Homeಮುಖಪುಟಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಬಿಜೆಪಿ ಕಳ್ಳರ ಪಕ್ಷ ಎಂದು ಮಮತಾ ಬ್ಯಾನರ್ಜಿ ಹೇಳಿದ್ದು, ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಏಜೆನ್ಸಿಗಳನ್ನು ಬಳಸಿಕೊಂಡು ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಪ.ಬಂಗಾಳದ ಉತ್ತರ 24-ಪರಗಣಗಳ ಚಕ್ಲಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್‌ ಪಕ್ಷದ ಕಾರ್ಯಾಗಾರದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ,  ಬಿಜೆಪಿ ‘ಇಡಿ’ ಮತ್ತು ‘ಸಿಬಿಐ’ ಬಳಸಿ ಹಣ ಲೂಟಿ ಮಾಡುತ್ತಿದೆ. ವಶಪಡಿಸಿಕೊಂಡ ಎಲ್ಲ ಹಣವನ್ನು ಬಿಜೆಪಿಯ ಜೇಬಿಗೆ ಹಾಕಲಾಗುತ್ತಿದೆ. ಕೋವಿಡ್ ಪರಿಸ್ಥಿತಿಯ ಸಮಯದಲ್ಲಿ ಅವರು ಪಿಎಂ ಕೇರ್ಸ್ ಫಂಡ್ ಹೆಸರಿನಲ್ಲಿ ಹಣವನ್ನು ಸಂಗ್ರಹಿಸಿದರು. ಆದರೆ ಅವರು ಎಷ್ಟು ಹಣವನ್ನು ಸಂಗ್ರಹಿಸಿದರು ಎಂಬುದು ಯಾರಿಗೂ ತಿಳಿದಿಲ್ಲ. ಪ್ರತಿ ಯೋಜನೆಯಲ್ಲಿ ಬಿಜೆಪಿ ನಾಯಕರು ಎಷ್ಟು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂಬುದು ನಿಮಗೆ ತಿಳಿದಿರಬೇಕು. ಆದರೆ ಅವರು ಭ್ರಷ್ಟಾಚಾರ ಎಂದು ತೃಣಮೂಲ ಕಾಂಗ್ರೆಸ್‌ನತ್ತ ಬೆರಳು ತೋರಿಸುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು “ಕಳ್ಳರ ಪಕ್ಷ” ಎಂದು ಕರೆಯುವುದರ ಹಿಂದಿನ ಕಾರಣಗಳನ್ನು ವಿವರಿಸಿದ  ಮಮತಾ ಬ್ಯಾನರ್ಜಿ,  ಪಕ್ಷಕ್ಕಾಗಿ ಕೆಲಸ ಮಾಡದಂತೆ ಬಾಲು (ಆಹಾರ ಮತ್ತು ಸರಬರಾಜು ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್) ಅವರನ್ನು ಬಂಧಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಲು ಸಾಧ್ಯವಾಗದಂತೆ ಅವರನ್ನು ಜೈಲಿನಲ್ಲಿಟ್ಟರು. ಆದರೆ ಹಣ ಲೂಟಿ ಮಾಡಿದ ಯಾವುದೇ ಬಿಜೆಪಿ ನಾಯಕನನ್ನು ಬಂಧಿಸಲಾಗಿಲ್ಲ ಎಂದು ಮಮತಾ ಆರೋಪಿಸಿದ್ದಾರೆ.

ತೃಣಮೂಲ ನಾಯಕರನ್ನು “ಚೋರ್” ಎಂದು ಕರೆಯುವುದರ ವಿರುದ್ಧ ಸುವೇದು ಅಧಿಕಾರಿಯನ್ನು ಹೆಸರಿಸದೆ ವಾಗ್ಧಾಳಿ ನಡೆಸಿದ ಮಮತಾ ಬ್ಯಾನರ್ಜಿ, ದೇಶದ್ರೋಹಿಗಳು ಯಾವುದೇ ಚಿಕ್ಕ ಕಳ್ಳರು ಅಲ್ಲ, ಅವರು ದರೋಡೆಕೋರರು. ನೀವು ಅವರನ್ನು ಕಂಡಾಗ, ‘ಚೋರ್, ಚೋರ್’ ಎಂದು ಕೂಗಿ ಎಂದು ಟಿಎಂಸಿ ಕಾರ್ಯಕರ್ತರಿಗೆ ಹೇಳಿದ್ದಾರೆ.

ಅವರು ತೃಣಮೂಲ ಕಾರ್ಯಕರ್ತರನ್ನು ಒಗ್ಗಟ್ಟಿನಿಂದ ಇರುವಂತೆ ಕೇಳಿಕೊಂಡರು. ನಾನು ಯಾವುದೇ ಸ್ಥಳೀಯ ಮಟ್ಟದ ಜಗಳಕ್ಕೆ ಅವಕಾಶ ನೀಡುವುದಿಲ್ಲ. ನಾನು ಜನರಿಗಾಗಿ 365 ದಿನ ಕೆಲಸ ಮಾಡುತ್ತೇನೆ. ಆದರೆ ಯಾರಾದರೂ ತನ್ನನ್ನು ತಾನು ದೊಡ್ಡ ನಾಯಕ ಎಂದು ಪರಿಗಣಿಸಿದರೆ ಮತ್ತು ಪಕ್ಷಕ್ಕಿಂತ ಹೆಚ್ಚಾಗಿ ತನ್ನನ್ನು ತಾನು ಪ್ರೀತಿಸಿದರೆ, ಅವನು ಅಥವಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ತೃಣಮೂಲವು ಜನ ಸೇವೆ ಮಾಡಲು, ಸ್ವ ಸೇವೆಗೆ ಅಲ್ಲ ಎಂದು ಅವರು ಕಾರ್ಯಕರ್ತರಿಗೆ ಹೇಳಿದ್ದಾರೆ.

