Homeಮುಖಪುಟ‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

ಕೊನ್ಯಾಕ್‌‌ ಯೂನಿಯನ್‌ ನಾಗಾಲ್ಯಾಂಡ್‌ ಸೇರಿದಂತೆ ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಸಂಘಟನೆಯಾಗಿದೆ.

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಭಾರತೀಯ ಸೇನೆ 14 ನಾಗರಿಕರನ್ನು ಹತ್ಯೆ ಮಾಡಿರುವ ಹಿನ್ನಲೆಯಲ್ಲಿ, ಕೊನ್ಯಾಕ್‌ ವಿದ್ಯಾರ್ಥಿ ಒಕ್ಕೂಟವು ರಾಜ್ಯದಾದ್ಯಂತ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ ಸಶಸ್ತ್ರ ಪಡೆಗಳು ಸೋಮ ಜಿಲ್ಲೆಯಲ್ಲಿ ಓಡಾಡದಂತೆ ವಿದ್ಯಾರ್ಥಿ ಒಕ್ಕೂಟ ‘ಎಚ್ಚರಿಕೆ’ ನೀಡಿದೆ. ಕೊನ್ಯಾಕ್‌‌ ಯೂನಿಯನ್‌ ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಸಂಘಟನೆಯಾಗಿದೆ.

“ಯಾವುದೇ ಮಿಲಿಟರಿ ಸಿಬ್ಬಂದಿ ಈ ಆದೇಶವನ್ನು ಉಲ್ಲಂಘಿಸಿಕೊಂಡು ಓಡಾಡಿದರೆ, ನಡೆಯುವ ಅಪಾಯಕ್ಕೆ ಅವರೇ ಜವಾಬ್ದಾರಿ. ಇದು ನಮ್ಮ ಎಚ್ಚರಿಕೆಯಾಗಿದ್ದು, ನಾವು ಏಳು ದಿನಗಳವರೆಗೆ ಶೋಕಾಚರಣೆ ಮಾಡುತ್ತಿದ್ದೇವೆ. ನಮ್ಮ ಜನರ ಸುರಕ್ಷತೆಗಾಗಿ, ನಮ್ಮ ಗ್ರಾಮ ಮತ್ತು ನಮ್ಮ ಅಧಿಕಾರ ವ್ಯಾಪ್ತಿಯಿಂದ ಅಸ್ಸಾಂ ರೈಫಲ್ಸ್ ಅನ್ನು ತೆಗೆದುಹಾಕಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ” ಎಂದು ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆಂದು ಇಂಡಿಯಾ ಟುಡೇ ವರದಿ ಮಾಡಿದೆ.

ಪ್ರಭಾವಿ ವಿದ್ಯಾರ್ಥಿ ಒಕ್ಕೂಟವಾದ ಕೊನ್ಯಾಕ್ ಡಿಸೆಂಬರ್ 7 ರಿಂದ ಏಳು ದಿನಗಳ ಶೋಕಾಚರಣೆ ಅವಧಿಯನ್ನು ಘೋಷಿಸಿದೆ.

ಇದನ್ನೂ ಓದಿ:ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

“ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟವು, ತೀವ್ರ ಶೋಕಾಚರಣೆಯ ವಾರದ ಸಮಯದಲ್ಲಿ ಸೋಮ ಜಿಲ್ಲೆಯೊಳಗೆ ಮಿಲಿಟರಿ ಸಿಬ್ಬಂದಿಯ ಓಡಾಟವನ್ನು ನಿಷೇಧಿಸುವ ಆದೇಶ ನೀಡಿದೆ” ಎಂದು ನೋಕ್ಲೆಮ್ ಹೇಳಿದ್ದಾರೆ.

