Homeಕರ್ನಾಟಕದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ಸಂಘ ಪರಿವಾರ ತೊರೆದ ಮುಖಂಡರ ಅಭಿಪ್ರಾಯಗಳು ಬಿಜೆಪಿ ನಾಯಕರ ಇಂತಹ ಹೇಳಿಕೆಗಳಿಗೆ ತದ್ವಿರುದ್ಧವಾಗಿವೆ.

- Advertisement -
- Advertisement -

ಇಬ್ಬರು ಮುಸ್ಲಿಂ ಯುವತಿಯರಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಿ ಎರಡು ವಾರ ಜೈಲುವಾಸ ಅನುಭವಿಸಿದ ಬಳಿಕ ಡಿಸೆಂಬರ್ 4ರ ಸಂಜೆ ಇಬ್ಬರು ಕೈದಿಗಳು ಕೊಡಗು ಜಿಲ್ಲೆಯ ಮಡಿಕೇರಿ ಜಿಲ್ಲಾ ಕಾರಾಗೃಹದಿಂದ ಹೊರ ಬಂದರು.

ಅವರನ್ನು ಭೇಟಿಯಾಗಲು ಜೈಲಿನ ಹೊರಗೆ ಒಂದು ಸಣ್ಣ ಗುಂಪು ಜಮಾಯಿಸಿತ್ತು. ಜೈಲಿನಿಂದ ಬಿಡುಗಡೆಯಾದ ಯುವಕರನ್ನು ಶನಿವಾರಸಂತೆಗೆ ಕರೆದೊಯ್ಯಲಾಯಿತು. ಅವರಿಗೆ ಕೇಸರಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಬಿಜೆಪಿ ಮುಖಂಡ ಎಸ್‌.ಎನ್.ರಘು ಅವರು ಈ ಯುವಕರೊಂದಿಗೆ ಫೋಟೋ ತೆಗೆಸಿಕೊಂಡರು.

“ಯುವಕರು ಧರ್ಮದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರದ ಆಶೀರ್ವಾದ ಅವರಿಗಿದೆ. ಈ ಯುವಕರ ಏಳಿಗೆಗೆ ದೇಶ ಸಹಾಯ ಮಾಡುತ್ತದೆ” ಎಂದ ರಘು ಅವರು, ಜೈಲಿನಿಂದ ಬಿಡುಗಡೆಯಾಗಿ ಬಂದ ಯುವಕರನ್ನು ಬೆಂಬಲಿಸಿದರು.

ಒಂದು ವಾರದ ಹಿಂದೆ ರಘು ಅವರು ಈ ಯುವಕರ ಕುಟುಂಬವನ್ನು ಭೇಟಿ ಮಾಡಿ ಭರವಸೆ ನೀಡಿದ್ದರು. “ನಾವು ನಿಮ್ಮ ಮಗನನ್ನು ಮನೆಗೆ ಕರೆತರುತ್ತೇವೆ. ಅವರು ರಾಷ್ಟ್ರಕ್ಕಾಗಿ ಇದನ್ನು ಮಾಡಿದ್ದಾರೆ. ಅವರು ತಮ್ಮ ಧರ್ಮಕ್ಕಾಗಿ ಈ ಕೆಲಸವನ್ನು ಮಾಡಿದ್ದಾರೆ. ನೀವು ಏನನ್ನೂ ಖರ್ಚು ಮಾಡಬೇಕಾಗಿಲ್ಲ, ನಾವು ಅದನ್ನು ನೋಡಿಕೊಳ್ಳುತ್ತೇವೆ” ಎಂದಿದ್ದರು ರಘು.

