Homeಮುಖಪುಟಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಬಿಜೆಪಿ ಕಳ್ಳರ ಪಕ್ಷ ಎಂದು ಮಮತಾ ಬ್ಯಾನರ್ಜಿ ಹೇಳಿದ್ದು, ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಏಜೆನ್ಸಿಗಳನ್ನು ಬಳಸಿಕೊಂಡು ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಪ.ಬಂಗಾಳದ ಉತ್ತರ 24-ಪರಗಣಗಳ ಚಕ್ಲಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್‌ ಪಕ್ಷದ ಕಾರ್ಯಾಗಾರದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ,  ಬಿಜೆಪಿ ‘ಇಡಿ’ ಮತ್ತು ‘ಸಿಬಿಐ’ ಬಳಸಿ ಹಣ ಲೂಟಿ ಮಾಡುತ್ತಿದೆ. ವಶಪಡಿಸಿಕೊಂಡ ಎಲ್ಲ ಹಣವನ್ನು ಬಿಜೆಪಿಯ ಜೇಬಿಗೆ ಹಾಕಲಾಗುತ್ತಿದೆ. ಕೋವಿಡ್ ಪರಿಸ್ಥಿತಿಯ ಸಮಯದಲ್ಲಿ ಅವರು ಪಿಎಂ ಕೇರ್ಸ್ ಫಂಡ್ ಹೆಸರಿನಲ್ಲಿ ಹಣವನ್ನು ಸಂಗ್ರಹಿಸಿದರು. ಆದರೆ ಅವರು ಎಷ್ಟು ಹಣವನ್ನು ಸಂಗ್ರಹಿಸಿದರು ಎಂಬುದು ಯಾರಿಗೂ ತಿಳಿದಿಲ್ಲ. ಪ್ರತಿ ಯೋಜನೆಯಲ್ಲಿ ಬಿಜೆಪಿ ನಾಯಕರು ಎಷ್ಟು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂಬುದು ನಿಮಗೆ ತಿಳಿದಿರಬೇಕು. ಆದರೆ ಅವರು ಭ್ರಷ್ಟಾಚಾರ ಎಂದು ತೃಣಮೂಲ ಕಾಂಗ್ರೆಸ್‌ನತ್ತ ಬೆರಳು ತೋರಿಸುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು “ಕಳ್ಳರ ಪಕ್ಷ” ಎಂದು ಕರೆಯುವುದರ ಹಿಂದಿನ ಕಾರಣಗಳನ್ನು ವಿವರಿಸಿದ  ಮಮತಾ ಬ್ಯಾನರ್ಜಿ,  ಪಕ್ಷಕ್ಕಾಗಿ ಕೆಲಸ ಮಾಡದಂತೆ ಬಾಲು (ಆಹಾರ ಮತ್ತು ಸರಬರಾಜು ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್) ಅವರನ್ನು ಬಂಧಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಲು ಸಾಧ್ಯವಾಗದಂತೆ ಅವರನ್ನು ಜೈಲಿನಲ್ಲಿಟ್ಟರು. ಆದರೆ ಹಣ ಲೂಟಿ ಮಾಡಿದ ಯಾವುದೇ ಬಿಜೆಪಿ ನಾಯಕನನ್ನು ಬಂಧಿಸಲಾಗಿಲ್ಲ ಎಂದು ಮಮತಾ ಆರೋಪಿಸಿದ್ದಾರೆ.

ತೃಣಮೂಲ ನಾಯಕರನ್ನು “ಚೋರ್” ಎಂದು ಕರೆಯುವುದರ ವಿರುದ್ಧ ಸುವೇದು ಅಧಿಕಾರಿಯನ್ನು ಹೆಸರಿಸದೆ ವಾಗ್ಧಾಳಿ ನಡೆಸಿದ ಮಮತಾ ಬ್ಯಾನರ್ಜಿ, ದೇಶದ್ರೋಹಿಗಳು ಯಾವುದೇ ಚಿಕ್ಕ ಕಳ್ಳರು ಅಲ್ಲ, ಅವರು ದರೋಡೆಕೋರರು. ನೀವು ಅವರನ್ನು ಕಂಡಾಗ, ‘ಚೋರ್, ಚೋರ್’ ಎಂದು ಕೂಗಿ ಎಂದು ಟಿಎಂಸಿ ಕಾರ್ಯಕರ್ತರಿಗೆ ಹೇಳಿದ್ದಾರೆ.

ಅವರು ತೃಣಮೂಲ ಕಾರ್ಯಕರ್ತರನ್ನು ಒಗ್ಗಟ್ಟಿನಿಂದ ಇರುವಂತೆ ಕೇಳಿಕೊಂಡರು. ನಾನು ಯಾವುದೇ ಸ್ಥಳೀಯ ಮಟ್ಟದ ಜಗಳಕ್ಕೆ ಅವಕಾಶ ನೀಡುವುದಿಲ್ಲ. ನಾನು ಜನರಿಗಾಗಿ 365 ದಿನ ಕೆಲಸ ಮಾಡುತ್ತೇನೆ. ಆದರೆ ಯಾರಾದರೂ ತನ್ನನ್ನು ತಾನು ದೊಡ್ಡ ನಾಯಕ ಎಂದು ಪರಿಗಣಿಸಿದರೆ ಮತ್ತು ಪಕ್ಷಕ್ಕಿಂತ ಹೆಚ್ಚಾಗಿ ತನ್ನನ್ನು ತಾನು ಪ್ರೀತಿಸಿದರೆ, ಅವನು ಅಥವಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ತೃಣಮೂಲವು ಜನ ಸೇವೆ ಮಾಡಲು, ಸ್ವ ಸೇವೆಗೆ ಅಲ್ಲ ಎಂದು ಅವರು ಕಾರ್ಯಕರ್ತರಿಗೆ ಹೇಳಿದ್ದಾರೆ.

