Homeಕರ್ನಾಟಕತ್ರೀ ಸ್ಟಾರ್ಸ್ ಬರ್ತಡೇ : ಯಡವಟ್ಟು ಮತ್ತು ಶ್ರೇಯಸ್ಸು

ತ್ರೀ ಸ್ಟಾರ್ಸ್ ಬರ್ತಡೇ : ಯಡವಟ್ಟು ಮತ್ತು ಶ್ರೇಯಸ್ಸು

- Advertisement -
- Advertisement -

ಕನ್ನಡ ಚಿತ್ರರಂಗದ ಇಬ್ಬರು ಸ್ಟಾರ್ ನಟರ ಬರ್ತಡೇ ಸೆಲಬ್ರೇಷನ್ ಇದೇ ತಿಂಗಳಿನಲ್ಲಾಯಿತು. ಮತ್ತೊಬ್ಬ ಸ್ಟಾರ್ ನಟನ ಹುಟ್ಟಿದ ದಿನದ ಆಚರಣೆ ಫೆಬ್ರವರಿಯಲ್ಲಾಗಲಿದೆ. ಆದರೆ ಈ ಮೂರು ಬರ್ತಡೇ ಸೆಲಬ್ರೇಷನ್‍ಗಳು ಒಂದೊಂದು ರೀತಿಯ ವಿಶೇಷ ಮತ್ತು ವಿಚಿತ್ರವಾಗಿವೆ. ಜನವರಿ 08ರಂದು ಹುಟ್ಟಿದ ಹಬ್ಬ ಆಚರಿಸಿಕೊಂಡ ಯಶ್‍ಗೆ ತಮ್ಮ ಬರ್ತಡೆಯನ್ನೂ ಹೆಚ್ಚು ಸೆಲೆಬ್ರೇಟ್ ಮಾಡದ ಅಭಿಮಾನಿಗಳು 5,700 ಕೆ.ಜಿ ಕೇಕ್ ರೆಡಿ ಮಾಡಿಸಿ ಸಂಭ್ರಮ ಆಚರಿಸಿದ್ದರು.

ಯಶ್ ಬರ್ತಡೇಗಿಂತ ವಿಚಿತ್ರವಾಗಿ ಬರ್ತಡೇ ಆಚರಿಸಿಕೊಂಡಿದ್ದು ದುನಿಯಾ ವಿಜಯ್, ಇತ್ತೀಚೆಗೆ ಹೊಡೆದಾಟ, ಬಡಿದಾಟ, ಬೀದಿ-ಮನೆ ಜಗಳಗಳಿಂದಲೇ ಹೆಚ್ಚು ಸುದ್ದಿಯಲ್ಲಿರುವ ವಿಜಯ್ ತನ್ನ ಬರ್ತಡೇ ಆಚರಣೆಯಲ್ಲೂ ಪೇಚಿಗೆ ಸಿಕ್ಕಿಕೊಂಡಿದ್ದಾರೆ. ಎಲ್ಲರೂ ಬರ್ತಡೇ ಕೇಕನ್ನು ಚಾಕುವಿನಿಂದ ಕತ್ತರಿಸಿದರೆ, ಮೊನ್ನೆ (ಜ.20) ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡ ವಿಜಯ್ ತಲ್ವಾರ್‍ನಲ್ಲಿ ಕೇಕ್ ಕಟ್ ಮಾಡಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇತ್ತೀಚೆಗೆ ವಿಜಯ್‍ರ ಹೊಡಿ-ಬಡಿ ನಡವಳಿಕೆಗಳನ್ನು ನೋಡಿದ್ದ ಯಾರೋ ಒಬ್ಬ ಅಭಿಮಾನಿ ತಲ್ವಾರ್ ತಂದು ಬರ್ತಡೇ ಕೇಕ್ ಕಟ್ ಮಾಡೋಕೆ ಕೊಟ್ಟಿದ್ದಾನೆ. ಅದನ್ನೇ ಹಿಡಿದು ಕೇಕ್ ಕಟ್ ಮಾಡಿರುವ ವಿಜಯ್‍ರನ್ನು ಜನ ಹಿಗ್ಗಾಮುಗ್ಗಾ ಟ್ರೋಲ್ ಮಾಡ್ತಿದ್ದಾರೆ. ಅಯ್ಯೋ ಗೊತ್ತಿಲ್ದೆ ತಪ್ಪಾಗೋಗಿದೆ ಬಿಟ್ಬುಡ್ರಿ ಅಂತ ವಿಜಯ್ ಬಾಯಿ ಬಡ್ಕೊತಾ ಕುಂತಿದ್ದಾರೆ ಪಾಪ. ಆ ಅಭಿಮಾನಿಗೆ ವಿಜಯ್ ಮೇಲೆ ಲವ್ ಜಾಸ್ತಿ ಆಗಿತ್ತೋ, ಕೋಪ ಜಾಸ್ತಿ ಆಗಿತ್ತೋ ಗೊತ್ತಿಲ್ಲ, ವಿಜಯ್‍ರನ್ನು ಎಡವಟ್ಟಿನಲ್ಲಿ ಸಿಕ್ಕಿಸಿಹೋಗಿದ್ದಾನೆ.

