Homeಮುಖಪುಟದೆಹಲಿಯಲ್ಲಿರುವವರೆಲ್ಲ ನಮ್ಮ ಜನರೆ : ಮಮತಾ ಬ್ಯಾನರ್ಜಿಗೆ ಕೇಜ್ರಿವಾಲ್‌ ಉತ್ತರ

ದೆಹಲಿಯಲ್ಲಿರುವವರೆಲ್ಲ ನಮ್ಮ ಜನರೆ : ಮಮತಾ ಬ್ಯಾನರ್ಜಿಗೆ ಕೇಜ್ರಿವಾಲ್‌ ಉತ್ತರ

- Advertisement -
- Advertisement -

ಪಶ್ಚಿಮ ಬಂಗಾಳ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿನ ದಿನಗೂಲಿ ಕಾರ್ಮಿಕರು ಲಾಕ್‌ಡೌನ್‌ ಕಾರಣಕ್ಕಾಗಿ ದೆಹಲಿಯಲ್ಲಿ ಸಿಕ್ಕಿಹಾಕಿಕೊಂಡಿರುವುದರ ಕುರಿತು ಕಳವಳ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ “ರಾಷ್ಟ್ರ ರಾಜಧಾನಿಯಲ್ಲಿ ವಾಸಿಸುವ ಪ್ರತಿಯೊಬ್ಬರು ನಮ್ಮ ಜನರೆ. ಅವರನ್ನು ಸರ್ಕಾರವು ನೋಡಿಕೊಳ್ಳಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಕರೊನಾ ವೈರಸ್ ಕಾಯಿಲೆಯ ವಿರುದ್ಧದ ಹೋರಾಟದಲ್ಲಿ ಕೈಗೊಳ್ಳಬೇಕಾದ ಹೊಸ ಕ್ರಮಗಳ ತಮ್ಮ ಸರ್ಕಾರದ ಕಾರ್ಯವೈಖರಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಾರ್ಖಂಡ್‌ನ ಹೇಮಂತ್ ಸೊರೆನ್ ಅವರಿಗೆ ಎಲ್ಲಾ ಜನರನ್ನು ಸುರಕ್ಷಿತವಾಗಿ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಕೇಜ್ರಿವಾಲ್ ಸೇರಿದಂತೆ 18 ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ತಮ್ಮ ರಾಜ್ಯದಿಂದ ವಲಸೆ ಬಂದ ಕಾರ್ಮಿಕರಿಗೆ ಮೂಲ ಆಶ್ರಯ, ಆಹಾರ ಮತ್ತು ಔಷಧಿಯನ್ನು ಒದಗಿಸುವಂತೆ ಒತ್ತಾಯಿಸಿದ್ದರು.

“ಕಳೆದ ಕೆಲವು ದಿನಗಳಿಂದ ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಮಮತಾ ದೀದಿ ಅವರು, ಅವರ ರಾಜ್ಯದ ಜನರನ್ನು ನೋಡಿಕೊಳ್ಳುವಂತೆ ಸಾಮಾಜಿಕ ಮಾಧ್ಯಮದಲ್ಲಿ ಕೇಳಿಕೊಂಡಿದ್ದಾರೆ. ದೆಹಲಿಯ ಗಡಿಯೊಳಗೆ ವಾಸಿಸುವ ಪ್ರತಿಯೊಬ್ಬ ವ್ಯಕ್ತಿಯನ್ನೂ ನೋಡಿಕೊಳ್ಳಲಾಗುವುದು ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ. ಅವರು ನಮ್ಮ ಜವಾಬ್ದಾರಿ ಮತ್ತು ನಮ್ಮ ಜನರು. ಅವರು ಜಾರ್ಖಂಡ್, ಬಿಹಾರ, ಯುಪಿ, ತಮಿಳುನಾಡು, ಕೇರಳ ಅಥವಾ ಇನ್ನಾವುದೇ ಸ್ಥಳಕ್ಕೆ ಸೇರಿದವರಾಗಿರಬಹುದು ಆದರೆ ಅವರು ಈಗ ದೆಹಲಿಗೆ ಸೇರಿದವರಾಗಿದ್ದಾರೆ. ಅವರು ಅವರ ಬಗ್ಗೆ ಸ್ವಲ್ಪವೂ ಚಿಂತಿಸಬಾರದು” ಎಂದು ಕೇಜ್ರಿವಾಲ್ ಹೇಳಿದರು.