ಜಿಲ್ಲೆಯ ಕೆಲವು ಪ್ರಮುಖ ನಾಯಕರ ನಡುವೆ ಇತ್ತೀಚೆಗೆ ನಡೆದ ಬಹಿರಂಗ ಸಂಘರ್ಷದ ಘಟನೆಗಳ ಬಗ್ಗೆ ಸ್ಪಷ್ಟವಾದ ಉಲ್ಲೇಖವನ್ನು ನೀಡದೆ, ಎಲ್ಲರಿಗೂ ಮಮತಾ ಎಚ್ಚರಿಕೆ ನೀಡಿದರು. ಕೆಲವು ಪ್ರದೇಶಗಳಲ್ಲಿ, ಕೆಲವು ನಾಯಕರು ತಮ್ಮನ್ನು ತಾವು ದೊಡ್ಡವರು ಎಂದು ಭಾವಿಸಲು ಪ್ರಾರಂಭಿಸಿದರು ಎಂದು ನಾನು ಕೇಳಿದ್ದೇನೆ.  ಅವರು ತಮ್ಮ ಹಿತಾಸಕ್ತಿಗಳಿಗಾಗಿ ಪಕ್ಷವನ್ನು ಮರೆತಿದ್ದಾರೆ. ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸಿ ಇತರರನ್ನು ಕಡೆಗಣಿಸಬಾರದು. ತೃಣಮೂಲ ಮುಖಂಡರು ಹಾಗೂ ಬೆಂಬಲಿಗರು ಹಿರಿಯರು ಹಾಗೂ ಹಿರಿಯ ಮುಖಂಡರನ್ನು ಕಡೆಗಣಿಸದೆ ಸಂಘಟಿತರಾಗಿ ವಿದ್ಯಾರ್ಥಿಗಳು ಹಾಗೂ ಯುವಕರನ್ನು ಪಕ್ಷದ ಚಟುವಟಿಕೆಗಳಲ್ಲಿ ಮುಂಚೂಣಿಗೆ ತರಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಆಹಾರ ಮತ್ತು ಸರಬರಾಜು ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್ ಅವರನ್ನು ಪಡಿತರ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದ ಬಳಿಕ ಕಳೆದೆರಡು ತಿಂಗಳುಗಳಲ್ಲಿ ಬಂಗಾಳ ರಾಜಕೀಯದಲ್ಲಿ ‘ಚೋರ್’ ಪದದ ವ್ಯಾಪಕ ಬಳಕೆ ಕಂಡು ಬಂದಿದೆ. ಬಿಜೆಪಿ ಕಾರ್ಯಕರ್ತರು, ವಿಶೇಷವಾಗಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಮಮತಾ ಸೇರಿದಂತೆ ತೃಣಮೂಲ ನಾಯಕರ ಮೇಲೆ ಪದೇ ಪದೇ ಈ ಪದ ಬಳಕೆ ಮಾಡಿದ್ದರು.

ನಮ್ಮ ನಾಯಕರನ್ನು ಕಳ್ಳರು ಎಂದು ಕರೆಯುವ ಬಿಜೆಪಿಯ ಸಂಘಟಿತ ಪ್ರಚಾರದ ವಿರುದ್ಧ ‘ಚೋರ್‌’ ಪದವನ್ನು ಪ್ರತಿಯಾಗಿ ಬಳಸಲು ದೀದಿ ನಮಗೆ ಸಲಹೆ ನೀಡಿದ್ದಾರೆ. ಇದನ್ನು ರಾಜ್ಯಾದ್ಯಂತ ಬಳಸಲಾಗುವುದು ಎಂದು ಸಭೆಯ ನಂತರ ತೃಣಮೂಲ ನಾಯಕರೊಬ್ಬರು ಹೇಳಿದ್ದಾರೆ.

ಮಾಟುವಾ ಸಮುದಾಯದ ಹೆಚ್ಚಿನ ಜನ ಪ್ರಾಬಲ್ಯವಿರುವ ಉತ್ತರ 24-ಪರಗಣ ಜಿಲ್ಲೆಯಲ್ಲಿ ಬಿಜೆಪಿ ಈಗಾಗಲೇ ಚುನಾವಣೆ ಪ್ರಚಾರ ಮಾಡುತ್ತಿದೆ. ಮಟುವಾ ಸಮುದಾಯದ ಮತದ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇದಕ್ಕೆ ಪ್ರತಿಯಾಗಿ ಉತ್ತರ-24 ಪರಗಣಗಳಲ್ಲಿ ತೃಣಮೂಲ ಸಂಘಟನೆಯನ್ನು ನೋಡಿಕೊಳ್ಳಲು, ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಚಟುವಟಿಕೆಗಳನ್ನು ಪರಿಶೀಲಿಸಲು ಮತ್ತು ಅವರಿಗೆ ವರದಿಯನ್ನು ಸಲ್ಲಿಸಲು ನಿರ್ಮಲ್ ಘೋಷ್ ನೇತೃತ್ವದ 20 ಸದಸ್ಯರ ಕೋರ್ ಕಮಿಟಿಯನ್ನು ಮಮತಾ ರಚಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...