Homeಮುಖಪುಟ‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

ಕೊನ್ಯಾಕ್‌‌ ಯೂನಿಯನ್‌ ನಾಗಾಲ್ಯಾಂಡ್‌ ಸೇರಿದಂತೆ ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಸಂಘಟನೆಯಾಗಿದೆ.

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಭಾರತೀಯ ಸೇನೆ 14 ನಾಗರಿಕರನ್ನು ಹತ್ಯೆ ಮಾಡಿರುವ ಹಿನ್ನಲೆಯಲ್ಲಿ, ಕೊನ್ಯಾಕ್‌ ವಿದ್ಯಾರ್ಥಿ ಒಕ್ಕೂಟವು ರಾಜ್ಯದಾದ್ಯಂತ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ ಸಶಸ್ತ್ರ ಪಡೆಗಳು ಸೋಮ ಜಿಲ್ಲೆಯಲ್ಲಿ ಓಡಾಡದಂತೆ ವಿದ್ಯಾರ್ಥಿ ಒಕ್ಕೂಟ ‘ಎಚ್ಚರಿಕೆ’ ನೀಡಿದೆ. ಕೊನ್ಯಾಕ್‌‌ ಯೂನಿಯನ್‌ ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಸಂಘಟನೆಯಾಗಿದೆ.

“ಯಾವುದೇ ಮಿಲಿಟರಿ ಸಿಬ್ಬಂದಿ ಈ ಆದೇಶವನ್ನು ಉಲ್ಲಂಘಿಸಿಕೊಂಡು ಓಡಾಡಿದರೆ, ನಡೆಯುವ ಅಪಾಯಕ್ಕೆ ಅವರೇ ಜವಾಬ್ದಾರಿ. ಇದು ನಮ್ಮ ಎಚ್ಚರಿಕೆಯಾಗಿದ್ದು, ನಾವು ಏಳು ದಿನಗಳವರೆಗೆ ಶೋಕಾಚರಣೆ ಮಾಡುತ್ತಿದ್ದೇವೆ. ನಮ್ಮ ಜನರ ಸುರಕ್ಷತೆಗಾಗಿ, ನಮ್ಮ ಗ್ರಾಮ ಮತ್ತು ನಮ್ಮ ಅಧಿಕಾರ ವ್ಯಾಪ್ತಿಯಿಂದ ಅಸ್ಸಾಂ ರೈಫಲ್ಸ್ ಅನ್ನು ತೆಗೆದುಹಾಕಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ” ಎಂದು ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆಂದು ಇಂಡಿಯಾ ಟುಡೇ ವರದಿ ಮಾಡಿದೆ.

ಪ್ರಭಾವಿ ವಿದ್ಯಾರ್ಥಿ ಒಕ್ಕೂಟವಾದ ಕೊನ್ಯಾಕ್ ಡಿಸೆಂಬರ್ 7 ರಿಂದ ಏಳು ದಿನಗಳ ಶೋಕಾಚರಣೆ ಅವಧಿಯನ್ನು ಘೋಷಿಸಿದೆ.

ಇದನ್ನೂ ಓದಿ:ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

“ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟವು, ತೀವ್ರ ಶೋಕಾಚರಣೆಯ ವಾರದ ಸಮಯದಲ್ಲಿ ಸೋಮ ಜಿಲ್ಲೆಯೊಳಗೆ ಮಿಲಿಟರಿ ಸಿಬ್ಬಂದಿಯ ಓಡಾಟವನ್ನು ನಿಷೇಧಿಸುವ ಆದೇಶ ನೀಡಿದೆ” ಎಂದು ನೋಕ್ಲೆಮ್ ಹೇಳಿದ್ದಾರೆ.

