಲ್ಲಿದ್ದು ಓದಿದಂತೆ, ಕೇಳಿದಂತೆ ಸುಲಭ ಮಾತೇನಲ್ಲ ಎಂದು ಬಹಳಷ್ಟು ಜನರು ಇವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1999 ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾಗರಿಕ ರಾಷ್ಟ್ರದ ಮುಖವಾಗಿದ್ದ ಬರ್ಖಾ ದತ್, ಕೊರೊನಾ ಕಾಲದ ಯುದ್ಧದಲ್ಲಿ ನಾಗರಿಕರ ಧ್ವನಿಯಾಗಿ ಮತ್ತೊಮ್ಮೆ ನಮ್ಮೆದುರಿಗೆ ನಿಂತದ್ದಾರೆ. ಆದರೆ ಕಿವುಡರಲ್ಲದ ಆದರೆ ಕಿವುಡರಂತೆ ನಟಿಸುತ್ತಿರುವ ಆಡಳಿತಗಾರರು ಇನ್ನೂ ಹಾಗೆಯೆ ಇದ್ದಾರೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಕೃಪೆ:ಸ್ಕೂಪ್ ವೂಪ್


ಓದಿ:  ಕೊರೊನಾ ಬಿಕ್ಕಟ್ಟು: ವಿರೋಧ ಪಕ್ಷವೆಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿತು?


ಓದಿ: ತಾನು ಮಾಡುವ ಮಹಾನ್‌ ತಪ್ಪುಗಳಿಗೆ ಮೋದಿ ಬೆಲೆತೆರದೆ ಉಳಿದುಕೊಳ್ಳುವುದಾದರೂ ಹೇಗೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...