Homeಕರ್ನಾಟಕದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ಸಂಘ ಪರಿವಾರ ತೊರೆದ ಮುಖಂಡರ ಅಭಿಪ್ರಾಯಗಳು ಬಿಜೆಪಿ ನಾಯಕರ ಇಂತಹ ಹೇಳಿಕೆಗಳಿಗೆ ತದ್ವಿರುದ್ಧವಾಗಿವೆ.

- Advertisement -
- Advertisement -

ಇಬ್ಬರು ಮುಸ್ಲಿಂ ಯುವತಿಯರಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಿ ಎರಡು ವಾರ ಜೈಲುವಾಸ ಅನುಭವಿಸಿದ ಬಳಿಕ ಡಿಸೆಂಬರ್ 4ರ ಸಂಜೆ ಇಬ್ಬರು ಕೈದಿಗಳು ಕೊಡಗು ಜಿಲ್ಲೆಯ ಮಡಿಕೇರಿ ಜಿಲ್ಲಾ ಕಾರಾಗೃಹದಿಂದ ಹೊರ ಬಂದರು.

ಅವರನ್ನು ಭೇಟಿಯಾಗಲು ಜೈಲಿನ ಹೊರಗೆ ಒಂದು ಸಣ್ಣ ಗುಂಪು ಜಮಾಯಿಸಿತ್ತು. ಜೈಲಿನಿಂದ ಬಿಡುಗಡೆಯಾದ ಯುವಕರನ್ನು ಶನಿವಾರಸಂತೆಗೆ ಕರೆದೊಯ್ಯಲಾಯಿತು. ಅವರಿಗೆ ಕೇಸರಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಬಿಜೆಪಿ ಮುಖಂಡ ಎಸ್‌.ಎನ್.ರಘು ಅವರು ಈ ಯುವಕರೊಂದಿಗೆ ಫೋಟೋ ತೆಗೆಸಿಕೊಂಡರು.

“ಯುವಕರು ಧರ್ಮದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರದ ಆಶೀರ್ವಾದ ಅವರಿಗಿದೆ. ಈ ಯುವಕರ ಏಳಿಗೆಗೆ ದೇಶ ಸಹಾಯ ಮಾಡುತ್ತದೆ” ಎಂದ ರಘು ಅವರು, ಜೈಲಿನಿಂದ ಬಿಡುಗಡೆಯಾಗಿ ಬಂದ ಯುವಕರನ್ನು ಬೆಂಬಲಿಸಿದರು.

ಒಂದು ವಾರದ ಹಿಂದೆ ರಘು ಅವರು ಈ ಯುವಕರ ಕುಟುಂಬವನ್ನು ಭೇಟಿ ಮಾಡಿ ಭರವಸೆ ನೀಡಿದ್ದರು. “ನಾವು ನಿಮ್ಮ ಮಗನನ್ನು ಮನೆಗೆ ಕರೆತರುತ್ತೇವೆ. ಅವರು ರಾಷ್ಟ್ರಕ್ಕಾಗಿ ಇದನ್ನು ಮಾಡಿದ್ದಾರೆ. ಅವರು ತಮ್ಮ ಧರ್ಮಕ್ಕಾಗಿ ಈ ಕೆಲಸವನ್ನು ಮಾಡಿದ್ದಾರೆ. ನೀವು ಏನನ್ನೂ ಖರ್ಚು ಮಾಡಬೇಕಾಗಿಲ್ಲ, ನಾವು ಅದನ್ನು ನೋಡಿಕೊಳ್ಳುತ್ತೇವೆ” ಎಂದಿದ್ದರು ರಘು.

