Homeಕರ್ನಾಟಕದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ಸಂಘ ಪರಿವಾರ ತೊರೆದ ಮುಖಂಡರ ಅಭಿಪ್ರಾಯಗಳು ಬಿಜೆಪಿ ನಾಯಕರ ಇಂತಹ ಹೇಳಿಕೆಗಳಿಗೆ ತದ್ವಿರುದ್ಧವಾಗಿವೆ.

- Advertisement -
- Advertisement -

ಇಬ್ಬರು ಮುಸ್ಲಿಂ ಯುವತಿಯರಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಿ ಎರಡು ವಾರ ಜೈಲುವಾಸ ಅನುಭವಿಸಿದ ಬಳಿಕ ಡಿಸೆಂಬರ್ 4ರ ಸಂಜೆ ಇಬ್ಬರು ಕೈದಿಗಳು ಕೊಡಗು ಜಿಲ್ಲೆಯ ಮಡಿಕೇರಿ ಜಿಲ್ಲಾ ಕಾರಾಗೃಹದಿಂದ ಹೊರ ಬಂದರು.

ಅವರನ್ನು ಭೇಟಿಯಾಗಲು ಜೈಲಿನ ಹೊರಗೆ ಒಂದು ಸಣ್ಣ ಗುಂಪು ಜಮಾಯಿಸಿತ್ತು. ಜೈಲಿನಿಂದ ಬಿಡುಗಡೆಯಾದ ಯುವಕರನ್ನು ಶನಿವಾರಸಂತೆಗೆ ಕರೆದೊಯ್ಯಲಾಯಿತು. ಅವರಿಗೆ ಕೇಸರಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಬಿಜೆಪಿ ಮುಖಂಡ ಎಸ್‌.ಎನ್.ರಘು ಅವರು ಈ ಯುವಕರೊಂದಿಗೆ ಫೋಟೋ ತೆಗೆಸಿಕೊಂಡರು.

“ಯುವಕರು ಧರ್ಮದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರದ ಆಶೀರ್ವಾದ ಅವರಿಗಿದೆ. ಈ ಯುವಕರ ಏಳಿಗೆಗೆ ದೇಶ ಸಹಾಯ ಮಾಡುತ್ತದೆ” ಎಂದ ರಘು ಅವರು, ಜೈಲಿನಿಂದ ಬಿಡುಗಡೆಯಾಗಿ ಬಂದ ಯುವಕರನ್ನು ಬೆಂಬಲಿಸಿದರು.

ಒಂದು ವಾರದ ಹಿಂದೆ ರಘು ಅವರು ಈ ಯುವಕರ ಕುಟುಂಬವನ್ನು ಭೇಟಿ ಮಾಡಿ ಭರವಸೆ ನೀಡಿದ್ದರು. “ನಾವು ನಿಮ್ಮ ಮಗನನ್ನು ಮನೆಗೆ ಕರೆತರುತ್ತೇವೆ. ಅವರು ರಾಷ್ಟ್ರಕ್ಕಾಗಿ ಇದನ್ನು ಮಾಡಿದ್ದಾರೆ. ಅವರು ತಮ್ಮ ಧರ್ಮಕ್ಕಾಗಿ ಈ ಕೆಲಸವನ್ನು ಮಾಡಿದ್ದಾರೆ. ನೀವು ಏನನ್ನೂ ಖರ್ಚು ಮಾಡಬೇಕಾಗಿಲ್ಲ, ನಾವು ಅದನ್ನು ನೋಡಿಕೊಳ್ಳುತ್ತೇವೆ” ಎಂದಿದ್ದರು ರಘು.

