Homeಮುಖಪುಟಈ ಸಾಮಾಜಿಕ ನಿಯಮಗಳು ನಿಮಗೆ ಸಹಕಾರಿಯಾಗಬಲ್ಲವು, ಪಾಲಿಸಲು ಪ್ರಯತ್ನಿಸಿ

ಈ ಸಾಮಾಜಿಕ ನಿಯಮಗಳು ನಿಮಗೆ ಸಹಕಾರಿಯಾಗಬಲ್ಲವು, ಪಾಲಿಸಲು ಪ್ರಯತ್ನಿಸಿ

ನಾವು ಸಾರ್ವಜನಿಕವಾಗಿ ಏನನ್ನು ಮಾಡಬಾರದು, ಏನನ್ನು ಮಾಡಬೇಕು ಎಂದು ಸರಳವಾಗಿ ಹೇಳುವ ನಿಯಮಗಳಿವು...

- Advertisement -
- Advertisement -

ಮೂಲ- ರಂಜನ್ ಮಿಶ್ರಾರವರ ಫೇಸ್‌ಬುಕ್ ವಾಲ್ ನಿಂದ

ಕನ್ನಡಕ್ಕೆ : ಮುತ್ತುರಾಜು

1.    ಯಾರಿಗೆ ಆಗಲಿ ಒಂದಕ್ಕಿಂತ ಹೆಚ್ಚು ಬಾರಿ ಪದೇ ಪದೇ ಫೋನ್ ಮಾಡಬೇಡಿ. ಅವರು ನಿಮ್ಮ ಫೋನ್ ರಿಸೀವ್ ಮಾಡಿಲ್ಲ ಎಂದರೆ ಅದಕ್ಕಿಂತಲೂ ಬಹುಮುಖ್ಯ ಕೆಲಸದಲ್ಲಿದ್ದಾರೆ ಎಂದು ಭಾವಿಸಿ.

2.    ಸಾಲ ಪಡೆದ ಹಣವನ್ನು ಅವರು ನೆನಪಿಸುವ ಮುನ್ನ ಅಥವಾ ಅವರು ಕೇಳುವ ಮುನ್ನವೇ ಹಿಂದಿರುಗಿಸಿಬಿಡಿ. ಇದು ನಿಮ್ಮ ಬದ್ಧತೆ ಮತ್ತು ವ್ಯಕ್ತಿತ್ವವನ್ನು ನಿರೂಪಿಸುತ್ತದೆ. ಇದು ಪೆನ್, ಕೊಡೆ, ಊಟದ ಡಬ್ಬಿ ಇತ್ಯಾದಿಗಳಿಗೂ ಅನ್ವಯಿಸುತ್ತದೆ.

3.    ಇತರರು ನಿಮಗೆ ಊಟ ಕೊಡಿಸುವ ಸಂದರ್ಭದಲ್ಲಿ ದುಬಾರಿ ತಿನಿಸುಗಳನ್ನು ಆರ್ಡರ್ ಮಾಡಬೇಡಿ.

4.    ಮುಜುಗರದ ಪ್ರಶ್ನೆಗಳನ್ನು ಎಂದಿಗೂ ಕೇಳಲೇಬೇಡಿ, ಉದಾಹರಣೆಗೆ: ನಿಮ್ಮಗಿನ್ನು ಮದುವೆಯಾಗಿಲ್ಲವೇ? ನಿಮಗೆ ಮಕ್ಕಳಾಗಿಲ್ಲವೇ? ನೀವು ಏಕೆ ಮನೆ ಖರೀದಿಸಿಲ್ಲ? ನೀವೇ ಏಕೆ ಕಾರು ತೆಗೆದುಕೊಂಡಿಲ್ಲ? ಇವು ಯಾವುವು ನಿಮ್ಮ ಸಮಸ್ಯೆಯಲ್ಲ ಎಂಬುದನ್ನು ಮರೆಯಬೇಡಿ.

5.    ನಿಮ್ಮ ಹಿಂದೆ ಬರುವವರಿಗೆ ಯಾವಗಲೂ ಬಾಗಿಲು ತೆರೆದಿಡಿ. ಅವರು ಹುಡುಗ ಅಥವಾ ಹುಡುಗಿಯಾಗಿರಲಿ, ಜೂನಿಯರ್ ಅಥವಾ ಸೀನಿಯರ್ ಆಗಿರಲಿ. ಸಾರ್ವಜನಿಕವಾಗಿ ಮತ್ತೊಬ್ಬರನ್ನು ಸಮಾನವಾಗಿ ಗೌರವದಿಂದ ನಡೆಸಿಕೊಳ್ಳುವುದರಿಂದ ನೀವು ಚಿಕ್ಕವರೆನಿಸಿಕೊಳ್ಳುವುದಿಲ್ಲ.