ನವೆಂಬರ್ 18ರಂದು ಶನಿವಾರಸಂತೆಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕಿಯರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪ್ರಜ್ವಲ್ ಮತ್ತು ಕೌಶಿಕ್ ಎಂಬ ಇಬ್ಬರು ಯುವಕರನ್ನು ಬಂಧಿಸಲಾಗಿತ್ತು. ಈ ಮುಸ್ಲಿಂ ಬಾಲಕಿಯರು ಬುರ್ಖಾವನ್ನು ಹಸ್ತಾಂತರಿಸಿದ ಆರೋಪ ಮಾಡಿಈ ಬಾಲಕಿಯರ ಮೇಲೆ ದಾಳಿ ಮಾಡಲು ಯತ್ನಿಸಿದ 30 ಯುವಕರ ಗುಂಪಿನ ಭಾಗವಾಗಿದ್ದರು ಪ್ರಜ್ವಲ್‌ ಮತ್ತು ಕೌಶಿಕ್‌.

ಒಂದು ತಿಂಗಳಿನಿಂದ ಕೊಡಗಿನಲ್ಲಿ ವರದಿಯಾದ ಕೋಮು ದ್ವೇಷದ ಅಪರಾಧಗಳ ಸರಣಿಯಲ್ಲಿ ಈ ಘಟನೆ ಇತ್ತೀಚಿನದು. ಶಾಲೆಗೆ ಹೋಗುವ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ವ್ಯಕ್ತಿಗಳಿಗೆ ಸಿಕ್ಕಿರುವ ಬೆಂಬಲ ಕೊಡಗು ಜಿಲ್ಲೆಯ ಪ್ರಜ್ಞಾವಂತರಲ್ಲಿ ಆತಂಕ ತಂದಿದೆ.

ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

PC: thenewsminute.com

ಕೊಡಗು ಜಿಲ್ಲೆಯಲ್ಲಿ ಮತೀಯ ಗಲಭೆಗಳು ಇನ್ನಿಲ್ಲದಂತೆ ಹಚ್ಚಾಗುತ್ತಿವೆ. ಯುವಕರು ಹಿಂದುತ್ವದ ರಾಜಕೀಯ ದಾಳವಾಗುತ್ತಿದ್ದಾರೆ. ಗಲಭೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಹಿಂದುತ್ವದಂತೆಯೇ ಮುಸ್ಲಿಂ ಹೆಸರಲ್ಲಿನ ಮತೀಯವಾಗಿ ಸಂಘಟನೆಗಳೂ ಬಲವಾಗುತ್ತಿವೆ. ಆದರೆ ಹಿಂದುತ್ವ ಶಕ್ತಿಗಳು ಅಧಿಕಾರದಲ್ಲಿ ಇರುವುದರಿಂದ ಹಿಂದುತ್ವ ಸಂಘಟನೆಗಳಿಗೆ ಹೆಚ್ಚಿನ ಬಲ ಬಂದಂತೆ ಕಾಣುತ್ತಿದೆ.

ಆದರೆ ಇಂತಹ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಪ್ರಕರಣಗಳನ್ನು ಮೈಮೇಲೆ ಎಳೆದುಕೊಳ್ಳುವ ಯುವಕರ ಕುರಿತು ವಿಷಾದ ವ್ಯಕ್ತಪಡಿಸುತ್ತಾರೆ ಹಿಂದುತ್ವಕ್ಕಾಗಿ ದಶಕಗಳ ಕಾಲ ಕೆಲಸ ಮಾಡಿ, ಪ್ರಕರಣಗಳನ್ನು ಮೈಮೇಲೆ ಎಳೆದುಕೊಂಡ ಅನೇಕ ನಾಯಕರು.

‘ನ್ಯಾಯಪಥ’ ಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ನಲ್ಲಿ ಪ್ರಕಟವಾಗುತ್ತಿರುವ “ನಾನೇಕೆ ಸಂಘ ಪರಿವಾರ ತೊರೆದೆ” ಲೇಖನ ಸರಣಿಯಲ್ಲಿ ಮಾತನಾಡುವ ಅನೇಕರು ಈ ಕುರಿತು ವಿಸ್ತೃತವಾಗಿ ಮಾತನಾಡುತ್ತಿದ್ದಾರೆ. ಶೂದ್ರ ಸಮುದಾಯಗಳ ಯುವಕರಿಗೆ ಬುದ್ಧಿ ಹೇಳುತ್ತಾ, ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾರೆ.