ನವೆಂಬರ್ 18ರಂದು ಶನಿವಾರಸಂತೆಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕಿಯರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪ್ರಜ್ವಲ್ ಮತ್ತು ಕೌಶಿಕ್ ಎಂಬ ಇಬ್ಬರು ಯುವಕರನ್ನು ಬಂಧಿಸಲಾಗಿತ್ತು. ಈ ಮುಸ್ಲಿಂ ಬಾಲಕಿಯರು ಬುರ್ಖಾವನ್ನು ಹಸ್ತಾಂತರಿಸಿದ ಆರೋಪ ಮಾಡಿಈ ಬಾಲಕಿಯರ ಮೇಲೆ ದಾಳಿ ಮಾಡಲು ಯತ್ನಿಸಿದ 30 ಯುವಕರ ಗುಂಪಿನ ಭಾಗವಾಗಿದ್ದರು ಪ್ರಜ್ವಲ್‌ ಮತ್ತು ಕೌಶಿಕ್‌.

ಒಂದು ತಿಂಗಳಿನಿಂದ ಕೊಡಗಿನಲ್ಲಿ ವರದಿಯಾದ ಕೋಮು ದ್ವೇಷದ ಅಪರಾಧಗಳ ಸರಣಿಯಲ್ಲಿ ಈ ಘಟನೆ ಇತ್ತೀಚಿನದು. ಶಾಲೆಗೆ ಹೋಗುವ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ವ್ಯಕ್ತಿಗಳಿಗೆ ಸಿಕ್ಕಿರುವ ಬೆಂಬಲ ಕೊಡಗು ಜಿಲ್ಲೆಯ ಪ್ರಜ್ಞಾವಂತರಲ್ಲಿ ಆತಂಕ ತಂದಿದೆ.

ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

PC: thenewsminute.com

ಕೊಡಗು ಜಿಲ್ಲೆಯಲ್ಲಿ ಮತೀಯ ಗಲಭೆಗಳು ಇನ್ನಿಲ್ಲದಂತೆ ಹಚ್ಚಾಗುತ್ತಿವೆ. ಯುವಕರು ಹಿಂದುತ್ವದ ರಾಜಕೀಯ ದಾಳವಾಗುತ್ತಿದ್ದಾರೆ. ಗಲಭೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಹಿಂದುತ್ವದಂತೆಯೇ ಮುಸ್ಲಿಂ ಹೆಸರಲ್ಲಿನ ಮತೀಯವಾಗಿ ಸಂಘಟನೆಗಳೂ ಬಲವಾಗುತ್ತಿವೆ. ಆದರೆ ಹಿಂದುತ್ವ ಶಕ್ತಿಗಳು ಅಧಿಕಾರದಲ್ಲಿ ಇರುವುದರಿಂದ ಹಿಂದುತ್ವ ಸಂಘಟನೆಗಳಿಗೆ ಹೆಚ್ಚಿನ ಬಲ ಬಂದಂತೆ ಕಾಣುತ್ತಿದೆ.

ಆದರೆ ಇಂತಹ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಪ್ರಕರಣಗಳನ್ನು ಮೈಮೇಲೆ ಎಳೆದುಕೊಳ್ಳುವ ಯುವಕರ ಕುರಿತು ವಿಷಾದ ವ್ಯಕ್ತಪಡಿಸುತ್ತಾರೆ ಹಿಂದುತ್ವಕ್ಕಾಗಿ ದಶಕಗಳ ಕಾಲ ಕೆಲಸ ಮಾಡಿ, ಪ್ರಕರಣಗಳನ್ನು ಮೈಮೇಲೆ ಎಳೆದುಕೊಂಡ ಅನೇಕ ನಾಯಕರು.

‘ನ್ಯಾಯಪಥ’ ಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ನಲ್ಲಿ ಪ್ರಕಟವಾಗುತ್ತಿರುವ “ನಾನೇಕೆ ಸಂಘ ಪರಿವಾರ ತೊರೆದೆ” ಲೇಖನ ಸರಣಿಯಲ್ಲಿ ಮಾತನಾಡುವ ಅನೇಕರು ಈ ಕುರಿತು ವಿಸ್ತೃತವಾಗಿ ಮಾತನಾಡುತ್ತಿದ್ದಾರೆ. ಶೂದ್ರ ಸಮುದಾಯಗಳ ಯುವಕರಿಗೆ ಬುದ್ಧಿ ಹೇಳುತ್ತಾ, ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾರೆ.

