Homeಕರ್ನಾಟಕತ್ರೀ ಸ್ಟಾರ್ಸ್ ಬರ್ತಡೇ : ಯಡವಟ್ಟು ಮತ್ತು ಶ್ರೇಯಸ್ಸು

ತ್ರೀ ಸ್ಟಾರ್ಸ್ ಬರ್ತಡೇ : ಯಡವಟ್ಟು ಮತ್ತು ಶ್ರೇಯಸ್ಸು

- Advertisement -
- Advertisement -

ಕನ್ನಡ ಚಿತ್ರರಂಗದ ಇಬ್ಬರು ಸ್ಟಾರ್ ನಟರ ಬರ್ತಡೇ ಸೆಲಬ್ರೇಷನ್ ಇದೇ ತಿಂಗಳಿನಲ್ಲಾಯಿತು. ಮತ್ತೊಬ್ಬ ಸ್ಟಾರ್ ನಟನ ಹುಟ್ಟಿದ ದಿನದ ಆಚರಣೆ ಫೆಬ್ರವರಿಯಲ್ಲಾಗಲಿದೆ. ಆದರೆ ಈ ಮೂರು ಬರ್ತಡೇ ಸೆಲಬ್ರೇಷನ್‍ಗಳು ಒಂದೊಂದು ರೀತಿಯ ವಿಶೇಷ ಮತ್ತು ವಿಚಿತ್ರವಾಗಿವೆ. ಜನವರಿ 08ರಂದು ಹುಟ್ಟಿದ ಹಬ್ಬ ಆಚರಿಸಿಕೊಂಡ ಯಶ್‍ಗೆ ತಮ್ಮ ಬರ್ತಡೆಯನ್ನೂ ಹೆಚ್ಚು ಸೆಲೆಬ್ರೇಟ್ ಮಾಡದ ಅಭಿಮಾನಿಗಳು 5,700 ಕೆ.ಜಿ ಕೇಕ್ ರೆಡಿ ಮಾಡಿಸಿ ಸಂಭ್ರಮ ಆಚರಿಸಿದ್ದರು.

ಯಶ್ ಬರ್ತಡೇಗಿಂತ ವಿಚಿತ್ರವಾಗಿ ಬರ್ತಡೇ ಆಚರಿಸಿಕೊಂಡಿದ್ದು ದುನಿಯಾ ವಿಜಯ್, ಇತ್ತೀಚೆಗೆ ಹೊಡೆದಾಟ, ಬಡಿದಾಟ, ಬೀದಿ-ಮನೆ ಜಗಳಗಳಿಂದಲೇ ಹೆಚ್ಚು ಸುದ್ದಿಯಲ್ಲಿರುವ ವಿಜಯ್ ತನ್ನ ಬರ್ತಡೇ ಆಚರಣೆಯಲ್ಲೂ ಪೇಚಿಗೆ ಸಿಕ್ಕಿಕೊಂಡಿದ್ದಾರೆ. ಎಲ್ಲರೂ ಬರ್ತಡೇ ಕೇಕನ್ನು ಚಾಕುವಿನಿಂದ ಕತ್ತರಿಸಿದರೆ, ಮೊನ್ನೆ (ಜ.20) ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡ ವಿಜಯ್ ತಲ್ವಾರ್‍ನಲ್ಲಿ ಕೇಕ್ ಕಟ್ ಮಾಡಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇತ್ತೀಚೆಗೆ ವಿಜಯ್‍ರ ಹೊಡಿ-ಬಡಿ ನಡವಳಿಕೆಗಳನ್ನು ನೋಡಿದ್ದ ಯಾರೋ ಒಬ್ಬ ಅಭಿಮಾನಿ ತಲ್ವಾರ್ ತಂದು ಬರ್ತಡೇ ಕೇಕ್ ಕಟ್ ಮಾಡೋಕೆ ಕೊಟ್ಟಿದ್ದಾನೆ. ಅದನ್ನೇ ಹಿಡಿದು ಕೇಕ್ ಕಟ್ ಮಾಡಿರುವ ವಿಜಯ್‍ರನ್ನು ಜನ ಹಿಗ್ಗಾಮುಗ್ಗಾ ಟ್ರೋಲ್ ಮಾಡ್ತಿದ್ದಾರೆ. ಅಯ್ಯೋ ಗೊತ್ತಿಲ್ದೆ ತಪ್ಪಾಗೋಗಿದೆ ಬಿಟ್ಬುಡ್ರಿ ಅಂತ ವಿಜಯ್ ಬಾಯಿ ಬಡ್ಕೊತಾ ಕುಂತಿದ್ದಾರೆ ಪಾಪ. ಆ ಅಭಿಮಾನಿಗೆ ವಿಜಯ್ ಮೇಲೆ ಲವ್ ಜಾಸ್ತಿ ಆಗಿತ್ತೋ, ಕೋಪ ಜಾಸ್ತಿ ಆಗಿತ್ತೋ ಗೊತ್ತಿಲ್ಲ, ವಿಜಯ್‍ರನ್ನು ಎಡವಟ್ಟಿನಲ್ಲಿ ಸಿಕ್ಕಿಸಿಹೋಗಿದ್ದಾನೆ.