“AFSPA(ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ) ಯ ಲಾಭವನ್ನು ಪಡೆದುಕೊಂಡು, ಭದ್ರತಾ ಪಡೆಗಳು ಇತರ ನ್ಯಾಯವ್ಯಾಪ್ತಿಗಳಿಂದ ನಮ್ಮ ಅಧಿಕಾರ ವ್ಯಾಪ್ತಿಗೆ ಬರುತ್ತಿವೆ. ಅವರಿಗೆ ಅದರ ಬಗ್ಗೆ ತಿಳಿದಿಲ್ಲ. ಯಾವುದರ ಅರಿವೂ ಇಲ್ಲದೇ ಕಾರ್ಯಾಚರಣೆ ನಡೆಸಿ ನಮ್ಮ ಜನರಿಗೆ ಕಿರುಕುಳ ನೀಡುತ್ತಿದ್ದಾರೆ, ಇದನ್ನು ಸಹಿಸಲಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

“ಶೋಕದ ಅವಧಿಯಲ್ಲಿ, ಸಶಸ್ತ್ರ ಪಡೆಗಳು ನಮ್ಮ ಪ್ರದೇಶದಲ್ಲಿ, ಇಡೀ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಬಾರದು, ತಿರುಗಾಡಬಾರದು” ಎಂದು ಅವರು ಹೇಳಿದ್ದಾರೆ.

ಹತ್ಯೆಯ ಬಗ್ಗೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ‘ಸುಳ್ಳು’ ಹೇಳಿಕೆ ನೀಡಿದ್ದಾರೆ ಎಂದು ಕೋನ್ಯಾಕ್ ವಿದ್ಯಾರ್ಥಿ ಸಂಘ ಆಪಾದಿಸಿದ್ದು, ಅದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ.

“ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಸುಳ್ಳು ಹೇಳಿಕೆ ನೀಡಿದ್ದಾರೆ. ಸಚಿವರು ತಮ್ಮ ಮಾತು ಮತ್ತು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿದ್ದೇವೆ. ಅವರು ತಮ್ಮ ಹೇಳಿಕೆಯನ್ನು ಹಿಂದಕ್ಕೆ ತೆಗೆದುಕೊಳ್ಳದಿದ್ದರೆ, ನಾವು ಮುಂದೆ ಹೋಗುತ್ತೇವೆ. ನಮ್ಮ ಆಳವಾದ ಶೋಕಾಚರಣೆಯ ವಾರ ನಿನ್ನೆ ಪ್ರಾರಂಭವಾಯಿತು ಮತ್ತು ಮುಂದಿನ ಆರು ದಿನಗಳವರೆಗೆ ನಾವು ಶೋಕಿಸುತ್ತೇವೆ” ಎಂದು ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆ.

ನಾಗಾಲ್ಯಾಂಡ್‌ನಿಂದ AFSPA ಹಿಂಪಡೆಯಬೇಕು ಮತ್ತು ಕಾನೂನನ್ನು ರದ್ದುಪಡಿಸುವವರೆಗೆ ಕೊನ್ಯಾಕ್ ವಿದ್ಯಾರ್ಥಿ ಸಂಘವು ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

“AFSPA ರದ್ದುಪಡಿಸುವವರೆಗೆ ನಾವು ಹೋರಾಡುತ್ತೇವೆ. ನೀವು ಹಣದಿಂದ ವ್ಯಕ್ತಿಯ ಜೀವನವನ್ನು ಖರೀದಿಸಬಹುದೇ? ನಾವು ಯಾವುದೇ ವಿಷಾದಕ್ಕಾಗಿ ವಿನಂತಿಸುತ್ತಿಲ್ಲ. ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳು ಏನೇ ಹೇಳಿದರೂ ನಾವು ವಿಷಾದಕ್ಕೆ ಬಗ್ಗುವುದಿಲ್ಲ” ಎಂದು ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆ.

