HomeUncategorizedಈ ಪತ್ರಗಳು ಹೆಚ್ಚಿಸುತ್ತಿರುವುದು ನಮ್ಮ ಸಂತಸವನ್ನಷ್ಟೇ ಅಲ್ಲ

ಈ ಪತ್ರಗಳು ಹೆಚ್ಚಿಸುತ್ತಿರುವುದು ನಮ್ಮ ಸಂತಸವನ್ನಷ್ಟೇ ಅಲ್ಲ

- Advertisement -
- Advertisement -

“ನಮ್ಮ ಗೌರಿ ಪತ್ರಿಕೆಯು ‘ನ್ಯಾಯಪಥ’ ಹೆಸರಿನಲ್ಲಿ ಮತ್ತೆ ಪ್ರಾರಂಭವಾಗಿರುವುದನ್ನು ಓದಿ ಬಹಳ ಸಂತೋಷವಾಗುತ್ತಿದೆ. ತಪ್ಪದೇ ನನ್ನ ವಿಳಾಸಕ್ಕೆ ಪತ್ರಿಕೆ ಕಳಿಸಿರಿ. ಅದರ ಚಂದಾ ಹಣ ಕಳಿಸುವೆನು. ತಾವು ನನ್ನ ವಿಳಾಸಕ್ಕೆ ಪತ್ರಿಕೆ ಕಳಿಸಿದ್ದಕ್ಕೆ ಧನ್ಯವಾದಗಳು. ಉಳಿದ ವಿಷ್ಯ ಆಮೇಲೆ ಪತ್ರಮುಖೇನ ಬರೆಯುವೆನು. ಮೊದಲು ಒಂದು ವರ್ಷದ ಚಂದಾ ಹಣ ಚೆಕ್ ಮೂಲಕ ಕಳಿಸಿ ನಂತರ ಉಳಿದೆಲ್ಲ ವ್ಯವಹರಿಸುತ್ತೇನೆ. ರೈತ ಗೆಳೆಯರಿಗೆ, ನನ್ನ ಮಕ್ಕಳಿಗೂ ಪತ್ರಿಕೆ ತರಿಸಿಕೊಳ್ಳಲು ಹೇಳುವೆನು.

46ನೇ ಸಂಚಿಕೆ ಬಂದಾಗಲಾದರೂ ವಿಷಯ ತಿಳಿಯಿತಲ್ಲ. ನನಗೆ ಆರೋಗ್ಯ ಸರಿಯಿಲ್ಲದೇ ಮೊದಲಿನಂತೆ ತಿರುಗಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿಯೂ ಈ ಪತ್ರಿಕೆ ಓದಲು ಇಷ್ಟು ತಡವಾಯಿತು. ಕ್ಷಮೆ ಇರಲಿ. ನನ್ನ ವಿಳಾಸ ತಿಳಿದು ಪತ್ರಿಕೆ ಕಳಿಸಿದ್ದಕ್ಕಾಗಿ ನೂರಲ್ಲ, ಸಾವಿರ ನಮಸ್ಕಾರಗಳು.’ – ಕಡಿದಾಳು ಶಾಮಣ್ಣ ರೈತ.

