Homeಮುಖಪುಟಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತರುತ್ತಿರುವ ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು ರೈತರ ಗುರುತನ್ನೇ ಅಳಿಸಿಹಾಕಲಿವೆ. ಹಳ್ಳಿಗಳಲ್ಲಿ ರೈತರನ್ನು ಅವರದೇ ಭೂಮಿಯಲ್ಲಿ ಕೂಲಿಕಾರರನ್ನಾಗಿಸುವ ಅಥವಾ ರೈತರನ್ನು ನಾಶಗೊಳಿಸುವ, ಅವರನ್ನು ನಗರಗಳಿಗೆ ದೂಡುವ ಈ ಸುಗ್ರೀವಾಜ್ಞೆಗಳನ್ನು ಯಾವ ಬೆಲೆ ತೆತ್ತಾದರೂ ಸರಿಯೇ ತಡೆಯಬೇಕಾಗಿದೆ ಎಂದು ಜಸ್ಟೀಸ್ ನಾಗಮೋಹನ್ ದಾಸ್ ತಿಳಿಸಿದ್ದಾರೆ.

ರೈತ-ದಲಿತ-ಕಾರ್ಮಿಕರ ಐಕ್ಯಹೋರಾಟದ ಅಂಗವಾಗಿ ನಡೆದ ಜನತಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ಅಲ್ಪ ಸ್ವಲ್ಪ ಭೂಮಿ ಹೊಂದಿರುವ ರೈತರನ್ನು ಅವರ ಜಮೀನಿನಿಂದ ಒಕ್ಕಲೆಬ್ಬಿಸಿ ಅವರನ್ನು ಅದೇ ಜಮೀನಿನಲ್ಲಿ ಕೂಲಿಕಾರರನ್ನಾಗಿ ಮಾಡುವ ಉದ್ದೇಶದಿಂದಲೇ ಸರ್ಕಾರ ಈ ಸುಗ್ರಿವಾಜ್ಞೆಗಳನ್ನು ತರುತ್ತಿದೆ ಎಂದು ಅಸಮಾನಧಾನ ವ್ಯಕ್ತಪಡಿಸಿದರು.

ಹಿರಿಯ ಹೋರಾಟಗಾರ ಎಸ್‌.ಆರ್ ಹಿರೇಮಠ್ ಮಾತನಾಡಿ “ಸಾಲಮನ್ನಾ, ಬೆಂಬಲ ಬೆಲೆ ಯಂತಹ ಪರಿಹಾರಗಳು ರೈತರಿಗೆ ತಾತ್ಕಾಲಿಕ ಪರಿಹಾರಗಳಷ್ಟೆ. ಆದರೆ ತಾನು ಬೆಳೆದ ಬೆಲೆ ನಿಗಧಿ ಮಾಡುವಂತಹ ದೀರ್ಘಕಾಲಿಕ ಪರಿಹಾರವೊಂದನ್ನು ನಾವು ಕಂಡುಕೊಳ್ಳಬೇಕು ಎಂದರು.

ಮೊದಲನೆಯದಾಗಿ, ನಾವು ನಮ್ಮ ಭೂಮಿಯನ್ನು ಯಾವುದೇ ಕಾರಣಕ್ಕೂ ಕಾರ್ಪೋರೇಟ್ ಕಂಪನಿಗಳಿಗೆ ಬಿಟ್ಟುಕೊಡಬಾರದು. ಎರಡನೆಯದಾಗಿ ಭೂ ಬಳಕೆ ನೀತಿಯನ್ನು ಜಾರಿಗೆ ತರುವಂತೆ ಒತ್ತಾಯಿಸುವುದು. ಮೂರನೆಯದಾಗಿ, ಉಳುವವನೇ ಭೂಮಿಯ ಒಡೆಯ ಎನ್ನುವುದು ರಾಷ್ಟ್ರೀಐ ಅಜೆಂಡಾ ಆಗಬೇಕು. ಕೊನೆಯದಾಗಿ, ಬಹುರಾಷ್ಟ್ರೀಯ ಕಂಪನಿ ಅಥವಾ ಕಾರ್ಪೋರೇಟ್ ಕಂಪನಿಗಳನ್ನು ತೊಲಗಿಸಿ ಸಂಪೂರ್ಣ ಸಹಕಾರೀ ವ್ಯವಸ್ಥೆ ಬರುವಂತೆ ಒತ್ತಾಯಿಸಬೇಕು ಎಂದರು.

ಕನಿಷ್ಟ ರೈತರೊಂದಿಗೆ ಸಣ್ಣ ಚರ್ಚೆ ನಡೆಸದೇ ಈ ರೈತವಿರೋಧಿ ಸುಗ್ರೀವಾಜ್ಞೆಗಳನ್ನು ಸರ್ಕಾರ ಜಾರಿಗೊಳಿಸುತ್ತಿರುವುದು ನಾಚಿಕೆಗೇಡು. ನಾವೆಲ್ಲರೂ ಒಟ್ಟಾಗಿ ಈ ಸುಗ್ರೀವಾಜ್ಞೆಗಳನ್ನು ಕಸದ ಬುಟ್ಟಿಗೆ ಎಸೆಯುವ ಕಾಲ ಬಂದಿದೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅಭಿಪ್ರಾಯಪಟ್ಟರು.


ಇದನ್ನೂ ಓದಿ: ರೈತ, ದಲಿತ, ಕಾರ್ಮಿಕರನ್ನು ಗುಲಾಮರನ್ನಾಗಿ ಮಾಡುತ್ತಿರುವ ಸರ್ಕಾರ: ಜನತಾ ಅಧಿವೇಶನದಲ್ಲಿ ಡಾ. ಪ್ರಕಾಶ್ ಕಮ್ಮರಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...