ಕೊನೆಯ ಶೋಕಾಚರಣೆಯ ದಿನದವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳು, ಎಲ್ಲಾ ಅಧೀನ ಅಧಿಕಾರಿಗಳ ಕಚೇರಿಗಳು ಮತ್ತು ಫೆಡರೇಶನ್ ಘಟಕಗಳು ಮತ್ತು ಎಲ್ಲಾ ವ್ಯಾಪಾರ ಸಂಸ್ಥೆಗಳು ತಮ್ಮ ಕಟ್ಟಡಗಳ ಮೇಲೆ ಕಪ್ಪು ಬಾವುಟವನ್ನು ಹಾರಿಸುವಂತೆ ಕೊನ್ಯಾಕ್ ವಿದ್ಯಾರ್ಥಿಗಳ ಒಕ್ಕೂಟವು ಕೇಳಿಕೊಂಡಿದೆ.

7 ದಿನಗಳ ಶೋಕಾಚರಣೆಯ ಅವಧಿಯಲ್ಲಿ ದ್ವಿಚಕ್ರ ವಾಹನಗಳು ಸೇರಿದಂತೆ ಎಲ್ಲಾ ವಾಹನಗಳ ಮೇಲೆ ಕಪ್ಪು ಬಾವುಟ ಪ್ರದರ್ಶಿಸುವಂತೆ ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಮ್ಮ ತೋಳುಗಳಿಗೆ ಕಪ್ಪು ಬ್ಯಾಡ್ಜ್ ಅಥವಾ ಕಪ್ಪು ರಿಬ್ಬನ್‌ಗಳನ್ನು ಧರಿಸಲು ವಿದ್ಯಾರ್ಥಿ ಒಕ್ಕೂಟ ಕೇಳಿಕೊಂಡಿದೆ.

ಮಂಗಳವಾರ, ನಾಗಾಲ್ಯಾಂಡ್ ಸಚಿವ ಸಂಪುಟವು ರಾಜ್ಯದಲ್ಲಿ ತಕ್ಷಣವೇ AFSPA-1958 ಕಾಯ್ದೆಯನ್ನು ರದ್ದುಗೊಳಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿದೆ.

ಈಶಾನ್ಯ ಭಾರತದಲ್ಲಿ ಹಲವಾರು ಸಂಘಟನೆಗಳು, ಬುಡಕಟ್ಟು ಸಂಸ್ಥೆಗಳು, ವಿದ್ಯಾರ್ಥಿಗಳ ಸಂಘಟನೆಗಳು, ನಾಗರಿಕ ಹಕ್ಕುಗಳ ಗುಂಪುಗಳು ಮತ್ತು ರಾಜಕೀಯ ಪಕ್ಷಗಳು AFSPA ಅನ್ನು ತೆಗೆದುಹಾಕಬೇಕೆಂದು ನಿರಂತರವಾಗಿ ಒತ್ತಾಯಿಸುತ್ತಿವೆ.

AFSPA ಕಾಯ್ದೆಯು ಸಶಸ್ತ್ರ ಪಡೆಗಳಿಗೆ ವಿಶೇಷ ಅಧಿಕಾರವನ್ನು ನೀಡುತ್ತದೆ. ಕಾನೂನು ಉಲ್ಲಂಘನೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಯ ವಿರುದ್ಧ ಗುಂಡು ಹಾರಿಸಲು, ಬಲವನ್ನು ಬಳಸಲು ಅಧಿಕಾರವನ್ನು, ಯಾವುದೇ ವ್ಯಕ್ತಿ ಅಪರಾಧ ಎಸಗಿರುವ ಶಂಕೆಯಿದ್ದಲ್ಲಿ ವಾರಂಟ್ ಇಲ್ಲದೆ ಬಂಧಿಸುವ ಅಧಿಕಾರ, ವಾರಂಟ್ ಇಲ್ಲದೆ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಇಟ್ಟುಕೊಂಡಿದ್ದಾರೆ ಎಂದು ಯಾವುದೆ ಶಂಕಿತ ವಕ್ತಿಯ ಮನೆ ಪ್ರವೇಶಿಸಿ ಹುಡುಕಬಹುದಾದ ಅಧಿಕಾರವನ್ನು ಸೈನ್ಯಕ್ಕೆ ಈ ಕಾನೂನು ನೀಡಿದೆ.

ಇದನ್ನೂ ಓದಿ: ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...