Homeಮುಖಪುಟದೆಹಲಿಯಲ್ಲಿರುವವರೆಲ್ಲ ನಮ್ಮ ಜನರೆ : ಮಮತಾ ಬ್ಯಾನರ್ಜಿಗೆ ಕೇಜ್ರಿವಾಲ್‌ ಉತ್ತರ

ದೆಹಲಿಯಲ್ಲಿರುವವರೆಲ್ಲ ನಮ್ಮ ಜನರೆ : ಮಮತಾ ಬ್ಯಾನರ್ಜಿಗೆ ಕೇಜ್ರಿವಾಲ್‌ ಉತ್ತರ

- Advertisement -
- Advertisement -

ಪಶ್ಚಿಮ ಬಂಗಾಳ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿನ ದಿನಗೂಲಿ ಕಾರ್ಮಿಕರು ಲಾಕ್‌ಡೌನ್‌ ಕಾರಣಕ್ಕಾಗಿ ದೆಹಲಿಯಲ್ಲಿ ಸಿಕ್ಕಿಹಾಕಿಕೊಂಡಿರುವುದರ ಕುರಿತು ಕಳವಳ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ “ರಾಷ್ಟ್ರ ರಾಜಧಾನಿಯಲ್ಲಿ ವಾಸಿಸುವ ಪ್ರತಿಯೊಬ್ಬರು ನಮ್ಮ ಜನರೆ. ಅವರನ್ನು ಸರ್ಕಾರವು ನೋಡಿಕೊಳ್ಳಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕರೊನಾ ವೈರಸ್ ಕಾಯಿಲೆಯ ವಿರುದ್ಧದ ಹೋರಾಟದಲ್ಲಿ ಕೈಗೊಳ್ಳಬೇಕಾದ ಹೊಸ ಕ್ರಮಗಳ ತಮ್ಮ ಸರ್ಕಾರದ ಕಾರ್ಯವೈಖರಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಾರ್ಖಂಡ್‌ನ ಹೇಮಂತ್ ಸೊರೆನ್ ಅವರಿಗೆ ಎಲ್ಲಾ ಜನರನ್ನು ಸುರಕ್ಷಿತವಾಗಿ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಕೇಜ್ರಿವಾಲ್ ಸೇರಿದಂತೆ 18 ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ತಮ್ಮ ರಾಜ್ಯದಿಂದ ವಲಸೆ ಬಂದ ಕಾರ್ಮಿಕರಿಗೆ ಮೂಲ ಆಶ್ರಯ, ಆಹಾರ ಮತ್ತು ಔಷಧಿಯನ್ನು ಒದಗಿಸುವಂತೆ ಒತ್ತಾಯಿಸಿದ್ದರು.

“ಕಳೆದ ಕೆಲವು ದಿನಗಳಿಂದ ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಮಮತಾ ದೀದಿ ಅವರು, ಅವರ ರಾಜ್ಯದ ಜನರನ್ನು ನೋಡಿಕೊಳ್ಳುವಂತೆ ಸಾಮಾಜಿಕ ಮಾಧ್ಯಮದಲ್ಲಿ ಕೇಳಿಕೊಂಡಿದ್ದಾರೆ. ದೆಹಲಿಯ ಗಡಿಯೊಳಗೆ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯನ್ನೂ ನೋಡಿಕೊಳ್ಳಲಾಗುವುದು ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ. ಅವರು ನಮ್ಮ ಜವಾಬ್ದಾರಿ ಮತ್ತು ನಮ್ಮ ಜನರು. ಅವರು ಜಾರ್ಖಂಡ್, ಬಿಹಾರ, ಯುಪಿ, ತಮಿಳುನಾಡು, ಕೇರಳ ಅಥವಾ ಇನ್ನಾವುದೇ ಸ್ಥಳಕ್ಕೆ ಸೇರಿದವರಾಗಿರಬಹುದು ಆದರೆ ಅವರು ಈಗ ದೆಹಲಿಗೆ ಸೇರಿದವರಾಗಿದ್ದಾರೆ. ಅವರು ಅವರ ಬಗ್ಗೆ ಸ್ವಲ್ಪವೂ ಚಿಂತಿಸಬಾರದು” ಎಂದು ಕೇಜ್ರಿವಾಲ್ ಹೇಳಿದರು.

“ನಾವು ಈಗ ಪ್ರತಿದಿನ 100 ಹೊಸ ಕರೋನಾ ಪ್ರಕರಣಗಳನ್ನು ಎದುರಿಸಲು ಸಿದ್ಧರಿದ್ದೇವೆ ಮತ್ತು ಪರಿಸ್ಥಿತಿ ಉಲ್ಬಣಗೊಂಡರೆ ಪ್ರತಿದಿನ 500 ರಿಂದ 1000 ಹೊಸ ಪ್ರಕರಣಗಳನ್ನು ಎದುರಿಸಲು ನಾವು ಸಿದ್ಧತೆ ನಡೆಸುತ್ತಿದ್ದೇವೆ … ನೂರಾರು ಆಸ್ಪತ್ರೆಗಳು, ಆಂಬ್ಯುಲೆನ್ಸ್, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಸಿದ್ಧಪಡಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಕೇಜ್ರಿವಾಲ್ ಅವರು ಬಡ ಮತ್ತು ನಿರ್ಗತಿಕರಿಗೆ ಪ್ರತಿದಿನ ಆಹಾರವನ್ನು ನೀಡುತ್ತಿರುವ ರಾತ್ರಿ ಕೇಂದ್ರಗಳ ಬಗ್ಗೆ ಮಾತನಾಡುತ್ತಾ, ನಾವು ಇಂದಿನಿಂದ 325 ಶಾಲೆಗಳಲ್ಲಿ ಊಟ ಮತ್ತು ಭೋಜನವನ್ನು ಒದಗಿಸಲು ವ್ಯವಸ್ಥೆ ಮಾಡಿದ್ದೇವೆ. ಈ ಎಲ್ಲಾ ಶಾಲೆಗಳಲ್ಲಿ ಸುಮಾರು 500 ಜನರಿಗೆ ಆಹಾರವನ್ನು ನೀಡಲಾಗುವುದು. ಇಲ್ಲಿಯವರೆಗೆ ನಾವು ಪ್ರತಿದಿನ 20,000 ಜನರಿಗೆ ಆಹಾರವನ್ನು ಒದಗಿಸುತ್ತಿದ್ದೇವೆ ಮತ್ತು ಇಂದಿನಿಂದ ಈ ಸಂಖ್ಯೆ ಸುಮಾರು 2,00,000ಕ್ಕೆ ಹೆಚ್ಚಾಗುತ್ತದೆ” ಎಂದು ಅವರು ಹೇಳಿದರು.

“ನಾಳೆಯಿಂದ ಈ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು ಮತ್ತು ನಾವು ಪ್ರತಿದಿನ 4,00,000 ಜನರಿಗೆ ಆಹಾರವನ್ನು ನೀಡುತ್ತೇವೆ. ನಾವು ದೆಹಲಿಯಾದ್ಯಂತ ಕೇಂದ್ರಗಳನ್ನು ವಿತರಿಸುತ್ತಿದ್ದೇವೆ ಇದರಿಂದ ಜನರು ಹೆಚ್ಚು ದೂರ ಪ್ರಯಾಣಿಸಬೇಕಾಗಿಲ್ಲ. ಯಾರೂ ಹಸಿವಿನಿಂದ ಮಲಗುವುದಿಲ್ಲ ಎಂದು ನಾವು ಖಚಿತಪಡಿಸುತ್ತೇವೆ.” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...