Homeಮುಖಪುಟಈ ಸಾಮಾಜಿಕ ನಿಯಮಗಳು ನಿಮಗೆ ಸಹಕಾರಿಯಾಗಬಲ್ಲವು, ಪಾಲಿಸಲು ಪ್ರಯತ್ನಿಸಿ

ಈ ಸಾಮಾಜಿಕ ನಿಯಮಗಳು ನಿಮಗೆ ಸಹಕಾರಿಯಾಗಬಲ್ಲವು, ಪಾಲಿಸಲು ಪ್ರಯತ್ನಿಸಿ

ನಾವು ಸಾರ್ವಜನಿಕವಾಗಿ ಏನನ್ನು ಮಾಡಬಾರದು, ಏನನ್ನು ಮಾಡಬೇಕು ಎಂದು ಸರಳವಾಗಿ ಹೇಳುವ ನಿಯಮಗಳಿವು...

- Advertisement -
- Advertisement -

ಮೂಲ- ರಂಜನ್ ಮಿಶ್ರಾರವರ ಫೇಸ್‌ಬುಕ್ ವಾಲ್ ನಿಂದ

ಕನ್ನಡಕ್ಕೆ : ಮುತ್ತುರಾಜು

1.    ಯಾರಿಗೆ ಆಗಲಿ ಒಂದಕ್ಕಿಂತ ಹೆಚ್ಚು ಬಾರಿ ಪದೇ ಪದೇ ಫೋನ್ ಮಾಡಬೇಡಿ. ಅವರು ನಿಮ್ಮ ಫೋನ್ ರಿಸೀವ್ ಮಾಡಿಲ್ಲ ಎಂದರೆ ಅದಕ್ಕಿಂತಲೂ ಬಹುಮುಖ್ಯ ಕೆಲಸದಲ್ಲಿದ್ದಾರೆ ಎಂದು ಭಾವಿಸಿ.

2.    ಸಾಲ ಪಡೆದ ಹಣವನ್ನು ಅವರು ನೆನಪಿಸುವ ಮುನ್ನ ಅಥವಾ ಅವರು ಕೇಳುವ ಮುನ್ನವೇ ಹಿಂದಿರುಗಿಸಿಬಿಡಿ. ಇದು ನಿಮ್ಮ ಬದ್ಧತೆ ಮತ್ತು ವ್ಯಕ್ತಿತ್ವವನ್ನು ನಿರೂಪಿಸುತ್ತದೆ. ಇದು ಪೆನ್, ಕೊಡೆ, ಊಟದ ಡಬ್ಬಿ ಇತ್ಯಾದಿಗಳಿಗೂ ಅನ್ವಯಿಸುತ್ತದೆ.

3.    ಇತರರು ನಿಮಗೆ ಊಟ ಕೊಡಿಸುವ ಸಂದರ್ಭದಲ್ಲಿ ದುಬಾರಿ ತಿನಿಸುಗಳನ್ನು ಆರ್ಡರ್ ಮಾಡಬೇಡಿ.

4.    ಮುಜುಗರದ ಪ್ರಶ್ನೆಗಳನ್ನು ಎಂದಿಗೂ ಕೇಳಲೇಬೇಡಿ, ಉದಾಹರಣೆಗೆ: ನಿಮ್ಮಗಿನ್ನು ಮದುವೆಯಾಗಿಲ್ಲವೇ? ನಿಮಗೆ ಮಕ್ಕಳಾಗಿಲ್ಲವೇ? ನೀವು ಏಕೆ ಮನೆ ಖರೀದಿಸಿಲ್ಲ? ನೀವೇ ಏಕೆ ಕಾರು ತೆಗೆದುಕೊಂಡಿಲ್ಲ? ಇವು ಯಾವುವು ನಿಮ್ಮ ಸಮಸ್ಯೆಯಲ್ಲ ಎಂಬುದನ್ನು ಮರೆಯಬೇಡಿ.

5.    ನಿಮ್ಮ ಹಿಂದೆ ಬರುವವರಿಗೆ ಯಾವಗಲೂ ಬಾಗಿಲು ತೆರೆದಿಡಿ. ಅವರು ಹುಡುಗ ಅಥವಾ ಹುಡುಗಿಯಾಗಿರಲಿ, ಜೂನಿಯರ್ ಅಥವಾ ಸೀನಿಯರ್ ಆಗಿರಲಿ. ಸಾರ್ವಜನಿಕವಾಗಿ ಮತ್ತೊಬ್ಬರನ್ನು ಸಮಾನವಾಗಿ ಗೌರವದಿಂದ ನಡೆಸಿಕೊಳ್ಳುವುದರಿಂದ ನೀವು ಚಿಕ್ಕವರೆನಿಸಿಕೊಳ್ಳುವುದಿಲ್ಲ.