ಕೋಮುವಾದದ ಪ್ರಯೋಗಶಾಲೆ ಎಂದೇ ಖ್ಯಾತವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಶಕಗಳ ಕಾಲ ಸಂಘ ಪರಿವಾರದೊಂದಿಗೆ ಇದ್ದವರು ಸುನಿಲ್ ಬಜಿಲಕೇರಿ ಹಾಗೂ ಪ್ರವೀಣ್‌ ವಾಲ್ಕೆ. ಇತ್ತೀಚೆಗೆ ’ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಅವರುಈ ನಾಯಕರು ಹೇಗೆ ಸಂಘಪರಿವಾರದ ನಾಯಕರು ಬಡ ಹುಡುಗರನ್ನು ಬಳಸಿಕೊಳ್ಳುತ್ತಾರೆ ಎಂದು ವಿವರಿಸಿದ್ದರು.

“ಹಿಂದೂ ಧರ್ಮದ ಉಳಿವಿಗೆ ಸಂಘಟನೆಯ ಅಗತ್ಯವಿಲ್ಲ. ನಮ್ಮ ನಮ್ಮ ಮನೆಯಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿದರೆ, ಹಿಂದೂ ಧರ್ಮ ಸುಧಾರಿಸಿ ಉಳಿಯುತ್ತದೆ. ಯಾವುದೇ ರಾಜಕೀಯ ನಾಯಕರ ಮಕ್ಕಳ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಇಲ್ಲ. ಇಲ್ಲಿನ ಕಾರ್ಯಕರ್ತರು, ಕೆಳವರ್ಗದ ಹುಡುಗರು ಮಾತ್ರ ಕೋರ್ಟ್ ಮೆಟ್ಟಿಲೇರುತ್ತಾರೆ. ಮೇಲ್ವರ್ಗದ ಹುಡುಗರಿಗೆ ಸಜೆಯಾಗಿದ್ದನ್ನಾಗಲೀ, ಪ್ರಕರಣ ದಾಖಲಾಗಿದ್ದಾಗಲೀ ನಾವು ನೋಡಲಿಲ್ಲ. ಪೂಜಾರಿಗಳು, ಶೆಟ್ಟಿಗಳು ಈ ಥರದ ಸಮುದಾಯಗಳೇ ಬಲಿಪಶುಗಳಾಗಿರುತ್ತವೆ. ಈ ಜನಾಂಗಗಳ ಜೀವನವನ್ನು ಹಾಳು ಮಾಡುವುದೇ ಇವರ ಉದ್ದೇಶ. ಇವರಿಂದ ದೇಶ ಉದ್ಧಾರವಾಗುವುದಿಲ್ಲ. ದೇಶ ಉದ್ಧಾರದ ಬ್ಯಾನರ್ ಹಾಕಿಕೊಂಡು ದೇಶವನ್ನು ’ಲಗಾಡಿ’ ತೆಗೆಯುತ್ತಿದ್ದಾರೆ” ಎಂದಿದ್ದರು ಬಜರಂಗದಳ ಮಾಜಿ ನಾಯಕ ಪ್ರವೀಣ್ ವಾಲ್ಕೆ.