ಇದೆಲ್ಲದ ನಡುವೆ ವಿಶೇಷ ಅನ್ನಿಸೋದು ದರ್ಶನ್ ಬರ್ತಡೇ, ಇತ್ತೀಚೆಗೆ ತುಂಬಾ ಸಿಂಪಲ್ ಅಗಿ ಕಾಣಿಸಿಕೊಳ್ತಿರೋ ದರ್ಶನ್, ಅಭಿಮಾನಿಗಳ ಕಷ್ಟಕ್ಕೆ, ಸಹ ನಟರ ಸಮಸ್ಯೆಗಳಿಗೆ ನೆರವು ನೀಡೋದ್ರಲ್ಲೇ ಹೆಚ್ಚು ಸುದ್ದಿ ಆಗ್ತಿದ್ದಾರೆ. ಮುಂದಿನ ತಿಂಗಳು 16ರಂದು ದರ್ಶನ್ ಹುಟ್ಟಿದ ದಿನ. ತನ್ನ ಬರ್ತಡೇ ಇನ್ನು ತಿಂಗಳಿರುವಾಗಲೇ ದರ್ಶನ್ ತಮ್ಮ ಮನೆ ಮುಂದೆ ಬೋರ್ಡ್ ಹಾಕಿಕೊಂಡಿದ್ದು, ಅದರಲ್ಲಿ “ನನ್ನ ಬರ್ತಡೆಗೆ ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ, ಅದೇ ಹಣದಲ್ಲಿ ನಿಮ್ಮ ಕೈಲಾದಷ್ಟು ಅಕ್ಕಿ, ಬೇಳೆ, ಸಕ್ಕರೆ ಹಾಗೂ ಇತರ ದವಸ ಧಾನ್ಯಗಳನ್ನು ದಾನ ನೀಡಿ. ಅದನೆಲ್ಲಾ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ತಲುಪಿಸುವ ಹೊಣೆ ನನ್ನದು” ಎಂದು ಘೋಷಿಸಿದ್ದಾರೆ.

ಈ ಸುದ್ದಿ ಅಭಿಮಾನಿಗಳನ್ನು ಮುಟ್ಟುತಿದ್ದಂತೆಯೇ ಸಾಲು ಸರದಿಯಲ್ಲಿ ತಮ್ಮಿಂದಾಗುವಷ್ಟು ಧಾನ್ಯಗಳನ್ನು ದರ್ಶನ್ ಮನೆಗೆ ಕೊಂಡೊಯ್ಯುತ್ತಿದ್ದಾರೆ. ಕೆಲವೇ ವರ್ಷಗಳ ಹಿಂದೆ ತನ್ನ ದಾಂಪತ್ಯ ಜೀವನದಲ್ಲಿ ತಾನೇ ಮಾಡಿಕೊಂಡಿದ್ದ ಕಲಹಗಳಿಂದ ವಿಲನ್ ಆಗಿದ್ದ ದರ್ಶನ್, ಅದಾದ ಮೇಲೆ ಇಂತಹ ಒಂದಷ್ಟು ಮಾದರಿಯಾಗುವಂತಹ ಕೆಲಸಗಳಿಂದ ಮತ್ತೆ ಹೀರೋ ಆಗ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...