Homeಮುಖಪುಟದೆಹಲಿಯಲ್ಲಿರುವವರೆಲ್ಲ ನಮ್ಮ ಜನರೆ : ಮಮತಾ ಬ್ಯಾನರ್ಜಿಗೆ ಕೇಜ್ರಿವಾಲ್‌ ಉತ್ತರ

ದೆಹಲಿಯಲ್ಲಿರುವವರೆಲ್ಲ ನಮ್ಮ ಜನರೆ : ಮಮತಾ ಬ್ಯಾನರ್ಜಿಗೆ ಕೇಜ್ರಿವಾಲ್‌ ಉತ್ತರ

- Advertisement -
- Advertisement -

ಪಶ್ಚಿಮ ಬಂಗಾಳ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿನ ದಿನಗೂಲಿ ಕಾರ್ಮಿಕರು ಲಾಕ್‌ಡೌನ್‌ ಕಾರಣಕ್ಕಾಗಿ ದೆಹಲಿಯಲ್ಲಿ ಸಿಕ್ಕಿಹಾಕಿಕೊಂಡಿರುವುದರ ಕುರಿತು ಕಳವಳ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ “ರಾಷ್ಟ್ರ ರಾಜಧಾನಿಯಲ್ಲಿ ವಾಸಿಸುವ ಪ್ರತಿಯೊಬ್ಬರು ನಮ್ಮ ಜನರೆ. ಅವರನ್ನು ಸರ್ಕಾರವು ನೋಡಿಕೊಳ್ಳಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕರೊನಾ ವೈರಸ್ ಕಾಯಿಲೆಯ ವಿರುದ್ಧದ ಹೋರಾಟದಲ್ಲಿ ಕೈಗೊಳ್ಳಬೇಕಾದ ಹೊಸ ಕ್ರಮಗಳ ತಮ್ಮ ಸರ್ಕಾರದ ಕಾರ್ಯವೈಖರಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಾರ್ಖಂಡ್‌ನ ಹೇಮಂತ್ ಸೊರೆನ್ ಅವರಿಗೆ ಎಲ್ಲಾ ಜನರನ್ನು ಸುರಕ್ಷಿತವಾಗಿ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಕೇಜ್ರಿವಾಲ್ ಸೇರಿದಂತೆ 18 ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ತಮ್ಮ ರಾಜ್ಯದಿಂದ ವಲಸೆ ಬಂದ ಕಾರ್ಮಿಕರಿಗೆ ಮೂಲ ಆಶ್ರಯ, ಆಹಾರ ಮತ್ತು ಔಷಧಿಯನ್ನು ಒದಗಿಸುವಂತೆ ಒತ್ತಾಯಿಸಿದ್ದರು.

“ಕಳೆದ ಕೆಲವು ದಿನಗಳಿಂದ ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಮಮತಾ ದೀದಿ ಅವರು, ಅವರ ರಾಜ್ಯದ ಜನರನ್ನು ನೋಡಿಕೊಳ್ಳುವಂತೆ ಸಾಮಾಜಿಕ ಮಾಧ್ಯಮದಲ್ಲಿ ಕೇಳಿಕೊಂಡಿದ್ದಾರೆ. ದೆಹಲಿಯ ಗಡಿಯೊಳಗೆ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯನ್ನೂ ನೋಡಿಕೊಳ್ಳಲಾಗುವುದು ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ. ಅವರು ನಮ್ಮ ಜವಾಬ್ದಾರಿ ಮತ್ತು ನಮ್ಮ ಜನರು. ಅವರು ಜಾರ್ಖಂಡ್, ಬಿಹಾರ, ಯುಪಿ, ತಮಿಳುನಾಡು, ಕೇರಳ ಅಥವಾ ಇನ್ನಾವುದೇ ಸ್ಥಳಕ್ಕೆ ಸೇರಿದವರಾಗಿರಬಹುದು ಆದರೆ ಅವರು ಈಗ ದೆಹಲಿಗೆ ಸೇರಿದವರಾಗಿದ್ದಾರೆ. ಅವರು ಅವರ ಬಗ್ಗೆ ಸ್ವಲ್ಪವೂ ಚಿಂತಿಸಬಾರದು” ಎಂದು ಕೇಜ್ರಿವಾಲ್ ಹೇಳಿದರು.

“ನಾವು ಈಗ ಪ್ರತಿದಿನ 100 ಹೊಸ ಕರೋನಾ ಪ್ರಕರಣಗಳನ್ನು ಎದುರಿಸಲು ಸಿದ್ಧರಿದ್ದೇವೆ ಮತ್ತು ಪರಿಸ್ಥಿತಿ ಉಲ್ಬಣಗೊಂಡರೆ ಪ್ರತಿದಿನ 500 ರಿಂದ 1000 ಹೊಸ ಪ್ರಕರಣಗಳನ್ನು ಎದುರಿಸಲು ನಾವು ಸಿದ್ಧತೆ ನಡೆಸುತ್ತಿದ್ದೇವೆ … ನೂರಾರು ಆಸ್ಪತ್ರೆಗಳು, ಆಂಬ್ಯುಲೆನ್ಸ್, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಸಿದ್ಧಪಡಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಕೇಜ್ರಿವಾಲ್ ಅವರು ಬಡ ಮತ್ತು ನಿರ್ಗತಿಕರಿಗೆ ಪ್ರತಿದಿನ ಆಹಾರವನ್ನು ನೀಡುತ್ತಿರುವ ರಾತ್ರಿ ಕೇಂದ್ರಗಳ ಬಗ್ಗೆ ಮಾತನಾಡುತ್ತಾ, ನಾವು ಇಂದಿನಿಂದ 325 ಶಾಲೆಗಳಲ್ಲಿ ಊಟ ಮತ್ತು ಭೋಜನವನ್ನು ಒದಗಿಸಲು ವ್ಯವಸ್ಥೆ ಮಾಡಿದ್ದೇವೆ. ಈ ಎಲ್ಲಾ ಶಾಲೆಗಳಲ್ಲಿ ಸುಮಾರು 500 ಜನರಿಗೆ ಆಹಾರವನ್ನು ನೀಡಲಾಗುವುದು. ಇಲ್ಲಿಯವರೆಗೆ ನಾವು ಪ್ರತಿದಿನ 20,000 ಜನರಿಗೆ ಆಹಾರವನ್ನು ಒದಗಿಸುತ್ತಿದ್ದೇವೆ ಮತ್ತು ಇಂದಿನಿಂದ ಈ ಸಂಖ್ಯೆ ಸುಮಾರು 2,00,000ಕ್ಕೆ ಹೆಚ್ಚಾಗುತ್ತದೆ” ಎಂದು ಅವರು ಹೇಳಿದರು.

“ನಾಳೆಯಿಂದ ಈ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು ಮತ್ತು ನಾವು ಪ್ರತಿದಿನ 4,00,000 ಜನರಿಗೆ ಆಹಾರವನ್ನು ನೀಡುತ್ತೇವೆ. ನಾವು ದೆಹಲಿಯಾದ್ಯಂತ ಕೇಂದ್ರಗಳನ್ನು ವಿತರಿಸುತ್ತಿದ್ದೇವೆ ಇದರಿಂದ ಜನರು ಹೆಚ್ಚು ದೂರ ಪ್ರಯಾಣಿಸಬೇಕಾಗಿಲ್ಲ. ಯಾರೂ ಹಸಿವಿನಿಂದ ಮಲಗುವುದಿಲ್ಲ ಎಂದು ನಾವು ಖಚಿತಪಡಿಸುತ್ತೇವೆ.” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...