Homeಕರ್ನಾಟಕತ್ರೀ ಸ್ಟಾರ್ಸ್ ಬರ್ತಡೇ : ಯಡವಟ್ಟು ಮತ್ತು ಶ್ರೇಯಸ್ಸು

ತ್ರೀ ಸ್ಟಾರ್ಸ್ ಬರ್ತಡೇ : ಯಡವಟ್ಟು ಮತ್ತು ಶ್ರೇಯಸ್ಸು

- Advertisement -
- Advertisement -

ಕನ್ನಡ ಚಿತ್ರರಂಗದ ಇಬ್ಬರು ಸ್ಟಾರ್ ನಟರ ಬರ್ತಡೇ ಸೆಲಬ್ರೇಷನ್ ಇದೇ ತಿಂಗಳಿನಲ್ಲಾಯಿತು. ಮತ್ತೊಬ್ಬ ಸ್ಟಾರ್ ನಟನ ಹುಟ್ಟಿದ ದಿನದ ಆಚರಣೆ ಫೆಬ್ರವರಿಯಲ್ಲಾಗಲಿದೆ. ಆದರೆ ಈ ಮೂರು ಬರ್ತಡೇ ಸೆಲಬ್ರೇಷನ್‍ಗಳು ಒಂದೊಂದು ರೀತಿಯ ವಿಶೇಷ ಮತ್ತು ವಿಚಿತ್ರವಾಗಿವೆ. ಜನವರಿ 08ರಂದು ಹುಟ್ಟಿದ ಹಬ್ಬ ಆಚರಿಸಿಕೊಂಡ ಯಶ್‍ಗೆ ತಮ್ಮ ಬರ್ತಡೆಯನ್ನೂ ಹೆಚ್ಚು ಸೆಲೆಬ್ರೇಟ್ ಮಾಡದ ಅಭಿಮಾನಿಗಳು 5,700 ಕೆ.ಜಿ ಕೇಕ್ ರೆಡಿ ಮಾಡಿಸಿ ಸಂಭ್ರಮ ಆಚರಿಸಿದ್ದರು.

ಯಶ್ ಬರ್ತಡೇಗಿಂತ ವಿಚಿತ್ರವಾಗಿ ಬರ್ತಡೇ ಆಚರಿಸಿಕೊಂಡಿದ್ದು ದುನಿಯಾ ವಿಜಯ್, ಇತ್ತೀಚೆಗೆ ಹೊಡೆದಾಟ, ಬಡಿದಾಟ, ಬೀದಿ-ಮನೆ ಜಗಳಗಳಿಂದಲೇ ಹೆಚ್ಚು ಸುದ್ದಿಯಲ್ಲಿರುವ ವಿಜಯ್ ತನ್ನ ಬರ್ತಡೇ ಆಚರಣೆಯಲ್ಲೂ ಪೇಚಿಗೆ ಸಿಕ್ಕಿಕೊಂಡಿದ್ದಾರೆ. ಎಲ್ಲರೂ ಬರ್ತಡೇ ಕೇಕನ್ನು ಚಾಕುವಿನಿಂದ ಕತ್ತರಿಸಿದರೆ, ಮೊನ್ನೆ (ಜ.20) ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡ ವಿಜಯ್ ತಲ್ವಾರ್‍ನಲ್ಲಿ ಕೇಕ್ ಕಟ್ ಮಾಡಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇತ್ತೀಚೆಗೆ ವಿಜಯ್‍ರ ಹೊಡಿ-ಬಡಿ ನಡವಳಿಕೆಗಳನ್ನು ನೋಡಿದ್ದ ಯಾರೋ ಒಬ್ಬ ಅಭಿಮಾನಿ ತಲ್ವಾರ್ ತಂದು ಬರ್ತಡೇ ಕೇಕ್ ಕಟ್ ಮಾಡೋಕೆ ಕೊಟ್ಟಿದ್ದಾನೆ. ಅದನ್ನೇ ಹಿಡಿದು ಕೇಕ್ ಕಟ್ ಮಾಡಿರುವ ವಿಜಯ್‍ರನ್ನು ಜನ ಹಿಗ್ಗಾಮುಗ್ಗಾ ಟ್ರೋಲ್ ಮಾಡ್ತಿದ್ದಾರೆ. ಅಯ್ಯೋ ಗೊತ್ತಿಲ್ದೆ ತಪ್ಪಾಗೋಗಿದೆ ಬಿಟ್ಬುಡ್ರಿ ಅಂತ ವಿಜಯ್ ಬಾಯಿ ಬಡ್ಕೊತಾ ಕುಂತಿದ್ದಾರೆ ಪಾಪ. ಆ ಅಭಿಮಾನಿಗೆ ವಿಜಯ್ ಮೇಲೆ ಲವ್ ಜಾಸ್ತಿ ಆಗಿತ್ತೋ, ಕೋಪ ಜಾಸ್ತಿ ಆಗಿತ್ತೋ ಗೊತ್ತಿಲ್ಲ, ವಿಜಯ್‍ರನ್ನು ಎಡವಟ್ಟಿನಲ್ಲಿ ಸಿಕ್ಕಿಸಿಹೋಗಿದ್ದಾನೆ.

