Homeಮುಖಪುಟಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಬಿಜೆಪಿ ಕಳ್ಳರ ಪಕ್ಷ ಎಂದು ಮಮತಾ ಬ್ಯಾನರ್ಜಿ ಹೇಳಿದ್ದು, ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಏಜೆನ್ಸಿಗಳನ್ನು ಬಳಸಿಕೊಂಡು ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಪ.ಬಂಗಾಳದ ಉತ್ತರ 24-ಪರಗಣಗಳ ಚಕ್ಲಾದಲ್ಲಿ ನಡೆದ ತೃಣಮೂಲ ಕಾಂಗ್ರೆಸ್‌ ಪಕ್ಷದ ಕಾರ್ಯಾಗಾರದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ,  ಬಿಜೆಪಿ ‘ಇಡಿ’ ಮತ್ತು ‘ಸಿಬಿಐ’ ಬಳಸಿ ಹಣ ಲೂಟಿ ಮಾಡುತ್ತಿದೆ. ವಶಪಡಿಸಿಕೊಂಡ ಎಲ್ಲ ಹಣವನ್ನು ಬಿಜೆಪಿಯ ಜೇಬಿಗೆ ಹಾಕಲಾಗುತ್ತಿದೆ. ಕೋವಿಡ್ ಪರಿಸ್ಥಿತಿಯ ಸಮಯದಲ್ಲಿ ಅವರು ಪಿಎಂ ಕೇರ್ಸ್ ಫಂಡ್ ಹೆಸರಿನಲ್ಲಿ ಹಣವನ್ನು ಸಂಗ್ರಹಿಸಿದರು. ಆದರೆ ಅವರು ಎಷ್ಟು ಹಣವನ್ನು ಸಂಗ್ರಹಿಸಿದರು ಎಂಬುದು ಯಾರಿಗೂ ತಿಳಿದಿಲ್ಲ. ಪ್ರತಿ ಯೋಜನೆಯಲ್ಲಿ ಬಿಜೆಪಿ ನಾಯಕರು ಎಷ್ಟು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂಬುದು ನಿಮಗೆ ತಿಳಿದಿರಬೇಕು. ಆದರೆ ಅವರು ಭ್ರಷ್ಟಾಚಾರ ಎಂದು ತೃಣಮೂಲ ಕಾಂಗ್ರೆಸ್‌ನತ್ತ ಬೆರಳು ತೋರಿಸುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು “ಕಳ್ಳರ ಪಕ್ಷ” ಎಂದು ಕರೆಯುವುದರ ಹಿಂದಿನ ಕಾರಣಗಳನ್ನು ವಿವರಿಸಿದ  ಮಮತಾ ಬ್ಯಾನರ್ಜಿ,  ಪಕ್ಷಕ್ಕಾಗಿ ಕೆಲಸ ಮಾಡದಂತೆ ಬಾಲು (ಆಹಾರ ಮತ್ತು ಸರಬರಾಜು ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್) ಅವರನ್ನು ಬಂಧಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಲು ಸಾಧ್ಯವಾಗದಂತೆ ಅವರನ್ನು ಜೈಲಿನಲ್ಲಿಟ್ಟರು. ಆದರೆ ಹಣ ಲೂಟಿ ಮಾಡಿದ ಯಾವುದೇ ಬಿಜೆಪಿ ನಾಯಕನನ್ನು ಬಂಧಿಸಲಾಗಿಲ್ಲ ಎಂದು ಮಮತಾ ಆರೋಪಿಸಿದ್ದಾರೆ.

ತೃಣಮೂಲ ನಾಯಕರನ್ನು “ಚೋರ್” ಎಂದು ಕರೆಯುವುದರ ವಿರುದ್ಧ ಸುವೇದು ಅಧಿಕಾರಿಯನ್ನು ಹೆಸರಿಸದೆ ವಾಗ್ಧಾಳಿ ನಡೆಸಿದ ಮಮತಾ ಬ್ಯಾನರ್ಜಿ, ದೇಶದ್ರೋಹಿಗಳು ಯಾವುದೇ ಚಿಕ್ಕ ಕಳ್ಳರು ಅಲ್ಲ, ಅವರು ದರೋಡೆಕೋರರು. ನೀವು ಅವರನ್ನು ಕಂಡಾಗ, ‘ಚೋರ್, ಚೋರ್’ ಎಂದು ಕೂಗಿ ಎಂದು ಟಿಎಂಸಿ ಕಾರ್ಯಕರ್ತರಿಗೆ ಹೇಳಿದ್ದಾರೆ.

ಅವರು ತೃಣಮೂಲ ಕಾರ್ಯಕರ್ತರನ್ನು ಒಗ್ಗಟ್ಟಿನಿಂದ ಇರುವಂತೆ ಕೇಳಿಕೊಂಡರು. ನಾನು ಯಾವುದೇ ಸ್ಥಳೀಯ ಮಟ್ಟದ ಜಗಳಕ್ಕೆ ಅವಕಾಶ ನೀಡುವುದಿಲ್ಲ. ನಾನು ಜನರಿಗಾಗಿ 365 ದಿನ ಕೆಲಸ ಮಾಡುತ್ತೇನೆ. ಆದರೆ ಯಾರಾದರೂ ತನ್ನನ್ನು ತಾನು ದೊಡ್ಡ ನಾಯಕ ಎಂದು ಪರಿಗಣಿಸಿದರೆ ಮತ್ತು ಪಕ್ಷಕ್ಕಿಂತ ಹೆಚ್ಚಾಗಿ ತನ್ನನ್ನು ತಾನು ಪ್ರೀತಿಸಿದರೆ, ಅವನು ಅಥವಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ತೃಣಮೂಲವು ಜನ ಸೇವೆ ಮಾಡಲು, ಸ್ವ ಸೇವೆಗೆ ಅಲ್ಲ ಎಂದು ಅವರು ಕಾರ್ಯಕರ್ತರಿಗೆ ಹೇಳಿದ್ದಾರೆ.

