Homeಮುಖಪುಟಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಬಿಜೆಪಿ ಕಳ್ಳರ ಪಕ್ಷ ಎಂದು ಮಮತಾ ಬ್ಯಾನರ್ಜಿ ಹೇಳಿದ್ದು, ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಏಜೆನ್ಸಿಗಳನ್ನು ಬಳಸಿಕೊಂಡು ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಪ.ಬಂಗಾಳದ ಉತ್ತರ 24-ಪರಗಣಗಳ ಚಕ್ಲಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್‌ ಪಕ್ಷದ ಕಾರ್ಯಾಗಾರದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ,  ಬಿಜೆಪಿ ‘ಇಡಿ’ ಮತ್ತು ‘ಸಿಬಿಐ’ ಬಳಸಿ ಹಣ ಲೂಟಿ ಮಾಡುತ್ತಿದೆ. ವಶಪಡಿಸಿಕೊಂಡ ಎಲ್ಲ ಹಣವನ್ನು ಬಿಜೆಪಿಯ ಜೇಬಿಗೆ ಹಾಕಲಾಗುತ್ತಿದೆ. ಕೋವಿಡ್ ಪರಿಸ್ಥಿತಿಯ ಸಮಯದಲ್ಲಿ ಅವರು ಪಿಎಂ ಕೇರ್ಸ್ ಫಂಡ್ ಹೆಸರಿನಲ್ಲಿ ಹಣವನ್ನು ಸಂಗ್ರಹಿಸಿದರು. ಆದರೆ ಅವರು ಎಷ್ಟು ಹಣವನ್ನು ಸಂಗ್ರಹಿಸಿದರು ಎಂಬುದು ಯಾರಿಗೂ ತಿಳಿದಿಲ್ಲ. ಪ್ರತಿ ಯೋಜನೆಯಲ್ಲಿ ಬಿಜೆಪಿ ನಾಯಕರು ಎಷ್ಟು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂಬುದು ನಿಮಗೆ ತಿಳಿದಿರಬೇಕು. ಆದರೆ ಅವರು ಭ್ರಷ್ಟಾಚಾರ ಎಂದು ತೃಣಮೂಲ ಕಾಂಗ್ರೆಸ್‌ನತ್ತ ಬೆರಳು ತೋರಿಸುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು “ಕಳ್ಳರ ಪಕ್ಷ” ಎಂದು ಕರೆಯುವುದರ ಹಿಂದಿನ ಕಾರಣಗಳನ್ನು ವಿವರಿಸಿದ  ಮಮತಾ ಬ್ಯಾನರ್ಜಿ,  ಪಕ್ಷಕ್ಕಾಗಿ ಕೆಲಸ ಮಾಡದಂತೆ ಬಾಲು (ಆಹಾರ ಮತ್ತು ಸರಬರಾಜು ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್) ಅವರನ್ನು ಬಂಧಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಲು ಸಾಧ್ಯವಾಗದಂತೆ ಅವರನ್ನು ಜೈಲಿನಲ್ಲಿಟ್ಟರು. ಆದರೆ ಹಣ ಲೂಟಿ ಮಾಡಿದ ಯಾವುದೇ ಬಿಜೆಪಿ ನಾಯಕನನ್ನು ಬಂಧಿಸಲಾಗಿಲ್ಲ ಎಂದು ಮಮತಾ ಆರೋಪಿಸಿದ್ದಾರೆ.

ತೃಣಮೂಲ ನಾಯಕರನ್ನು “ಚೋರ್” ಎಂದು ಕರೆಯುವುದರ ವಿರುದ್ಧ ಸುವೇದು ಅಧಿಕಾರಿಯನ್ನು ಹೆಸರಿಸದೆ ವಾಗ್ಧಾಳಿ ನಡೆಸಿದ ಮಮತಾ ಬ್ಯಾನರ್ಜಿ, ದೇಶದ್ರೋಹಿಗಳು ಯಾವುದೇ ಚಿಕ್ಕ ಕಳ್ಳರು ಅಲ್ಲ, ಅವರು ದರೋಡೆಕೋರರು. ನೀವು ಅವರನ್ನು ಕಂಡಾಗ, ‘ಚೋರ್, ಚೋರ್’ ಎಂದು ಕೂಗಿ ಎಂದು ಟಿಎಂಸಿ ಕಾರ್ಯಕರ್ತರಿಗೆ ಹೇಳಿದ್ದಾರೆ.

ಅವರು ತೃಣಮೂಲ ಕಾರ್ಯಕರ್ತರನ್ನು ಒಗ್ಗಟ್ಟಿನಿಂದ ಇರುವಂತೆ ಕೇಳಿಕೊಂಡರು. ನಾನು ಯಾವುದೇ ಸ್ಥಳೀಯ ಮಟ್ಟದ ಜಗಳಕ್ಕೆ ಅವಕಾಶ ನೀಡುವುದಿಲ್ಲ. ನಾನು ಜನರಿಗಾಗಿ 365 ದಿನ ಕೆಲಸ ಮಾಡುತ್ತೇನೆ. ಆದರೆ ಯಾರಾದರೂ ತನ್ನನ್ನು ತಾನು ದೊಡ್ಡ ನಾಯಕ ಎಂದು ಪರಿಗಣಿಸಿದರೆ ಮತ್ತು ಪಕ್ಷಕ್ಕಿಂತ ಹೆಚ್ಚಾಗಿ ತನ್ನನ್ನು ತಾನು ಪ್ರೀತಿಸಿದರೆ, ಅವನು ಅಥವಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ತೃಣಮೂಲವು ಜನ ಸೇವೆ ಮಾಡಲು, ಸ್ವ ಸೇವೆಗೆ ಅಲ್ಲ ಎಂದು ಅವರು ಕಾರ್ಯಕರ್ತರಿಗೆ ಹೇಳಿದ್ದಾರೆ.

