HomeUncategorizedಈ ಪತ್ರಗಳು ಹೆಚ್ಚಿಸುತ್ತಿರುವುದು ನಮ್ಮ ಸಂತಸವನ್ನಷ್ಟೇ ಅಲ್ಲ

ಈ ಪತ್ರಗಳು ಹೆಚ್ಚಿಸುತ್ತಿರುವುದು ನಮ್ಮ ಸಂತಸವನ್ನಷ್ಟೇ ಅಲ್ಲ

- Advertisement -
- Advertisement -

“ನಮ್ಮ ಗೌರಿ ಪತ್ರಿಕೆಯು ‘ನ್ಯಾಯಪಥ’ ಹೆಸರಿನಲ್ಲಿ ಮತ್ತೆ ಪ್ರಾರಂಭವಾಗಿರುವುದನ್ನು ಓದಿ ಬಹಳ ಸಂತೋಷವಾಗುತ್ತಿದೆ. ತಪ್ಪದೇ ನನ್ನ ವಿಳಾಸಕ್ಕೆ ಪತ್ರಿಕೆ ಕಳಿಸಿರಿ. ಅದರ ಚಂದಾ ಹಣ ಕಳಿಸುವೆನು. ತಾವು ನನ್ನ ವಿಳಾಸಕ್ಕೆ ಪತ್ರಿಕೆ ಕಳಿಸಿದ್ದಕ್ಕೆ ಧನ್ಯವಾದಗಳು. ಉಳಿದ ವಿಷ್ಯ ಆಮೇಲೆ ಪತ್ರಮುಖೇನ ಬರೆಯುವೆನು. ಮೊದಲು ಒಂದು ವರ್ಷದ ಚಂದಾ ಹಣ ಚೆಕ್ ಮೂಲಕ ಕಳಿಸಿ ನಂತರ ಉಳಿದೆಲ್ಲ ವ್ಯವಹರಿಸುತ್ತೇನೆ. ರೈತ ಗೆಳೆಯರಿಗೆ, ನನ್ನ ಮಕ್ಕಳಿಗೂ ಪತ್ರಿಕೆ ತರಿಸಿಕೊಳ್ಳಲು ಹೇಳುವೆನು.

46ನೇ ಸಂಚಿಕೆ ಬಂದಾಗಲಾದರೂ ವಿಷಯ ತಿಳಿಯಿತಲ್ಲ. ನನಗೆ ಆರೋಗ್ಯ ಸರಿಯಿಲ್ಲದೇ ಮೊದಲಿನಂತೆ ತಿರುಗಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿಯೂ ಈ ಪತ್ರಿಕೆ ಓದಲು ಇಷ್ಟು ತಡವಾಯಿತು. ಕ್ಷಮೆ ಇರಲಿ. ನನ್ನ ವಿಳಾಸ ತಿಳಿದು ಪತ್ರಿಕೆ ಕಳಿಸಿದ್ದಕ್ಕಾಗಿ ನೂರಲ್ಲ, ಸಾವಿರ ನಮಸ್ಕಾರಗಳು.’ – ಕಡಿದಾಳು ಶಾಮಣ್ಣ ರೈತ.

