Homeಮುಖಪುಟಈ ಸಾಮಾಜಿಕ ನಿಯಮಗಳು ನಿಮಗೆ ಸಹಕಾರಿಯಾಗಬಲ್ಲವು, ಪಾಲಿಸಲು ಪ್ರಯತ್ನಿಸಿ

ಈ ಸಾಮಾಜಿಕ ನಿಯಮಗಳು ನಿಮಗೆ ಸಹಕಾರಿಯಾಗಬಲ್ಲವು, ಪಾಲಿಸಲು ಪ್ರಯತ್ನಿಸಿ

ನಾವು ಸಾರ್ವಜನಿಕವಾಗಿ ಏನನ್ನು ಮಾಡಬಾರದು, ಏನನ್ನು ಮಾಡಬೇಕು ಎಂದು ಸರಳವಾಗಿ ಹೇಳುವ ನಿಯಮಗಳಿವು...

- Advertisement -
- Advertisement -

ಮೂಲ- ರಂಜನ್ ಮಿಶ್ರಾರವರ ಫೇಸ್‌ಬುಕ್ ವಾಲ್ ನಿಂದ

ಕನ್ನಡಕ್ಕೆ : ಮುತ್ತುರಾಜು

1.    ಯಾರಿಗೆ ಆಗಲಿ ಒಂದಕ್ಕಿಂತ ಹೆಚ್ಚು ಬಾರಿ ಪದೇ ಪದೇ ಫೋನ್ ಮಾಡಬೇಡಿ. ಅವರು ನಿಮ್ಮ ಫೋನ್ ರಿಸೀವ್ ಮಾಡಿಲ್ಲ ಎಂದರೆ ಅದಕ್ಕಿಂತಲೂ ಬಹುಮುಖ್ಯ ಕೆಲಸದಲ್ಲಿದ್ದಾರೆ ಎಂದು ಭಾವಿಸಿ.

2.    ಸಾಲ ಪಡೆದ ಹಣವನ್ನು ಅವರು ನೆನಪಿಸುವ ಮುನ್ನ ಅಥವಾ ಅವರು ಕೇಳುವ ಮುನ್ನವೇ ಹಿಂದಿರುಗಿಸಿಬಿಡಿ. ಇದು ನಿಮ್ಮ ಬದ್ಧತೆ ಮತ್ತು ವ್ಯಕ್ತಿತ್ವವನ್ನು ನಿರೂಪಿಸುತ್ತದೆ. ಇದು ಪೆನ್, ಕೊಡೆ, ಊಟದ ಡಬ್ಬಿ ಇತ್ಯಾದಿಗಳಿಗೂ ಅನ್ವಯಿಸುತ್ತದೆ.

3.    ಇತರರು ನಿಮಗೆ ಊಟ ಕೊಡಿಸುವ ಸಂದರ್ಭದಲ್ಲಿ ದುಬಾರಿ ತಿನಿಸುಗಳನ್ನು ಆರ್ಡರ್ ಮಾಡಬೇಡಿ.

4.    ಮುಜುಗರದ ಪ್ರಶ್ನೆಗಳನ್ನು ಎಂದಿಗೂ ಕೇಳಲೇಬೇಡಿ, ಉದಾಹರಣೆಗೆ: ನಿಮ್ಮಗಿನ್ನು ಮದುವೆಯಾಗಿಲ್ಲವೇ? ನಿಮಗೆ ಮಕ್ಕಳಾಗಿಲ್ಲವೇ? ನೀವು ಏಕೆ ಮನೆ ಖರೀದಿಸಿಲ್ಲ? ನೀವೇ ಏಕೆ ಕಾರು ತೆಗೆದುಕೊಂಡಿಲ್ಲ? ಇವು ಯಾವುವು ನಿಮ್ಮ ಸಮಸ್ಯೆಯಲ್ಲ ಎಂಬುದನ್ನು ಮರೆಯಬೇಡಿ.

5.    ನಿಮ್ಮ ಹಿಂದೆ ಬರುವವರಿಗೆ ಯಾವಗಲೂ ಬಾಗಿಲು ತೆರೆದಿಡಿ. ಅವರು ಹುಡುಗ ಅಥವಾ ಹುಡುಗಿಯಾಗಿರಲಿ, ಜೂನಿಯರ್ ಅಥವಾ ಸೀನಿಯರ್ ಆಗಿರಲಿ. ಸಾರ್ವಜನಿಕವಾಗಿ ಮತ್ತೊಬ್ಬರನ್ನು ಸಮಾನವಾಗಿ ಗೌರವದಿಂದ ನಡೆಸಿಕೊಳ್ಳುವುದರಿಂದ ನೀವು ಚಿಕ್ಕವರೆನಿಸಿಕೊಳ್ಳುವುದಿಲ್ಲ.

