Homeಮುಖಪುಟದೆಹಲಿಯಲ್ಲಿರುವವರೆಲ್ಲ ನಮ್ಮ ಜನರೆ : ಮಮತಾ ಬ್ಯಾನರ್ಜಿಗೆ ಕೇಜ್ರಿವಾಲ್‌ ಉತ್ತರ

ದೆಹಲಿಯಲ್ಲಿರುವವರೆಲ್ಲ ನಮ್ಮ ಜನರೆ : ಮಮತಾ ಬ್ಯಾನರ್ಜಿಗೆ ಕೇಜ್ರಿವಾಲ್‌ ಉತ್ತರ

- Advertisement -
- Advertisement -

ಪಶ್ಚಿಮ ಬಂಗಾಳ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿನ ದಿನಗೂಲಿ ಕಾರ್ಮಿಕರು ಲಾಕ್‌ಡೌನ್‌ ಕಾರಣಕ್ಕಾಗಿ ದೆಹಲಿಯಲ್ಲಿ ಸಿಕ್ಕಿಹಾಕಿಕೊಂಡಿರುವುದರ ಕುರಿತು ಕಳವಳ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ “ರಾಷ್ಟ್ರ ರಾಜಧಾನಿಯಲ್ಲಿ ವಾಸಿಸುವ ಪ್ರತಿಯೊಬ್ಬರು ನಮ್ಮ ಜನರೆ. ಅವರನ್ನು ಸರ್ಕಾರವು ನೋಡಿಕೊಳ್ಳಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕರೊನಾ ವೈರಸ್ ಕಾಯಿಲೆಯ ವಿರುದ್ಧದ ಹೋರಾಟದಲ್ಲಿ ಕೈಗೊಳ್ಳಬೇಕಾದ ಹೊಸ ಕ್ರಮಗಳ ತಮ್ಮ ಸರ್ಕಾರದ ಕಾರ್ಯವೈಖರಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಾರ್ಖಂಡ್‌ನ ಹೇಮಂತ್ ಸೊರೆನ್ ಅವರಿಗೆ ಎಲ್ಲಾ ಜನರನ್ನು ಸುರಕ್ಷಿತವಾಗಿ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಕೇಜ್ರಿವಾಲ್ ಸೇರಿದಂತೆ 18 ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ತಮ್ಮ ರಾಜ್ಯದಿಂದ ವಲಸೆ ಬಂದ ಕಾರ್ಮಿಕರಿಗೆ ಮೂಲ ಆಶ್ರಯ, ಆಹಾರ ಮತ್ತು ಔಷಧಿಯನ್ನು ಒದಗಿಸುವಂತೆ ಒತ್ತಾಯಿಸಿದ್ದರು.

“ಕಳೆದ ಕೆಲವು ದಿನಗಳಿಂದ ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಮಮತಾ ದೀದಿ ಅವರು, ಅವರ ರಾಜ್ಯದ ಜನರನ್ನು ನೋಡಿಕೊಳ್ಳುವಂತೆ ಸಾಮಾಜಿಕ ಮಾಧ್ಯಮದಲ್ಲಿ ಕೇಳಿಕೊಂಡಿದ್ದಾರೆ. ದೆಹಲಿಯ ಗಡಿಯೊಳಗೆ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯನ್ನೂ ನೋಡಿಕೊಳ್ಳಲಾಗುವುದು ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ. ಅವರು ನಮ್ಮ ಜವಾಬ್ದಾರಿ ಮತ್ತು ನಮ್ಮ ಜನರು. ಅವರು ಜಾರ್ಖಂಡ್, ಬಿಹಾರ, ಯುಪಿ, ತಮಿಳುನಾಡು, ಕೇರಳ ಅಥವಾ ಇನ್ನಾವುದೇ ಸ್ಥಳಕ್ಕೆ ಸೇರಿದವರಾಗಿರಬಹುದು ಆದರೆ ಅವರು ಈಗ ದೆಹಲಿಗೆ ಸೇರಿದವರಾಗಿದ್ದಾರೆ. ಅವರು ಅವರ ಬಗ್ಗೆ ಸ್ವಲ್ಪವೂ ಚಿಂತಿಸಬಾರದು” ಎಂದು ಕೇಜ್ರಿವಾಲ್ ಹೇಳಿದರು.

“ನಾವು ಈಗ ಪ್ರತಿದಿನ 100 ಹೊಸ ಕರೋನಾ ಪ್ರಕರಣಗಳನ್ನು ಎದುರಿಸಲು ಸಿದ್ಧರಿದ್ದೇವೆ ಮತ್ತು ಪರಿಸ್ಥಿತಿ ಉಲ್ಬಣಗೊಂಡರೆ ಪ್ರತಿದಿನ 500 ರಿಂದ 1000 ಹೊಸ ಪ್ರಕರಣಗಳನ್ನು ಎದುರಿಸಲು ನಾವು ಸಿದ್ಧತೆ ನಡೆಸುತ್ತಿದ್ದೇವೆ … ನೂರಾರು ಆಸ್ಪತ್ರೆಗಳು, ಆಂಬ್ಯುಲೆನ್ಸ್, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಸಿದ್ಧಪಡಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಕೇಜ್ರಿವಾಲ್ ಅವರು ಬಡ ಮತ್ತು ನಿರ್ಗತಿಕರಿಗೆ ಪ್ರತಿದಿನ ಆಹಾರವನ್ನು ನೀಡುತ್ತಿರುವ ರಾತ್ರಿ ಕೇಂದ್ರಗಳ ಬಗ್ಗೆ ಮಾತನಾಡುತ್ತಾ, ನಾವು ಇಂದಿನಿಂದ 325 ಶಾಲೆಗಳಲ್ಲಿ ಊಟ ಮತ್ತು ಭೋಜನವನ್ನು ಒದಗಿಸಲು ವ್ಯವಸ್ಥೆ ಮಾಡಿದ್ದೇವೆ. ಈ ಎಲ್ಲಾ ಶಾಲೆಗಳಲ್ಲಿ ಸುಮಾರು 500 ಜನರಿಗೆ ಆಹಾರವನ್ನು ನೀಡಲಾಗುವುದು. ಇಲ್ಲಿಯವರೆಗೆ ನಾವು ಪ್ರತಿದಿನ 20,000 ಜನರಿಗೆ ಆಹಾರವನ್ನು ಒದಗಿಸುತ್ತಿದ್ದೇವೆ ಮತ್ತು ಇಂದಿನಿಂದ ಈ ಸಂಖ್ಯೆ ಸುಮಾರು 2,00,000ಕ್ಕೆ ಹೆಚ್ಚಾಗುತ್ತದೆ” ಎಂದು ಅವರು ಹೇಳಿದರು.

“ನಾಳೆಯಿಂದ ಈ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು ಮತ್ತು ನಾವು ಪ್ರತಿದಿನ 4,00,000 ಜನರಿಗೆ ಆಹಾರವನ್ನು ನೀಡುತ್ತೇವೆ. ನಾವು ದೆಹಲಿಯಾದ್ಯಂತ ಕೇಂದ್ರಗಳನ್ನು ವಿತರಿಸುತ್ತಿದ್ದೇವೆ ಇದರಿಂದ ಜನರು ಹೆಚ್ಚು ದೂರ ಪ್ರಯಾಣಿಸಬೇಕಾಗಿಲ್ಲ. ಯಾರೂ ಹಸಿವಿನಿಂದ ಮಲಗುವುದಿಲ್ಲ ಎಂದು ನಾವು ಖಚಿತಪಡಿಸುತ್ತೇವೆ.” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...