“AFSPA(ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ) ಯ ಲಾಭವನ್ನು ಪಡೆದುಕೊಂಡು, ಭದ್ರತಾ ಪಡೆಗಳು ಇತರ ನ್ಯಾಯವ್ಯಾಪ್ತಿಗಳಿಂದ ನಮ್ಮ ಅಧಿಕಾರ ವ್ಯಾಪ್ತಿಗೆ ಬರುತ್ತಿವೆ. ಅವರಿಗೆ ಅದರ ಬಗ್ಗೆ ತಿಳಿದಿಲ್ಲ. ಯಾವುದರ ಅರಿವೂ ಇಲ್ಲದೇ ಕಾರ್ಯಾಚರಣೆ ನಡೆಸಿ ನಮ್ಮ ಜನರಿಗೆ ಕಿರುಕುಳ ನೀಡುತ್ತಿದ್ದಾರೆ, ಇದನ್ನು ಸಹಿಸಲಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

“ಶೋಕದ ಅವಧಿಯಲ್ಲಿ, ಸಶಸ್ತ್ರ ಪಡೆಗಳು ನಮ್ಮ ಪ್ರದೇಶದಲ್ಲಿ, ಇಡೀ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಬಾರದು, ತಿರುಗಾಡಬಾರದು” ಎಂದು ಅವರು ಹೇಳಿದ್ದಾರೆ.

ಹತ್ಯೆಯ ಬಗ್ಗೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ‘ಸುಳ್ಳು’ ಹೇಳಿಕೆ ನೀಡಿದ್ದಾರೆ ಎಂದು ಕೋನ್ಯಾಕ್ ವಿದ್ಯಾರ್ಥಿ ಸಂಘ ಆಪಾದಿಸಿದ್ದು, ಅದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ.

“ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಸುಳ್ಳು ಹೇಳಿಕೆ ನೀಡಿದ್ದಾರೆ. ಸಚಿವರು ತಮ್ಮ ಮಾತು ಮತ್ತು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿದ್ದೇವೆ. ಅವರು ತಮ್ಮ ಹೇಳಿಕೆಯನ್ನು ಹಿಂದಕ್ಕೆ ತೆಗೆದುಕೊಳ್ಳದಿದ್ದರೆ, ನಾವು ಮುಂದೆ ಹೋಗುತ್ತೇವೆ. ನಮ್ಮ ಆಳವಾದ ಶೋಕಾಚರಣೆಯ ವಾರ ನಿನ್ನೆ ಪ್ರಾರಂಭವಾಯಿತು ಮತ್ತು ಮುಂದಿನ ಆರು ದಿನಗಳವರೆಗೆ ನಾವು ಶೋಕಿಸುತ್ತೇವೆ” ಎಂದು ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆ.

ನಾಗಾಲ್ಯಾಂಡ್‌ನಿಂದ AFSPA ಹಿಂಪಡೆಯಬೇಕು ಮತ್ತು ಕಾನೂನನ್ನು ರದ್ದುಪಡಿಸುವವರೆಗೆ ಕೊನ್ಯಾಕ್ ವಿದ್ಯಾರ್ಥಿ ಸಂಘವು ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

“AFSPA ರದ್ದುಪಡಿಸುವವರೆಗೆ ನಾವು ಹೋರಾಡುತ್ತೇವೆ. ನೀವು ಹಣದಿಂದ ವ್ಯಕ್ತಿಯ ಜೀವನವನ್ನು ಖರೀದಿಸಬಹುದೇ? ನಾವು ಯಾವುದೇ ವಿಷಾದಕ್ಕಾಗಿ ವಿನಂತಿಸುತ್ತಿಲ್ಲ. ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳು ಏನೇ ಹೇಳಿದರೂ ನಾವು ವಿಷಾದಕ್ಕೆ ಬಗ್ಗುವುದಿಲ್ಲ” ಎಂದು ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆ.

