Homeಮುಖಪುಟಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು ಎಂದು ಬಿಜೆಪಿ ಶಾಸಕ ಹೇಳಿದ್ದಾರೆ

- Advertisement -
- Advertisement -

“ಅವರು (11 ಜನ ಅತ್ಯಾಚಾರಿಗಳು) ಅಪರಾಧವೆಸಗಿದ್ದಾರೋ ಇಲ್ಲೋ ನಮಗೆ ಗೊತ್ತಿಲ್ಲ. ಆದರೆ ಅವರು ಜೈಲಿನಲ್ಲಿ ಉತ್ತಮವಾಗಿ ನಡೆದುಕೊಂಡರು. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು” ಹೀಗೆ ಹೇಳುವ ಮೂಲಕ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಗುಜರಾತ್‌ನ ಬಿಜೆಪಿ ಶಾಸಕ ಸಿಕೆ ರೌಲ್ಜಿ.

ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗಳ ಬಿಡುಗಡೆ ಕುರಿತು ರಚಿಸಲಾದ ಸಮಿತಿಯಲ್ಲಿದ್ದ ಗೋದ್ರಾ ಕ್ಷೇತ್ರದ ಶಾಸಕ ಅತ್ಯಾಚಾರಿಗಳು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಅಪರಾಧಿಗಳ ಪರ ನಿಂತು ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಮೊಜೊ ಸ್ಟೋರಿ ಚಾನೆಲ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಈ 11 ಜನರ ಕುರಿತು ಅಭಿಪ್ರಾಯಕ್ಕೆ ಬರುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಅದರ ಭಾಗವಾಗಿ ಗುಜರಾತ್ ಸರ್ಕಾರ ರಚಿಸಿದ ಸಮಿತಿಯಲ್ಲಿ ನಾನಿದ್ದೆ. 2002ರಲ್ಲಿ ಏನು ನಡೆಯಿತು ಅದು ನನಗೆ ಗೊತ್ತಿಲ್ಲ. ಆದರೆ ಅವರಿಗೆ ಶಿಕ್ಷೆಯಾದ ನಂತರ ಅವರ ವರ್ತನೆ ಹೇಗಿದೆ? ಜೈಲಿನಲ್ಲಿ ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದರ ಕುರಿತು ಜೈಲರ್‌ಗಳ ಬಳಿ ವಿಚಾರಿಸಿದೆವು. ಅವರು ಜೈಲಿನಲ್ಲಿ ಯಾವುದೇ ಗಲಾಟೆ ಮಾಡಿಲ್ಲ ಎಂದು ತಿಳಿದುಬಂತು” ಎಂದು ಹೇಳಿದ್ದಾರೆ.

ಅತ್ಯಾಚಾರ ಮತ್ತು ಭಯೋತ್ಪಾದನಾ ಕೃತ್ಯಗಳಲ್ಲಿ ಪಾಲ್ಗೊಂಡವರಿಗೆ ಕ್ಷಮಾದಾನ ನೀಡಬಾರದು ಎಂದು ಗೃಹ ಸಚಿವಾಲಯ ಹೇಳಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ “ಅದು ನಮಗೆ ಗೊತ್ತಿಲ್ಲ. ಅವರ ವರ್ತನೆ ಜೈಲಿಗೆ ಹೋಗುವ ಮುಂಚೆ ಹೇಗಿತ್ತು, ಜೈಲಿನಲ್ಲಿ ಹೇಗಿದೆ ಎಂಬುದನ್ನು ಗಮನಿಸಬೇಕು. ಅವರ ಕುಟುಂಬ ಸದಸ್ಯರು ಸಹ ಉತ್ತಮವಾಗಿ ನಡೆದುಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಪ್ರಕರಣದಲ್ಲಿ ಕೆಲವು ಅಮಾಯಕರು ಸಹ ಸೇರಿಕೊಂಡಿದ್ದಾರೆ. ಕೆಲವರು ಮೊದಲಿಂದಲೂ ಉತ್ತಮವಾಗಿ ನಡೆದುಕೊಳ್ಳುತ್ತಿದ್ದರು. ಇದು ಆಕಸ್ಮಿಕವಾಗಿ ಘಟಿಸಿದಾಗ ಎಲ್ಲರೂ ಸಿಕ್ಕಿಕೊಂಡಿದ್ದಾರೆ. ಅವರನ್ನು ಇನ್ನೂ ಹೆಚ್ಚು ದಿನ ಜೈಲಿನಲ್ಲಿ ಇಡುವ ಅಗತ್ಯವಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಅವರನ್ನು ಮೂಲೆಗುಂಪು ಮಾಡುವುದು ಮತ್ತು ಶಿಕ್ಷಿಸುವುದು ಕೆಲವರ ದುರುದ್ದೇಶವೂ ಆಗಿರಬಹುದು,” ಎಂದಿದ್ದಾರೆ.

ಅವರು ಬಿಡುಗಡೆಗೊಂಡಾಗ ಸಿಹಿ ಹಂಚಿ ಸಂಭ್ರಮಿಸಿದ್ದು ಸರಿಯೇ ಎಂಬ ಪ್ರಶ್ನೆಗೆ, “ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ನೋಡುತ್ತಾರೆ. ನ್ಯಾಯಾಲವೇ  ಅವರನ್ನು ಬಿಡುಗಡೆ ಮಾಡಿ ಎಂದು ಹೇಳಿರುವಾಗ ಸಿಹಿ ಹಂಚುವುದರಲ್ಲಿ ತಪ್ಪೇನಿದೆ? ಆದರೆ ಹೂಹಾರ ಹಾಕಿದವರು ನಮ್ಮ ಸಮಿತಿಯವರಲ್ಲ. ಈ ಕುರಿತು ನಾನು ಹೆಚ್ಚು ಹೇಳುವುದಿಲ್ಲ.” ಎಂದು ಉತ್ತರಿಸಿದ್ದಾರೆ.

ಬಿಜೆಪಿ ಸರ್ಕಾರವು ಈ ವಿಷಯದ ಕುರಿತು ರಚಿಸಿದ್ದ ಸಮಿತಿಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಶಾಸಕರಿದ್ದರು ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಪ್ರಶ್ನಿಸಿದ್ದರು. ಬಿಜೆಪಿಯಿಂದ ಸಿ ಕೆ ರಾಲ್ಜಿ ಮತ್ತು ಸುಮನ್ ಚೌಹಾಣ್ ಇದ್ದರೆ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾಗಿರುವ ಮುರಳಿ ಮುಲ್ಚಂದಾನಿ ಅವರು ಸಹ ಸಮಿತಿಯ ಭಾಗವಾಗಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದುದ್ದನ್ನು ಖಂಡಿಸಿದ ಮಾಜಿ ಸಿಎಂ ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯಾಚಾರ ಮಾಡುವವರು ಒಳ್ಳೆಯ ಸಂಸ್ಕಾರ ವಂತರು ಹೇಗಾಗುತ್ತಾರೆ ಎಂ ಎಲ್ ಎ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...