ಕೋಮುವಾದದ ಪ್ರಯೋಗಶಾಲೆ ಎಂದೇ ಖ್ಯಾತವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಶಕಗಳ ಕಾಲ ಸಂಘ ಪರಿವಾರದೊಂದಿಗೆ ಇದ್ದವರು ಸುನಿಲ್ ಬಜಿಲಕೇರಿ ಹಾಗೂ ಪ್ರವೀಣ್‌ ವಾಲ್ಕೆ. ಇತ್ತೀಚೆಗೆ ’ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಅವರುಈ ನಾಯಕರು ಹೇಗೆ ಸಂಘಪರಿವಾರದ ನಾಯಕರು ಬಡ ಹುಡುಗರನ್ನು ಬಳಸಿಕೊಳ್ಳುತ್ತಾರೆ ಎಂದು ವಿವರಿಸಿದ್ದರು.

“ಹಿಂದೂ ಧರ್ಮದ ಉಳಿವಿಗೆ ಸಂಘಟನೆಯ ಅಗತ್ಯವಿಲ್ಲ. ನಮ್ಮ ನಮ್ಮ ಮನೆಯಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿದರೆ, ಹಿಂದೂ ಧರ್ಮ ಸುಧಾರಿಸಿ ಉಳಿಯುತ್ತದೆ. ಯಾವುದೇ ರಾಜಕೀಯ ನಾಯಕರ ಮಕ್ಕಳ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಇಲ್ಲ. ಇಲ್ಲಿನ ಕಾರ್ಯಕರ್ತರು, ಕೆಳವರ್ಗದ ಹುಡುಗರು ಮಾತ್ರ ಕೋರ್ಟ್ ಮೆಟ್ಟಿಲೇರುತ್ತಾರೆ. ಮೇಲ್ವರ್ಗದ ಹುಡುಗರಿಗೆ ಸಜೆಯಾಗಿದ್ದನ್ನಾಗಲೀ, ಪ್ರಕರಣ ದಾಖಲಾಗಿದ್ದಾಗಲೀ ನಾವು ನೋಡಲಿಲ್ಲ. ಪೂಜಾರಿಗಳು, ಶೆಟ್ಟಿಗಳು ಈ ಥರದ ಸಮುದಾಯಗಳೇ ಬಲಿಪಶುಗಳಾಗಿರುತ್ತವೆ. ಈ ಜನಾಂಗಗಳ ಜೀವನವನ್ನು ಹಾಳು ಮಾಡುವುದೇ ಇವರ ಉದ್ದೇಶ. ಇವರಿಂದ ದೇಶ ಉದ್ಧಾರವಾಗುವುದಿಲ್ಲ. ದೇಶ ಉದ್ಧಾರದ ಬ್ಯಾನರ್ ಹಾಕಿಕೊಂಡು ದೇಶವನ್ನು ’ಲಗಾಡಿ’ ತೆಗೆಯುತ್ತಿದ್ದಾರೆ” ಎಂದಿದ್ದರು ಬಜರಂಗದಳ ಮಾಜಿ ನಾಯಕ ಪ್ರವೀಣ್ ವಾಲ್ಕೆ.

