Homeಕರ್ನಾಟಕ‘ಅಳೆದು ಸುಸ್ತಾಯ್ತು; ಲಂಚ ಕೇಳುತ್ತಿದ್ದಾರೆ, ವಿಷ ಕುಡಿಯುತ್ತೇವೆ, ದಯಾಮರಣ ನೀಡಿ’: ರಾಷ್ಟ್ರಪತಿಗೆ ಪತ್ರ ಬರೆದ ಶಿವಮೊಗ್ಗದ...

‘ಅಳೆದು ಸುಸ್ತಾಯ್ತು; ಲಂಚ ಕೇಳುತ್ತಿದ್ದಾರೆ, ವಿಷ ಕುಡಿಯುತ್ತೇವೆ, ದಯಾಮರಣ ನೀಡಿ’: ರಾಷ್ಟ್ರಪತಿಗೆ ಪತ್ರ ಬರೆದ ಶಿವಮೊಗ್ಗದ ದಂಪತಿ

- Advertisement -
- Advertisement -

‘ಆಸ್ತಿಯನ್ನು ಕನ್ವರ್ಸನ್ ಮಾಡಲು ಅಧಿಕಾರಿಗಳು ಲಂಚ ಕೇಳುತ್ತಿದ್ದು, ಸರ್ಕಾರಿ ಕಚೇರಿಗೆ ಅಳೆದು ಸುಸ್ತಾಗಿದೆ. ಹೀಗಾಗಿ ನಾವು ವಿಷ ಕುಡಿಯುತ್ತೇವೆ, ಸರ್ಕಾರವೇ ನಮಗೆ ಮರಣದಂಡನೆ ನೀಡಲಿ’ ಎಂದು ಶಿವಮೊಗ್ಗ ಜಿಲ್ಲೆಯ ಕುಗ್ವೆಯ ದಂಪತಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಕುಗ್ವೆ ನಿವಾಸಿಗಳಾದ ಶ್ರೀಕಾಂತ್‌ ನಾಯ್ಕ್‌ ಮತ್ತು ಸುಜಾತಾ ನಾಯ್ಕ್‌ ಅವರು ತಮ್ಮ ಆಸ್ತಿಯನ್ನು ಅಭಿವೃದ್ಧಿ ಪಡಿಸಲು ಉದ್ದೇಶಿಸಿದ್ದರು. ಆದರೆ ಸ್ಥಳೀಯ ಅಧಿಕಾರಿಗಳು ಇದಕ್ಕೆ ಅವಕಾಶ ನೀಡದೆ, ಲಂಚ ಕೇಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಂಪತಿಗಳು ವಿಷ ಸೇವಿಸಲು ದಯಾಮರಣಕ್ಕೆ ಅನುಮತಿ ನೀಡುವಂತೆ ಕೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಡಿಯೊದಲ್ಲಿ ಮಾತನಾಡಿರುವ ಸುಜಾತಾ ನಾಯ್ಕ್‌‌, “ಕೆಲಸ ಮಾಡಿಕೊಡುತ್ತೇನೆ, ಫೋನ್‌ ಮಾಡುತ್ತೇನೆ ಎಂದು ಹೇಳುತ್ತಾರೆ. ಅಳೆದು ಅಳೆದು ನಮಗೆ ಸುಸ್ತಾಯಿತು. ಇದೀಗ ಇಲ್ಲಿ ಏಸಿ ಆಫಿಸಿ ದಯಾಮರಣ ಅರ್ಜಿ ಹಾಕಲು ಬಂದಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಹ: ಅಭಿವೃದ್ಧಿಯ ಭ್ರಷ್ಟಾಚಾರ ಮತ್ತು ಅಸಂಬದ್ಧತೆಗಳಿಂದ ಬೆಂಗಳೂರನ್ನು ಕಾಪಾಡಿ!

ನಂತರ ವಿಡಿಯೊದಲ್ಲಿ ಮಾತನಾಡಿರುವ ಶ್ರೀಕಾಂತ್‌ ನಾಯ್ಕ್‌, “ರಾತ್ರಿ ಹಗಲು ಧರಣಿ ಮಾಡಿದ್ದೇವೆ, ಪುಷ್ಪಾ ಕಂಬಾರ್‌ ಎಂಬ ಅಧಿಕಾರಿಗೆ ನಾವು ಹೋದರೆ ಪುರುಸೊತ್ತು ಇಲ್ಲ ಎನ್ನುತ್ತಾರೆ. ಆದರೆ ಬೇರೆಯವರ ಜೊತೆಗೆ ಸಂಜೆ ಏಳು ಗಂಟೆಯ ನಂತರ ಲೈಟ್‌ ಆಫ್‌ ಮಾಡಿಕೊಂಡು ಗಂಟೆಗಟ್ಟಲೆ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

“ಅಧಿಕಾರಿಯು ನಮ್ಮ ಜೊತೆಗೆ ಮಾತನಾಡುತ್ತಿಲ್ಲ. ನಮ್ಮನ್ನು ಬಿಕಾರಿಗಳ ಹಾಗೆ ನಡೆಸಿಕೊಳ್ಳುತ್ತಿದ್ದಾರೆ. ನಮ್ಮನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ, ಗೆಟೌಟ್‌ ಎನ್ನುತಾರೆ. ನಾವು ಬಡಕುಟುಂಬದಿಂದ ಬಂದಿದ್ದು, ವಿದ್ಯಾವಂತರು ಕೂಡಾ ಅಲ್ಲ. ಬೆಳಿಗ್ಗೆಯಿಂದ ಸಾಯಂಕಾಲದ ವರೆಗೆ ಕಂಬಳಿ ಹಾಕಿಕೊಂಡು ಕೂತು ಕಾದರೂ ಅವರು ನಮ್ಮನ್ನು ಮಾತನಾಡಿಸುವುದಿಲ್ಲ. ನಾವು ವಿಷ ಕುಡಿಯುವ ಪರಿಸ್ಥಿತಿಗೆ ಬಂದು ತಲುಪಿದ್ದೇವೆ. ನಮಗೆ ಸರ್ಕಾರದ ಕಡೆಯಿಂದ ಮರಣದಂಡನೆ ಕೊಡಿ” ಎಂದು ಅವರು ಕೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...