ಪೋಸ್ಟ್ ಕಾರ್ಡ್‍ನಲ್ಲಿ ನಮಗೆ ಈ ಪತ್ರ ಬಂದಿತು. ರೈತಸಂಘದ ಹಿರಿಯರಲ್ಲಿ ಹಲವರು ರೂಢಿಸಿಕೊಂಡಿರುವಂತೆ ಹಸಿರು ಇಂಕಿನಲ್ಲಿ ಬರೆದ ಪತ್ರವದು. ಶಾಮಣ್ಣನವರಂತಹ ಹಿರಿಯರಿಗೆ ಇಷ್ಟು ಕಾಲ ಪತ್ರಿಕೆ ತಲುಪಿಸದಿದ್ದಕ್ಕೆ ನಾವು ನಾಚಿಕೆ ಪಟ್ಟುಕೊಳ್ಳಬೇಕು. ಆದರೆ, ಅವರು ತಾನು ಹೆಚ್ಚು ತಿರುಗಾಡದೇ ಇರುವುದರಿಂದ ಪತ್ರಿಕೆಯ ಬಗ್ಗೆ ತಾನೇ ತಿಳಿಯದಿದ್ದುದು ತಪ್ಪು ಎಂದು ಭಾವಿಸುವ ದೊಡ್ಡ ಮನಸ್ಸಿನವರು.
ಇದೇ ರೀತಿಯಲ್ಲಿ ಹೆಚ್ಚು ಓಡಾಡಲು ಆಗದ ಹೇಮಕ್ಕನವರು ನಮ್ಮ ಪತ್ರಿಕೆಯ ಓದನ್ನು ಒಂದು ವಾರವೂ ತಪ್ಪಿಸಿಲ್ಲ. ಪತ್ರಿಕೆಯ ಅಖಂಡ ಅಭಿಮಾನಿಯಾದ ಅವರು ಕಳೆದ ವಾರದ ಸಂಚಿಕೆಯಲ್ಲಿದ್ದ ಪ್ರೂಫ್ ತಪ್ಪುಗಳ ಪಟ್ಟಿ ಮಾಡಿ ಕಳಿಸಿದ್ದಾರೆ.

ನಮ್ಮ ಕನ್ಸಲ್ಟಿಂಗ್ ಎಡಿಟರ್ ಉಮಾಪತಿಯವರು, ಪತ್ರಿಕೆಯನ್ನು ನೋಡಿದಕೂಡಲೇ ಸಗಟಾಗಿ ಸಾಕಷ್ಟು ಹೊಗಳಿ ನಮ್ಮ ಸ್ಫೂರ್ತಿ ಹೆಚ್ಚಿಸುತ್ತಾರೆ. ನಂತರ ನಾವು ಮಾಡಿರುವ ತಪ್ಪುಗಳನ್ನು ಒಂದಾದಮೇಲೆ ಒಂದು ಹೇಳುತ್ತಾರೆ. ಮೂಲೆಯಲ್ಲಿದ್ದ ಕವನದಲ್ಲಿ ಬಚ್ಚಿಟ್ಟುಕೊಂಡಿರುವ ಒಂದು ಪ್ರೂಫ್ ತಪ್ಪು ಸಹ ಅವರಿಗೆ ಕಾಣಿಸಿರುತ್ತದೆ. ಆಯಾ ವಾರದ ಸಂಚಿಕೆ ರೂಪಿಸುವಾಗ ತಾನು ತಲೆ ಮೇಲೆ ಕೂರಬಾರದು ಎಂಬ ಬಗ್ಗೆ ಅವರು ಬಹಳ ಪ್ರಜ್ಞಾಪೂರ್ವಕವಾಗಿರುತ್ತಾರೆ. ಆದರೆ, ಹಿಂದಿನ ಸಂಚಿಕೆಗಳ ಅವರ ರಿವ್ಯೂ ಮುಂದಿನ ಸಂಚಿಕೆಗಳನ್ನೂ ರೂಪಿಸುತ್ತಿರುತ್ತದೆ. ಈ ವಾರ ಉದ್ಯಮಿ ಸಿದ್ದಾರ್ಥ ಹೆಗಡೆಯ ಮಿಸ್ಸಿಂಗ್ ಕುರಿತು ಬರೆಯುವಾಗ ಆತನ ಬದುಕಿನ ಮಾನವೀಯ ಅಂಶಗಳು ಮತ್ತು ರಾಜಕೀಯ ಬಲದ ಮೂಲಕ ಮಾಡಿರಬಹುದಾದ ಹಗರಣಗಳನ್ನು ಎರಡನ್ನೂ ಯಾವ ಬ್ಯಾಲೆನ್ಸ್‍ನಲ್ಲಿ ಬರೆಯಬೇಕೆಂಬ ಕುರಿತು ವಿಶೇಷ ಕಿವಿಮಾತು ಹೇಳಿದರು.

