Homeಮುಖಪುಟ‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

ಕೊನ್ಯಾಕ್‌‌ ಯೂನಿಯನ್‌ ನಾಗಾಲ್ಯಾಂಡ್‌ ಸೇರಿದಂತೆ ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಸಂಘಟನೆಯಾಗಿದೆ.

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಭಾರತೀಯ ಸೇನೆ 14 ನಾಗರಿಕರನ್ನು ಹತ್ಯೆ ಮಾಡಿರುವ ಹಿನ್ನಲೆಯಲ್ಲಿ, ಕೊನ್ಯಾಕ್‌ ವಿದ್ಯಾರ್ಥಿ ಒಕ್ಕೂಟವು ರಾಜ್ಯದಾದ್ಯಂತ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ ಸಶಸ್ತ್ರ ಪಡೆಗಳು ಸೋಮ ಜಿಲ್ಲೆಯಲ್ಲಿ ಓಡಾಡದಂತೆ ವಿದ್ಯಾರ್ಥಿ ಒಕ್ಕೂಟ ‘ಎಚ್ಚರಿಕೆ’ ನೀಡಿದೆ. ಕೊನ್ಯಾಕ್‌‌ ಯೂನಿಯನ್‌ ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಸಂಘಟನೆಯಾಗಿದೆ.

“ಯಾವುದೇ ಮಿಲಿಟರಿ ಸಿಬ್ಬಂದಿ ಈ ಆದೇಶವನ್ನು ಉಲ್ಲಂಘಿಸಿಕೊಂಡು ಓಡಾಡಿದರೆ, ನಡೆಯುವ ಅಪಾಯಕ್ಕೆ ಅವರೇ ಜವಾಬ್ದಾರಿ. ಇದು ನಮ್ಮ ಎಚ್ಚರಿಕೆಯಾಗಿದ್ದು, ನಾವು ಏಳು ದಿನಗಳವರೆಗೆ ಶೋಕಾಚರಣೆ ಮಾಡುತ್ತಿದ್ದೇವೆ. ನಮ್ಮ ಜನರ ಸುರಕ್ಷತೆಗಾಗಿ, ನಮ್ಮ ಗ್ರಾಮ ಮತ್ತು ನಮ್ಮ ಅಧಿಕಾರ ವ್ಯಾಪ್ತಿಯಿಂದ ಅಸ್ಸಾಂ ರೈಫಲ್ಸ್ ಅನ್ನು ತೆಗೆದುಹಾಕಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ” ಎಂದು ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆಂದು ಇಂಡಿಯಾ ಟುಡೇ ವರದಿ ಮಾಡಿದೆ.

ಪ್ರಭಾವಿ ವಿದ್ಯಾರ್ಥಿ ಒಕ್ಕೂಟವಾದ ಕೊನ್ಯಾಕ್ ಡಿಸೆಂಬರ್ 7 ರಿಂದ ಏಳು ದಿನಗಳ ಶೋಕಾಚರಣೆ ಅವಧಿಯನ್ನು ಘೋಷಿಸಿದೆ.

ಇದನ್ನೂ ಓದಿ:ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

“ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟವು, ತೀವ್ರ ಶೋಕಾಚರಣೆಯ ವಾರದ ಸಮಯದಲ್ಲಿ ಸೋಮ ಜಿಲ್ಲೆಯೊಳಗೆ ಮಿಲಿಟರಿ ಸಿಬ್ಬಂದಿಯ ಓಡಾಟವನ್ನು ನಿಷೇಧಿಸುವ ಆದೇಶ ನೀಡಿದೆ” ಎಂದು ನೋಕ್ಲೆಮ್ ಹೇಳಿದ್ದಾರೆ.

