Homeಕರ್ನಾಟಕದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ದೇಶಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ: ಮುಸ್ಲಿಂ ಬಾಲಕಿಯರನ್ನು ಬೆದರಿಸಿದ ಯುವಕರಿಗೆ ಬಿಜೆಪಿ ಮುಖಂಡನ ಶ್ಲಾಘನೆ

ಸಂಘ ಪರಿವಾರ ತೊರೆದ ಮುಖಂಡರ ಅಭಿಪ್ರಾಯಗಳು ಬಿಜೆಪಿ ನಾಯಕರ ಇಂತಹ ಹೇಳಿಕೆಗಳಿಗೆ ತದ್ವಿರುದ್ಧವಾಗಿವೆ.

- Advertisement -
- Advertisement -

ಇಬ್ಬರು ಮುಸ್ಲಿಂ ಯುವತಿಯರಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಿ ಎರಡು ವಾರ ಜೈಲುವಾಸ ಅನುಭವಿಸಿದ ಬಳಿಕ ಡಿಸೆಂಬರ್ 4ರ ಸಂಜೆ ಇಬ್ಬರು ಕೈದಿಗಳು ಕೊಡಗು ಜಿಲ್ಲೆಯ ಮಡಿಕೇರಿ ಜಿಲ್ಲಾ ಕಾರಾಗೃಹದಿಂದ ಹೊರ ಬಂದರು.

ಅವರನ್ನು ಭೇಟಿಯಾಗಲು ಜೈಲಿನ ಹೊರಗೆ ಒಂದು ಸಣ್ಣ ಗುಂಪು ಜಮಾಯಿಸಿತ್ತು. ಜೈಲಿನಿಂದ ಬಿಡುಗಡೆಯಾದ ಯುವಕರನ್ನು ಶನಿವಾರಸಂತೆಗೆ ಕರೆದೊಯ್ಯಲಾಯಿತು. ಅವರಿಗೆ ಕೇಸರಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಬಿಜೆಪಿ ಮುಖಂಡ ಎಸ್‌.ಎನ್.ರಘು ಅವರು ಈ ಯುವಕರೊಂದಿಗೆ ಫೋಟೋ ತೆಗೆಸಿಕೊಂಡರು.

“ಯುವಕರು ಧರ್ಮದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರದ ಆಶೀರ್ವಾದ ಅವರಿಗಿದೆ. ಈ ಯುವಕರ ಏಳಿಗೆಗೆ ದೇಶ ಸಹಾಯ ಮಾಡುತ್ತದೆ” ಎಂದ ರಘು ಅವರು, ಜೈಲಿನಿಂದ ಬಿಡುಗಡೆಯಾಗಿ ಬಂದ ಯುವಕರನ್ನು ಬೆಂಬಲಿಸಿದರು.

ಒಂದು ವಾರದ ಹಿಂದೆ ರಘು ಅವರು ಈ ಯುವಕರ ಕುಟುಂಬವನ್ನು ಭೇಟಿ ಮಾಡಿ ಭರವಸೆ ನೀಡಿದ್ದರು. “ನಾವು ನಿಮ್ಮ ಮಗನನ್ನು ಮನೆಗೆ ಕರೆತರುತ್ತೇವೆ. ಅವರು ರಾಷ್ಟ್ರಕ್ಕಾಗಿ ಇದನ್ನು ಮಾಡಿದ್ದಾರೆ. ಅವರು ತಮ್ಮ ಧರ್ಮಕ್ಕಾಗಿ ಈ ಕೆಲಸವನ್ನು ಮಾಡಿದ್ದಾರೆ. ನೀವು ಏನನ್ನೂ ಖರ್ಚು ಮಾಡಬೇಕಾಗಿಲ್ಲ, ನಾವು ಅದನ್ನು ನೋಡಿಕೊಳ್ಳುತ್ತೇವೆ” ಎಂದಿದ್ದರು ರಘು.