6.    ನಿಮ್ಮ ಸ್ನೇಹಿತರೊಂದಿಗೆ ಕ್ಯಾಬ್/ಆಟೋದಲ್ಲಿ ಹೋದಾಗ ಅವರು ಬಿಲ್ ಪೆ ಮಾಡಿದರೆ ಮುಂದಿನ ಬಾರಿ ನೀವು ಬಿಲ್ ಪೆ ಮಾಡಲು ಯತ್ನಿಸಿ

7.    ಭಿನ್ನ ರೀತಿಯ ಅಭಿಪ್ರಾಯಗಳನ್ನು ಗೌರವಿಸಿ. ನೆನಪಿಡಿ ನಿಮಗೆ 6 ಎಂದು ಕಾಣುವುದು ನಿಮ್ಮ ಎದುರಿದ್ದವರಿಗೆ 9 ಎಂದು ಕಾಣಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಎರಡನೇ ಅಭಿಪ್ರಾಯ ಪಡೆಯುವುದು ಸೂಕ್ತ.

8.    ಮತ್ತೊಬ್ಬರು ಮಾತನಾಡುವಾಗ ಮಧ್ಯದಲ್ಲಿ ಬಾಯಿ ಹಾಕಬೇಡಿ. ಅವರು ಪೂರ್ತಿ ಹೇಳಲು ಅವಕಾಶ ಮಾಡಿಕೊಡಿ. ಎಲ್ಲವನ್ನು ಕೇಳಿಸಿಕೊಳ್ಳಿ ಮತ್ತು ನಿಮಗೆ ಬೇಕಾದುದ್ದನ್ನು ಮಾತ್ರ ತೆಗೆದುಕೊಳ್ಳಿ

9.    ನೀವು ಯಾರನ್ನಾದರೂ ರೇಗಿಸಿದಾಗ ಅವರು ಆಗ ಖುಷಿಪಡದಿದ್ದರೆ, ಅದನ್ನು ಅಲ್ಲಿಗೆ ನಿಲ್ಲಿಸಿ ಮತ್ತು ಮತ್ತೆ ಪುನಾರಾವರ್ತಿಸಬೇಡಿ. ಇದು ಮತ್ತೊಬ್ಬರು ಹಾಗೆ ಮಾಡದಂತೆ ತಡೆಯುತ್ತದೆ.

10. ಯಾರಾದರೂ ನಿಮಗೆ ಸಹಾಯ ಮಾಡಿದಾಗ ಥ್ಯಾಂಕ್ಯೂ ಎಂದು ಹೇಳಿ.

11. ಯಾರನ್ನಾದರೂ ಸಾರ್ವಜನಿಕವಾಗಿ ಹೊಗಳಿ ಆದರೆ ಟೀಕೆಗಳಿದ್ದರೆ ಅದನ್ನು ಅವರಿಗೆ ವಯಕ್ತಿಕವಾಗಿ ಹೇಳಿ

12. ಮತ್ತೊಬ್ಬರ ದೇಹ ತೂಕದ ಬಗ್ಗೆ ಮಾತನಾಡಲು ನಿಮಗೆ ಹಕ್ಕು ಇಲ್ಲ. ನೀವು ಚೆನ್ನಾಗಿ ಕಾಣುವಿರಿ ಎಂದಷ್ಟೆ ಹೇಳಿ. ಅವರು ತೂಕ ಇಳಿಸಲು ಬಯಸಿದರೆ ಅವರಾಗಿಯೇ ನಿಮ್ಮೊಡನೆ ಮಾತನಾಡುತ್ತಾರೆ. ನೀವಾಗಿಯೇ ಸಲಹೆ ಕೊಡಲು ಹೋಗಬೇಡಿ

13. ಯಾರಾದರೂ ತಮ್ಮ ಮೊಬೈಲ್‌ನಲ್ಲಿ ನಿಮ್ಮ ಫೋಟೊ ತೋರಿಸಿದರೆ ನೋಡಿ. ಆದರೆ ಆ ಕಡೆ, ಈ ಕಡೆ ಸ್ವೈಪ್ ಮಾಡಬೇಡಿ. ಅಲ್ಲಿ ಏನಿದೆ ಎಂಬುದು ನಿಮಗೆ ಗೊತ್ತಿರುವುದಿಲ್ಲ ಮತ್ತು ಗೊತ್ತು ಮಾಡಿಕೊಳ್ಳುವ ಅವಶ್ಯಕತೆ ಸಹ ನಿಮಗಿರುವುದಿಲ್ಲ.