“AFSPA(ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ) ಯ ಲಾಭವನ್ನು ಪಡೆದುಕೊಂಡು, ಭದ್ರತಾ ಪಡೆಗಳು ಇತರ ನ್ಯಾಯವ್ಯಾಪ್ತಿಗಳಿಂದ ನಮ್ಮ ಅಧಿಕಾರ ವ್ಯಾಪ್ತಿಗೆ ಬರುತ್ತಿವೆ. ಅವರಿಗೆ ಅದರ ಬಗ್ಗೆ ತಿಳಿದಿಲ್ಲ. ಯಾವುದರ ಅರಿವೂ ಇಲ್ಲದೇ ಕಾರ್ಯಾಚರಣೆ ನಡೆಸಿ ನಮ್ಮ ಜನರಿಗೆ ಕಿರುಕುಳ ನೀಡುತ್ತಿದ್ದಾರೆ, ಇದನ್ನು ಸಹಿಸಲಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

“ಶೋಕದ ಅವಧಿಯಲ್ಲಿ, ಸಶಸ್ತ್ರ ಪಡೆಗಳು ನಮ್ಮ ಪ್ರದೇಶದಲ್ಲಿ, ಇಡೀ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಬಾರದು, ತಿರುಗಾಡಬಾರದು” ಎಂದು ಅವರು ಹೇಳಿದ್ದಾರೆ.

ಹತ್ಯೆಯ ಬಗ್ಗೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ‘ಸುಳ್ಳು’ ಹೇಳಿಕೆ ನೀಡಿದ್ದಾರೆ ಎಂದು ಕೋನ್ಯಾಕ್ ವಿದ್ಯಾರ್ಥಿ ಸಂಘ ಆಪಾದಿಸಿದ್ದು, ಅದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ.

“ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಸುಳ್ಳು ಹೇಳಿಕೆ ನೀಡಿದ್ದಾರೆ. ಸಚಿವರು ತಮ್ಮ ಮಾತು ಮತ್ತು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿದ್ದೇವೆ. ಅವರು ತಮ್ಮ ಹೇಳಿಕೆಯನ್ನು ಹಿಂದಕ್ಕೆ ತೆಗೆದುಕೊಳ್ಳದಿದ್ದರೆ, ನಾವು ಮುಂದೆ ಹೋಗುತ್ತೇವೆ. ನಮ್ಮ ಆಳವಾದ ಶೋಕಾಚರಣೆಯ ವಾರ ನಿನ್ನೆ ಪ್ರಾರಂಭವಾಯಿತು ಮತ್ತು ಮುಂದಿನ ಆರು ದಿನಗಳವರೆಗೆ ನಾವು ಶೋಕಿಸುತ್ತೇವೆ” ಎಂದು ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆ.

ನಾಗಾಲ್ಯಾಂಡ್‌ನಿಂದ AFSPA ಹಿಂಪಡೆಯಬೇಕು ಮತ್ತು ಕಾನೂನನ್ನು ರದ್ದುಪಡಿಸುವವರೆಗೆ ಕೊನ್ಯಾಕ್ ವಿದ್ಯಾರ್ಥಿ ಸಂಘವು ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

“AFSPA ರದ್ದುಪಡಿಸುವವರೆಗೆ ನಾವು ಹೋರಾಡುತ್ತೇವೆ. ನೀವು ಹಣದಿಂದ ವ್ಯಕ್ತಿಯ ಜೀವನವನ್ನು ಖರೀದಿಸಬಹುದೇ? ನಾವು ಯಾವುದೇ ವಿಷಾದಕ್ಕಾಗಿ ವಿನಂತಿಸುತ್ತಿಲ್ಲ. ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳು ಏನೇ ಹೇಳಿದರೂ ನಾವು ವಿಷಾದಕ್ಕೆ ಬಗ್ಗುವುದಿಲ್ಲ” ಎಂದು ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆ.