ಜಿಲ್ಲೆಯ ಕೆಲವು ಪ್ರಮುಖ ನಾಯಕರ ನಡುವೆ ಇತ್ತೀಚೆಗೆ ನಡೆದ ಬಹಿರಂಗ ಸಂಘರ್ಷದ ಘಟನೆಗಳ ಬಗ್ಗೆ ಸ್ಪಷ್ಟವಾದ ಉಲ್ಲೇಖವನ್ನು ನೀಡದೆ, ಎಲ್ಲರಿಗೂ ಮಮತಾ ಎಚ್ಚರಿಕೆ ನೀಡಿದರು. ಕೆಲವು ಪ್ರದೇಶಗಳಲ್ಲಿ, ಕೆಲವು ನಾಯಕರು ತಮ್ಮನ್ನು ತಾವು ದೊಡ್ಡವರು ಎಂದು ಭಾವಿಸಲು ಪ್ರಾರಂಭಿಸಿದರು ಎಂದು ನಾನು ಕೇಳಿದ್ದೇನೆ.  ಅವರು ತಮ್ಮ ಹಿತಾಸಕ್ತಿಗಳಿಗಾಗಿ ಪಕ್ಷವನ್ನು ಮರೆತಿದ್ದಾರೆ. ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸಿ ಇತರರನ್ನು ಕಡೆಗಣಿಸಬಾರದು. ತೃಣಮೂಲ ಮುಖಂಡರು ಹಾಗೂ ಬೆಂಬಲಿಗರು ಹಿರಿಯರು ಹಾಗೂ ಹಿರಿಯ ಮುಖಂಡರನ್ನು ಕಡೆಗಣಿಸದೆ ಸಂಘಟಿತರಾಗಿ ವಿದ್ಯಾರ್ಥಿಗಳು ಹಾಗೂ ಯುವಕರನ್ನು ಪಕ್ಷದ ಚಟುವಟಿಕೆಗಳಲ್ಲಿ ಮುಂಚೂಣಿಗೆ ತರಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಆಹಾರ ಮತ್ತು ಸರಬರಾಜು ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್ ಅವರನ್ನು ಪಡಿತರ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದ ಬಳಿಕ ಕಳೆದೆರಡು ತಿಂಗಳುಗಳಲ್ಲಿ ಬಂಗಾಳ ರಾಜಕೀಯದಲ್ಲಿ ‘ಚೋರ್’ ಪದದ ವ್ಯಾಪಕ ಬಳಕೆ ಕಂಡು ಬಂದಿದೆ. ಬಿಜೆಪಿ ಕಾರ್ಯಕರ್ತರು, ವಿಶೇಷವಾಗಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಮಮತಾ ಸೇರಿದಂತೆ ತೃಣಮೂಲ ನಾಯಕರ ಮೇಲೆ ಪದೇ ಪದೇ ಈ ಪದ ಬಳಕೆ ಮಾಡಿದ್ದರು.

ನಮ್ಮ ನಾಯಕರನ್ನು ಕಳ್ಳರು ಎಂದು ಕರೆಯುವ ಬಿಜೆಪಿಯ ಸಂಘಟಿತ ಪ್ರಚಾರದ ವಿರುದ್ಧ ‘ಚೋರ್‌’ ಪದವನ್ನು ಪ್ರತಿಯಾಗಿ ಬಳಸಲು ದೀದಿ ನಮಗೆ ಸಲಹೆ ನೀಡಿದ್ದಾರೆ. ಇದನ್ನು ರಾಜ್ಯಾದ್ಯಂತ ಬಳಸಲಾಗುವುದು ಎಂದು ಸಭೆಯ ನಂತರ ತೃಣಮೂಲ ನಾಯಕರೊಬ್ಬರು ಹೇಳಿದ್ದಾರೆ.

ಮಾಟುವಾ ಸಮುದಾಯದ ಹೆಚ್ಚಿನ ಜನ ಪ್ರಾಬಲ್ಯವಿರುವ ಉತ್ತರ 24-ಪರಗಣ ಜಿಲ್ಲೆಯಲ್ಲಿ ಬಿಜೆಪಿ ಈಗಾಗಲೇ ಚುನಾವಣೆ ಪ್ರಚಾರ ಮಾಡುತ್ತಿದೆ. ಮಟುವಾ ಸಮುದಾಯದ ಮತದ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇದಕ್ಕೆ ಪ್ರತಿಯಾಗಿ ಉತ್ತರ-24 ಪರಗಣಗಳಲ್ಲಿ ತೃಣಮೂಲ ಸಂಘಟನೆಯನ್ನು ನೋಡಿಕೊಳ್ಳಲು, ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಚಟುವಟಿಕೆಗಳನ್ನು ಪರಿಶೀಲಿಸಲು ಮತ್ತು ಅವರಿಗೆ ವರದಿಯನ್ನು ಸಲ್ಲಿಸಲು ನಿರ್ಮಲ್ ಘೋಷ್ ನೇತೃತ್ವದ 20 ಸದಸ್ಯರ ಕೋರ್ ಕಮಿಟಿಯನ್ನು ಮಮತಾ ರಚಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...