Homeಮುಖಪುಟಈ ಸಾಮಾಜಿಕ ನಿಯಮಗಳು ನಿಮಗೆ ಸಹಕಾರಿಯಾಗಬಲ್ಲವು, ಪಾಲಿಸಲು ಪ್ರಯತ್ನಿಸಿ

ಈ ಸಾಮಾಜಿಕ ನಿಯಮಗಳು ನಿಮಗೆ ಸಹಕಾರಿಯಾಗಬಲ್ಲವು, ಪಾಲಿಸಲು ಪ್ರಯತ್ನಿಸಿ

ನಾವು ಸಾರ್ವಜನಿಕವಾಗಿ ಏನನ್ನು ಮಾಡಬಾರದು, ಏನನ್ನು ಮಾಡಬೇಕು ಎಂದು ಸರಳವಾಗಿ ಹೇಳುವ ನಿಯಮಗಳಿವು...

- Advertisement -
- Advertisement -

ಮೂಲ- ರಂಜನ್ ಮಿಶ್ರಾರವರ ಫೇಸ್‌ಬುಕ್ ವಾಲ್ ನಿಂದ

ಕನ್ನಡಕ್ಕೆ : ಮುತ್ತುರಾಜು

1.    ಯಾರಿಗೆ ಆಗಲಿ ಒಂದಕ್ಕಿಂತ ಹೆಚ್ಚು ಬಾರಿ ಪದೇ ಪದೇ ಫೋನ್ ಮಾಡಬೇಡಿ. ಅವರು ನಿಮ್ಮ ಫೋನ್ ರಿಸೀವ್ ಮಾಡಿಲ್ಲ ಎಂದರೆ ಅದಕ್ಕಿಂತಲೂ ಬಹುಮುಖ್ಯ ಕೆಲಸದಲ್ಲಿದ್ದಾರೆ ಎಂದು ಭಾವಿಸಿ.

2.    ಸಾಲ ಪಡೆದ ಹಣವನ್ನು ಅವರು ನೆನಪಿಸುವ ಮುನ್ನ ಅಥವಾ ಅವರು ಕೇಳುವ ಮುನ್ನವೇ ಹಿಂದಿರುಗಿಸಿಬಿಡಿ. ಇದು ನಿಮ್ಮ ಬದ್ಧತೆ ಮತ್ತು ವ್ಯಕ್ತಿತ್ವವನ್ನು ನಿರೂಪಿಸುತ್ತದೆ. ಇದು ಪೆನ್, ಕೊಡೆ, ಊಟದ ಡಬ್ಬಿ ಇತ್ಯಾದಿಗಳಿಗೂ ಅನ್ವಯಿಸುತ್ತದೆ.

3.    ಇತರರು ನಿಮಗೆ ಊಟ ಕೊಡಿಸುವ ಸಂದರ್ಭದಲ್ಲಿ ದುಬಾರಿ ತಿನಿಸುಗಳನ್ನು ಆರ್ಡರ್ ಮಾಡಬೇಡಿ.

4.    ಮುಜುಗರದ ಪ್ರಶ್ನೆಗಳನ್ನು ಎಂದಿಗೂ ಕೇಳಲೇಬೇಡಿ, ಉದಾಹರಣೆಗೆ: ನಿಮ್ಮಗಿನ್ನು ಮದುವೆಯಾಗಿಲ್ಲವೇ? ನಿಮಗೆ ಮಕ್ಕಳಾಗಿಲ್ಲವೇ? ನೀವು ಏಕೆ ಮನೆ ಖರೀದಿಸಿಲ್ಲ? ನೀವೇ ಏಕೆ ಕಾರು ತೆಗೆದುಕೊಂಡಿಲ್ಲ? ಇವು ಯಾವುವು ನಿಮ್ಮ ಸಮಸ್ಯೆಯಲ್ಲ ಎಂಬುದನ್ನು ಮರೆಯಬೇಡಿ.

5.    ನಿಮ್ಮ ಹಿಂದೆ ಬರುವವರಿಗೆ ಯಾವಗಲೂ ಬಾಗಿಲು ತೆರೆದಿಡಿ. ಅವರು ಹುಡುಗ ಅಥವಾ ಹುಡುಗಿಯಾಗಿರಲಿ, ಜೂನಿಯರ್ ಅಥವಾ ಸೀನಿಯರ್ ಆಗಿರಲಿ. ಸಾರ್ವಜನಿಕವಾಗಿ ಮತ್ತೊಬ್ಬರನ್ನು ಸಮಾನವಾಗಿ ಗೌರವದಿಂದ ನಡೆಸಿಕೊಳ್ಳುವುದರಿಂದ ನೀವು ಚಿಕ್ಕವರೆನಿಸಿಕೊಳ್ಳುವುದಿಲ್ಲ.