ಇದೆಲ್ಲದ ನಡುವೆ ವಿಶೇಷ ಅನ್ನಿಸೋದು ದರ್ಶನ್ ಬರ್ತಡೇ, ಇತ್ತೀಚೆಗೆ ತುಂಬಾ ಸಿಂಪಲ್ ಅಗಿ ಕಾಣಿಸಿಕೊಳ್ತಿರೋ ದರ್ಶನ್, ಅಭಿಮಾನಿಗಳ ಕಷ್ಟಕ್ಕೆ, ಸಹ ನಟರ ಸಮಸ್ಯೆಗಳಿಗೆ ನೆರವು ನೀಡೋದ್ರಲ್ಲೇ ಹೆಚ್ಚು ಸುದ್ದಿ ಆಗ್ತಿದ್ದಾರೆ. ಮುಂದಿನ ತಿಂಗಳು 16ರಂದು ದರ್ಶನ್ ಹುಟ್ಟಿದ ದಿನ. ತನ್ನ ಬರ್ತಡೇ ಇನ್ನು ತಿಂಗಳಿರುವಾಗಲೇ ದರ್ಶನ್ ತಮ್ಮ ಮನೆ ಮುಂದೆ ಬೋರ್ಡ್ ಹಾಕಿಕೊಂಡಿದ್ದು, ಅದರಲ್ಲಿ “ನನ್ನ ಬರ್ತಡೆಗೆ ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ, ಅದೇ ಹಣದಲ್ಲಿ ನಿಮ್ಮ ಕೈಲಾದಷ್ಟು ಅಕ್ಕಿ, ಬೇಳೆ, ಸಕ್ಕರೆ ಹಾಗೂ ಇತರ ದವಸ ಧಾನ್ಯಗಳನ್ನು ದಾನ ನೀಡಿ. ಅದನೆಲ್ಲಾ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ತಲುಪಿಸುವ ಹೊಣೆ ನನ್ನದು” ಎಂದು ಘೋಷಿಸಿದ್ದಾರೆ.

ಈ ಸುದ್ದಿ ಅಭಿಮಾನಿಗಳನ್ನು ಮುಟ್ಟುತಿದ್ದಂತೆಯೇ ಸಾಲು ಸರದಿಯಲ್ಲಿ ತಮ್ಮಿಂದಾಗುವಷ್ಟು ಧಾನ್ಯಗಳನ್ನು ದರ್ಶನ್ ಮನೆಗೆ ಕೊಂಡೊಯ್ಯುತ್ತಿದ್ದಾರೆ. ಕೆಲವೇ ವರ್ಷಗಳ ಹಿಂದೆ ತನ್ನ ದಾಂಪತ್ಯ ಜೀವನದಲ್ಲಿ ತಾನೇ ಮಾಡಿಕೊಂಡಿದ್ದ ಕಲಹಗಳಿಂದ ವಿಲನ್ ಆಗಿದ್ದ ದರ್ಶನ್, ಅದಾದ ಮೇಲೆ ಇಂತಹ ಒಂದಷ್ಟು ಮಾದರಿಯಾಗುವಂತಹ ಕೆಲಸಗಳಿಂದ ಮತ್ತೆ ಹೀರೋ ಆಗ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...