ಕೊನೆಯ ಶೋಕಾಚರಣೆಯ ದಿನದವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳು, ಎಲ್ಲಾ ಅಧೀನ ಅಧಿಕಾರಿಗಳ ಕಚೇರಿಗಳು ಮತ್ತು ಫೆಡರೇಶನ್ ಘಟಕಗಳು ಮತ್ತು ಎಲ್ಲಾ ವ್ಯಾಪಾರ ಸಂಸ್ಥೆಗಳು ತಮ್ಮ ಕಟ್ಟಡಗಳ ಮೇಲೆ ಕಪ್ಪು ಬಾವುಟವನ್ನು ಹಾರಿಸುವಂತೆ ಕೊನ್ಯಾಕ್ ವಿದ್ಯಾರ್ಥಿಗಳ ಒಕ್ಕೂಟವು ಕೇಳಿಕೊಂಡಿದೆ.

7 ದಿನಗಳ ಶೋಕಾಚರಣೆಯ ಅವಧಿಯಲ್ಲಿ ದ್ವಿಚಕ್ರ ವಾಹನಗಳು ಸೇರಿದಂತೆ ಎಲ್ಲಾ ವಾಹನಗಳ ಮೇಲೆ ಕಪ್ಪು ಬಾವುಟ ಪ್ರದರ್ಶಿಸುವಂತೆ ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಮ್ಮ ತೋಳುಗಳಿಗೆ ಕಪ್ಪು ಬ್ಯಾಡ್ಜ್ ಅಥವಾ ಕಪ್ಪು ರಿಬ್ಬನ್‌ಗಳನ್ನು ಧರಿಸಲು ವಿದ್ಯಾರ್ಥಿ ಒಕ್ಕೂಟ ಕೇಳಿಕೊಂಡಿದೆ.

ಮಂಗಳವಾರ, ನಾಗಾಲ್ಯಾಂಡ್ ಸಚಿವ ಸಂಪುಟವು ರಾಜ್ಯದಲ್ಲಿ ತಕ್ಷಣವೇ AFSPA-1958 ಕಾಯ್ದೆಯನ್ನು ರದ್ದುಗೊಳಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿದೆ.

ಈಶಾನ್ಯ ಭಾರತದಲ್ಲಿ ಹಲವಾರು ಸಂಘಟನೆಗಳು, ಬುಡಕಟ್ಟು ಸಂಸ್ಥೆಗಳು, ವಿದ್ಯಾರ್ಥಿಗಳ ಸಂಘಟನೆಗಳು, ನಾಗರಿಕ ಹಕ್ಕುಗಳ ಗುಂಪುಗಳು ಮತ್ತು ರಾಜಕೀಯ ಪಕ್ಷಗಳು AFSPA ಅನ್ನು ತೆಗೆದುಹಾಕಬೇಕೆಂದು ನಿರಂತರವಾಗಿ ಒತ್ತಾಯಿಸುತ್ತಿವೆ.

AFSPA ಕಾಯ್ದೆಯು ಸಶಸ್ತ್ರ ಪಡೆಗಳಿಗೆ ವಿಶೇಷ ಅಧಿಕಾರವನ್ನು ನೀಡುತ್ತದೆ. ಕಾನೂನು ಉಲ್ಲಂಘನೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಯ ವಿರುದ್ಧ ಗುಂಡು ಹಾರಿಸಲು, ಬಲವನ್ನು ಬಳಸಲು ಅಧಿಕಾರವನ್ನು, ಯಾವುದೇ ವ್ಯಕ್ತಿ ಅಪರಾಧ ಎಸಗಿರುವ ಶಂಕೆಯಿದ್ದಲ್ಲಿ ವಾರಂಟ್ ಇಲ್ಲದೆ ಬಂಧಿಸುವ ಅಧಿಕಾರ, ವಾರಂಟ್ ಇಲ್ಲದೆ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಇಟ್ಟುಕೊಂಡಿದ್ದಾರೆ ಎಂದು ಯಾವುದೆ ಶಂಕಿತ ವಕ್ತಿಯ ಮನೆ ಪ್ರವೇಶಿಸಿ ಹುಡುಕಬಹುದಾದ ಅಧಿಕಾರವನ್ನು ಸೈನ್ಯಕ್ಕೆ ಈ ಕಾನೂನು ನೀಡಿದೆ.

ಇದನ್ನೂ ಓದಿ: ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...