ನವೆಂಬರ್ 18ರಂದು ಶನಿವಾರಸಂತೆಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕಿಯರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪ್ರಜ್ವಲ್ ಮತ್ತು ಕೌಶಿಕ್ ಎಂಬ ಇಬ್ಬರು ಯುವಕರನ್ನು ಬಂಧಿಸಲಾಗಿತ್ತು. ಈ ಮುಸ್ಲಿಂ ಬಾಲಕಿಯರು ಬುರ್ಖಾವನ್ನು ಹಸ್ತಾಂತರಿಸಿದ ಆರೋಪ ಮಾಡಿಈ ಬಾಲಕಿಯರ ಮೇಲೆ ದಾಳಿ ಮಾಡಲು ಯತ್ನಿಸಿದ 30 ಯುವಕರ ಗುಂಪಿನ ಭಾಗವಾಗಿದ್ದರು ಪ್ರಜ್ವಲ್‌ ಮತ್ತು ಕೌಶಿಕ್‌.

ಒಂದು ತಿಂಗಳಿನಿಂದ ಕೊಡಗಿನಲ್ಲಿ ವರದಿಯಾದ ಕೋಮು ದ್ವೇಷದ ಅಪರಾಧಗಳ ಸರಣಿಯಲ್ಲಿ ಈ ಘಟನೆ ಇತ್ತೀಚಿನದು. ಶಾಲೆಗೆ ಹೋಗುವ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ವ್ಯಕ್ತಿಗಳಿಗೆ ಸಿಕ್ಕಿರುವ ಬೆಂಬಲ ಕೊಡಗು ಜಿಲ್ಲೆಯ ಪ್ರಜ್ಞಾವಂತರಲ್ಲಿ ಆತಂಕ ತಂದಿದೆ.

ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

PC: thenewsminute.com

ಕೊಡಗು ಜಿಲ್ಲೆಯಲ್ಲಿ ಮತೀಯ ಗಲಭೆಗಳು ಇನ್ನಿಲ್ಲದಂತೆ ಹಚ್ಚಾಗುತ್ತಿವೆ. ಯುವಕರು ಹಿಂದುತ್ವದ ರಾಜಕೀಯ ದಾಳವಾಗುತ್ತಿದ್ದಾರೆ. ಗಲಭೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಹಿಂದುತ್ವದಂತೆಯೇ ಮುಸ್ಲಿಂ ಹೆಸರಲ್ಲಿನ ಮತೀಯವಾಗಿ ಸಂಘಟನೆಗಳೂ ಬಲವಾಗುತ್ತಿವೆ. ಆದರೆ ಹಿಂದುತ್ವ ಶಕ್ತಿಗಳು ಅಧಿಕಾರದಲ್ಲಿ ಇರುವುದರಿಂದ ಹಿಂದುತ್ವ ಸಂಘಟನೆಗಳಿಗೆ ಹೆಚ್ಚಿನ ಬಲ ಬಂದಂತೆ ಕಾಣುತ್ತಿದೆ.

ಆದರೆ ಇಂತಹ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಪ್ರಕರಣಗಳನ್ನು ಮೈಮೇಲೆ ಎಳೆದುಕೊಳ್ಳುವ ಯುವಕರ ಕುರಿತು ವಿಷಾದ ವ್ಯಕ್ತಪಡಿಸುತ್ತಾರೆ ಹಿಂದುತ್ವಕ್ಕಾಗಿ ದಶಕಗಳ ಕಾಲ ಕೆಲಸ ಮಾಡಿ, ಪ್ರಕರಣಗಳನ್ನು ಮೈಮೇಲೆ ಎಳೆದುಕೊಂಡ ಅನೇಕ ನಾಯಕರು.

‘ನ್ಯಾಯಪಥ’ ಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ನಲ್ಲಿ ಪ್ರಕಟವಾಗುತ್ತಿರುವ “ನಾನೇಕೆ ಸಂಘ ಪರಿವಾರ ತೊರೆದೆ” ಲೇಖನ ಸರಣಿಯಲ್ಲಿ ಮಾತನಾಡುವ ಅನೇಕರು ಈ ಕುರಿತು ವಿಸ್ತೃತವಾಗಿ ಮಾತನಾಡುತ್ತಿದ್ದಾರೆ. ಶೂದ್ರ ಸಮುದಾಯಗಳ ಯುವಕರಿಗೆ ಬುದ್ಧಿ ಹೇಳುತ್ತಾ, ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾರೆ.

