HomeUncategorizedಈ ಪತ್ರಗಳು ಹೆಚ್ಚಿಸುತ್ತಿರುವುದು ನಮ್ಮ ಸಂತಸವನ್ನಷ್ಟೇ ಅಲ್ಲ

ಈ ಪತ್ರಗಳು ಹೆಚ್ಚಿಸುತ್ತಿರುವುದು ನಮ್ಮ ಸಂತಸವನ್ನಷ್ಟೇ ಅಲ್ಲ

- Advertisement -
- Advertisement -

“ನಮ್ಮ ಗೌರಿ ಪತ್ರಿಕೆಯು ‘ನ್ಯಾಯಪಥ’ ಹೆಸರಿನಲ್ಲಿ ಮತ್ತೆ ಪ್ರಾರಂಭವಾಗಿರುವುದನ್ನು ಓದಿ ಬಹಳ ಸಂತೋಷವಾಗುತ್ತಿದೆ. ತಪ್ಪದೇ ನನ್ನ ವಿಳಾಸಕ್ಕೆ ಪತ್ರಿಕೆ ಕಳಿಸಿರಿ. ಅದರ ಚಂದಾ ಹಣ ಕಳಿಸುವೆನು. ತಾವು ನನ್ನ ವಿಳಾಸಕ್ಕೆ ಪತ್ರಿಕೆ ಕಳಿಸಿದ್ದಕ್ಕೆ ಧನ್ಯವಾದಗಳು. ಉಳಿದ ವಿಷ್ಯ ಆಮೇಲೆ ಪತ್ರಮುಖೇನ ಬರೆಯುವೆನು. ಮೊದಲು ಒಂದು ವರ್ಷದ ಚಂದಾ ಹಣ ಚೆಕ್ ಮೂಲಕ ಕಳಿಸಿ ನಂತರ ಉಳಿದೆಲ್ಲ ವ್ಯವಹರಿಸುತ್ತೇನೆ. ರೈತ ಗೆಳೆಯರಿಗೆ, ನನ್ನ ಮಕ್ಕಳಿಗೂ ಪತ್ರಿಕೆ ತರಿಸಿಕೊಳ್ಳಲು ಹೇಳುವೆನು.

46ನೇ ಸಂಚಿಕೆ ಬಂದಾಗಲಾದರೂ ವಿಷಯ ತಿಳಿಯಿತಲ್ಲ. ನನಗೆ ಆರೋಗ್ಯ ಸರಿಯಿಲ್ಲದೇ ಮೊದಲಿನಂತೆ ತಿರುಗಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿಯೂ ಈ ಪತ್ರಿಕೆ ಓದಲು ಇಷ್ಟು ತಡವಾಯಿತು. ಕ್ಷಮೆ ಇರಲಿ. ನನ್ನ ವಿಳಾಸ ತಿಳಿದು ಪತ್ರಿಕೆ ಕಳಿಸಿದ್ದಕ್ಕಾಗಿ ನೂರಲ್ಲ, ಸಾವಿರ ನಮಸ್ಕಾರಗಳು.’ – ಕಡಿದಾಳು ಶಾಮಣ್ಣ ರೈತ.