ಶನಿವಾರ, ಭಾನುವಾರ ಮಂಡ್ಯದಲ್ಲಿ ನಡೆದ ಮನುಜಮತ ಸಿನಿಯಾನ ಸಿನೆಮಾ ಹಬ್ಬದಲ್ಲಿ ಮೈಸೂರಿನ ಗೆಳೆಯರೊಬ್ಬರು ಸಿಕ್ಕರು. ಸಿನೆಮಾ ಕ್ಷೇತ್ರದ ಕುರಿತು ಅಪಾರ ಆಸಕ್ತಿ ಮತ್ತು ವಿಶೇಷ ಒಳನೋಟಗಳಿರುವ ಅವರು ‘ನಾನು ಇತ್ತೀಚೆಗೆ ನ್ಯೂಸ್ ಫಾಲೋ ಮಾಡಲು ಬೇರೆ ಯಾವುದನ್ನೂ ನೋಡುತ್ತಿಲ್ಲ ಸರ್. ನಾನುಗೌರಿ.ಕಾಂ ಮಾತ್ರ ನೋಡುತ್ತೇನೆ’ ಎಂದರು. ಅದರಲ್ಲಿ ನಮ್ಮ ಬಗೆಗಿನ ಮೆಚ್ಚುಗೆಗಿಂತ ನ್ಯೂಸ್ ಚಾನೆಲ್‍ಗಳ ಕುರಿತ ಸಿಟ್ಟೇ ಹೆಚ್ಚಿರಬಹುದು ಎನಿಸಿತು.

ಚಿತ್ರದುರ್ಗ ಮತ್ತು ದಾವಣಗೆರೆಗಳಲ್ಲಿ ನಡೆದ ಪತ್ರಿಕಾ ಬಳಗದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದ ಗಿರೀಶ್ ತಾಳಿಕಟ್ಟೆಯವರಿಗೆ ಆಶ್ಚರ್ಯವಾಗಿತ್ತು. ಅಷ್ಟೂ ವಾರಗಳಲ್ಲಿ ನಮ್ಮಲ್ಲಿ ಯಾವ ಇಶ್ಯೂ ಕುರಿತು ಹೆಚ್ಚು ಲೇಖನಗಳು ಬಂದಿಲ್ಲ ಎಂದು ಕೆಲವು ಓದುಗರು ಗುರುತಿಸಿ ಹೇಳಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಈಗಲೂ ಅವರೆಲ್ಲರಿಗೆ ಲಂಕೇಶರು ಸಂಪಾದಿಸುತ್ತಿದ್ದ ‘ಲಂಕೇಶ್ ಪತ್ರಿಕೆ’ಯೇ ಗುಣಮಟ್ಟದ ಟ್ಯಾಬ್ಲಾಯ್ಡ್ ಹೇಗಿರಬೇಕು ಎಂಬುದಕ್ಕೆ ಅಳತೆಗೋಲು! ಈ ಎರಡು ಜಿಲ್ಲೆಗಳ ಸಭೆಗಳ ಅನುಭವದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಮಾಲೋಚನಾ ಸಭೆಗಳು ನಿಗದಿಯಾಗಿವೆ. ಬಿಜಾಪುರದ ಸಭೆಯಲ್ಲಿ ಭಾಗವಹಿಸಲು ಬಸ್ ಹತ್ತುವ ಮುನ್ನ ಇದನ್ನು ಬರೆಯುತ್ತಿದ್ದೇನೆ.

