Homeಮುಖಪುಟಈ ಸಾಮಾಜಿಕ ನಿಯಮಗಳು ನಿಮಗೆ ಸಹಕಾರಿಯಾಗಬಲ್ಲವು, ಪಾಲಿಸಲು ಪ್ರಯತ್ನಿಸಿ

ಈ ಸಾಮಾಜಿಕ ನಿಯಮಗಳು ನಿಮಗೆ ಸಹಕಾರಿಯಾಗಬಲ್ಲವು, ಪಾಲಿಸಲು ಪ್ರಯತ್ನಿಸಿ

ನಾವು ಸಾರ್ವಜನಿಕವಾಗಿ ಏನನ್ನು ಮಾಡಬಾರದು, ಏನನ್ನು ಮಾಡಬೇಕು ಎಂದು ಸರಳವಾಗಿ ಹೇಳುವ ನಿಯಮಗಳಿವು...

- Advertisement -
- Advertisement -

ಮೂಲ- ರಂಜನ್ ಮಿಶ್ರಾರವರ ಫೇಸ್‌ಬುಕ್ ವಾಲ್ ನಿಂದ

ಕನ್ನಡಕ್ಕೆ : ಮುತ್ತುರಾಜು

1.    ಯಾರಿಗೆ ಆಗಲಿ ಒಂದಕ್ಕಿಂತ ಹೆಚ್ಚು ಬಾರಿ ಪದೇ ಪದೇ ಫೋನ್ ಮಾಡಬೇಡಿ. ಅವರು ನಿಮ್ಮ ಫೋನ್ ರಿಸೀವ್ ಮಾಡಿಲ್ಲ ಎಂದರೆ ಅದಕ್ಕಿಂತಲೂ ಬಹುಮುಖ್ಯ ಕೆಲಸದಲ್ಲಿದ್ದಾರೆ ಎಂದು ಭಾವಿಸಿ.

2.    ಸಾಲ ಪಡೆದ ಹಣವನ್ನು ಅವರು ನೆನಪಿಸುವ ಮುನ್ನ ಅಥವಾ ಅವರು ಕೇಳುವ ಮುನ್ನವೇ ಹಿಂದಿರುಗಿಸಿಬಿಡಿ. ಇದು ನಿಮ್ಮ ಬದ್ಧತೆ ಮತ್ತು ವ್ಯಕ್ತಿತ್ವವನ್ನು ನಿರೂಪಿಸುತ್ತದೆ. ಇದು ಪೆನ್, ಕೊಡೆ, ಊಟದ ಡಬ್ಬಿ ಇತ್ಯಾದಿಗಳಿಗೂ ಅನ್ವಯಿಸುತ್ತದೆ.

3.    ಇತರರು ನಿಮಗೆ ಊಟ ಕೊಡಿಸುವ ಸಂದರ್ಭದಲ್ಲಿ ದುಬಾರಿ ತಿನಿಸುಗಳನ್ನು ಆರ್ಡರ್ ಮಾಡಬೇಡಿ.

4.    ಮುಜುಗರದ ಪ್ರಶ್ನೆಗಳನ್ನು ಎಂದಿಗೂ ಕೇಳಲೇಬೇಡಿ, ಉದಾಹರಣೆಗೆ: ನಿಮ್ಮಗಿನ್ನು ಮದುವೆಯಾಗಿಲ್ಲವೇ? ನಿಮಗೆ ಮಕ್ಕಳಾಗಿಲ್ಲವೇ? ನೀವು ಏಕೆ ಮನೆ ಖರೀದಿಸಿಲ್ಲ? ನೀವೇ ಏಕೆ ಕಾರು ತೆಗೆದುಕೊಂಡಿಲ್ಲ? ಇವು ಯಾವುವು ನಿಮ್ಮ ಸಮಸ್ಯೆಯಲ್ಲ ಎಂಬುದನ್ನು ಮರೆಯಬೇಡಿ.

5.    ನಿಮ್ಮ ಹಿಂದೆ ಬರುವವರಿಗೆ ಯಾವಗಲೂ ಬಾಗಿಲು ತೆರೆದಿಡಿ. ಅವರು ಹುಡುಗ ಅಥವಾ ಹುಡುಗಿಯಾಗಿರಲಿ, ಜೂನಿಯರ್ ಅಥವಾ ಸೀನಿಯರ್ ಆಗಿರಲಿ. ಸಾರ್ವಜನಿಕವಾಗಿ ಮತ್ತೊಬ್ಬರನ್ನು ಸಮಾನವಾಗಿ ಗೌರವದಿಂದ ನಡೆಸಿಕೊಳ್ಳುವುದರಿಂದ ನೀವು ಚಿಕ್ಕವರೆನಿಸಿಕೊಳ್ಳುವುದಿಲ್ಲ.