ನವೆಂಬರ್ 18ರಂದು ಶನಿವಾರಸಂತೆಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕಿಯರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪ್ರಜ್ವಲ್ ಮತ್ತು ಕೌಶಿಕ್ ಎಂಬ ಇಬ್ಬರು ಯುವಕರನ್ನು ಬಂಧಿಸಲಾಗಿತ್ತು. ಈ ಮುಸ್ಲಿಂ ಬಾಲಕಿಯರು ಬುರ್ಖಾವನ್ನು ಹಸ್ತಾಂತರಿಸಿದ ಆರೋಪ ಮಾಡಿಈ ಬಾಲಕಿಯರ ಮೇಲೆ ದಾಳಿ ಮಾಡಲು ಯತ್ನಿಸಿದ 30 ಯುವಕರ ಗುಂಪಿನ ಭಾಗವಾಗಿದ್ದರು ಪ್ರಜ್ವಲ್‌ ಮತ್ತು ಕೌಶಿಕ್‌.

ಒಂದು ತಿಂಗಳಿನಿಂದ ಕೊಡಗಿನಲ್ಲಿ ವರದಿಯಾದ ಕೋಮು ದ್ವೇಷದ ಅಪರಾಧಗಳ ಸರಣಿಯಲ್ಲಿ ಈ ಘಟನೆ ಇತ್ತೀಚಿನದು. ಶಾಲೆಗೆ ಹೋಗುವ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ವ್ಯಕ್ತಿಗಳಿಗೆ ಸಿಕ್ಕಿರುವ ಬೆಂಬಲ ಕೊಡಗು ಜಿಲ್ಲೆಯ ಪ್ರಜ್ಞಾವಂತರಲ್ಲಿ ಆತಂಕ ತಂದಿದೆ.

ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

PC: thenewsminute.com

ಕೊಡಗು ಜಿಲ್ಲೆಯಲ್ಲಿ ಮತೀಯ ಗಲಭೆಗಳು ಇನ್ನಿಲ್ಲದಂತೆ ಹಚ್ಚಾಗುತ್ತಿವೆ. ಯುವಕರು ಹಿಂದುತ್ವದ ರಾಜಕೀಯ ದಾಳವಾಗುತ್ತಿದ್ದಾರೆ. ಗಲಭೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಹಿಂದುತ್ವದಂತೆಯೇ ಮುಸ್ಲಿಂ ಹೆಸರಲ್ಲಿನ ಮತೀಯವಾಗಿ ಸಂಘಟನೆಗಳೂ ಬಲವಾಗುತ್ತಿವೆ. ಆದರೆ ಹಿಂದುತ್ವ ಶಕ್ತಿಗಳು ಅಧಿಕಾರದಲ್ಲಿ ಇರುವುದರಿಂದ ಹಿಂದುತ್ವ ಸಂಘಟನೆಗಳಿಗೆ ಹೆಚ್ಚಿನ ಬಲ ಬಂದಂತೆ ಕಾಣುತ್ತಿದೆ.

ಆದರೆ ಇಂತಹ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಪ್ರಕರಣಗಳನ್ನು ಮೈಮೇಲೆ ಎಳೆದುಕೊಳ್ಳುವ ಯುವಕರ ಕುರಿತು ವಿಷಾದ ವ್ಯಕ್ತಪಡಿಸುತ್ತಾರೆ ಹಿಂದುತ್ವಕ್ಕಾಗಿ ದಶಕಗಳ ಕಾಲ ಕೆಲಸ ಮಾಡಿ, ಪ್ರಕರಣಗಳನ್ನು ಮೈಮೇಲೆ ಎಳೆದುಕೊಂಡ ಅನೇಕ ನಾಯಕರು.