14. ನನಗೆ ಡಾಕ್ಟರ್ ಅಪಾಯಿಂಟ್‌ಮೆಂಟ್ ಇದೆ ಎಂದು ನಿಮ್ಮ ಸಹೋದ್ಯೊಗಿ ಹೇಳಿದಾಗ ಏತಕ್ಕೆ ಎಂದು ಕೇಳಲೇಬೇಡಿ. ನೀವು ಚೆನ್ನಾಗಿ ಆಗುತ್ತಿರಿ ಎಂಬ ನಂಬಿಕೆಯಿದೆ ಎಂದು ಮಾತ್ರ ಹೇಳಿ. ಅವರ ಖಾಸಗಿ ಆನಾರೋಗ್ಯದ ಬಗ್ಗೆ ನೀವಾಗಿ ಕೇಳಬೇಡಿ. ಹೇಳಬೇಕು ಅನಿಸಿದರೆ ಅವರೆ ಹೇಳುತ್ತಾರೆ.

15. ನೀವು ಸಿಇಓಗೆ ಯಾವ ಗೌರವ ನೀಡುತ್ತಿರೋ ಅದೇ ಗೌರವ ಕಚೇರಿ ಸ್ವಚ್ಚಗೊಳಿಸುವವರಿಗೂ ನೀಡಿ. ನೀವು ನಿಮಗಿಂತ ಕೆಳಗಿನವರ ಜೊತೆ ಗೌರವದಿಂದ ನಡೆದುಕೊಂಡರೆ ಅದು ಇತರರಿಗೂ ಮಾದರಿಯಾಗುತ್ತದೆ.

16. ಯಾರಾದರೂ ನಿಮ್ಮನ್ನು ಉದ್ದೇಶಿಸಿ ಮಾತನಾಡುವಾಗ ನೀವು ಮೊಬೈಲ್ ನಲ್ಲಿ ನೋಡುತ್ತಿದ್ದರೆ ಅದು ಅನುಚಿತ ಎನಿಸಿಕೊಳ್ಳುತ್ತದೆ. ಹಾಗೆಯೇ ನೀವು ಮಾತನಾಡುವಾಗ ಸನ್ ಗ್ಲಾಸ್ ಧರಿಸಬೇಡಿ. ಕಣ್ಣು ಸಹ ಸಂವಹನದ ಪ್ರಮುಖ ಸಾಧನ ಎಂಬುದನ್ನು ಮರೆಯಬೇಡಿ.

17. ಯಾರಾದರೂ ಅವರಾಗಿಯೇ ಕೇಳುವ ಮುನ್ನ ಯಾವುದೇ ಸಲಹೆ ನೀಡಲು ಹೋಗಬೇಡಿ

18. ಬಹಳ ದಿನಗಳ ನಂತರ ನಿಮ್ಮ ಸ್ನೇಹಿತರು ಅಥವಾ ಯಾರನ್ನಾದರೂ ಭೇಟಿಯಾದಾಗ ಅವರ ವಯಸ್ಸು ಮತ್ತು ಸಂಬಳದ ಬಗ್ಗೆ ಕೇಳಬೇಡಿ. ಬೇಕಾದರೆ ಅವರಾಗಿಯೇ ಹೇಳುತ್ತಾರೆ.

19. ನಿಮಗೆ ಸಂಬಂಧವಿಲ್ಲದ ಕೆಲಸಗಳಲ್ಲಿ ತಲೆ ಹಾಕಬೇಡಿ. ನಿಮ್ಮನ್ನು ಅದು ಎಳೆದುಕೊಂಡಾಗ ಮಾತ್ರ ವ್ಯವಹರಿಸಿ.

20. ನಿಮ್ಮ ಶ್ರೀಮಂತಿಗೆ ಕುರಿತು ಮಾತನಾಡಬೇಡಿ, ವಿಶೇಷವಾಗಿ ಬಡವರ ನಡುವೆ. ಅದೇ ರೀತಿ ನಿಮ್ಮ ಮಕ್ಕಳ ಬಗ್ಗೆ ಮಾತನಾಡಬೇಡಿ, ವಿಶೇಷವಾಗಿ ಮಕ್ಕಳಿಲ್ಲದವರ ನಡುವೆ.

21. ನೀವು ಸ್ನೇಹಿತರೊಟ್ಟಿಗೆ ಇರುವಾಗ ಮನೆ ಕೆಲಸಗಳನ್ನು ಹಂಚಿಕೊಳ್ಳಿ, ಹಾಗೆಯೇ ಖರ್ಚುಗಳನ್ನು ಸಹ.

22. ಉತ್ತಮ ಸಂದೇಶ ಓದಿದ ಬಳಿಕೆ ಧನ್ಯವಾದ ಹೇಳಲು ಪ್ರಯತ್ನಿಸಿ.


ಇದನ್ನೂ ಓದಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...