6.    ನಿಮ್ಮ ಸ್ನೇಹಿತರೊಂದಿಗೆ ಕ್ಯಾಬ್/ಆಟೋದಲ್ಲಿ ಹೋದಾಗ ಅವರು ಬಿಲ್ ಪೆ ಮಾಡಿದರೆ ಮುಂದಿನ ಬಾರಿ ನೀವು ಬಿಲ್ ಪೆ ಮಾಡಲು ಯತ್ನಿಸಿ

7.    ಭಿನ್ನ ರೀತಿಯ ಅಭಿಪ್ರಾಯಗಳನ್ನು ಗೌರವಿಸಿ. ನೆನಪಿಡಿ ನಿಮಗೆ 6 ಎಂದು ಕಾಣುವುದು ನಿಮ್ಮ ಎದುರಿದ್ದವರಿಗೆ 9 ಎಂದು ಕಾಣಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಎರಡನೇ ಅಭಿಪ್ರಾಯ ಪಡೆಯುವುದು ಸೂಕ್ತ.

8.    ಮತ್ತೊಬ್ಬರು ಮಾತನಾಡುವಾಗ ಮಧ್ಯದಲ್ಲಿ ಬಾಯಿ ಹಾಕಬೇಡಿ. ಅವರು ಪೂರ್ತಿ ಹೇಳಲು ಅವಕಾಶ ಮಾಡಿಕೊಡಿ. ಎಲ್ಲವನ್ನು ಕೇಳಿಸಿಕೊಳ್ಳಿ ಮತ್ತು ನಿಮಗೆ ಬೇಕಾದುದ್ದನ್ನು ಮಾತ್ರ ತೆಗೆದುಕೊಳ್ಳಿ

9.    ನೀವು ಯಾರನ್ನಾದರೂ ರೇಗಿಸಿದಾಗ ಅವರು ಆಗ ಖುಷಿಪಡದಿದ್ದರೆ, ಅದನ್ನು ಅಲ್ಲಿಗೆ ನಿಲ್ಲಿಸಿ ಮತ್ತು ಮತ್ತೆ ಪುನಾರಾವರ್ತಿಸಬೇಡಿ. ಇದು ಮತ್ತೊಬ್ಬರು ಹಾಗೆ ಮಾಡದಂತೆ ತಡೆಯುತ್ತದೆ.

10. ಯಾರಾದರೂ ನಿಮಗೆ ಸಹಾಯ ಮಾಡಿದಾಗ ಥ್ಯಾಂಕ್ಯೂ ಎಂದು ಹೇಳಿ.

11. ಯಾರನ್ನಾದರೂ ಸಾರ್ವಜನಿಕವಾಗಿ ಹೊಗಳಿ ಆದರೆ ಟೀಕೆಗಳಿದ್ದರೆ ಅದನ್ನು ಅವರಿಗೆ ವಯಕ್ತಿಕವಾಗಿ ಹೇಳಿ

12. ಮತ್ತೊಬ್ಬರ ದೇಹ ತೂಕದ ಬಗ್ಗೆ ಮಾತನಾಡಲು ನಿಮಗೆ ಹಕ್ಕು ಇಲ್ಲ. ನೀವು ಚೆನ್ನಾಗಿ ಕಾಣುವಿರಿ ಎಂದಷ್ಟೆ ಹೇಳಿ. ಅವರು ತೂಕ ಇಳಿಸಲು ಬಯಸಿದರೆ ಅವರಾಗಿಯೇ ನಿಮ್ಮೊಡನೆ ಮಾತನಾಡುತ್ತಾರೆ. ನೀವಾಗಿಯೇ ಸಲಹೆ ಕೊಡಲು ಹೋಗಬೇಡಿ

13. ಯಾರಾದರೂ ತಮ್ಮ ಮೊಬೈಲ್‌ನಲ್ಲಿ ನಿಮ್ಮ ಫೋಟೊ ತೋರಿಸಿದರೆ ನೋಡಿ. ಆದರೆ ಆ ಕಡೆ, ಈ ಕಡೆ ಸ್ವೈಪ್ ಮಾಡಬೇಡಿ. ಅಲ್ಲಿ ಏನಿದೆ ಎಂಬುದು ನಿಮಗೆ ಗೊತ್ತಿರುವುದಿಲ್ಲ ಮತ್ತು ಗೊತ್ತು ಮಾಡಿಕೊಳ್ಳುವ ಅವಶ್ಯಕತೆ ಸಹ ನಿಮಗಿರುವುದಿಲ್ಲ.