6.    ನಿಮ್ಮ ಸ್ನೇಹಿತರೊಂದಿಗೆ ಕ್ಯಾಬ್/ಆಟೋದಲ್ಲಿ ಹೋದಾಗ ಅವರು ಬಿಲ್ ಪೆ ಮಾಡಿದರೆ ಮುಂದಿನ ಬಾರಿ ನೀವು ಬಿಲ್ ಪೆ ಮಾಡಲು ಯತ್ನಿಸಿ

7.    ಭಿನ್ನ ರೀತಿಯ ಅಭಿಪ್ರಾಯಗಳನ್ನು ಗೌರವಿಸಿ. ನೆನಪಿಡಿ ನಿಮಗೆ 6 ಎಂದು ಕಾಣುವುದು ನಿಮ್ಮ ಎದುರಿದ್ದವರಿಗೆ 9 ಎಂದು ಕಾಣಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಎರಡನೇ ಅಭಿಪ್ರಾಯ ಪಡೆಯುವುದು ಸೂಕ್ತ.

8.    ಮತ್ತೊಬ್ಬರು ಮಾತನಾಡುವಾಗ ಮಧ್ಯದಲ್ಲಿ ಬಾಯಿ ಹಾಕಬೇಡಿ. ಅವರು ಪೂರ್ತಿ ಹೇಳಲು ಅವಕಾಶ ಮಾಡಿಕೊಡಿ. ಎಲ್ಲವನ್ನು ಕೇಳಿಸಿಕೊಳ್ಳಿ ಮತ್ತು ನಿಮಗೆ ಬೇಕಾದುದ್ದನ್ನು ಮಾತ್ರ ತೆಗೆದುಕೊಳ್ಳಿ

9.    ನೀವು ಯಾರನ್ನಾದರೂ ರೇಗಿಸಿದಾಗ ಅವರು ಆಗ ಖುಷಿಪಡದಿದ್ದರೆ, ಅದನ್ನು ಅಲ್ಲಿಗೆ ನಿಲ್ಲಿಸಿ ಮತ್ತು ಮತ್ತೆ ಪುನಾರಾವರ್ತಿಸಬೇಡಿ. ಇದು ಮತ್ತೊಬ್ಬರು ಹಾಗೆ ಮಾಡದಂತೆ ತಡೆಯುತ್ತದೆ.

10. ಯಾರಾದರೂ ನಿಮಗೆ ಸಹಾಯ ಮಾಡಿದಾಗ ಥ್ಯಾಂಕ್ಯೂ ಎಂದು ಹೇಳಿ.

11. ಯಾರನ್ನಾದರೂ ಸಾರ್ವಜನಿಕವಾಗಿ ಹೊಗಳಿ ಆದರೆ ಟೀಕೆಗಳಿದ್ದರೆ ಅದನ್ನು ಅವರಿಗೆ ವಯಕ್ತಿಕವಾಗಿ ಹೇಳಿ

12. ಮತ್ತೊಬ್ಬರ ದೇಹ ತೂಕದ ಬಗ್ಗೆ ಮಾತನಾಡಲು ನಿಮಗೆ ಹಕ್ಕು ಇಲ್ಲ. ನೀವು ಚೆನ್ನಾಗಿ ಕಾಣುವಿರಿ ಎಂದಷ್ಟೆ ಹೇಳಿ. ಅವರು ತೂಕ ಇಳಿಸಲು ಬಯಸಿದರೆ ಅವರಾಗಿಯೇ ನಿಮ್ಮೊಡನೆ ಮಾತನಾಡುತ್ತಾರೆ. ನೀವಾಗಿಯೇ ಸಲಹೆ ಕೊಡಲು ಹೋಗಬೇಡಿ

13. ಯಾರಾದರೂ ತಮ್ಮ ಮೊಬೈಲ್‌ನಲ್ಲಿ ನಿಮ್ಮ ಫೋಟೊ ತೋರಿಸಿದರೆ ನೋಡಿ. ಆದರೆ ಆ ಕಡೆ, ಈ ಕಡೆ ಸ್ವೈಪ್ ಮಾಡಬೇಡಿ. ಅಲ್ಲಿ ಏನಿದೆ ಎಂಬುದು ನಿಮಗೆ ಗೊತ್ತಿರುವುದಿಲ್ಲ ಮತ್ತು ಗೊತ್ತು ಮಾಡಿಕೊಳ್ಳುವ ಅವಶ್ಯಕತೆ ಸಹ ನಿಮಗಿರುವುದಿಲ್ಲ.