6.    ನಿಮ್ಮ ಸ್ನೇಹಿತರೊಂದಿಗೆ ಕ್ಯಾಬ್/ಆಟೋದಲ್ಲಿ ಹೋದಾಗ ಅವರು ಬಿಲ್ ಪೆ ಮಾಡಿದರೆ ಮುಂದಿನ ಬಾರಿ ನೀವು ಬಿಲ್ ಪೆ ಮಾಡಲು ಯತ್ನಿಸಿ

7.    ಭಿನ್ನ ರೀತಿಯ ಅಭಿಪ್ರಾಯಗಳನ್ನು ಗೌರವಿಸಿ. ನೆನಪಿಡಿ ನಿಮಗೆ 6 ಎಂದು ಕಾಣುವುದು ನಿಮ್ಮ ಎದುರಿದ್ದವರಿಗೆ 9 ಎಂದು ಕಾಣಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಎರಡನೇ ಅಭಿಪ್ರಾಯ ಪಡೆಯುವುದು ಸೂಕ್ತ.

8.    ಮತ್ತೊಬ್ಬರು ಮಾತನಾಡುವಾಗ ಮಧ್ಯದಲ್ಲಿ ಬಾಯಿ ಹಾಕಬೇಡಿ. ಅವರು ಪೂರ್ತಿ ಹೇಳಲು ಅವಕಾಶ ಮಾಡಿಕೊಡಿ. ಎಲ್ಲವನ್ನು ಕೇಳಿಸಿಕೊಳ್ಳಿ ಮತ್ತು ನಿಮಗೆ ಬೇಕಾದುದ್ದನ್ನು ಮಾತ್ರ ತೆಗೆದುಕೊಳ್ಳಿ

9.    ನೀವು ಯಾರನ್ನಾದರೂ ರೇಗಿಸಿದಾಗ ಅವರು ಆಗ ಖುಷಿಪಡದಿದ್ದರೆ, ಅದನ್ನು ಅಲ್ಲಿಗೆ ನಿಲ್ಲಿಸಿ ಮತ್ತು ಮತ್ತೆ ಪುನಾರಾವರ್ತಿಸಬೇಡಿ. ಇದು ಮತ್ತೊಬ್ಬರು ಹಾಗೆ ಮಾಡದಂತೆ ತಡೆಯುತ್ತದೆ.

10. ಯಾರಾದರೂ ನಿಮಗೆ ಸಹಾಯ ಮಾಡಿದಾಗ ಥ್ಯಾಂಕ್ಯೂ ಎಂದು ಹೇಳಿ.

11. ಯಾರನ್ನಾದರೂ ಸಾರ್ವಜನಿಕವಾಗಿ ಹೊಗಳಿ ಆದರೆ ಟೀಕೆಗಳಿದ್ದರೆ ಅದನ್ನು ಅವರಿಗೆ ವಯಕ್ತಿಕವಾಗಿ ಹೇಳಿ

12. ಮತ್ತೊಬ್ಬರ ದೇಹ ತೂಕದ ಬಗ್ಗೆ ಮಾತನಾಡಲು ನಿಮಗೆ ಹಕ್ಕು ಇಲ್ಲ. ನೀವು ಚೆನ್ನಾಗಿ ಕಾಣುವಿರಿ ಎಂದಷ್ಟೆ ಹೇಳಿ. ಅವರು ತೂಕ ಇಳಿಸಲು ಬಯಸಿದರೆ ಅವರಾಗಿಯೇ ನಿಮ್ಮೊಡನೆ ಮಾತನಾಡುತ್ತಾರೆ. ನೀವಾಗಿಯೇ ಸಲಹೆ ಕೊಡಲು ಹೋಗಬೇಡಿ

13. ಯಾರಾದರೂ ತಮ್ಮ ಮೊಬೈಲ್‌ನಲ್ಲಿ ನಿಮ್ಮ ಫೋಟೊ ತೋರಿಸಿದರೆ ನೋಡಿ. ಆದರೆ ಆ ಕಡೆ, ಈ ಕಡೆ ಸ್ವೈಪ್ ಮಾಡಬೇಡಿ. ಅಲ್ಲಿ ಏನಿದೆ ಎಂಬುದು ನಿಮಗೆ ಗೊತ್ತಿರುವುದಿಲ್ಲ ಮತ್ತು ಗೊತ್ತು ಮಾಡಿಕೊಳ್ಳುವ ಅವಶ್ಯಕತೆ ಸಹ ನಿಮಗಿರುವುದಿಲ್ಲ.

