Homeಮುಖಪುಟಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು ಎಂದು ಬಿಜೆಪಿ ಶಾಸಕ ಹೇಳಿದ್ದಾರೆ

- Advertisement -
- Advertisement -

“ಅವರು (11 ಜನ ಅತ್ಯಾಚಾರಿಗಳು) ಅಪರಾಧವೆಸಗಿದ್ದಾರೋ ಇಲ್ಲೋ ನಮಗೆ ಗೊತ್ತಿಲ್ಲ. ಆದರೆ ಅವರು ಜೈಲಿನಲ್ಲಿ ಉತ್ತಮವಾಗಿ ನಡೆದುಕೊಂಡರು. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು” ಹೀಗೆ ಹೇಳುವ ಮೂಲಕ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡಿದ್ದಾರೆ ಗುಜರಾತ್‌ನ ಬಿಜೆಪಿ ಶಾಸಕ ಸಿಕೆ ರೌಲ್ಜಿ.

ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗಳ ಬಿಡುಗಡೆ ಕುರಿತು ರಚಿಸಲಾದ ಸಮಿತಿಯಲ್ಲಿದ್ದ ಗೋದ್ರಾ ಕ್ಷೇತ್ರದ ಶಾಸಕ ಅತ್ಯಾಚಾರಿಗಳು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಅಪರಾಧಿಗಳ ಪರ ನಿಂತು ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಮೊಜೊ ಸ್ಟೋರಿ ಚಾನೆಲ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಈ 11 ಜನರ ಕುರಿತು ಅಭಿಪ್ರಾಯಕ್ಕೆ ಬರುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಅದರ ಭಾಗವಾಗಿ ಗುಜರಾತ್ ಸರ್ಕಾರ ರಚಿಸಿದ ಸಮಿತಿಯಲ್ಲಿ ನಾನಿದ್ದೆ. 2002ರಲ್ಲಿ ಏನು ನಡೆಯಿತು ಅದು ನನಗೆ ಗೊತ್ತಿಲ್ಲ. ಆದರೆ ಅವರಿಗೆ ಶಿಕ್ಷೆಯಾದ ನಂತರ ಅವರ ವರ್ತನೆ ಹೇಗಿದೆ? ಜೈಲಿನಲ್ಲಿ ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದರ ಕುರಿತು ಜೈಲರ್‌ಗಳ ಬಳಿ ವಿಚಾರಿಸಿದೆವು. ಅವರು ಜೈಲಿನಲ್ಲಿ ಯಾವುದೇ ಗಲಾಟೆ ಮಾಡಿಲ್ಲ ಎಂದು ತಿಳಿದುಬಂತು” ಎಂದು ಹೇಳಿದ್ದಾರೆ.

