Homeಮುಖಪುಟಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು ಎಂದು ಬಿಜೆಪಿ ಶಾಸಕ ಹೇಳಿದ್ದಾರೆ

- Advertisement -
- Advertisement -

“ಅವರು (11 ಜನ ಅತ್ಯಾಚಾರಿಗಳು) ಅಪರಾಧವೆಸಗಿದ್ದಾರೋ ಇಲ್ಲೋ ನಮಗೆ ಗೊತ್ತಿಲ್ಲ. ಆದರೆ ಅವರು ಜೈಲಿನಲ್ಲಿ ಉತ್ತಮವಾಗಿ ನಡೆದುಕೊಂಡರು. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು” ಹೀಗೆ ಹೇಳುವ ಮೂಲಕ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಗುಜರಾತ್‌ನ ಬಿಜೆಪಿ ಶಾಸಕ ಸಿಕೆ ರೌಲ್ಜಿ.

ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗಳ ಬಿಡುಗಡೆ ಕುರಿತು ರಚಿಸಲಾದ ಸಮಿತಿಯಲ್ಲಿದ್ದ ಗೋದ್ರಾ ಕ್ಷೇತ್ರದ ಶಾಸಕ ಅತ್ಯಾಚಾರಿಗಳು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಅಪರಾಧಿಗಳ ಪರ ನಿಂತು ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಮೊಜೊ ಸ್ಟೋರಿ ಚಾನೆಲ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಈ 11 ಜನರ ಕುರಿತು ಅಭಿಪ್ರಾಯಕ್ಕೆ ಬರುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಅದರ ಭಾಗವಾಗಿ ಗುಜರಾತ್ ಸರ್ಕಾರ ರಚಿಸಿದ ಸಮಿತಿಯಲ್ಲಿ ನಾನಿದ್ದೆ. 2002ರಲ್ಲಿ ಏನು ನಡೆಯಿತು ಅದು ನನಗೆ ಗೊತ್ತಿಲ್ಲ. ಆದರೆ ಅವರಿಗೆ ಶಿಕ್ಷೆಯಾದ ನಂತರ ಅವರ ವರ್ತನೆ ಹೇಗಿದೆ? ಜೈಲಿನಲ್ಲಿ ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದರ ಕುರಿತು ಜೈಲರ್‌ಗಳ ಬಳಿ ವಿಚಾರಿಸಿದೆವು. ಅವರು ಜೈಲಿನಲ್ಲಿ ಯಾವುದೇ ಗಲಾಟೆ ಮಾಡಿಲ್ಲ ಎಂದು ತಿಳಿದುಬಂತು” ಎಂದು ಹೇಳಿದ್ದಾರೆ.

ಅತ್ಯಾಚಾರ ಮತ್ತು ಭಯೋತ್ಪಾದನಾ ಕೃತ್ಯಗಳಲ್ಲಿ ಪಾಲ್ಗೊಂಡವರಿಗೆ ಕ್ಷಮಾದಾನ ನೀಡಬಾರದು ಎಂದು ಗೃಹ ಸಚಿವಾಲಯ ಹೇಳಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ “ಅದು ನಮಗೆ ಗೊತ್ತಿಲ್ಲ. ಅವರ ವರ್ತನೆ ಜೈಲಿಗೆ ಹೋಗುವ ಮುಂಚೆ ಹೇಗಿತ್ತು, ಜೈಲಿನಲ್ಲಿ ಹೇಗಿದೆ ಎಂಬುದನ್ನು ಗಮನಿಸಬೇಕು. ಅವರ ಕುಟುಂಬ ಸದಸ್ಯರು ಸಹ ಉತ್ತಮವಾಗಿ ನಡೆದುಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಪ್ರಕರಣದಲ್ಲಿ ಕೆಲವು ಅಮಾಯಕರು ಸಹ ಸೇರಿಕೊಂಡಿದ್ದಾರೆ. ಕೆಲವರು ಮೊದಲಿಂದಲೂ ಉತ್ತಮವಾಗಿ ನಡೆದುಕೊಳ್ಳುತ್ತಿದ್ದರು. ಇದು ಆಕಸ್ಮಿಕವಾಗಿ ಘಟಿಸಿದಾಗ ಎಲ್ಲರೂ ಸಿಕ್ಕಿಕೊಂಡಿದ್ದಾರೆ. ಅವರನ್ನು ಇನ್ನೂ ಹೆಚ್ಚು ದಿನ ಜೈಲಿನಲ್ಲಿ ಇಡುವ ಅಗತ್ಯವಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಅವರನ್ನು ಮೂಲೆಗುಂಪು ಮಾಡುವುದು ಮತ್ತು ಶಿಕ್ಷಿಸುವುದು ಕೆಲವರ ದುರುದ್ದೇಶವೂ ಆಗಿರಬಹುದು,” ಎಂದಿದ್ದಾರೆ.

ಅವರು ಬಿಡುಗಡೆಗೊಂಡಾಗ ಸಿಹಿ ಹಂಚಿ ಸಂಭ್ರಮಿಸಿದ್ದು ಸರಿಯೇ ಎಂಬ ಪ್ರಶ್ನೆಗೆ, “ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ನೋಡುತ್ತಾರೆ. ನ್ಯಾಯಾಲವೇ  ಅವರನ್ನು ಬಿಡುಗಡೆ ಮಾಡಿ ಎಂದು ಹೇಳಿರುವಾಗ ಸಿಹಿ ಹಂಚುವುದರಲ್ಲಿ ತಪ್ಪೇನಿದೆ? ಆದರೆ ಹೂಹಾರ ಹಾಕಿದವರು ನಮ್ಮ ಸಮಿತಿಯವರಲ್ಲ. ಈ ಕುರಿತು ನಾನು ಹೆಚ್ಚು ಹೇಳುವುದಿಲ್ಲ.” ಎಂದು ಉತ್ತರಿಸಿದ್ದಾರೆ.

ಬಿಜೆಪಿ ಸರ್ಕಾರವು ಈ ವಿಷಯದ ಕುರಿತು ರಚಿಸಿದ್ದ ಸಮಿತಿಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಶಾಸಕರಿದ್ದರು ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಪ್ರಶ್ನಿಸಿದ್ದರು. ಬಿಜೆಪಿಯಿಂದ ಸಿ ಕೆ ರಾಲ್ಜಿ ಮತ್ತು ಸುಮನ್ ಚೌಹಾಣ್ ಇದ್ದರೆ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾಗಿರುವ ಮುರಳಿ ಮುಲ್ಚಂದಾನಿ ಅವರು ಸಹ ಸಮಿತಿಯ ಭಾಗವಾಗಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದುದ್ದನ್ನು ಖಂಡಿಸಿದ ಮಾಜಿ ಸಿಎಂ ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯಾಚಾರ ಮಾಡುವವರು ಒಳ್ಳೆಯ ಸಂಸ್ಕಾರ ವಂತರು ಹೇಗಾಗುತ್ತಾರೆ ಎಂ ಎಲ್ ಎ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...