ಪೋಸ್ಟ್ ಕಾರ್ಡ್‍ನಲ್ಲಿ ನಮಗೆ ಈ ಪತ್ರ ಬಂದಿತು. ರೈತಸಂಘದ ಹಿರಿಯರಲ್ಲಿ ಹಲವರು ರೂಢಿಸಿಕೊಂಡಿರುವಂತೆ ಹಸಿರು ಇಂಕಿನಲ್ಲಿ ಬರೆದ ಪತ್ರವದು. ಶಾಮಣ್ಣನವರಂತಹ ಹಿರಿಯರಿಗೆ ಇಷ್ಟು ಕಾಲ ಪತ್ರಿಕೆ ತಲುಪಿಸದಿದ್ದಕ್ಕೆ ನಾವು ನಾಚಿಕೆ ಪಟ್ಟುಕೊಳ್ಳಬೇಕು. ಆದರೆ, ಅವರು ತಾನು ಹೆಚ್ಚು ತಿರುಗಾಡದೇ ಇರುವುದರಿಂದ ಪತ್ರಿಕೆಯ ಬಗ್ಗೆ ತಾನೇ ತಿಳಿಯದಿದ್ದುದು ತಪ್ಪು ಎಂದು ಭಾವಿಸುವ ದೊಡ್ಡ ಮನಸ್ಸಿನವರು.
ಇದೇ ರೀತಿಯಲ್ಲಿ ಹೆಚ್ಚು ಓಡಾಡಲು ಆಗದ ಹೇಮಕ್ಕನವರು ನಮ್ಮ ಪತ್ರಿಕೆಯ ಓದನ್ನು ಒಂದು ವಾರವೂ ತಪ್ಪಿಸಿಲ್ಲ. ಪತ್ರಿಕೆಯ ಅಖಂಡ ಅಭಿಮಾನಿಯಾದ ಅವರು ಕಳೆದ ವಾರದ ಸಂಚಿಕೆಯಲ್ಲಿದ್ದ ಪ್ರೂಫ್ ತಪ್ಪುಗಳ ಪಟ್ಟಿ ಮಾಡಿ ಕಳಿಸಿದ್ದಾರೆ.

ನಮ್ಮ ಕನ್ಸಲ್ಟಿಂಗ್ ಎಡಿಟರ್ ಉಮಾಪತಿಯವರು, ಪತ್ರಿಕೆಯನ್ನು ನೋಡಿದಕೂಡಲೇ ಸಗಟಾಗಿ ಸಾಕಷ್ಟು ಹೊಗಳಿ ನಮ್ಮ ಸ್ಫೂರ್ತಿ ಹೆಚ್ಚಿಸುತ್ತಾರೆ. ನಂತರ ನಾವು ಮಾಡಿರುವ ತಪ್ಪುಗಳನ್ನು ಒಂದಾದಮೇಲೆ ಒಂದು ಹೇಳುತ್ತಾರೆ. ಮೂಲೆಯಲ್ಲಿದ್ದ ಕವನದಲ್ಲಿ ಬಚ್ಚಿಟ್ಟುಕೊಂಡಿರುವ ಒಂದು ಪ್ರೂಫ್ ತಪ್ಪು ಸಹ ಅವರಿಗೆ ಕಾಣಿಸಿರುತ್ತದೆ. ಆಯಾ ವಾರದ ಸಂಚಿಕೆ ರೂಪಿಸುವಾಗ ತಾನು ತಲೆ ಮೇಲೆ ಕೂರಬಾರದು ಎಂಬ ಬಗ್ಗೆ ಅವರು ಬಹಳ ಪ್ರಜ್ಞಾಪೂರ್ವಕವಾಗಿರುತ್ತಾರೆ. ಆದರೆ, ಹಿಂದಿನ ಸಂಚಿಕೆಗಳ ಅವರ ರಿವ್ಯೂ ಮುಂದಿನ ಸಂಚಿಕೆಗಳನ್ನೂ ರೂಪಿಸುತ್ತಿರುತ್ತದೆ. ಈ ವಾರ ಉದ್ಯಮಿ ಸಿದ್ದಾರ್ಥ ಹೆಗಡೆಯ ಮಿಸ್ಸಿಂಗ್ ಕುರಿತು ಬರೆಯುವಾಗ ಆತನ ಬದುಕಿನ ಮಾನವೀಯ ಅಂಶಗಳು ಮತ್ತು ರಾಜಕೀಯ ಬಲದ ಮೂಲಕ ಮಾಡಿರಬಹುದಾದ ಹಗರಣಗಳನ್ನು ಎರಡನ್ನೂ ಯಾವ ಬ್ಯಾಲೆನ್ಸ್‍ನಲ್ಲಿ ಬರೆಯಬೇಕೆಂಬ ಕುರಿತು ವಿಶೇಷ ಕಿವಿಮಾತು ಹೇಳಿದರು.