ಅತ್ಯಾಚಾರ ಮತ್ತು ಭಯೋತ್ಪಾದನಾ ಕೃತ್ಯಗಳಲ್ಲಿ ಪಾಲ್ಗೊಂಡವರಿಗೆ ಕ್ಷಮಾದಾನ ನೀಡಬಾರದು ಎಂದು ಗೃಹ ಸಚಿವಾಲಯ ಹೇಳಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶಾಸಕ “ಅದು ನಮಗೆ ಗೊತ್ತಿಲ್ಲ. ಅವರ ವರ್ತನೆ ಜೈಲಿಗೆ ಹೋಗುವ ಮುಂಚೆ ಹೇಗಿತ್ತು, ಜೈಲಿನಲ್ಲಿ ಹೇಗಿದೆ ಎಂಬುದನ್ನು ಗಮನಿಸಬೇಕು. ಅವರ ಕುಟುಂಬ ಸದಸ್ಯರು ಸಹ ಉತ್ತಮವಾಗಿ ನಡೆದುಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಈ ಪ್ರಕರಣದಲ್ಲಿ ಕೆಲವು ಅಮಾಯಕರು ಸಹ ಸೇರಿಕೊಂಡಿದ್ದಾರೆ. ಕೆಲವರು ಮೊದಲಿಂದಲೂ ಉತ್ತಮವಾಗಿ ನಡೆದುಕೊಳ್ಳುತ್ತಿದ್ದರು. ಇದು ಆಕಸ್ಮಿಕವಾಗಿ ಘಟಿಸಿದಾಗ ಎಲ್ಲರೂ ಸಿಕ್ಕಿಕೊಂಡಿದ್ದಾರೆ. ಅವರನ್ನು ಇನ್ನೂ ಹೆಚ್ಚು ದಿನ ಜೈಲಿನಲ್ಲಿ ಇಡುವ ಅಗತ್ಯವಿಲ್ಲ. ಎಲ್ಲದಕ್ಕಿಂತ ಹೆಚ್ಚಾಗಿ ಅವರು ಬ್ರಾಹ್ಮಣರು. ಒಳ್ಳೆಯ ಸಂಸ್ಕಾರವುಳ್ಳವರು. ಅವರನ್ನು ಮೂಲೆಗುಂಪು ಮಾಡುವುದು ಮತ್ತು ಶಿಕ್ಷಿಸುವುದು ಕೆಲವರ ದುರುದ್ದೇಶವೂ ಆಗಿರಬಹುದು,” ಎಂದಿದ್ದಾರೆ.

ಅವರು ಬಿಡುಗಡೆಗೊಂಡಾಗ ಸಿಹಿ ಹಂಚಿ ಸಂಭ್ರಮಿಸಿದ್ದು ಸರಿಯೇ ಎಂಬ ಪ್ರಶ್ನೆಗೆ, “ಪ್ರತಿಯೊಬ್ಬರೂ ಒಂದೊಂದು ರೀತಿಯಲ್ಲಿ ನೋಡುತ್ತಾರೆ. ನ್ಯಾಯಾಲವೇ  ಅವರನ್ನು ಬಿಡುಗಡೆ ಮಾಡಿ ಎಂದು ಹೇಳಿರುವಾಗ ಸಿಹಿ ಹಂಚುವುದರಲ್ಲಿ ತಪ್ಪೇನಿದೆ? ಆದರೆ ಹೂಹಾರ ಹಾಕಿದವರು ನಮ್ಮ ಸಮಿತಿಯವರಲ್ಲ. ಈ ಕುರಿತು ನಾನು ಹೆಚ್ಚು ಹೇಳುವುದಿಲ್ಲ.” ಎಂದು ಉತ್ತರಿಸಿದ್ದಾರೆ.

ಬಿಜೆಪಿ ಸರ್ಕಾರವು ಈ ವಿಷಯದ ಕುರಿತು ರಚಿಸಿದ್ದ ಸಮಿತಿಯಲ್ಲಿ ಬಿಜೆಪಿ ಪಕ್ಷದ ಇಬ್ಬರು ಶಾಸಕರಿದ್ದರು ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಪ್ರಶ್ನಿಸಿದ್ದರು. ಬಿಜೆಪಿಯಿಂದ ಸಿ ಕೆ ರಾಲ್ಜಿ ಮತ್ತು ಸುಮನ್ ಚೌಹಾಣ್ ಇದ್ದರೆ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಪ್ರಮುಖ ಸಾಕ್ಷಿಗಳಲ್ಲಿ ಒಬ್ಬರಾಗಿರುವ ಮುರಳಿ ಮುಲ್ಚಂದಾನಿ ಅವರು ಸಹ ಸಮಿತಿಯ ಭಾಗವಾಗಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದುದ್ದನ್ನು ಖಂಡಿಸಿದ ಮಾಜಿ ಸಿಎಂ ಯಡಿಯೂರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯಾಚಾರ ಮಾಡುವವರು ಒಳ್ಳೆಯ ಸಂಸ್ಕಾರ ವಂತರು ಹೇಗಾಗುತ್ತಾರೆ ಎಂ ಎಲ್ ಎ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...