14. ನನಗೆ ಡಾಕ್ಟರ್ ಅಪಾಯಿಂಟ್‌ಮೆಂಟ್ ಇದೆ ಎಂದು ನಿಮ್ಮ ಸಹೋದ್ಯೊಗಿ ಹೇಳಿದಾಗ ಏತಕ್ಕೆ ಎಂದು ಕೇಳಲೇಬೇಡಿ. ನೀವು ಚೆನ್ನಾಗಿ ಆಗುತ್ತಿರಿ ಎಂಬ ನಂಬಿಕೆಯಿದೆ ಎಂದು ಮಾತ್ರ ಹೇಳಿ. ಅವರ ಖಾಸಗಿ ಆನಾರೋಗ್ಯದ ಬಗ್ಗೆ ನೀವಾಗಿ ಕೇಳಬೇಡಿ. ಹೇಳಬೇಕು ಅನಿಸಿದರೆ ಅವರೆ ಹೇಳುತ್ತಾರೆ.

15. ನೀವು ಸಿಇಓಗೆ ಯಾವ ಗೌರವ ನೀಡುತ್ತಿರೋ ಅದೇ ಗೌರವ ಕಚೇರಿ ಸ್ವಚ್ಚಗೊಳಿಸುವವರಿಗೂ ನೀಡಿ. ನೀವು ನಿಮಗಿಂತ ಕೆಳಗಿನವರ ಜೊತೆ ಗೌರವದಿಂದ ನಡೆದುಕೊಂಡರೆ ಅದು ಇತರರಿಗೂ ಮಾದರಿಯಾಗುತ್ತದೆ.

16. ಯಾರಾದರೂ ನಿಮ್ಮನ್ನು ಉದ್ದೇಶಿಸಿ ಮಾತನಾಡುವಾಗ ನೀವು ಮೊಬೈಲ್ ನಲ್ಲಿ ನೋಡುತ್ತಿದ್ದರೆ ಅದು ಅನುಚಿತ ಎನಿಸಿಕೊಳ್ಳುತ್ತದೆ. ಹಾಗೆಯೇ ನೀವು ಮಾತನಾಡುವಾಗ ಸನ್ ಗ್ಲಾಸ್ ಧರಿಸಬೇಡಿ. ಕಣ್ಣು ಸಹ ಸಂವಹನದ ಪ್ರಮುಖ ಸಾಧನ ಎಂಬುದನ್ನು ಮರೆಯಬೇಡಿ.

17. ಯಾರಾದರೂ ಅವರಾಗಿಯೇ ಕೇಳುವ ಮುನ್ನ ಯಾವುದೇ ಸಲಹೆ ನೀಡಲು ಹೋಗಬೇಡಿ

18. ಬಹಳ ದಿನಗಳ ನಂತರ ನಿಮ್ಮ ಸ್ನೇಹಿತರು ಅಥವಾ ಯಾರನ್ನಾದರೂ ಭೇಟಿಯಾದಾಗ ಅವರ ವಯಸ್ಸು ಮತ್ತು ಸಂಬಳದ ಬಗ್ಗೆ ಕೇಳಬೇಡಿ. ಬೇಕಾದರೆ ಅವರಾಗಿಯೇ ಹೇಳುತ್ತಾರೆ.

19. ನಿಮಗೆ ಸಂಬಂಧವಿಲ್ಲದ ಕೆಲಸಗಳಲ್ಲಿ ತಲೆ ಹಾಕಬೇಡಿ. ನಿಮ್ಮನ್ನು ಅದು ಎಳೆದುಕೊಂಡಾಗ ಮಾತ್ರ ವ್ಯವಹರಿಸಿ.

20. ನಿಮ್ಮ ಶ್ರೀಮಂತಿಗೆ ಕುರಿತು ಮಾತನಾಡಬೇಡಿ, ವಿಶೇಷವಾಗಿ ಬಡವರ ನಡುವೆ. ಅದೇ ರೀತಿ ನಿಮ್ಮ ಮಕ್ಕಳ ಬಗ್ಗೆ ಮಾತನಾಡಬೇಡಿ, ವಿಶೇಷವಾಗಿ ಮಕ್ಕಳಿಲ್ಲದವರ ನಡುವೆ.

21. ನೀವು ಸ್ನೇಹಿತರೊಟ್ಟಿಗೆ ಇರುವಾಗ ಮನೆ ಕೆಲಸಗಳನ್ನು ಹಂಚಿಕೊಳ್ಳಿ, ಹಾಗೆಯೇ ಖರ್ಚುಗಳನ್ನು ಸಹ.

22. ಉತ್ತಮ ಸಂದೇಶ ಓದಿದ ಬಳಿಕೆ ಧನ್ಯವಾದ ಹೇಳಲು ಪ್ರಯತ್ನಿಸಿ.


ಇದನ್ನೂ ಓದಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...