‘ನ್ಯಾಯಪಥ’ ಪತ್ರಿಕೆ ಹಾಗೂ ‘ನಾನುಗೌರಿ.ಕಾಂ’ನಲ್ಲಿ ಪ್ರಕಟವಾಗುತ್ತಿರುವ “ನಾನೇಕೆ ಸಂಘ ಪರಿವಾರ ತೊರೆದೆ” ಲೇಖನ ಸರಣಿಯಲ್ಲಿ ಮಾತನಾಡುವ ಅನೇಕರು ಈ ಕುರಿತು ವಿಸ್ತೃತವಾಗಿ ಮಾತನಾಡುತ್ತಿದ್ದಾರೆ. ಶೂದ್ರ ಸಮುದಾಯಗಳ ಯುವಕರಿಗೆ ಬುದ್ಧಿ ಹೇಳುತ್ತಾ, ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾರೆ.

ಕೋಮುವಾದದ ಪ್ರಯೋಗಶಾಲೆ ಎಂದೇ ಖ್ಯಾತವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಶಕಗಳ ಕಾಲ ಸಂಘ ಪರಿವಾರದೊಂದಿಗೆ ಇದ್ದವರು ಸುನಿಲ್ ಬಜಿಲಕೇರಿ ಹಾಗೂ ಪ್ರವೀಣ್‌ ವಾಲ್ಕೆ. ಇತ್ತೀಚೆಗೆ ’ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಅವರುಈ ನಾಯಕರು ಹೇಗೆ ಸಂಘಪರಿವಾರದ ನಾಯಕರು ಬಡ ಹುಡುಗರನ್ನು ಬಳಸಿಕೊಳ್ಳುತ್ತಾರೆ ಎಂದು ವಿವರಿಸಿದ್ದರು.

“ಹಿಂದೂ ಧರ್ಮದ ಉಳಿವಿಗೆ ಸಂಘಟನೆಯ ಅಗತ್ಯವಿಲ್ಲ. ನಮ್ಮ ನಮ್ಮ ಮನೆಯಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿದರೆ, ಹಿಂದೂ ಧರ್ಮ ಸುಧಾರಿಸಿ ಉಳಿಯುತ್ತದೆ. ಯಾವುದೇ ರಾಜಕೀಯ ನಾಯಕರ ಮಕ್ಕಳ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಇಲ್ಲ. ಇಲ್ಲಿನ ಕಾರ್ಯಕರ್ತರು, ಕೆಳವರ್ಗದ ಹುಡುಗರು ಮಾತ್ರ ಕೋರ್ಟ್ ಮೆಟ್ಟಿಲೇರುತ್ತಾರೆ. ಮೇಲ್ವರ್ಗದ ಹುಡುಗರಿಗೆ ಸಜೆಯಾಗಿದ್ದನ್ನಾಗಲೀ, ಪ್ರಕರಣ ದಾಖಲಾಗಿದ್ದಾಗಲೀ ನಾವು ನೋಡಲಿಲ್ಲ. ಪೂಜಾರಿಗಳು, ಶೆಟ್ಟಿಗಳು ಈ ಥರದ ಸಮುದಾಯಗಳೇ ಬಲಿಪಶುಗಳಾಗಿರುತ್ತವೆ. ಈ ಜನಾಂಗಗಳ ಜೀವನವನ್ನು ಹಾಳು ಮಾಡುವುದೇ ಇವರ ಉದ್ದೇಶ. ಇವರಿಂದ ದೇಶ ಉದ್ಧಾರವಾಗುವುದಿಲ್ಲ. ದೇಶ ಉದ್ಧಾರದ ಬ್ಯಾನರ್ ಹಾಕಿಕೊಂಡು ದೇಶವನ್ನು ’ಲಗಾಡಿ’ ತೆಗೆಯುತ್ತಿದ್ದಾರೆ” ಎಂದಿದ್ದರು ಬಜರಂಗದಳ ಮಾಜಿ ನಾಯಕ ಪ್ರವೀಣ್ ವಾಲ್ಕೆ.