ಜಿಲ್ಲೆಯ ಕೆಲವು ಪ್ರಮುಖ ನಾಯಕರ ನಡುವೆ ಇತ್ತೀಚೆಗೆ ನಡೆದ ಬಹಿರಂಗ ಸಂಘರ್ಷದ ಘಟನೆಗಳ ಬಗ್ಗೆ ಸ್ಪಷ್ಟವಾದ ಉಲ್ಲೇಖವನ್ನು ನೀಡದೆ, ಎಲ್ಲರಿಗೂ ಮಮತಾ ಎಚ್ಚರಿಕೆ ನೀಡಿದರು. ಕೆಲವು ಪ್ರದೇಶಗಳಲ್ಲಿ, ಕೆಲವು ನಾಯಕರು ತಮ್ಮನ್ನು ತಾವು ದೊಡ್ಡವರು ಎಂದು ಭಾವಿಸಲು ಪ್ರಾರಂಭಿಸಿದರು ಎಂದು ನಾನು ಕೇಳಿದ್ದೇನೆ.  ಅವರು ತಮ್ಮ ಹಿತಾಸಕ್ತಿಗಳಿಗಾಗಿ ಪಕ್ಷವನ್ನು ಮರೆತಿದ್ದಾರೆ. ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸಿ ಇತರರನ್ನು ಕಡೆಗಣಿಸಬಾರದು. ತೃಣಮೂಲ ಮುಖಂಡರು ಹಾಗೂ ಬೆಂಬಲಿಗರು ಹಿರಿಯರು ಹಾಗೂ ಹಿರಿಯ ಮುಖಂಡರನ್ನು ಕಡೆಗಣಿಸದೆ ಸಂಘಟಿತರಾಗಿ ವಿದ್ಯಾರ್ಥಿಗಳು ಹಾಗೂ ಯುವಕರನ್ನು ಪಕ್ಷದ ಚಟುವಟಿಕೆಗಳಲ್ಲಿ ಮುಂಚೂಣಿಗೆ ತರಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಆಹಾರ ಮತ್ತು ಸರಬರಾಜು ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್ ಅವರನ್ನು ಪಡಿತರ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದ ಬಳಿಕ ಕಳೆದೆರಡು ತಿಂಗಳುಗಳಲ್ಲಿ ಬಂಗಾಳ ರಾಜಕೀಯದಲ್ಲಿ ‘ಚೋರ್’ ಪದದ ವ್ಯಾಪಕ ಬಳಕೆ ಕಂಡು ಬಂದಿದೆ. ಬಿಜೆಪಿ ಕಾರ್ಯಕರ್ತರು, ವಿಶೇಷವಾಗಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಮಮತಾ ಸೇರಿದಂತೆ ತೃಣಮೂಲ ನಾಯಕರ ಮೇಲೆ ಪದೇ ಪದೇ ಈ ಪದ ಬಳಕೆ ಮಾಡಿದ್ದರು.

ನಮ್ಮ ನಾಯಕರನ್ನು ಕಳ್ಳರು ಎಂದು ಕರೆಯುವ ಬಿಜೆಪಿಯ ಸಂಘಟಿತ ಪ್ರಚಾರದ ವಿರುದ್ಧ ‘ಚೋರ್‌’ ಪದವನ್ನು ಪ್ರತಿಯಾಗಿ ಬಳಸಲು ದೀದಿ ನಮಗೆ ಸಲಹೆ ನೀಡಿದ್ದಾರೆ. ಇದನ್ನು ರಾಜ್ಯಾದ್ಯಂತ ಬಳಸಲಾಗುವುದು ಎಂದು ಸಭೆಯ ನಂತರ ತೃಣಮೂಲ ನಾಯಕರೊಬ್ಬರು ಹೇಳಿದ್ದಾರೆ.

ಮಾಟುವಾ ಸಮುದಾಯದ ಹೆಚ್ಚಿನ ಜನ ಪ್ರಾಬಲ್ಯವಿರುವ ಉತ್ತರ 24-ಪರಗಣ ಜಿಲ್ಲೆಯಲ್ಲಿ ಬಿಜೆಪಿ ಈಗಾಗಲೇ ಚುನಾವಣೆ ಪ್ರಚಾರ ಮಾಡುತ್ತಿದೆ. ಮಟುವಾ ಸಮುದಾಯದ ಮತದ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇದಕ್ಕೆ ಪ್ರತಿಯಾಗಿ ಉತ್ತರ-24 ಪರಗಣಗಳಲ್ಲಿ ತೃಣಮೂಲ ಸಂಘಟನೆಯನ್ನು ನೋಡಿಕೊಳ್ಳಲು, ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಚಟುವಟಿಕೆಗಳನ್ನು ಪರಿಶೀಲಿಸಲು ಮತ್ತು ಅವರಿಗೆ ವರದಿಯನ್ನು ಸಲ್ಲಿಸಲು ನಿರ್ಮಲ್ ಘೋಷ್ ನೇತೃತ್ವದ 20 ಸದಸ್ಯರ ಕೋರ್ ಕಮಿಟಿಯನ್ನು ಮಮತಾ ರಚಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...