Homeಕರ್ನಾಟಕತ್ರೀ ಸ್ಟಾರ್ಸ್ ಬರ್ತಡೇ : ಯಡವಟ್ಟು ಮತ್ತು ಶ್ರೇಯಸ್ಸು

ತ್ರೀ ಸ್ಟಾರ್ಸ್ ಬರ್ತಡೇ : ಯಡವಟ್ಟು ಮತ್ತು ಶ್ರೇಯಸ್ಸು

- Advertisement -
- Advertisement -

ಕನ್ನಡ ಚಿತ್ರರಂಗದ ಇಬ್ಬರು ಸ್ಟಾರ್ ನಟರ ಬರ್ತಡೇ ಸೆಲಬ್ರೇಷನ್ ಇದೇ ತಿಂಗಳಿನಲ್ಲಾಯಿತು. ಮತ್ತೊಬ್ಬ ಸ್ಟಾರ್ ನಟನ ಹುಟ್ಟಿದ ದಿನದ ಆಚರಣೆ ಫೆಬ್ರವರಿಯಲ್ಲಾಗಲಿದೆ. ಆದರೆ ಈ ಮೂರು ಬರ್ತಡೇ ಸೆಲಬ್ರೇಷನ್‍ಗಳು ಒಂದೊಂದು ರೀತಿಯ ವಿಶೇಷ ಮತ್ತು ವಿಚಿತ್ರವಾಗಿವೆ. ಜನವರಿ 08ರಂದು ಹುಟ್ಟಿದ ಹಬ್ಬ ಆಚರಿಸಿಕೊಂಡ ಯಶ್‍ಗೆ ತಮ್ಮ ಬರ್ತಡೆಯನ್ನೂ ಹೆಚ್ಚು ಸೆಲೆಬ್ರೇಟ್ ಮಾಡದ ಅಭಿಮಾನಿಗಳು 5,700 ಕೆ.ಜಿ ಕೇಕ್ ರೆಡಿ ಮಾಡಿಸಿ ಸಂಭ್ರಮ ಆಚರಿಸಿದ್ದರು.

ಯಶ್ ಬರ್ತಡೇಗಿಂತ ವಿಚಿತ್ರವಾಗಿ ಬರ್ತಡೇ ಆಚರಿಸಿಕೊಂಡಿದ್ದು ದುನಿಯಾ ವಿಜಯ್, ಇತ್ತೀಚೆಗೆ ಹೊಡೆದಾಟ, ಬಡಿದಾಟ, ಬೀದಿ-ಮನೆ ಜಗಳಗಳಿಂದಲೇ ಹೆಚ್ಚು ಸುದ್ದಿಯಲ್ಲಿರುವ ವಿಜಯ್ ತನ್ನ ಬರ್ತಡೇ ಆಚರಣೆಯಲ್ಲೂ ಪೇಚಿಗೆ ಸಿಕ್ಕಿಕೊಂಡಿದ್ದಾರೆ. ಎಲ್ಲರೂ ಬರ್ತಡೇ ಕೇಕನ್ನು ಚಾಕುವಿನಿಂದ ಕತ್ತರಿಸಿದರೆ, ಮೊನ್ನೆ (ಜ.20) ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡ ವಿಜಯ್ ತಲ್ವಾರ್‍ನಲ್ಲಿ ಕೇಕ್ ಕಟ್ ಮಾಡಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇತ್ತೀಚೆಗೆ ವಿಜಯ್‍ರ ಹೊಡಿ-ಬಡಿ ನಡವಳಿಕೆಗಳನ್ನು ನೋಡಿದ್ದ ಯಾರೋ ಒಬ್ಬ ಅಭಿಮಾನಿ ತಲ್ವಾರ್ ತಂದು ಬರ್ತಡೇ ಕೇಕ್ ಕಟ್ ಮಾಡೋಕೆ ಕೊಟ್ಟಿದ್ದಾನೆ. ಅದನ್ನೇ ಹಿಡಿದು ಕೇಕ್ ಕಟ್ ಮಾಡಿರುವ ವಿಜಯ್‍ರನ್ನು ಜನ ಹಿಗ್ಗಾಮುಗ್ಗಾ ಟ್ರೋಲ್ ಮಾಡ್ತಿದ್ದಾರೆ. ಅಯ್ಯೋ ಗೊತ್ತಿಲ್ದೆ ತಪ್ಪಾಗೋಗಿದೆ ಬಿಟ್ಬುಡ್ರಿ ಅಂತ ವಿಜಯ್ ಬಾಯಿ ಬಡ್ಕೊತಾ ಕುಂತಿದ್ದಾರೆ ಪಾಪ. ಆ ಅಭಿಮಾನಿಗೆ ವಿಜಯ್ ಮೇಲೆ ಲವ್ ಜಾಸ್ತಿ ಆಗಿತ್ತೋ, ಕೋಪ ಜಾಸ್ತಿ ಆಗಿತ್ತೋ ಗೊತ್ತಿಲ್ಲ, ವಿಜಯ್‍ರನ್ನು ಎಡವಟ್ಟಿನಲ್ಲಿ ಸಿಕ್ಕಿಸಿಹೋಗಿದ್ದಾನೆ.