ಇದೆಲ್ಲದ ನಡುವೆ ವಿಶೇಷ ಅನ್ನಿಸೋದು ದರ್ಶನ್ ಬರ್ತಡೇ, ಇತ್ತೀಚೆಗೆ ತುಂಬಾ ಸಿಂಪಲ್ ಅಗಿ ಕಾಣಿಸಿಕೊಳ್ತಿರೋ ದರ್ಶನ್, ಅಭಿಮಾನಿಗಳ ಕಷ್ಟಕ್ಕೆ, ಸಹ ನಟರ ಸಮಸ್ಯೆಗಳಿಗೆ ನೆರವು ನೀಡೋದ್ರಲ್ಲೇ ಹೆಚ್ಚು ಸುದ್ದಿ ಆಗ್ತಿದ್ದಾರೆ. ಮುಂದಿನ ತಿಂಗಳು 16ರಂದು ದರ್ಶನ್ ಹುಟ್ಟಿದ ದಿನ. ತನ್ನ ಬರ್ತಡೇ ಇನ್ನು ತಿಂಗಳಿರುವಾಗಲೇ ದರ್ಶನ್ ತಮ್ಮ ಮನೆ ಮುಂದೆ ಬೋರ್ಡ್ ಹಾಕಿಕೊಂಡಿದ್ದು, ಅದರಲ್ಲಿ “ನನ್ನ ಬರ್ತಡೆಗೆ ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ, ಅದೇ ಹಣದಲ್ಲಿ ನಿಮ್ಮ ಕೈಲಾದಷ್ಟು ಅಕ್ಕಿ, ಬೇಳೆ, ಸಕ್ಕರೆ ಹಾಗೂ ಇತರ ದವಸ ಧಾನ್ಯಗಳನ್ನು ದಾನ ನೀಡಿ. ಅದನೆಲ್ಲಾ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ತಲುಪಿಸುವ ಹೊಣೆ ನನ್ನದು” ಎಂದು ಘೋಷಿಸಿದ್ದಾರೆ.

ಈ ಸುದ್ದಿ ಅಭಿಮಾನಿಗಳನ್ನು ಮುಟ್ಟುತಿದ್ದಂತೆಯೇ ಸಾಲು ಸರದಿಯಲ್ಲಿ ತಮ್ಮಿಂದಾಗುವಷ್ಟು ಧಾನ್ಯಗಳನ್ನು ದರ್ಶನ್ ಮನೆಗೆ ಕೊಂಡೊಯ್ಯುತ್ತಿದ್ದಾರೆ. ಕೆಲವೇ ವರ್ಷಗಳ ಹಿಂದೆ ತನ್ನ ದಾಂಪತ್ಯ ಜೀವನದಲ್ಲಿ ತಾನೇ ಮಾಡಿಕೊಂಡಿದ್ದ ಕಲಹಗಳಿಂದ ವಿಲನ್ ಆಗಿದ್ದ ದರ್ಶನ್, ಅದಾದ ಮೇಲೆ ಇಂತಹ ಒಂದಷ್ಟು ಮಾದರಿಯಾಗುವಂತಹ ಕೆಲಸಗಳಿಂದ ಮತ್ತೆ ಹೀರೋ ಆಗ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...