ಜಿಲ್ಲೆಯ ಕೆಲವು ಪ್ರಮುಖ ನಾಯಕರ ನಡುವೆ ಇತ್ತೀಚೆಗೆ ನಡೆದ ಬಹಿರಂಗ ಸಂಘರ್ಷದ ಘಟನೆಗಳ ಬಗ್ಗೆ ಸ್ಪಷ್ಟವಾದ ಉಲ್ಲೇಖವನ್ನು ನೀಡದೆ, ಎಲ್ಲರಿಗೂ ಮಮತಾ ಎಚ್ಚರಿಕೆ ನೀಡಿದರು. ಕೆಲವು ಪ್ರದೇಶಗಳಲ್ಲಿ, ಕೆಲವು ನಾಯಕರು ತಮ್ಮನ್ನು ತಾವು ದೊಡ್ಡವರು ಎಂದು ಭಾವಿಸಲು ಪ್ರಾರಂಭಿಸಿದರು ಎಂದು ನಾನು ಕೇಳಿದ್ದೇನೆ.  ಅವರು ತಮ್ಮ ಹಿತಾಸಕ್ತಿಗಳಿಗಾಗಿ ಪಕ್ಷವನ್ನು ಮರೆತಿದ್ದಾರೆ. ತನ್ನನ್ನು ತಾನು ಶ್ರೇಷ್ಠ ಎಂದು ಪರಿಗಣಿಸಿ ಇತರರನ್ನು ಕಡೆಗಣಿಸಬಾರದು. ತೃಣಮೂಲ ಮುಖಂಡರು ಹಾಗೂ ಬೆಂಬಲಿಗರು ಹಿರಿಯರು ಹಾಗೂ ಹಿರಿಯ ಮುಖಂಡರನ್ನು ಕಡೆಗಣಿಸದೆ ಸಂಘಟಿತರಾಗಿ ವಿದ್ಯಾರ್ಥಿಗಳು ಹಾಗೂ ಯುವಕರನ್ನು ಪಕ್ಷದ ಚಟುವಟಿಕೆಗಳಲ್ಲಿ ಮುಂಚೂಣಿಗೆ ತರಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಆಹಾರ ಮತ್ತು ಸರಬರಾಜು ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್ ಅವರನ್ನು ಪಡಿತರ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದ ಬಳಿಕ ಕಳೆದೆರಡು ತಿಂಗಳುಗಳಲ್ಲಿ ಬಂಗಾಳ ರಾಜಕೀಯದಲ್ಲಿ ‘ಚೋರ್’ ಪದದ ವ್ಯಾಪಕ ಬಳಕೆ ಕಂಡು ಬಂದಿದೆ. ಬಿಜೆಪಿ ಕಾರ್ಯಕರ್ತರು, ವಿಶೇಷವಾಗಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಮಮತಾ ಸೇರಿದಂತೆ ತೃಣಮೂಲ ನಾಯಕರ ಮೇಲೆ ಪದೇ ಪದೇ ಈ ಪದ ಬಳಕೆ ಮಾಡಿದ್ದರು.

ನಮ್ಮ ನಾಯಕರನ್ನು ಕಳ್ಳರು ಎಂದು ಕರೆಯುವ ಬಿಜೆಪಿಯ ಸಂಘಟಿತ ಪ್ರಚಾರದ ವಿರುದ್ಧ ‘ಚೋರ್‌’ ಪದವನ್ನು ಪ್ರತಿಯಾಗಿ ಬಳಸಲು ದೀದಿ ನಮಗೆ ಸಲಹೆ ನೀಡಿದ್ದಾರೆ. ಇದನ್ನು ರಾಜ್ಯಾದ್ಯಂತ ಬಳಸಲಾಗುವುದು ಎಂದು ಸಭೆಯ ನಂತರ ತೃಣಮೂಲ ನಾಯಕರೊಬ್ಬರು ಹೇಳಿದ್ದಾರೆ.

ಮಾಟುವಾ ಸಮುದಾಯದ ಹೆಚ್ಚಿನ ಜನ ಪ್ರಾಬಲ್ಯವಿರುವ ಉತ್ತರ 24-ಪರಗಣ ಜಿಲ್ಲೆಯಲ್ಲಿ ಬಿಜೆಪಿ ಈಗಾಗಲೇ ಚುನಾವಣೆ ಪ್ರಚಾರ ಮಾಡುತ್ತಿದೆ. ಮಟುವಾ ಸಮುದಾಯದ ಮತದ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇದಕ್ಕೆ ಪ್ರತಿಯಾಗಿ ಉತ್ತರ-24 ಪರಗಣಗಳಲ್ಲಿ ತೃಣಮೂಲ ಸಂಘಟನೆಯನ್ನು ನೋಡಿಕೊಳ್ಳಲು, ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಚಟುವಟಿಕೆಗಳನ್ನು ಪರಿಶೀಲಿಸಲು ಮತ್ತು ಅವರಿಗೆ ವರದಿಯನ್ನು ಸಲ್ಲಿಸಲು ನಿರ್ಮಲ್ ಘೋಷ್ ನೇತೃತ್ವದ 20 ಸದಸ್ಯರ ಕೋರ್ ಕಮಿಟಿಯನ್ನು ಮಮತಾ ರಚಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...