ಪೋಸ್ಟ್ ಕಾರ್ಡ್‍ನಲ್ಲಿ ನಮಗೆ ಈ ಪತ್ರ ಬಂದಿತು. ರೈತಸಂಘದ ಹಿರಿಯರಲ್ಲಿ ಹಲವರು ರೂಢಿಸಿಕೊಂಡಿರುವಂತೆ ಹಸಿರು ಇಂಕಿನಲ್ಲಿ ಬರೆದ ಪತ್ರವದು. ಶಾಮಣ್ಣನವರಂತಹ ಹಿರಿಯರಿಗೆ ಇಷ್ಟು ಕಾಲ ಪತ್ರಿಕೆ ತಲುಪಿಸದಿದ್ದಕ್ಕೆ ನಾವು ನಾಚಿಕೆ ಪಟ್ಟುಕೊಳ್ಳಬೇಕು. ಆದರೆ, ಅವರು ತಾನು ಹೆಚ್ಚು ತಿರುಗಾಡದೇ ಇರುವುದರಿಂದ ಪತ್ರಿಕೆಯ ಬಗ್ಗೆ ತಾನೇ ತಿಳಿಯದಿದ್ದುದು ತಪ್ಪು ಎಂದು ಭಾವಿಸುವ ದೊಡ್ಡ ಮನಸ್ಸಿನವರು.
ಇದೇ ರೀತಿಯಲ್ಲಿ ಹೆಚ್ಚು ಓಡಾಡಲು ಆಗದ ಹೇಮಕ್ಕನವರು ನಮ್ಮ ಪತ್ರಿಕೆಯ ಓದನ್ನು ಒಂದು ವಾರವೂ ತಪ್ಪಿಸಿಲ್ಲ. ಪತ್ರಿಕೆಯ ಅಖಂಡ ಅಭಿಮಾನಿಯಾದ ಅವರು ಕಳೆದ ವಾರದ ಸಂಚಿಕೆಯಲ್ಲಿದ್ದ ಪ್ರೂಫ್ ತಪ್ಪುಗಳ ಪಟ್ಟಿ ಮಾಡಿ ಕಳಿಸಿದ್ದಾರೆ.

ನಮ್ಮ ಕನ್ಸಲ್ಟಿಂಗ್ ಎಡಿಟರ್ ಉಮಾಪತಿಯವರು, ಪತ್ರಿಕೆಯನ್ನು ನೋಡಿದಕೂಡಲೇ ಸಗಟಾಗಿ ಸಾಕಷ್ಟು ಹೊಗಳಿ ನಮ್ಮ ಸ್ಫೂರ್ತಿ ಹೆಚ್ಚಿಸುತ್ತಾರೆ. ನಂತರ ನಾವು ಮಾಡಿರುವ ತಪ್ಪುಗಳನ್ನು ಒಂದಾದಮೇಲೆ ಒಂದು ಹೇಳುತ್ತಾರೆ. ಮೂಲೆಯಲ್ಲಿದ್ದ ಕವನದಲ್ಲಿ ಬಚ್ಚಿಟ್ಟುಕೊಂಡಿರುವ ಒಂದು ಪ್ರೂಫ್ ತಪ್ಪು ಸಹ ಅವರಿಗೆ ಕಾಣಿಸಿರುತ್ತದೆ. ಆಯಾ ವಾರದ ಸಂಚಿಕೆ ರೂಪಿಸುವಾಗ ತಾನು ತಲೆ ಮೇಲೆ ಕೂರಬಾರದು ಎಂಬ ಬಗ್ಗೆ ಅವರು ಬಹಳ ಪ್ರಜ್ಞಾಪೂರ್ವಕವಾಗಿರುತ್ತಾರೆ. ಆದರೆ, ಹಿಂದಿನ ಸಂಚಿಕೆಗಳ ಅವರ ರಿವ್ಯೂ ಮುಂದಿನ ಸಂಚಿಕೆಗಳನ್ನೂ ರೂಪಿಸುತ್ತಿರುತ್ತದೆ. ಈ ವಾರ ಉದ್ಯಮಿ ಸಿದ್ದಾರ್ಥ ಹೆಗಡೆಯ ಮಿಸ್ಸಿಂಗ್ ಕುರಿತು ಬರೆಯುವಾಗ ಆತನ ಬದುಕಿನ ಮಾನವೀಯ ಅಂಶಗಳು ಮತ್ತು ರಾಜಕೀಯ ಬಲದ ಮೂಲಕ ಮಾಡಿರಬಹುದಾದ ಹಗರಣಗಳನ್ನು ಎರಡನ್ನೂ ಯಾವ ಬ್ಯಾಲೆನ್ಸ್‍ನಲ್ಲಿ ಬರೆಯಬೇಕೆಂಬ ಕುರಿತು ವಿಶೇಷ ಕಿವಿಮಾತು ಹೇಳಿದರು.

