Homeಕರ್ನಾಟಕ‘ಅಳೆದು ಸುಸ್ತಾಯ್ತು; ಲಂಚ ಕೇಳುತ್ತಿದ್ದಾರೆ, ವಿಷ ಕುಡಿಯುತ್ತೇವೆ, ದಯಾಮರಣ ನೀಡಿ’: ರಾಷ್ಟ್ರಪತಿಗೆ ಪತ್ರ ಬರೆದ ಶಿವಮೊಗ್ಗದ...

‘ಅಳೆದು ಸುಸ್ತಾಯ್ತು; ಲಂಚ ಕೇಳುತ್ತಿದ್ದಾರೆ, ವಿಷ ಕುಡಿಯುತ್ತೇವೆ, ದಯಾಮರಣ ನೀಡಿ’: ರಾಷ್ಟ್ರಪತಿಗೆ ಪತ್ರ ಬರೆದ ಶಿವಮೊಗ್ಗದ ದಂಪತಿ

- Advertisement -
- Advertisement -

‘ಆಸ್ತಿಯನ್ನು ಕನ್ವರ್ಸನ್ ಮಾಡಲು ಅಧಿಕಾರಿಗಳು ಲಂಚ ಕೇಳುತ್ತಿದ್ದು, ಸರ್ಕಾರಿ ಕಚೇರಿಗೆ ಅಳೆದು ಸುಸ್ತಾಗಿದೆ. ಹೀಗಾಗಿ ನಾವು ವಿಷ ಕುಡಿಯುತ್ತೇವೆ, ಸರ್ಕಾರವೇ ನಮಗೆ ಮರಣದಂಡನೆ ನೀಡಲಿ’ ಎಂದು ಶಿವಮೊಗ್ಗ ಜಿಲ್ಲೆಯ ಕುಗ್ವೆಯ ದಂಪತಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಕುಗ್ವೆ ನಿವಾಸಿಗಳಾದ ಶ್ರೀಕಾಂತ್‌ ನಾಯ್ಕ್‌ ಮತ್ತು ಸುಜಾತಾ ನಾಯ್ಕ್‌ ಅವರು ತಮ್ಮ ಆಸ್ತಿಯನ್ನು ಅಭಿವೃದ್ಧಿ ಪಡಿಸಲು ಉದ್ದೇಶಿಸಿದ್ದರು. ಆದರೆ ಸ್ಥಳೀಯ ಅಧಿಕಾರಿಗಳು ಇದಕ್ಕೆ ಅವಕಾಶ ನೀಡದೆ, ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಂಪತಿಗಳು ವಿಷ ಸೇವಿಸಲು ದಯಾಮರಣಕ್ಕೆ ಅನುಮತಿ ನೀಡುವಂತೆ ಕೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಡಿಯೊದಲ್ಲಿ ಮಾತನಾಡಿರುವ ಸುಜಾತಾ ನಾಯ್ಕ್‌‌, “ಕೆಲಸ ಮಾಡಿಕೊಡುತ್ತೇನೆ, ಫೋನ್‌ ಮಾಡುತ್ತೇನೆ ಎಂದು ಹೇಳುತ್ತಾರೆ. ಅಳೆದು ಅಳೆದು ನಮಗೆ ಸುಸ್ತಾಯಿತು. ಇದೀಗ ಇಲ್ಲಿ ಏಸಿ ಆಫಿಸಿ ದಯಾಮರಣ ಅರ್ಜಿ ಹಾಕಲು ಬಂದಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಹ: ಅಭಿವೃದ್ಧಿಯ ಭ್ರಷ್ಟಾಚಾರ ಮತ್ತು ಅಸಂಬದ್ಧತೆಗಳಿಂದ ಬೆಂಗಳೂರನ್ನು ಕಾಪಾಡಿ!

ನಂತರ ವಿಡಿಯೊದಲ್ಲಿ ಮಾತನಾಡಿರುವ ಶ್ರೀಕಾಂತ್‌ ನಾಯ್ಕ್‌, “ರಾತ್ರಿ ಹಗಲು ಧರಣಿ ಮಾಡಿದ್ದೇವೆ, ಪುಷ್ಪಾ ಕಂಬಾರ್‌ ಎಂಬ ಅಧಿಕಾರಿಗೆ ನಾವು ಹೋದರೆ ಪುರುಸೊತ್ತು ಇಲ್ಲ ಎನ್ನುತ್ತಾರೆ. ಆದರೆ ಬೇರೆಯವರ ಜೊತೆಗೆ ಸಂಜೆ ಏಳು ಗಂಟೆಯ ನಂತರ ಲೈಟ್‌ ಆಫ್‌ ಮಾಡಿಕೊಂಡು ಗಂಟೆಗಟ್ಟಲೆ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

“ಅಧಿಕಾರಿಯು ನಮ್ಮ ಜೊತೆಗೆ ಮಾತನಾಡುತ್ತಿಲ್ಲ. ನಮ್ಮನ್ನು ಬಿಕಾರಿಗಳ ಹಾಗೆ ನಡೆಸಿಕೊಳ್ಳುತ್ತಿದ್ದಾರೆ. ನಮ್ಮನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ, ಗೆಟೌಟ್‌ ಎನ್ನುತಾರೆ. ನಾವು ಬಡಕುಟುಂಬದಿಂದ ಬಂದಿದ್ದು, ವಿದ್ಯಾವಂತರು ಕೂಡಾ ಅಲ್ಲ. ಬೆಳಿಗ್ಗೆಯಿಂದ ಸಾಯಂಕಾಲದ ವರೆಗೆ ಕಂಬಳಿ ಹಾಕಿಕೊಂಡು ಕೂತು ಕಾದರೂ ಅವರು ನಮ್ಮನ್ನು ಮಾತನಾಡಿಸುವುದಿಲ್ಲ. ನಾವು ವಿಷ ಕುಡಿಯುವ ಪರಿಸ್ಥಿತಿಗೆ ಬಂದು ತಲುಪಿದ್ದೇವೆ. ನಮಗೆ ಸರ್ಕಾರದ ಕಡೆಯಿಂದ ಮರಣದಂಡನೆ ಕೊಡಿ” ಎಂದು ಅವರು ಕೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...