6.    ನಿಮ್ಮ ಸ್ನೇಹಿತರೊಂದಿಗೆ ಕ್ಯಾಬ್/ಆಟೋದಲ್ಲಿ ಹೋದಾಗ ಅವರು ಬಿಲ್ ಪೆ ಮಾಡಿದರೆ ಮುಂದಿನ ಬಾರಿ ನೀವು ಬಿಲ್ ಪೆ ಮಾಡಲು ಯತ್ನಿಸಿ

7.    ಭಿನ್ನ ರೀತಿಯ ಅಭಿಪ್ರಾಯಗಳನ್ನು ಗೌರವಿಸಿ. ನೆನಪಿಡಿ ನಿಮಗೆ 6 ಎಂದು ಕಾಣುವುದು ನಿಮ್ಮ ಎದುರಿದ್ದವರಿಗೆ 9 ಎಂದು ಕಾಣಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಎರಡನೇ ಅಭಿಪ್ರಾಯ ಪಡೆಯುವುದು ಸೂಕ್ತ.

8.    ಮತ್ತೊಬ್ಬರು ಮಾತನಾಡುವಾಗ ಮಧ್ಯದಲ್ಲಿ ಬಾಯಿ ಹಾಕಬೇಡಿ. ಅವರು ಪೂರ್ತಿ ಹೇಳಲು ಅವಕಾಶ ಮಾಡಿಕೊಡಿ. ಎಲ್ಲವನ್ನು ಕೇಳಿಸಿಕೊಳ್ಳಿ ಮತ್ತು ನಿಮಗೆ ಬೇಕಾದುದ್ದನ್ನು ಮಾತ್ರ ತೆಗೆದುಕೊಳ್ಳಿ

9.    ನೀವು ಯಾರನ್ನಾದರೂ ರೇಗಿಸಿದಾಗ ಅವರು ಆಗ ಖುಷಿಪಡದಿದ್ದರೆ, ಅದನ್ನು ಅಲ್ಲಿಗೆ ನಿಲ್ಲಿಸಿ ಮತ್ತು ಮತ್ತೆ ಪುನಾರಾವರ್ತಿಸಬೇಡಿ. ಇದು ಮತ್ತೊಬ್ಬರು ಹಾಗೆ ಮಾಡದಂತೆ ತಡೆಯುತ್ತದೆ.

10. ಯಾರಾದರೂ ನಿಮಗೆ ಸಹಾಯ ಮಾಡಿದಾಗ ಥ್ಯಾಂಕ್ಯೂ ಎಂದು ಹೇಳಿ.

11. ಯಾರನ್ನಾದರೂ ಸಾರ್ವಜನಿಕವಾಗಿ ಹೊಗಳಿ ಆದರೆ ಟೀಕೆಗಳಿದ್ದರೆ ಅದನ್ನು ಅವರಿಗೆ ವಯಕ್ತಿಕವಾಗಿ ಹೇಳಿ

12. ಮತ್ತೊಬ್ಬರ ದೇಹ ತೂಕದ ಬಗ್ಗೆ ಮಾತನಾಡಲು ನಿಮಗೆ ಹಕ್ಕು ಇಲ್ಲ. ನೀವು ಚೆನ್ನಾಗಿ ಕಾಣುವಿರಿ ಎಂದಷ್ಟೆ ಹೇಳಿ. ಅವರು ತೂಕ ಇಳಿಸಲು ಬಯಸಿದರೆ ಅವರಾಗಿಯೇ ನಿಮ್ಮೊಡನೆ ಮಾತನಾಡುತ್ತಾರೆ. ನೀವಾಗಿಯೇ ಸಲಹೆ ಕೊಡಲು ಹೋಗಬೇಡಿ

13. ಯಾರಾದರೂ ತಮ್ಮ ಮೊಬೈಲ್‌ನಲ್ಲಿ ನಿಮ್ಮ ಫೋಟೊ ತೋರಿಸಿದರೆ ನೋಡಿ. ಆದರೆ ಆ ಕಡೆ, ಈ ಕಡೆ ಸ್ವೈಪ್ ಮಾಡಬೇಡಿ. ಅಲ್ಲಿ ಏನಿದೆ ಎಂಬುದು ನಿಮಗೆ ಗೊತ್ತಿರುವುದಿಲ್ಲ ಮತ್ತು ಗೊತ್ತು ಮಾಡಿಕೊಳ್ಳುವ ಅವಶ್ಯಕತೆ ಸಹ ನಿಮಗಿರುವುದಿಲ್ಲ.