ಕೊನೆಯ ಶೋಕಾಚರಣೆಯ ದಿನದವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳು, ಎಲ್ಲಾ ಅಧೀನ ಅಧಿಕಾರಿಗಳ ಕಚೇರಿಗಳು ಮತ್ತು ಫೆಡರೇಶನ್ ಘಟಕಗಳು ಮತ್ತು ಎಲ್ಲಾ ವ್ಯಾಪಾರ ಸಂಸ್ಥೆಗಳು ತಮ್ಮ ಕಟ್ಟಡಗಳ ಮೇಲೆ ಕಪ್ಪು ಬಾವುಟವನ್ನು ಹಾರಿಸುವಂತೆ ಕೊನ್ಯಾಕ್ ವಿದ್ಯಾರ್ಥಿಗಳ ಒಕ್ಕೂಟವು ಕೇಳಿಕೊಂಡಿದೆ.

7 ದಿನಗಳ ಶೋಕಾಚರಣೆಯ ಅವಧಿಯಲ್ಲಿ ದ್ವಿಚಕ್ರ ವಾಹನಗಳು ಸೇರಿದಂತೆ ಎಲ್ಲಾ ವಾಹನಗಳ ಮೇಲೆ ಕಪ್ಪು ಬಾವುಟ ಪ್ರದರ್ಶಿಸುವಂತೆ ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಮ್ಮ ತೋಳುಗಳಿಗೆ ಕಪ್ಪು ಬ್ಯಾಡ್ಜ್ ಅಥವಾ ಕಪ್ಪು ರಿಬ್ಬನ್‌ಗಳನ್ನು ಧರಿಸಲು ವಿದ್ಯಾರ್ಥಿ ಒಕ್ಕೂಟ ಕೇಳಿಕೊಂಡಿದೆ.

ಮಂಗಳವಾರ, ನಾಗಾಲ್ಯಾಂಡ್ ಸಚಿವ ಸಂಪುಟವು ರಾಜ್ಯದಲ್ಲಿ ತಕ್ಷಣವೇ AFSPA-1958 ಕಾಯ್ದೆಯನ್ನು ರದ್ದುಗೊಳಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿದೆ.

ಈಶಾನ್ಯ ಭಾರತದಲ್ಲಿ ಹಲವಾರು ಸಂಘಟನೆಗಳು, ಬುಡಕಟ್ಟು ಸಂಸ್ಥೆಗಳು, ವಿದ್ಯಾರ್ಥಿಗಳ ಸಂಘಟನೆಗಳು, ನಾಗರಿಕ ಹಕ್ಕುಗಳ ಗುಂಪುಗಳು ಮತ್ತು ರಾಜಕೀಯ ಪಕ್ಷಗಳು AFSPA ಅನ್ನು ತೆಗೆದುಹಾಕಬೇಕೆಂದು ನಿರಂತರವಾಗಿ ಒತ್ತಾಯಿಸುತ್ತಿವೆ.

AFSPA ಕಾಯ್ದೆಯು ಸಶಸ್ತ್ರ ಪಡೆಗಳಿಗೆ ವಿಶೇಷ ಅಧಿಕಾರವನ್ನು ನೀಡುತ್ತದೆ. ಕಾನೂನು ಉಲ್ಲಂಘನೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಯ ವಿರುದ್ಧ ಗುಂಡು ಹಾರಿಸಲು, ಬಲವನ್ನು ಬಳಸಲು ಅಧಿಕಾರವನ್ನು, ಯಾವುದೇ ವ್ಯಕ್ತಿ ಅಪರಾಧ ಎಸಗಿರುವ ಶಂಕೆಯಿದ್ದಲ್ಲಿ ವಾರಂಟ್ ಇಲ್ಲದೆ ಬಂಧಿಸುವ ಅಧಿಕಾರ, ವಾರಂಟ್ ಇಲ್ಲದೆ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಇಟ್ಟುಕೊಂಡಿದ್ದಾರೆ ಎಂದು ಯಾವುದೆ ಶಂಕಿತ ವಕ್ತಿಯ ಮನೆ ಪ್ರವೇಶಿಸಿ ಹುಡುಕಬಹುದಾದ ಅಧಿಕಾರವನ್ನು ಸೈನ್ಯಕ್ಕೆ ಈ ಕಾನೂನು ನೀಡಿದೆ.

ಇದನ್ನೂ ಓದಿ: ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...