ಇದನ್ನು ಓದಿ: ಮನ ಮುಟ್ಟುವ ಪತ್ರಿಕೋದ್ಯಮದ ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಮೇಲಿನವೆಲ್ಲವೂ ನಮ್ಮ ಮೇಲಿರುವ ಜವಾಬ್ದಾರಿಯ ಪ್ರಮಾಣವನ್ನು ತೋರುತ್ತಿವೆ. ಇದನ್ನು ಪ್ರೀತಿಯಿಂದ ಸ್ವೀಕರಿಸಲು ಬಹಳಷ್ಟು ಜನರಿದ್ದಾರೆ. ಅದಕ್ಕೆ ಅನುಗುಣವಾಗಿ ರಂಜನೆ, ಬೋಧನೆ, ಪ್ರಚೋದನೆಗಳ ಸರಿಯಾದ ಮಿಶ್ರಣದ ಎರಕ ಹೊಯ್ದು ಪ್ರತೀವಾರವೂ ಪತ್ರಿಕೆ ಸಿದ್ಧಪಡಿಸಬೇಕು. 20 ವರ್ಷಗಳಲ್ಲಿ ಬದಲಾಗಿರುವ ರಾಜಕೀಯ, ಸಾಮಾಜಿಕ, ಸಾಂಸ್ಕøತಿಕ ಪರಿಸ್ಥಿತಿ ಮತ್ತು ಅಭಿರುಚಿಗಳನ್ನು ಅರ್ಥಮಾಡಿಕೊಂಡು, ಈ ಹೊತ್ತಿನ ಜಾಣ ಜಾಣೆಯರಿಗೂ ಇದನ್ನು ತಲುಪಿಸಬೇಕು.

ಸಾಕಷ್ಟು ಸವಾಲುಗಳನ್ನು ಎದುರಿಸುತ್ತಲೇ ಅದನ್ನು ಮಾಡಬೇಕಿದೆ. ಉದಾಹರಣೆಗೆ ಪ್ರೂಫ್ ತಪ್ಪುಗಳ ಬಗ್ಗೆ ನಮಗೂ ಅರಿವಿದೆ. ನಮ್ಮ ಕಚೇರಿಯಲ್ಲಿ ಎ 3 ಸೈಜಿನ ಪ್ರಿಂಟರ್ ಸಹ ಇಲ್ಲ. ಹಾಗಾಗಿ ಕಿರಿದಾದ ಅಕ್ಷರಗಳ ನಡುವೆ ತಪ್ಪುಗಳು ನುಸುಳುತ್ತಲೇ ಇವೆ. ಈ ಸಂಚಿಕೆಯಿಂದ ಮೂರು ಬಾರಿ ಪ್ರೂಫ್ ತಿದ್ದುವ ಮೂಲಕ ಅದನ್ನು ಸರಿಪಡಿಸಿಕೊಳ್ಳುತ್ತೇವೆ. ಪ್ರತೀ ವಾರವೂ ಹೊಸಬರು ಬರೆಯಲಿದ್ದಾರೆ. ಬರಹಗಳ ವೈವಿಧ್ಯ, ನಮ್ಮ ಪ್ರಸಾರ ವ್ಯಾಪ್ತಿ ಮತ್ತು ಆರ್ಥಿಕ ಬಲ ಹೆಚ್ಚಾಗಲು ನೀವೆಲ್ಲರೂ ಇನ್ನಷ್ಟು ಕೈ ಜೋಡಿಸುವ ಅಗತ್ಯವಿದೆ.

ನಿಮ್ಮೆಲ್ಲರ ಪ್ರೀತಿ ಹೆಚ್ಚಾದಂತೆ ಕೆಲವರ ಅಸೂಯೆ ಮತ್ತು ದಾಳಿಯೂ ಹೆಚ್ಚಾಗುತ್ತಾ ಹೋಗುತ್ತದೆ. ಅದನ್ನೂ ಸಮತೋಲನದಿಂದ ಎದುರಿಸುತ್ತಾ ನಮ್ಮ ಕರ್ತವ್ಯವನ್ನು ಮುಂದುವರೆಸುತ್ತೇವೆಂಬ ಭರವಸೆಯನ್ನು ನಮ್ಮ ತಂಡದ ಪರವಾಗಿ ನೀಡುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...