“ನಾವು ಈಗ ಪ್ರತಿದಿನ 100 ಹೊಸ ಕರೋನಾ ಪ್ರಕರಣಗಳನ್ನು ಎದುರಿಸಲು ಸಿದ್ಧರಿದ್ದೇವೆ ಮತ್ತು ಪರಿಸ್ಥಿತಿ ಉಲ್ಬಣಗೊಂಡರೆ ಪ್ರತಿದಿನ 500 ರಿಂದ 1000 ಹೊಸ ಪ್ರಕರಣಗಳನ್ನು ಎದುರಿಸಲು ನಾವು ಸಿದ್ಧತೆ ನಡೆಸುತ್ತಿದ್ದೇವೆ … ನೂರಾರು ಆಸ್ಪತ್ರೆಗಳು, ಆಂಬ್ಯುಲೆನ್ಸ್, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಸಿದ್ಧಪಡಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಕೇಜ್ರಿವಾಲ್ ಅವರು ಬಡ ಮತ್ತು ನಿರ್ಗತಿಕರಿಗೆ ಪ್ರತಿದಿನ ಆಹಾರವನ್ನು ನೀಡುತ್ತಿರುವ ರಾತ್ರಿ ಕೇಂದ್ರಗಳ ಬಗ್ಗೆ ಮಾತನಾಡುತ್ತಾ, ನಾವು ಇಂದಿನಿಂದ 325 ಶಾಲೆಗಳಲ್ಲಿ ಊಟ ಮತ್ತು ಭೋಜನವನ್ನು ಒದಗಿಸಲು ವ್ಯವಸ್ಥೆ ಮಾಡಿದ್ದೇವೆ. ಈ ಎಲ್ಲಾ ಶಾಲೆಗಳಲ್ಲಿ ಸುಮಾರು 500 ಜನರಿಗೆ ಆಹಾರವನ್ನು ನೀಡಲಾಗುವುದು. ಇಲ್ಲಿಯವರೆಗೆ ನಾವು ಪ್ರತಿದಿನ 20,000 ಜನರಿಗೆ ಆಹಾರವನ್ನು ಒದಗಿಸುತ್ತಿದ್ದೇವೆ ಮತ್ತು ಇಂದಿನಿಂದ ಈ ಸಂಖ್ಯೆ ಸುಮಾರು 2,00,000ಕ್ಕೆ ಹೆಚ್ಚಾಗುತ್ತದೆ” ಎಂದು ಅವರು ಹೇಳಿದರು.

“ನಾಳೆಯಿಂದ ಈ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು ಮತ್ತು ನಾವು ಪ್ರತಿದಿನ 4,00,000 ಜನರಿಗೆ ಆಹಾರವನ್ನು ನೀಡುತ್ತೇವೆ. ನಾವು ದೆಹಲಿಯಾದ್ಯಂತ ಕೇಂದ್ರಗಳನ್ನು ವಿತರಿಸುತ್ತಿದ್ದೇವೆ ಇದರಿಂದ ಜನರು ಹೆಚ್ಚು ದೂರ ಪ್ರಯಾಣಿಸಬೇಕಾಗಿಲ್ಲ. ಯಾರೂ ಹಸಿವಿನಿಂದ ಮಲಗುವುದಿಲ್ಲ ಎಂದು ನಾವು ಖಚಿತಪಡಿಸುತ್ತೇವೆ.” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...