14. ನನಗೆ ಡಾಕ್ಟರ್ ಅಪಾಯಿಂಟ್‌ಮೆಂಟ್ ಇದೆ ಎಂದು ನಿಮ್ಮ ಸಹೋದ್ಯೊಗಿ ಹೇಳಿದಾಗ ಏತಕ್ಕೆ ಎಂದು ಕೇಳಲೇಬೇಡಿ. ನೀವು ಚೆನ್ನಾಗಿ ಆಗುತ್ತಿರಿ ಎಂಬ ನಂಬಿಕೆಯಿದೆ ಎಂದು ಮಾತ್ರ ಹೇಳಿ. ಅವರ ಖಾಸಗಿ ಆನಾರೋಗ್ಯದ ಬಗ್ಗೆ ನೀವಾಗಿ ಕೇಳಬೇಡಿ. ಹೇಳಬೇಕು ಅನಿಸಿದರೆ ಅವರೆ ಹೇಳುತ್ತಾರೆ.

15. ನೀವು ಸಿಇಓಗೆ ಯಾವ ಗೌರವ ನೀಡುತ್ತಿರೋ ಅದೇ ಗೌರವ ಕಚೇರಿ ಸ್ವಚ್ಚಗೊಳಿಸುವವರಿಗೂ ನೀಡಿ. ನೀವು ನಿಮಗಿಂತ ಕೆಳಗಿನವರ ಜೊತೆ ಗೌರವದಿಂದ ನಡೆದುಕೊಂಡರೆ ಅದು ಇತರರಿಗೂ ಮಾದರಿಯಾಗುತ್ತದೆ.

16. ಯಾರಾದರೂ ನಿಮ್ಮನ್ನು ಉದ್ದೇಶಿಸಿ ಮಾತನಾಡುವಾಗ ನೀವು ಮೊಬೈಲ್ ನಲ್ಲಿ ನೋಡುತ್ತಿದ್ದರೆ ಅದು ಅನುಚಿತ ಎನಿಸಿಕೊಳ್ಳುತ್ತದೆ. ಹಾಗೆಯೇ ನೀವು ಮಾತನಾಡುವಾಗ ಸನ್ ಗ್ಲಾಸ್ ಧರಿಸಬೇಡಿ. ಕಣ್ಣು ಸಹ ಸಂವಹನದ ಪ್ರಮುಖ ಸಾಧನ ಎಂಬುದನ್ನು ಮರೆಯಬೇಡಿ.

17. ಯಾರಾದರೂ ಅವರಾಗಿಯೇ ಕೇಳುವ ಮುನ್ನ ಯಾವುದೇ ಸಲಹೆ ನೀಡಲು ಹೋಗಬೇಡಿ

18. ಬಹಳ ದಿನಗಳ ನಂತರ ನಿಮ್ಮ ಸ್ನೇಹಿತರು ಅಥವಾ ಯಾರನ್ನಾದರೂ ಭೇಟಿಯಾದಾಗ ಅವರ ವಯಸ್ಸು ಮತ್ತು ಸಂಬಳದ ಬಗ್ಗೆ ಕೇಳಬೇಡಿ. ಬೇಕಾದರೆ ಅವರಾಗಿಯೇ ಹೇಳುತ್ತಾರೆ.

19. ನಿಮಗೆ ಸಂಬಂಧವಿಲ್ಲದ ಕೆಲಸಗಳಲ್ಲಿ ತಲೆ ಹಾಕಬೇಡಿ. ನಿಮ್ಮನ್ನು ಅದು ಎಳೆದುಕೊಂಡಾಗ ಮಾತ್ರ ವ್ಯವಹರಿಸಿ.

20. ನಿಮ್ಮ ಶ್ರೀಮಂತಿಗೆ ಕುರಿತು ಮಾತನಾಡಬೇಡಿ, ವಿಶೇಷವಾಗಿ ಬಡವರ ನಡುವೆ. ಅದೇ ರೀತಿ ನಿಮ್ಮ ಮಕ್ಕಳ ಬಗ್ಗೆ ಮಾತನಾಡಬೇಡಿ, ವಿಶೇಷವಾಗಿ ಮಕ್ಕಳಿಲ್ಲದವರ ನಡುವೆ.

21. ನೀವು ಸ್ನೇಹಿತರೊಟ್ಟಿಗೆ ಇರುವಾಗ ಮನೆ ಕೆಲಸಗಳನ್ನು ಹಂಚಿಕೊಳ್ಳಿ, ಹಾಗೆಯೇ ಖರ್ಚುಗಳನ್ನು ಸಹ.

22. ಉತ್ತಮ ಸಂದೇಶ ಓದಿದ ಬಳಿಕೆ ಧನ್ಯವಾದ ಹೇಳಲು ಪ್ರಯತ್ನಿಸಿ.


ಇದನ್ನೂ ಓದಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...