14. ನನಗೆ ಡಾಕ್ಟರ್ ಅಪಾಯಿಂಟ್‌ಮೆಂಟ್ ಇದೆ ಎಂದು ನಿಮ್ಮ ಸಹೋದ್ಯೊಗಿ ಹೇಳಿದಾಗ ಏತಕ್ಕೆ ಎಂದು ಕೇಳಲೇಬೇಡಿ. ನೀವು ಚೆನ್ನಾಗಿ ಆಗುತ್ತಿರಿ ಎಂಬ ನಂಬಿಕೆಯಿದೆ ಎಂದು ಮಾತ್ರ ಹೇಳಿ. ಅವರ ಖಾಸಗಿ ಆನಾರೋಗ್ಯದ ಬಗ್ಗೆ ನೀವಾಗಿ ಕೇಳಬೇಡಿ. ಹೇಳಬೇಕು ಅನಿಸಿದರೆ ಅವರೆ ಹೇಳುತ್ತಾರೆ.

15. ನೀವು ಸಿಇಓಗೆ ಯಾವ ಗೌರವ ನೀಡುತ್ತಿರೋ ಅದೇ ಗೌರವ ಕಚೇರಿ ಸ್ವಚ್ಚಗೊಳಿಸುವವರಿಗೂ ನೀಡಿ. ನೀವು ನಿಮಗಿಂತ ಕೆಳಗಿನವರ ಜೊತೆ ಗೌರವದಿಂದ ನಡೆದುಕೊಂಡರೆ ಅದು ಇತರರಿಗೂ ಮಾದರಿಯಾಗುತ್ತದೆ.

16. ಯಾರಾದರೂ ನಿಮ್ಮನ್ನು ಉದ್ದೇಶಿಸಿ ಮಾತನಾಡುವಾಗ ನೀವು ಮೊಬೈಲ್ ನಲ್ಲಿ ನೋಡುತ್ತಿದ್ದರೆ ಅದು ಅನುಚಿತ ಎನಿಸಿಕೊಳ್ಳುತ್ತದೆ. ಹಾಗೆಯೇ ನೀವು ಮಾತನಾಡುವಾಗ ಸನ್ ಗ್ಲಾಸ್ ಧರಿಸಬೇಡಿ. ಕಣ್ಣು ಸಹ ಸಂವಹನದ ಪ್ರಮುಖ ಸಾಧನ ಎಂಬುದನ್ನು ಮರೆಯಬೇಡಿ.

17. ಯಾರಾದರೂ ಅವರಾಗಿಯೇ ಕೇಳುವ ಮುನ್ನ ಯಾವುದೇ ಸಲಹೆ ನೀಡಲು ಹೋಗಬೇಡಿ

18. ಬಹಳ ದಿನಗಳ ನಂತರ ನಿಮ್ಮ ಸ್ನೇಹಿತರು ಅಥವಾ ಯಾರನ್ನಾದರೂ ಭೇಟಿಯಾದಾಗ ಅವರ ವಯಸ್ಸು ಮತ್ತು ಸಂಬಳದ ಬಗ್ಗೆ ಕೇಳಬೇಡಿ. ಬೇಕಾದರೆ ಅವರಾಗಿಯೇ ಹೇಳುತ್ತಾರೆ.

19. ನಿಮಗೆ ಸಂಬಂಧವಿಲ್ಲದ ಕೆಲಸಗಳಲ್ಲಿ ತಲೆ ಹಾಕಬೇಡಿ. ನಿಮ್ಮನ್ನು ಅದು ಎಳೆದುಕೊಂಡಾಗ ಮಾತ್ರ ವ್ಯವಹರಿಸಿ.

20. ನಿಮ್ಮ ಶ್ರೀಮಂತಿಗೆ ಕುರಿತು ಮಾತನಾಡಬೇಡಿ, ವಿಶೇಷವಾಗಿ ಬಡವರ ನಡುವೆ. ಅದೇ ರೀತಿ ನಿಮ್ಮ ಮಕ್ಕಳ ಬಗ್ಗೆ ಮಾತನಾಡಬೇಡಿ, ವಿಶೇಷವಾಗಿ ಮಕ್ಕಳಿಲ್ಲದವರ ನಡುವೆ.

21. ನೀವು ಸ್ನೇಹಿತರೊಟ್ಟಿಗೆ ಇರುವಾಗ ಮನೆ ಕೆಲಸಗಳನ್ನು ಹಂಚಿಕೊಳ್ಳಿ, ಹಾಗೆಯೇ ಖರ್ಚುಗಳನ್ನು ಸಹ.

22. ಉತ್ತಮ ಸಂದೇಶ ಓದಿದ ಬಳಿಕೆ ಧನ್ಯವಾದ ಹೇಳಲು ಪ್ರಯತ್ನಿಸಿ.


ಇದನ್ನೂ ಓದಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....