Homeಮುಖಪುಟಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು ಎಂದು ಬಿಜೆಪಿ ಶಾಸಕ ಹೇಳಿದ್ದಾರೆ

- Advertisement -
- Advertisement -

“ಅವರು (11 ಜನ ಅತ್ಯಾಚಾರಿಗಳು) ಅಪರಾಧವೆಸಗಿದ್ದಾರೋ ಇಲ್ಲೋ ನಮಗೆ ಗೊತ್ತಿಲ್ಲ. ಆದರೆ ಅವರು ಜೈಲಿನಲ್ಲಿ ಉತ್ತಮವಾಗಿ ನಡೆದುಕೊಂಡರು. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು” ಹೀಗೆ ಹೇಳುವ ಮೂಲಕ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಗುಜರಾತ್‌ನ ಬಿಜೆಪಿ ಶಾಸಕ ಸಿಕೆ ರೌಲ್ಜಿ.

ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗಳ ಬಿಡುಗಡೆ ಕುರಿತು ರಚಿಸಲಾದ ಸಮಿತಿಯಲ್ಲಿದ್ದ ಗೋದ್ರಾ ಕ್ಷೇತ್ರದ ಶಾಸಕ ಅತ್ಯಾಚಾರಿಗಳು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಅಪರಾಧಿಗಳ ಪರ ನಿಂತು ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಮೊಜೊ ಸ್ಟೋರಿ ಚಾನೆಲ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಈ 11 ಜನರ ಕುರಿತು ಅಭಿಪ್ರಾಯಕ್ಕೆ ಬರುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಅದರ ಭಾಗವಾಗಿ ಗುಜರಾತ್ ಸರ್ಕಾರ ರಚಿಸಿದ ಸಮಿತಿಯಲ್ಲಿ ನಾನಿದ್ದೆ. 2002ರಲ್ಲಿ ಏನು ನಡೆಯಿತು ಅದು ನನಗೆ ಗೊತ್ತಿಲ್ಲ. ಆದರೆ ಅವರಿಗೆ ಶಿಕ್ಷೆಯಾದ ನಂತರ ಅವರ ವರ್ತನೆ ಹೇಗಿದೆ? ಜೈಲಿನಲ್ಲಿ ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದರ ಕುರಿತು ಜೈಲರ್‌ಗಳ ಬಳಿ ವಿಚಾರಿಸಿದೆವು. ಅವರು ಜೈಲಿನಲ್ಲಿ ಯಾವುದೇ ಗಲಾಟೆ ಮಾಡಿಲ್ಲ ಎಂದು ತಿಳಿದುಬಂತು” ಎಂದು ಹೇಳಿದ್ದಾರೆ.

ಅತ್ಯಾಚಾರ ಮತ್ತು ಭಯೋತ್ಪಾದನಾ ಕೃತ್ಯಗಳಲ್ಲಿ ಪಾಲ್ಗೊಂಡವರಿಗೆ ಕ್ಷಮಾದಾನ ನೀಡಬಾರದು ಎಂದು ಗೃಹ ಸಚಿವಾಲಯ ಹೇಳಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ “ಅದು ನಮಗೆ ಗೊತ್ತಿಲ್ಲ. ಅವರ ವರ್ತನೆ ಜೈಲಿಗೆ ಹೋಗುವ ಮುಂಚೆ ಹೇಗಿತ್ತು, ಜೈಲಿನಲ್ಲಿ ಹೇಗಿದೆ ಎಂಬುದನ್ನು ಗಮನಿಸಬೇಕು. ಅವರ ಕುಟುಂಬ ಸದಸ್ಯರು ಸಹ ಉತ್ತಮವಾಗಿ ನಡೆದುಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಪ್ರಕರಣದಲ್ಲಿ ಕೆಲವು ಅಮಾಯಕರು ಸಹ ಸೇರಿಕೊಂಡಿದ್ದಾರೆ. ಕೆಲವರು ಮೊದಲಿಂದಲೂ ಉತ್ತಮವಾಗಿ ನಡೆದುಕೊಳ್ಳುತ್ತಿದ್ದರು. ಇದು ಆಕಸ್ಮಿಕವಾಗಿ ಘಟಿಸಿದಾಗ ಎಲ್ಲರೂ ಸಿಕ್ಕಿಕೊಂಡಿದ್ದಾರೆ. ಅವರನ್ನು ಇನ್ನೂ ಹೆಚ್ಚು ದಿನ ಜೈಲಿನಲ್ಲಿ ಇಡುವ ಅಗತ್ಯವಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಅವರನ್ನು ಮೂಲೆಗುಂಪು ಮಾಡುವುದು ಮತ್ತು ಶಿಕ್ಷಿಸುವುದು ಕೆಲವರ ದುರುದ್ದೇಶವೂ ಆಗಿರಬಹುದು,” ಎಂದಿದ್ದಾರೆ.

ಅವರು ಬಿಡುಗಡೆಗೊಂಡಾಗ ಸಿಹಿ ಹಂಚಿ ಸಂಭ್ರಮಿಸಿದ್ದು ಸರಿಯೇ ಎಂಬ ಪ್ರಶ್ನೆಗೆ, “ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ನೋಡುತ್ತಾರೆ. ನ್ಯಾಯಾಲವೇ  ಅವರನ್ನು ಬಿಡುಗಡೆ ಮಾಡಿ ಎಂದು ಹೇಳಿರುವಾಗ ಸಿಹಿ ಹಂಚುವುದರಲ್ಲಿ ತಪ್ಪೇನಿದೆ? ಆದರೆ ಹೂಹಾರ ಹಾಕಿದವರು ನಮ್ಮ ಸಮಿತಿಯವರಲ್ಲ. ಈ ಕುರಿತು ನಾನು ಹೆಚ್ಚು ಹೇಳುವುದಿಲ್ಲ.” ಎಂದು ಉತ್ತರಿಸಿದ್ದಾರೆ.

ಬಿಜೆಪಿ ಸರ್ಕಾರವು ಈ ವಿಷಯದ ಕುರಿತು ರಚಿಸಿದ್ದ ಸಮಿತಿಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಶಾಸಕರಿದ್ದರು ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಪ್ರಶ್ನಿಸಿದ್ದರು. ಬಿಜೆಪಿಯಿಂದ ಸಿ ಕೆ ರಾಲ್ಜಿ ಮತ್ತು ಸುಮನ್ ಚೌಹಾಣ್ ಇದ್ದರೆ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾಗಿರುವ ಮುರಳಿ ಮುಲ್ಚಂದಾನಿ ಅವರು ಸಹ ಸಮಿತಿಯ ಭಾಗವಾಗಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದುದ್ದನ್ನು ಖಂಡಿಸಿದ ಮಾಜಿ ಸಿಎಂ ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯಾಚಾರ ಮಾಡುವವರು ಒಳ್ಳೆಯ ಸಂಸ್ಕಾರ ವಂತರು ಹೇಗಾಗುತ್ತಾರೆ ಎಂ ಎಲ್ ಎ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...