ಶನಿವಾರ, ಭಾನುವಾರ ಮಂಡ್ಯದಲ್ಲಿ ನಡೆದ ಮನುಜಮತ ಸಿನಿಯಾನ ಸಿನೆಮಾ ಹಬ್ಬದಲ್ಲಿ ಮೈಸೂರಿನ ಗೆಳೆಯರೊಬ್ಬರು ಸಿಕ್ಕರು. ಸಿನೆಮಾ ಕ್ಷೇತ್ರದ ಕುರಿತು ಅಪಾರ ಆಸಕ್ತಿ ಮತ್ತು ವಿಶೇಷ ಒಳನೋಟಗಳಿರುವ ಅವರು ‘ನಾನು ಇತ್ತೀಚೆಗೆ ನ್ಯೂಸ್ ಫಾಲೋ ಮಾಡಲು ಬೇರೆ ಯಾವುದನ್ನೂ ನೋಡುತ್ತಿಲ್ಲ ಸರ್. ನಾನುಗೌರಿ.ಕಾಂ ಮಾತ್ರ ನೋಡುತ್ತೇನೆ’ ಎಂದರು. ಅದರಲ್ಲಿ ನಮ್ಮ ಬಗೆಗಿನ ಮೆಚ್ಚುಗೆಗಿಂತ ನ್ಯೂಸ್ ಚಾನೆಲ್‍ಗಳ ಕುರಿತ ಸಿಟ್ಟೇ ಹೆಚ್ಚಿರಬಹುದು ಎನಿಸಿತು.

ಚಿತ್ರದುರ್ಗ ಮತ್ತು ದಾವಣಗೆರೆಗಳಲ್ಲಿ ನಡೆದ ಪತ್ರಿಕಾ ಬಳಗದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದ ಗಿರೀಶ್ ತಾಳಿಕಟ್ಟೆಯವರಿಗೆ ಆಶ್ಚರ್ಯವಾಗಿತ್ತು. ಅಷ್ಟೂ ವಾರಗಳಲ್ಲಿ ನಮ್ಮಲ್ಲಿ ಯಾವ ಇಶ್ಯೂ ಕುರಿತು ಹೆಚ್ಚು ಲೇಖನಗಳು ಬಂದಿಲ್ಲ ಎಂದು ಕೆಲವು ಓದುಗರು ಗುರುತಿಸಿ ಹೇಳಿದ್ದರು. ಎಲ್ಲಕ್ಕಿಂತ ಮುಖ್ಯವಾಗಿ ಈಗಲೂ ಅವರೆಲ್ಲರಿಗೆ ಲಂಕೇಶರು ಸಂಪಾದಿಸುತ್ತಿದ್ದ ‘ಲಂಕೇಶ್ ಪತ್ರಿಕೆ’ಯೇ ಗುಣಮಟ್ಟದ ಟ್ಯಾಬ್ಲಾಯ್ಡ್ ಹೇಗಿರಬೇಕು ಎಂಬುದಕ್ಕೆ ಅಳತೆಗೋಲು! ಈ ಎರಡು ಜಿಲ್ಲೆಗಳ ಸಭೆಗಳ ಅನುಭವದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಮಾಲೋಚನಾ ಸಭೆಗಳು ನಿಗದಿಯಾಗಿವೆ. ಬಿಜಾಪುರದ ಸಭೆಯಲ್ಲಿ ಭಾಗವಹಿಸಲು ಬಸ್ ಹತ್ತುವ ಮುನ್ನ ಇದನ್ನು ಬರೆಯುತ್ತಿದ್ದೇನೆ.