ಶನಿವಾರ, ಭಾನುವಾರ ಮಂಡ್ಯದಲ್ಲಿ ನಡೆದ ಮನುಜಮತ ಸಿನಿಯಾನ ಸಿನೆಮಾ ಹಬ್ಬದಲ್ಲಿ ಮೈಸೂರಿನ ಗೆಳೆಯರೊಬ್ಬರು ಸಿಕ್ಕರು. ಸಿನೆಮಾ ಕ್ಷೇತ್ರದ ಕುರಿತು ಅಪಾರ ಆಸಕ್ತಿ ಮತ್ತು ವಿಶೇಷ ಒಳನೋಟಗಳಿರುವ ಅವರು ‘ನಾನು ಇತ್ತೀಚೆಗೆ ನ್ಯೂಸ್ ಫಾಲೋ ಮಾಡಲು ಬೇರೆ ಯಾವುದನ್ನೂ ನೋಡುತ್ತಿಲ್ಲ ಸರ್. ನಾನುಗೌರಿ.ಕಾಂ ಮಾತ್ರ ನೋಡುತ್ತೇನೆ’ ಎಂದರು. ಅದರಲ್ಲಿ ನಮ್ಮ ಬಗೆಗಿನ ಮೆಚ್ಚುಗೆಗಿಂತ ನ್ಯೂಸ್ ಚಾನೆಲ್‍ಗಳ ಕುರಿತ ಸಿಟ್ಟೇ ಹೆಚ್ಚಿರಬಹುದು ಎನಿಸಿತು.

ಚಿತ್ರದುರ್ಗ ಮತ್ತು ದಾವಣಗೆರೆಗಳಲ್ಲಿ ನಡೆದ ಪತ್ರಿಕಾ ಬಳಗದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದ ಗಿರೀಶ್ ತಾಳಿಕಟ್ಟೆಯವರಿಗೆ ಆಶ್ಚರ್ಯವಾಗಿತ್ತು. ಅಷ್ಟೂ ವಾರಗಳಲ್ಲಿ ನಮ್ಮಲ್ಲಿ ಯಾವ ಇಶ್ಯೂ ಕುರಿತು ಹೆಚ್ಚು ಲೇಖನಗಳು ಬಂದಿಲ್ಲ ಎಂದು ಕೆಲವು ಓದುಗರು ಗುರುತಿಸಿ ಹೇಳಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಈಗಲೂ ಅವರೆಲ್ಲರಿಗೆ ಲಂಕೇಶರು ಸಂಪಾದಿಸುತ್ತಿದ್ದ ‘ಲಂಕೇಶ್ ಪತ್ರಿಕೆ’ಯೇ ಗುಣಮಟ್ಟದ ಟ್ಯಾಬ್ಲಾಯ್ಡ್ ಹೇಗಿರಬೇಕು ಎಂಬುದಕ್ಕೆ ಅಳತೆಗೋಲು! ಈ ಎರಡು ಜಿಲ್ಲೆಗಳ ಸಭೆಗಳ ಅನುಭವದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಮಾಲೋಚನಾ ಸಭೆಗಳು ನಿಗದಿಯಾಗಿವೆ. ಬಿಜಾಪುರದ ಸಭೆಯಲ್ಲಿ ಭಾಗವಹಿಸಲು ಬಸ್ ಹತ್ತುವ ಮುನ್ನ ಇದನ್ನು ಬರೆಯುತ್ತಿದ್ದೇನೆ.