“ಒಬ್ಬ ಹುಡುಗ ಮೊದಲ ಬಾರಿಗೆ ಜೈಲಿಗೆ ಹೋದಾಗ ಸಂಘ ಪರಿವಾರದಲ್ಲಿ ಬಹಳ ಮುರ್ಯಾದೆ ಕೊಡಲಾಗುತ್ತದೆ. ಮತ್ತೆಮತ್ತೆ ಇದೇ ರೀತಿ ಗಲಾಟೆಯಾಯಿತೆಂದರೆ ಅವನನ್ನು ಸಂಘಟನೆಯವರು ಹಿಂದಕ್ಕೆ ಹಾಕುತ್ತಾರೆ. ಹಿಂದೂ ಆಗಲಿ, ಮುಸ್ಲಿಂ ಆಗಲೀ- ದಕ್ಷಿಣ ಕನ್ನಡ ಜಿಲ್ಲೆ ಗ್ಯಾಂಗ್ ಕಟ್ಟಿ ಎದುರುಬದುರಾಗಿಸಲು ಒಂದು ಕಾರ್ಖಾನೆಯಂತಾಗಿದೆ. ಯುವಕರನ್ನು ರೌಡಿಸಂ ಕಾರ್ಖಾನೆಗೆ ಹಿಂದೂ ಮುಸ್ಲಿಂ ಧರ್ಮಗಳ ಕಟ್ಟರ್ ಸಂಘಟನೆಗಳು ದೂಡುತ್ತಿವೆ” ಎಂಬುದು ವಾಲ್ಕೆಯವರ ಅಭಿಪ್ರಾಯ. (ಪ್ರವೀಣ್ ವಾಲ್ಕೆ ಅವರ ಪೂರ್ಣ ಲೇಖನವನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ)

ಸುನಿಲ್‌ ಬಜಿಲಕೇರಿಯವರ ಅನುಭವಗಳು ಇದಕ್ಕಿಂತ ಭಿನ್ನವಾಗಿರಲಿಲ್ಲ. ಹಿಂದುತ್ವದಿಂದ ಬಂಧುತ್ವದ ಕಡೆಗೆ ಹೊರಟಿರುವ ಅವರು, “ಕೇರಳದಿಂದ ಬರುವ ಮುಸ್ಲಿಂ ಯುವಕರು ಹಿಂದೂ ಹುಡುಗಿಯರನ್ನು ಮದುವೆಯಾದಾಗ ಹಿಂದುತ್ವ, ಸಂಘಟನೆ, ಧರ್ಮ ಎನ್ನುತ್ತಾ ಆರ್‌ಎಸ್‌ಎಸ್, ಭಜರಂಗದಳಗಳ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ನಾಯಕರು ಮಾತ್ರ ನಮ್ಮನ್ನು ಬಳಕೆ ಮಾಡಿಕೊಳ್ಳುತ್ತಿದ್ದರು ಎನ್ನುವುದು ತಿಳಿಯುತ್ತಾ ಹೋಯಿತು. ಚುನಾವಣಾ ಸಮಯದಲ್ಲಿ ಕಾರ್ಯಕರ್ತರ ಕೊಲೆಯನ್ನು ಮಾಡೋದೋ, ಮಾಡಿಸುವಂತಹದ್ದೋ ಆಗುತ್ತದೆ. ಚುನಾವಣೆ ನಡೆದ ಬಳಿಕ ಎಲ್ಲರೂ ಒಟ್ಟಿಗೆ ಬಾಳೋಣ ಎನ್ನುತ್ತಾರೆ. ಚುನಾವಣೆ ಪ್ರಾರಂಭವಾದ ಕೂಡಲೇ ಕೊಲೆಗಳು ಇಲ್ಲಿ ಅನಿವಾರ್ಯವಾಗುತ್ತಿತ್ತು. ಇದನ್ನೆಲ್ಲ ನೋಡಿನೋಡಿ ಬೇಸರವಾಯಿತು. ಹಿಂದೂ ಸಂಘಟನೆಗಳಲ್ಲಿ ದುಡಿದು ಏನೂ ಪ್ರಯೋಜನವಿಲ್ಲ. ಅವರು ರಾಜಕೀಯಕ್ಕಾಗಿ ಹೀಗೆ ಮಾಡುತ್ತಿದ್ದಾರೆ. ನಮಗೆ ರಾಜಕೀಯ ಬೇಡ. ನಾವ್ಯಾಕೆ ಒಂದಾಗಿ ಬದುಕಬಾರದು? ನಮ್ಮ ಮಂಗಳೂರಿನಲ್ಲಿ ಶಾಂತಿ ಏಕೆ ನೆಲೆಸಬಾರದು? ಎಂದು ಯೋಚಿಸಿ ’ಹಿಂದುತ್ವದಿಂದ ಬಂಧುತ್ವ’ ಪರಿಕಲ್ಪನೆಯಲ್ಲಿ ಸಮಾನ ಮನಸ್ಕರು ಸೇರಿ ಜಾಗೃತಿ ಮೂಡಿಸಲು ಮುಂದಾದೆವು. ’ಹಿಂದುತ್ವದೊಂದಿಗೆ ಬಂಧುತ್ವ’ ನಮ್ಮ ಮುಂದಿನ ಹೆಜ್ಜೆಯಾಯಿತು” ಎನ್ನುತ್ತಾರೆ ಸುನಿಲ್.

“ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಹಿಂದುತ್ವದ ಪ್ರಯೋಗಶಾಲೆ. ಈ ಜಿಲ್ಲೆಯಲ್ಲಿ ಬಹುಸಂಖ್ಯಾತರೆಂದರೆ ಬಿಲ್ಲವರು. ಆದರೆ ಈ ಸಮುದಾಯದ ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅದನ್ನೇ ಬಿಜೆಪಿಯ ಸಂಘಪರಿವಾರದ ನಾಯಕರು ಬಳಸಿಕೊಂಡರು. ಪೇಂಟರ್ ಆಗಿರಬಹುದು, ವೆಲ್ಡರ್ ಆಗಿರಬಹುದು, ಸಣ್ಣ ಸಣ್ಣ ಕೆಲಸ ಮಾಡುವವರನ್ನೆಲ್ಲ ಹಿಂದುತ್ವದ ಬಲೆಯೊಳಗೆ ಹಾಕಿ ಗಲಾಟೆ ಮಾಡಿಸುತ್ತಾರೆ. ಜೈಲಿನಲ್ಲಿ ಇರುವ ಶೇ.90 ಜನರು ಬಿಲ್ಲವರು. ಇದೇನೂ ಈ ರೀತಿ ಮಾಡುತ್ತಿದ್ದಾರೆ? ರಾಜಕೀಯದಲ್ಲಿ ಒಳ್ಳೆಯ ಹುದ್ದೆಗಳಲ್ಲಿ ಇರುವವರೆಲ್ಲ ಮೇಲ್ವರ್ಗದವರಿಗೆ ಮೀಸಲು, ಗಲಾಟೆ ಮಾಡಿ ಜೈಲಿನಲ್ಲಿ ಇರುವವರು ಮಾತ್ರ ಹಿಂದುಳಿದ ವರ್ಗದ ಯುವಕರು! ಇದೆಲ್ಲ ನೋವು ನೀಡಿತು” ಎನ್ನುತ್ತಾರೆ ಸುನಿಲ್‌ ಬಜಿಲಕೇರಿ. (ಇವರ ಲೇಖನವನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ)

ಚುನಾವಣೆ ಹತ್ತಿರವಾಗುತ್ತಿವೆ. ಎಲ್ಲೆಡೆ ಕೋಮುದ್ವೇಷ ಹೆಚ್ಚುತ್ತಿವೆ. ಯುವಕರನ್ನು ಜೈಲಿಗೆ ತಳ್ಳುವ ಕೆಲಸಗಳು ನಡೆಯುತ್ತಿವೆ. ರಾಜಕಾರಣಿಗಳ ದಾಳಕ್ಕೆ ಬಡ ಸಮುದಾಯಗಳ ಯುವಕರು ಬಲಿಪಶುಗಳಾಗುವುದು ತಪ್ಪಬೇಕಿದೆ ಎಂಬುದು ಪ್ರಜ್ಞಾವಂತರ ಆಶಯ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...