“ಒಬ್ಬ ಹುಡುಗ ಮೊದಲ ಬಾರಿಗೆ ಜೈಲಿಗೆ ಹೋದಾಗ ಸಂಘ ಪರಿವಾರದಲ್ಲಿ ಬಹಳ ಮುರ್ಯಾದೆ ಕೊಡಲಾಗುತ್ತದೆ. ಮತ್ತೆಮತ್ತೆ ಇದೇ ರೀತಿ ಗಲಾಟೆಯಾಯಿತೆಂದರೆ ಅವನನ್ನು ಸಂಘಟನೆಯವರು ಹಿಂದಕ್ಕೆ ಹಾಕುತ್ತಾರೆ. ಹಿಂದೂ ಆಗಲಿ, ಮುಸ್ಲಿಂ ಆಗಲೀ- ದಕ್ಷಿಣ ಕನ್ನಡ ಜಿಲ್ಲೆ ಗ್ಯಾಂಗ್ ಕಟ್ಟಿ ಎದುರುಬದುರಾಗಿಸಲು ಒಂದು ಕಾರ್ಖಾನೆಯಂತಾಗಿದೆ. ಯುವಕರನ್ನು ರೌಡಿಸಂ ಕಾರ್ಖಾನೆಗೆ ಹಿಂದೂ ಮುಸ್ಲಿಂ ಧರ್ಮಗಳ ಕಟ್ಟರ್ ಸಂಘಟನೆಗಳು ದೂಡುತ್ತಿವೆ” ಎಂಬುದು ವಾಲ್ಕೆಯವರ ಅಭಿಪ್ರಾಯ. (ಪ್ರವೀಣ್ ವಾಲ್ಕೆ ಅವರ ಪೂರ್ಣ ಲೇಖನವನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ)

ಸುನಿಲ್‌ ಬಜಿಲಕೇರಿಯವರ ಅನುಭವಗಳು ಇದಕ್ಕಿಂತ ಭಿನ್ನವಾಗಿರಲಿಲ್ಲ. ಹಿಂದುತ್ವದಿಂದ ಬಂಧುತ್ವದ ಕಡೆಗೆ ಹೊರಟಿರುವ ಅವರು, “ಕೇರಳದಿಂದ ಬರುವ ಮುಸ್ಲಿಂ ಯುವಕರು ಹಿಂದೂ ಹುಡುಗಿಯರನ್ನು ಮದುವೆಯಾದಾಗ ಹಿಂದುತ್ವ, ಸಂಘಟನೆ, ಧರ್ಮ ಎನ್ನುತ್ತಾ ಆರ್‌ಎಸ್‌ಎಸ್, ಭಜರಂಗದಳಗಳ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ನಾಯಕರು ಮಾತ್ರ ನಮ್ಮನ್ನು ಬಳಕೆ ಮಾಡಿಕೊಳ್ಳುತ್ತಿದ್ದರು ಎನ್ನುವುದು ತಿಳಿಯುತ್ತಾ ಹೋಯಿತು. ಚುನಾವಣಾ ಸಮಯದಲ್ಲಿ ಕಾರ್ಯಕರ್ತರ ಕೊಲೆಯನ್ನು ಮಾಡೋದೋ, ಮಾಡಿಸುವಂತಹದ್ದೋ ಆಗುತ್ತದೆ. ಚುನಾವಣೆ ನಡೆದ ಬಳಿಕ ಎಲ್ಲರೂ ಒಟ್ಟಿಗೆ ಬಾಳೋಣ ಎನ್ನುತ್ತಾರೆ. ಚುನಾವಣೆ ಪ್ರಾರಂಭವಾದ ಕೂಡಲೇ ಕೊಲೆಗಳು ಇಲ್ಲಿ ಅನಿವಾರ್ಯವಾಗುತ್ತಿತ್ತು. ಇದನ್ನೆಲ್ಲ ನೋಡಿನೋಡಿ ಬೇಸರವಾಯಿತು. ಹಿಂದೂ ಸಂಘಟನೆಗಳಲ್ಲಿ ದುಡಿದು ಏನೂ ಪ್ರಯೋಜನವಿಲ್ಲ. ಅವರು ರಾಜಕೀಯಕ್ಕಾಗಿ ಹೀಗೆ ಮಾಡುತ್ತಿದ್ದಾರೆ. ನಮಗೆ ರಾಜಕೀಯ ಬೇಡ. ನಾವ್ಯಾಕೆ ಒಂದಾಗಿ ಬದುಕಬಾರದು? ನಮ್ಮ ಮಂಗಳೂರಿನಲ್ಲಿ ಶಾಂತಿ ಏಕೆ ನೆಲೆಸಬಾರದು? ಎಂದು ಯೋಚಿಸಿ ’ಹಿಂದುತ್ವದಿಂದ ಬಂಧುತ್ವ’ ಪರಿಕಲ್ಪನೆಯಲ್ಲಿ ಸಮಾನ ಮನಸ್ಕರು ಸೇರಿ ಜಾಗೃತಿ ಮೂಡಿಸಲು ಮುಂದಾದೆವು. ’ಹಿಂದುತ್ವದೊಂದಿಗೆ ಬಂಧುತ್ವ’ ನಮ್ಮ ಮುಂದಿನ ಹೆಜ್ಜೆಯಾಯಿತು” ಎನ್ನುತ್ತಾರೆ ಸುನಿಲ್.

“ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಹಿಂದುತ್ವದ ಪ್ರಯೋಗಶಾಲೆ. ಈ ಜಿಲ್ಲೆಯಲ್ಲಿ ಬಹುಸಂಖ್ಯಾತರೆಂದರೆ ಬಿಲ್ಲವರು. ಆದರೆ ಈ ಸಮುದಾಯದ ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅದನ್ನೇ ಬಿಜೆಪಿಯ ಸಂಘಪರಿವಾರದ ನಾಯಕರು ಬಳಸಿಕೊಂಡರು. ಪೇಂಟರ್ ಆಗಿರಬಹುದು, ವೆಲ್ಡರ್ ಆಗಿರಬಹುದು, ಸಣ್ಣ ಸಣ್ಣ ಕೆಲಸ ಮಾಡುವವರನ್ನೆಲ್ಲ ಹಿಂದುತ್ವದ ಬಲೆಯೊಳಗೆ ಹಾಕಿ ಗಲಾಟೆ ಮಾಡಿಸುತ್ತಾರೆ. ಜೈಲಿನಲ್ಲಿ ಇರುವ ಶೇ.90 ಜನರು ಬಿಲ್ಲವರು. ಇದೇನೂ ಈ ರೀತಿ ಮಾಡುತ್ತಿದ್ದಾರೆ? ರಾಜಕೀಯದಲ್ಲಿ ಒಳ್ಳೆಯ ಹುದ್ದೆಗಳಲ್ಲಿ ಇರುವವರೆಲ್ಲ ಮೇಲ್ವರ್ಗದವರಿಗೆ ಮೀಸಲು, ಗಲಾಟೆ ಮಾಡಿ ಜೈಲಿನಲ್ಲಿ ಇರುವವರು ಮಾತ್ರ ಹಿಂದುಳಿದ ವರ್ಗದ ಯುವಕರು! ಇದೆಲ್ಲ ನೋವು ನೀಡಿತು” ಎನ್ನುತ್ತಾರೆ ಸುನಿಲ್‌ ಬಜಿಲಕೇರಿ. (ಇವರ ಲೇಖನವನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ)

ಚುನಾವಣೆ ಹತ್ತಿರವಾಗುತ್ತಿವೆ. ಎಲ್ಲೆಡೆ ಕೋಮುದ್ವೇಷ ಹೆಚ್ಚುತ್ತಿವೆ. ಯುವಕರನ್ನು ಜೈಲಿಗೆ ತಳ್ಳುವ ಕೆಲಸಗಳು ನಡೆಯುತ್ತಿವೆ. ರಾಜಕಾರಣಿಗಳ ದಾಳಕ್ಕೆ ಬಡ ಸಮುದಾಯಗಳ ಯುವಕರು ಬಲಿಪಶುಗಳಾಗುವುದು ತಪ್ಪಬೇಕಿದೆ ಎಂಬುದು ಪ್ರಜ್ಞಾವಂತರ ಆಶಯ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....