ಇದನ್ನು ಓದಿ: ಮನ ಮುಟ್ಟುವ ಪತ್ರಿಕೋದ್ಯಮದ ಹಾದಿಯಲ್ಲಿ ಇನ್ನೊಂದು ಹೆಜ್ಜೆ

ಮೇಲಿನವೆಲ್ಲವೂ ನಮ್ಮ ಮೇಲಿರುವ ಜವಾಬ್ದಾರಿಯ ಪ್ರಮಾಣವನ್ನು ತೋರುತ್ತಿವೆ. ಇದನ್ನು ಪ್ರೀತಿಯಿಂದ ಸ್ವೀಕರಿಸಲು ಬಹಳಷ್ಟು ಜನರಿದ್ದಾರೆ. ಅದಕ್ಕೆ ಅನುಗುಣವಾಗಿ ರಂಜನೆ, ಬೋಧನೆ, ಪ್ರಚೋದನೆಗಳ ಸರಿಯಾದ ಮಿಶ್ರಣದ ಎರಕ ಹೊಯ್ದು ಪ್ರತೀವಾರವೂ ಪತ್ರಿಕೆ ಸಿದ್ಧಪಡಿಸಬೇಕು. 20 ವರ್ಷಗಳಲ್ಲಿ ಬದಲಾಗಿರುವ ರಾಜಕೀಯ, ಸಾಮಾಜಿಕ, ಸಾಂಸ್ಕøತಿಕ ಪರಿಸ್ಥಿತಿ ಮತ್ತು ಅಭಿರುಚಿಗಳನ್ನು ಅರ್ಥಮಾಡಿಕೊಂಡು, ಈ ಹೊತ್ತಿನ ಜಾಣ ಜಾಣೆಯರಿಗೂ ಇದನ್ನು ತಲುಪಿಸಬೇಕು.

ಸಾಕಷ್ಟು ಸವಾಲುಗಳನ್ನು ಎದುರಿಸುತ್ತಲೇ ಅದನ್ನು ಮಾಡಬೇಕಿದೆ. ಉದಾಹರಣೆಗೆ ಪ್ರೂಫ್ ತಪ್ಪುಗಳ ಬಗ್ಗೆ ನಮಗೂ ಅರಿವಿದೆ. ನಮ್ಮ ಕಚೇರಿಯಲ್ಲಿ ಎ 3 ಸೈಜಿನ ಪ್ರಿಂಟರ್ ಸಹ ಇಲ್ಲ. ಹಾಗಾಗಿ ಕಿರಿದಾದ ಅಕ್ಷರಗಳ ನಡುವೆ ತಪ್ಪುಗಳು ನುಸುಳುತ್ತಲೇ ಇವೆ. ಈ ಸಂಚಿಕೆಯಿಂದ ಮೂರು ಬಾರಿ ಪ್ರೂಫ್ ತಿದ್ದುವ ಮೂಲಕ ಅದನ್ನು ಸರಿಪಡಿಸಿಕೊಳ್ಳುತ್ತೇವೆ. ಪ್ರತೀ ವಾರವೂ ಹೊಸಬರು ಬರೆಯಲಿದ್ದಾರೆ. ಬರಹಗಳ ವೈವಿಧ್ಯ, ನಮ್ಮ ಪ್ರಸಾರ ವ್ಯಾಪ್ತಿ ಮತ್ತು ಆರ್ಥಿಕ ಬಲ ಹೆಚ್ಚಾಗಲು ನೀವೆಲ್ಲರೂ ಇನ್ನಷ್ಟು ಕೈ ಜೋಡಿಸುವ ಅಗತ್ಯವಿದೆ.

ನಿಮ್ಮೆಲ್ಲರ ಪ್ರೀತಿ ಹೆಚ್ಚಾದಂತೆ ಕೆಲವರ ಅಸೂಯೆ ಮತ್ತು ದಾಳಿಯೂ ಹೆಚ್ಚಾಗುತ್ತಾ ಹೋಗುತ್ತದೆ. ಅದನ್ನೂ ಸಮತೋಲನದಿಂದ ಎದುರಿಸುತ್ತಾ ನಮ್ಮ ಕರ್ತವ್ಯವನ್ನು ಮುಂದುವರೆಸುತ್ತೇವೆಂಬ ಭರವಸೆಯನ್ನು ನಮ್ಮ ತಂಡದ ಪರವಾಗಿ ನೀಡುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...