ಇದನ್ನು ಓದಿ: ಮನ ಮುಟ್ಟುವ ಪತ್ರಿಕೋದ್ಯಮದ ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಮೇಲಿನವೆಲ್ಲವೂ ನಮ್ಮ ಮೇಲಿರುವ ಜವಾಬ್ದಾರಿಯ ಪ್ರಮಾಣವನ್ನು ತೋರುತ್ತಿವೆ. ಇದನ್ನು ಪ್ರೀತಿಯಿಂದ ಸ್ವೀಕರಿಸಲು ಬಹಳಷ್ಟು ಜನರಿದ್ದಾರೆ. ಅದಕ್ಕೆ ಅನುಗುಣವಾಗಿ ರಂಜನೆ, ಬೋಧನೆ, ಪ್ರಚೋದನೆಗಳ ಸರಿಯಾದ ಮಿಶ್ರಣದ ಎರಕ ಹೊಯ್ದು ಪ್ರತೀವಾರವೂ ಪತ್ರಿಕೆ ಸಿದ್ಧಪಡಿಸಬೇಕು. 20 ವರ್ಷಗಳಲ್ಲಿ ಬದಲಾಗಿರುವ ರಾಜಕೀಯ, ಸಾಮಾಜಿಕ, ಸಾಂಸ್ಕøತಿಕ ಪರಿಸ್ಥಿತಿ ಮತ್ತು ಅಭಿರುಚಿಗಳನ್ನು ಅರ್ಥಮಾಡಿಕೊಂಡು, ಈ ಹೊತ್ತಿನ ಜಾಣ ಜಾಣೆಯರಿಗೂ ಇದನ್ನು ತಲುಪಿಸಬೇಕು.

ಸಾಕಷ್ಟು ಸವಾಲುಗಳನ್ನು ಎದುರಿಸುತ್ತಲೇ ಅದನ್ನು ಮಾಡಬೇಕಿದೆ. ಉದಾಹರಣೆಗೆ ಪ್ರೂಫ್ ತಪ್ಪುಗಳ ಬಗ್ಗೆ ನಮಗೂ ಅರಿವಿದೆ. ನಮ್ಮ ಕಚೇರಿಯಲ್ಲಿ ಎ 3 ಸೈಜಿನ ಪ್ರಿಂಟರ್ ಸಹ ಇಲ್ಲ. ಹಾಗಾಗಿ ಕಿರಿದಾದ ಅಕ್ಷರಗಳ ನಡುವೆ ತಪ್ಪುಗಳು ನುಸುಳುತ್ತಲೇ ಇವೆ. ಈ ಸಂಚಿಕೆಯಿಂದ ಮೂರು ಬಾರಿ ಪ್ರೂಫ್ ತಿದ್ದುವ ಮೂಲಕ ಅದನ್ನು ಸರಿಪಡಿಸಿಕೊಳ್ಳುತ್ತೇವೆ. ಪ್ರತೀ ವಾರವೂ ಹೊಸಬರು ಬರೆಯಲಿದ್ದಾರೆ. ಬರಹಗಳ ವೈವಿಧ್ಯ, ನಮ್ಮ ಪ್ರಸಾರ ವ್ಯಾಪ್ತಿ ಮತ್ತು ಆರ್ಥಿಕ ಬಲ ಹೆಚ್ಚಾಗಲು ನೀವೆಲ್ಲರೂ ಇನ್ನಷ್ಟು ಕೈ ಜೋಡಿಸುವ ಅಗತ್ಯವಿದೆ.

ನಿಮ್ಮೆಲ್ಲರ ಪ್ರೀತಿ ಹೆಚ್ಚಾದಂತೆ ಕೆಲವರ ಅಸೂಯೆ ಮತ್ತು ದಾಳಿಯೂ ಹೆಚ್ಚಾಗುತ್ತಾ ಹೋಗುತ್ತದೆ. ಅದನ್ನೂ ಸಮತೋಲನದಿಂದ ಎದುರಿಸುತ್ತಾ ನಮ್ಮ ಕರ್ತವ್ಯವನ್ನು ಮುಂದುವರೆಸುತ್ತೇವೆಂಬ ಭರವಸೆಯನ್ನು ನಮ್ಮ ತಂಡದ ಪರವಾಗಿ ನೀಡುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...