ಕೋಮುವಾದದ ಪ್ರಯೋಗಶಾಲೆ ಎಂದೇ ಖ್ಯಾತವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಶಕಗಳ ಕಾಲ ಸಂಘ ಪರಿವಾರದೊಂದಿಗೆ ಇದ್ದವರು ಸುನಿಲ್ ಬಜಿಲಕೇರಿ ಹಾಗೂ ಪ್ರವೀಣ್‌ ವಾಲ್ಕೆ. ಇತ್ತೀಚೆಗೆ ’ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಅವರುಈ ನಾಯಕರು ಹೇಗೆ ಸಂಘಪರಿವಾರದ ನಾಯಕರು ಬಡ ಹುಡುಗರನ್ನು ಬಳಸಿಕೊಳ್ಳುತ್ತಾರೆ ಎಂದು ವಿವರಿಸಿದ್ದರು.

“ಹಿಂದೂ ಧರ್ಮದ ಉಳಿವಿಗೆ ಸಂಘಟನೆಯ ಅಗತ್ಯವಿಲ್ಲ. ನಮ್ಮ ನಮ್ಮ ಮನೆಯಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿದರೆ, ಹಿಂದೂ ಧರ್ಮ ಸುಧಾರಿಸಿ ಉಳಿಯುತ್ತದೆ. ಯಾವುದೇ ರಾಜಕೀಯ ನಾಯಕರ ಮಕ್ಕಳ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಇಲ್ಲ. ಇಲ್ಲಿನ ಕಾರ್ಯಕರ್ತರು, ಕೆಳವರ್ಗದ ಹುಡುಗರು ಮಾತ್ರ ಕೋರ್ಟ್ ಮೆಟ್ಟಿಲೇರುತ್ತಾರೆ. ಮೇಲ್ವರ್ಗದ ಹುಡುಗರಿಗೆ ಸಜೆಯಾಗಿದ್ದನ್ನಾಗಲೀ, ಪ್ರಕರಣ ದಾಖಲಾಗಿದ್ದಾಗಲೀ ನಾವು ನೋಡಲಿಲ್ಲ. ಪೂಜಾರಿಗಳು, ಶೆಟ್ಟಿಗಳು ಈ ಥರದ ಸಮುದಾಯಗಳೇ ಬಲಿಪಶುಗಳಾಗಿರುತ್ತವೆ. ಈ ಜನಾಂಗಗಳ ಜೀವನವನ್ನು ಹಾಳು ಮಾಡುವುದೇ ಇವರ ಉದ್ದೇಶ. ಇವರಿಂದ ದೇಶ ಉದ್ಧಾರವಾಗುವುದಿಲ್ಲ. ದೇಶ ಉದ್ಧಾರದ ಬ್ಯಾನರ್ ಹಾಕಿಕೊಂಡು ದೇಶವನ್ನು ’ಲಗಾಡಿ’ ತೆಗೆಯುತ್ತಿದ್ದಾರೆ” ಎಂದಿದ್ದರು ಬಜರಂಗದಳ ಮಾಜಿ ನಾಯಕ ಪ್ರವೀಣ್ ವಾಲ್ಕೆ.