14. ನನಗೆ ಡಾಕ್ಟರ್ ಅಪಾಯಿಂಟ್‌ಮೆಂಟ್ ಇದೆ ಎಂದು ನಿಮ್ಮ ಸಹೋದ್ಯೊಗಿ ಹೇಳಿದಾಗ ಏತಕ್ಕೆ ಎಂದು ಕೇಳಲೇಬೇಡಿ. ನೀವು ಚೆನ್ನಾಗಿ ಆಗುತ್ತಿರಿ ಎಂಬ ನಂಬಿಕೆಯಿದೆ ಎಂದು ಮಾತ್ರ ಹೇಳಿ. ಅವರ ಖಾಸಗಿ ಆನಾರೋಗ್ಯದ ಬಗ್ಗೆ ನೀವಾಗಿ ಕೇಳಬೇಡಿ. ಹೇಳಬೇಕು ಅನಿಸಿದರೆ ಅವರೆ ಹೇಳುತ್ತಾರೆ.

15. ನೀವು ಸಿಇಓಗೆ ಯಾವ ಗೌರವ ನೀಡುತ್ತಿರೋ ಅದೇ ಗೌರವ ಕಚೇರಿ ಸ್ವಚ್ಚಗೊಳಿಸುವವರಿಗೂ ನೀಡಿ. ನೀವು ನಿಮಗಿಂತ ಕೆಳಗಿನವರ ಜೊತೆ ಗೌರವದಿಂದ ನಡೆದುಕೊಂಡರೆ ಅದು ಇತರರಿಗೂ ಮಾದರಿಯಾಗುತ್ತದೆ.

16. ಯಾರಾದರೂ ನಿಮ್ಮನ್ನು ಉದ್ದೇಶಿಸಿ ಮಾತನಾಡುವಾಗ ನೀವು ಮೊಬೈಲ್ ನಲ್ಲಿ ನೋಡುತ್ತಿದ್ದರೆ ಅದು ಅನುಚಿತ ಎನಿಸಿಕೊಳ್ಳುತ್ತದೆ. ಹಾಗೆಯೇ ನೀವು ಮಾತನಾಡುವಾಗ ಸನ್ ಗ್ಲಾಸ್ ಧರಿಸಬೇಡಿ. ಕಣ್ಣು ಸಹ ಸಂವಹನದ ಪ್ರಮುಖ ಸಾಧನ ಎಂಬುದನ್ನು ಮರೆಯಬೇಡಿ.

17. ಯಾರಾದರೂ ಅವರಾಗಿಯೇ ಕೇಳುವ ಮುನ್ನ ಯಾವುದೇ ಸಲಹೆ ನೀಡಲು ಹೋಗಬೇಡಿ

18. ಬಹಳ ದಿನಗಳ ನಂತರ ನಿಮ್ಮ ಸ್ನೇಹಿತರು ಅಥವಾ ಯಾರನ್ನಾದರೂ ಭೇಟಿಯಾದಾಗ ಅವರ ವಯಸ್ಸು ಮತ್ತು ಸಂಬಳದ ಬಗ್ಗೆ ಕೇಳಬೇಡಿ. ಬೇಕಾದರೆ ಅವರಾಗಿಯೇ ಹೇಳುತ್ತಾರೆ.

19. ನಿಮಗೆ ಸಂಬಂಧವಿಲ್ಲದ ಕೆಲಸಗಳಲ್ಲಿ ತಲೆ ಹಾಕಬೇಡಿ. ನಿಮ್ಮನ್ನು ಅದು ಎಳೆದುಕೊಂಡಾಗ ಮಾತ್ರ ವ್ಯವಹರಿಸಿ.

20. ನಿಮ್ಮ ಶ್ರೀಮಂತಿಗೆ ಕುರಿತು ಮಾತನಾಡಬೇಡಿ, ವಿಶೇಷವಾಗಿ ಬಡವರ ನಡುವೆ. ಅದೇ ರೀತಿ ನಿಮ್ಮ ಮಕ್ಕಳ ಬಗ್ಗೆ ಮಾತನಾಡಬೇಡಿ, ವಿಶೇಷವಾಗಿ ಮಕ್ಕಳಿಲ್ಲದವರ ನಡುವೆ.

21. ನೀವು ಸ್ನೇಹಿತರೊಟ್ಟಿಗೆ ಇರುವಾಗ ಮನೆ ಕೆಲಸಗಳನ್ನು ಹಂಚಿಕೊಳ್ಳಿ, ಹಾಗೆಯೇ ಖರ್ಚುಗಳನ್ನು ಸಹ.

22. ಉತ್ತಮ ಸಂದೇಶ ಓದಿದ ಬಳಿಕೆ ಧನ್ಯವಾದ ಹೇಳಲು ಪ್ರಯತ್ನಿಸಿ.


ಇದನ್ನೂ ಓದಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....