ಇದೆಲ್ಲದ ನಡುವೆ ವಿಶೇಷ ಅನ್ನಿಸೋದು ದರ್ಶನ್ ಬರ್ತಡೇ, ಇತ್ತೀಚೆಗೆ ತುಂಬಾ ಸಿಂಪಲ್ ಅಗಿ ಕಾಣಿಸಿಕೊಳ್ತಿರೋ ದರ್ಶನ್, ಅಭಿಮಾನಿಗಳ ಕಷ್ಟಕ್ಕೆ, ಸಹ ನಟರ ಸಮಸ್ಯೆಗಳಿಗೆ ನೆರವು ನೀಡೋದ್ರಲ್ಲೇ ಹೆಚ್ಚು ಸುದ್ದಿ ಆಗ್ತಿದ್ದಾರೆ. ಮುಂದಿನ ತಿಂಗಳು 16ರಂದು ದರ್ಶನ್ ಹುಟ್ಟಿದ ದಿನ. ತನ್ನ ಬರ್ತಡೇ ಇನ್ನು ತಿಂಗಳಿರುವಾಗಲೇ ದರ್ಶನ್ ತಮ್ಮ ಮನೆ ಮುಂದೆ ಬೋರ್ಡ್ ಹಾಕಿಕೊಂಡಿದ್ದು, ಅದರಲ್ಲಿ “ನನ್ನ ಬರ್ತಡೆಗೆ ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ, ಅದೇ ಹಣದಲ್ಲಿ ನಿಮ್ಮ ಕೈಲಾದಷ್ಟು ಅಕ್ಕಿ, ಬೇಳೆ, ಸಕ್ಕರೆ ಹಾಗೂ ಇತರ ದವಸ ಧಾನ್ಯಗಳನ್ನು ದಾನ ನೀಡಿ. ಅದನೆಲ್ಲಾ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ತಲುಪಿಸುವ ಹೊಣೆ ನನ್ನದು” ಎಂದು ಘೋಷಿಸಿದ್ದಾರೆ.

ಈ ಸುದ್ದಿ ಅಭಿಮಾನಿಗಳನ್ನು ಮುಟ್ಟುತಿದ್ದಂತೆಯೇ ಸಾಲು ಸರದಿಯಲ್ಲಿ ತಮ್ಮಿಂದಾಗುವಷ್ಟು ಧಾನ್ಯಗಳನ್ನು ದರ್ಶನ್ ಮನೆಗೆ ಕೊಂಡೊಯ್ಯುತ್ತಿದ್ದಾರೆ. ಕೆಲವೇ ವರ್ಷಗಳ ಹಿಂದೆ ತನ್ನ ದಾಂಪತ್ಯ ಜೀವನದಲ್ಲಿ ತಾನೇ ಮಾಡಿಕೊಂಡಿದ್ದ ಕಲಹಗಳಿಂದ ವಿಲನ್ ಆಗಿದ್ದ ದರ್ಶನ್, ಅದಾದ ಮೇಲೆ ಇಂತಹ ಒಂದಷ್ಟು ಮಾದರಿಯಾಗುವಂತಹ ಕೆಲಸಗಳಿಂದ ಮತ್ತೆ ಹೀರೋ ಆಗ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...