“ಒಬ್ಬ ಹುಡುಗ ಮೊದಲ ಬಾರಿಗೆ ಜೈಲಿಗೆ ಹೋದಾಗ ಸಂಘ ಪರಿವಾರದಲ್ಲಿ ಬಹಳ ಮುರ್ಯಾದೆ ಕೊಡಲಾಗುತ್ತದೆ. ಮತ್ತೆಮತ್ತೆ ಇದೇ ರೀತಿ ಗಲಾಟೆಯಾಯಿತೆಂದರೆ ಅವನನ್ನು ಸಂಘಟನೆಯವರು ಹಿಂದಕ್ಕೆ ಹಾಕುತ್ತಾರೆ. ಹಿಂದೂ ಆಗಲಿ, ಮುಸ್ಲಿಂ ಆಗಲೀ- ದಕ್ಷಿಣ ಕನ್ನಡ ಜಿಲ್ಲೆ ಗ್ಯಾಂಗ್ ಕಟ್ಟಿ ಎದುರುಬದುರಾಗಿಸಲು ಒಂದು ಕಾರ್ಖಾನೆಯಂತಾಗಿದೆ. ಯುವಕರನ್ನು ರೌಡಿಸಂ ಕಾರ್ಖಾನೆಗೆ ಹಿಂದೂ ಮುಸ್ಲಿಂ ಧರ್ಮಗಳ ಕಟ್ಟರ್ ಸಂಘಟನೆಗಳು ದೂಡುತ್ತಿವೆ” ಎಂಬುದು ವಾಲ್ಕೆಯವರ ಅಭಿಪ್ರಾಯ. (ಪ್ರವೀಣ್ ವಾಲ್ಕೆ ಅವರ ಪೂರ್ಣ ಲೇಖನವನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ)

ಸುನಿಲ್‌ ಬಜಿಲಕೇರಿಯವರ ಅನುಭವಗಳು ಇದಕ್ಕಿಂತ ಭಿನ್ನವಾಗಿರಲಿಲ್ಲ. ಹಿಂದುತ್ವದಿಂದ ಬಂಧುತ್ವದ ಕಡೆಗೆ ಹೊರಟಿರುವ ಅವರು, “ಕೇರಳದಿಂದ ಬರುವ ಮುಸ್ಲಿಂ ಯುವಕರು ಹಿಂದೂ ಹುಡುಗಿಯರನ್ನು ಮದುವೆಯಾದಾಗ ಹಿಂದುತ್ವ, ಸಂಘಟನೆ, ಧರ್ಮ ಎನ್ನುತ್ತಾ ಆರ್‌ಎಸ್‌ಎಸ್, ಭಜರಂಗದಳಗಳ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ನಾಯಕರು ಮಾತ್ರ ನಮ್ಮನ್ನು ಬಳಕೆ ಮಾಡಿಕೊಳ್ಳುತ್ತಿದ್ದರು ಎನ್ನುವುದು ತಿಳಿಯುತ್ತಾ ಹೋಯಿತು. ಚುನಾವಣಾ ಸಮಯದಲ್ಲಿ ಕಾರ್ಯಕರ್ತರ ಕೊಲೆಯನ್ನು ಮಾಡೋದೋ, ಮಾಡಿಸುವಂತಹದ್ದೋ ಆಗುತ್ತದೆ. ಚುನಾವಣೆ ನಡೆದ ಬಳಿಕ ಎಲ್ಲರೂ ಒಟ್ಟಿಗೆ ಬಾಳೋಣ ಎನ್ನುತ್ತಾರೆ. ಚುನಾವಣೆ ಪ್ರಾರಂಭವಾದ ಕೂಡಲೇ ಕೊಲೆಗಳು ಇಲ್ಲಿ ಅನಿವಾರ್ಯವಾಗುತ್ತಿತ್ತು. ಇದನ್ನೆಲ್ಲ ನೋಡಿನೋಡಿ ಬೇಸರವಾಯಿತು. ಹಿಂದೂ ಸಂಘಟನೆಗಳಲ್ಲಿ ದುಡಿದು ಏನೂ ಪ್ರಯೋಜನವಿಲ್ಲ. ಅವರು ರಾಜಕೀಯಕ್ಕಾಗಿ ಹೀಗೆ ಮಾಡುತ್ತಿದ್ದಾರೆ. ನಮಗೆ ರಾಜಕೀಯ ಬೇಡ. ನಾವ್ಯಾಕೆ ಒಂದಾಗಿ ಬದುಕಬಾರದು? ನಮ್ಮ ಮಂಗಳೂರಿನಲ್ಲಿ ಶಾಂತಿ ಏಕೆ ನೆಲೆಸಬಾರದು? ಎಂದು ಯೋಚಿಸಿ ’ಹಿಂದುತ್ವದಿಂದ ಬಂಧುತ್ವ’ ಪರಿಕಲ್ಪನೆಯಲ್ಲಿ ಸಮಾನ ಮನಸ್ಕರು ಸೇರಿ ಜಾಗೃತಿ ಮೂಡಿಸಲು ಮುಂದಾದೆವು. ’ಹಿಂದುತ್ವದೊಂದಿಗೆ ಬಂಧುತ್ವ’ ನಮ್ಮ ಮುಂದಿನ ಹೆಜ್ಜೆಯಾಯಿತು” ಎನ್ನುತ್ತಾರೆ ಸುನಿಲ್.

“ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಹಿಂದುತ್ವದ ಪ್ರಯೋಗಶಾಲೆ. ಈ ಜಿಲ್ಲೆಯಲ್ಲಿ ಬಹುಸಂಖ್ಯಾತರೆಂದರೆ ಬಿಲ್ಲವರು. ಆದರೆ ಈ ಸಮುದಾಯದ ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅದನ್ನೇ ಬಿಜೆಪಿಯ ಸಂಘಪರಿವಾರದ ನಾಯಕರು ಬಳಸಿಕೊಂಡರು. ಪೇಂಟರ್ ಆಗಿರಬಹುದು, ವೆಲ್ಡರ್ ಆಗಿರಬಹುದು, ಸಣ್ಣ ಸಣ್ಣ ಕೆಲಸ ಮಾಡುವವರನ್ನೆಲ್ಲ ಹಿಂದುತ್ವದ ಬಲೆಯೊಳಗೆ ಹಾಕಿ ಗಲಾಟೆ ಮಾಡಿಸುತ್ತಾರೆ. ಜೈಲಿನಲ್ಲಿ ಇರುವ ಶೇ.90 ಜನರು ಬಿಲ್ಲವರು. ಇದೇನೂ ಈ ರೀತಿ ಮಾಡುತ್ತಿದ್ದಾರೆ? ರಾಜಕೀಯದಲ್ಲಿ ಒಳ್ಳೆಯ ಹುದ್ದೆಗಳಲ್ಲಿ ಇರುವವರೆಲ್ಲ ಮೇಲ್ವರ್ಗದವರಿಗೆ ಮೀಸಲು, ಗಲಾಟೆ ಮಾಡಿ ಜೈಲಿನಲ್ಲಿ ಇರುವವರು ಮಾತ್ರ ಹಿಂದುಳಿದ ವರ್ಗದ ಯುವಕರು! ಇದೆಲ್ಲ ನೋವು ನೀಡಿತು” ಎನ್ನುತ್ತಾರೆ ಸುನಿಲ್‌ ಬಜಿಲಕೇರಿ. (ಇವರ ಲೇಖನವನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ)

ಚುನಾವಣೆ ಹತ್ತಿರವಾಗುತ್ತಿವೆ. ಎಲ್ಲೆಡೆ ಕೋಮುದ್ವೇಷ ಹೆಚ್ಚುತ್ತಿವೆ. ಯುವಕರನ್ನು ಜೈಲಿಗೆ ತಳ್ಳುವ ಕೆಲಸಗಳು ನಡೆಯುತ್ತಿವೆ. ರಾಜಕಾರಣಿಗಳ ದಾಳಕ್ಕೆ ಬಡ ಸಮುದಾಯಗಳ ಯುವಕರು ಬಲಿಪಶುಗಳಾಗುವುದು ತಪ್ಪಬೇಕಿದೆ ಎಂಬುದು ಪ್ರಜ್ಞಾವಂತರ ಆಶಯ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...