“ಒಬ್ಬ ಹುಡುಗ ಮೊದಲ ಬಾರಿಗೆ ಜೈಲಿಗೆ ಹೋದಾಗ ಸಂಘ ಪರಿವಾರದಲ್ಲಿ ಬಹಳ ಮುರ್ಯಾದೆ ಕೊಡಲಾಗುತ್ತದೆ. ಮತ್ತೆಮತ್ತೆ ಇದೇ ರೀತಿ ಗಲಾಟೆಯಾಯಿತೆಂದರೆ ಅವನನ್ನು ಸಂಘಟನೆಯವರು ಹಿಂದಕ್ಕೆ ಹಾಕುತ್ತಾರೆ. ಹಿಂದೂ ಆಗಲಿ, ಮುಸ್ಲಿಂ ಆಗಲೀ- ದಕ್ಷಿಣ ಕನ್ನಡ ಜಿಲ್ಲೆ ಗ್ಯಾಂಗ್ ಕಟ್ಟಿ ಎದುರುಬದುರಾಗಿಸಲು ಒಂದು ಕಾರ್ಖಾನೆಯಂತಾಗಿದೆ. ಯುವಕರನ್ನು ರೌಡಿಸಂ ಕಾರ್ಖಾನೆಗೆ ಹಿಂದೂ ಮುಸ್ಲಿಂ ಧರ್ಮಗಳ ಕಟ್ಟರ್ ಸಂಘಟನೆಗಳು ದೂಡುತ್ತಿವೆ” ಎಂಬುದು ವಾಲ್ಕೆಯವರ ಅಭಿಪ್ರಾಯ. (ಪ್ರವೀಣ್ ವಾಲ್ಕೆ ಅವರ ಪೂರ್ಣ ಲೇಖನವನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ)

ಸುನಿಲ್‌ ಬಜಿಲಕೇರಿಯವರ ಅನುಭವಗಳು ಇದಕ್ಕಿಂತ ಭಿನ್ನವಾಗಿರಲಿಲ್ಲ. ಹಿಂದುತ್ವದಿಂದ ಬಂಧುತ್ವದ ಕಡೆಗೆ ಹೊರಟಿರುವ ಅವರು, “ಕೇರಳದಿಂದ ಬರುವ ಮುಸ್ಲಿಂ ಯುವಕರು ಹಿಂದೂ ಹುಡುಗಿಯರನ್ನು ಮದುವೆಯಾದಾಗ ಹಿಂದುತ್ವ, ಸಂಘಟನೆ, ಧರ್ಮ ಎನ್ನುತ್ತಾ ಆರ್‌ಎಸ್‌ಎಸ್, ಭಜರಂಗದಳಗಳ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ನಾಯಕರು ಮಾತ್ರ ನಮ್ಮನ್ನು ಬಳಕೆ ಮಾಡಿಕೊಳ್ಳುತ್ತಿದ್ದರು ಎನ್ನುವುದು ತಿಳಿಯುತ್ತಾ ಹೋಯಿತು. ಚುನಾವಣಾ ಸಮಯದಲ್ಲಿ ಕಾರ್ಯಕರ್ತರ ಕೊಲೆಯನ್ನು ಮಾಡೋದೋ, ಮಾಡಿಸುವಂತಹದ್ದೋ ಆಗುತ್ತದೆ. ಚುನಾವಣೆ ನಡೆದ ಬಳಿಕ ಎಲ್ಲರೂ ಒಟ್ಟಿಗೆ ಬಾಳೋಣ ಎನ್ನುತ್ತಾರೆ. ಚುನಾವಣೆ ಪ್ರಾರಂಭವಾದ ಕೂಡಲೇ ಕೊಲೆಗಳು ಇಲ್ಲಿ ಅನಿವಾರ್ಯವಾಗುತ್ತಿತ್ತು. ಇದನ್ನೆಲ್ಲ ನೋಡಿನೋಡಿ ಬೇಸರವಾಯಿತು. ಹಿಂದೂ ಸಂಘಟನೆಗಳಲ್ಲಿ ದುಡಿದು ಏನೂ ಪ್ರಯೋಜನವಿಲ್ಲ. ಅವರು ರಾಜಕೀಯಕ್ಕಾಗಿ ಹೀಗೆ ಮಾಡುತ್ತಿದ್ದಾರೆ. ನಮಗೆ ರಾಜಕೀಯ ಬೇಡ. ನಾವ್ಯಾಕೆ ಒಂದಾಗಿ ಬದುಕಬಾರದು? ನಮ್ಮ ಮಂಗಳೂರಿನಲ್ಲಿ ಶಾಂತಿ ಏಕೆ ನೆಲೆಸಬಾರದು? ಎಂದು ಯೋಚಿಸಿ ’ಹಿಂದುತ್ವದಿಂದ ಬಂಧುತ್ವ’ ಪರಿಕಲ್ಪನೆಯಲ್ಲಿ ಸಮಾನ ಮನಸ್ಕರು ಸೇರಿ ಜಾಗೃತಿ ಮೂಡಿಸಲು ಮುಂದಾದೆವು. ’ಹಿಂದುತ್ವದೊಂದಿಗೆ ಬಂಧುತ್ವ’ ನಮ್ಮ ಮುಂದಿನ ಹೆಜ್ಜೆಯಾಯಿತು” ಎನ್ನುತ್ತಾರೆ ಸುನಿಲ್.

“ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಹಿಂದುತ್ವದ ಪ್ರಯೋಗಶಾಲೆ. ಈ ಜಿಲ್ಲೆಯಲ್ಲಿ ಬಹುಸಂಖ್ಯಾತರೆಂದರೆ ಬಿಲ್ಲವರು. ಆದರೆ ಈ ಸಮುದಾಯದ ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅದನ್ನೇ ಬಿಜೆಪಿಯ ಸಂಘಪರಿವಾರದ ನಾಯಕರು ಬಳಸಿಕೊಂಡರು. ಪೇಂಟರ್ ಆಗಿರಬಹುದು, ವೆಲ್ಡರ್ ಆಗಿರಬಹುದು, ಸಣ್ಣ ಸಣ್ಣ ಕೆಲಸ ಮಾಡುವವರನ್ನೆಲ್ಲ ಹಿಂದುತ್ವದ ಬಲೆಯೊಳಗೆ ಹಾಕಿ ಗಲಾಟೆ ಮಾಡಿಸುತ್ತಾರೆ. ಜೈಲಿನಲ್ಲಿ ಇರುವ ಶೇ.90 ಜನರು ಬಿಲ್ಲವರು. ಇದೇನೂ ಈ ರೀತಿ ಮಾಡುತ್ತಿದ್ದಾರೆ? ರಾಜಕೀಯದಲ್ಲಿ ಒಳ್ಳೆಯ ಹುದ್ದೆಗಳಲ್ಲಿ ಇರುವವರೆಲ್ಲ ಮೇಲ್ವರ್ಗದವರಿಗೆ ಮೀಸಲು, ಗಲಾಟೆ ಮಾಡಿ ಜೈಲಿನಲ್ಲಿ ಇರುವವರು ಮಾತ್ರ ಹಿಂದುಳಿದ ವರ್ಗದ ಯುವಕರು! ಇದೆಲ್ಲ ನೋವು ನೀಡಿತು” ಎನ್ನುತ್ತಾರೆ ಸುನಿಲ್‌ ಬಜಿಲಕೇರಿ. (ಇವರ ಲೇಖನವನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ)

ಚುನಾವಣೆ ಹತ್ತಿರವಾಗುತ್ತಿವೆ. ಎಲ್ಲೆಡೆ ಕೋಮುದ್ವೇಷ ಹೆಚ್ಚುತ್ತಿವೆ. ಯುವಕರನ್ನು ಜೈಲಿಗೆ ತಳ್ಳುವ ಕೆಲಸಗಳು ನಡೆಯುತ್ತಿವೆ. ರಾಜಕಾರಣಿಗಳ ದಾಳಕ್ಕೆ ಬಡ ಸಮುದಾಯಗಳ ಯುವಕರು ಬಲಿಪಶುಗಳಾಗುವುದು ತಪ್ಪಬೇಕಿದೆ ಎಂಬುದು ಪ್ರಜ್ಞಾವಂತರ ಆಶಯ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...