Homeಮುಖಪುಟ‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

‘ಒಂದು ವಾರ ಓಡಾಡದಿರಿ; ಓಡಾಡಿದರೆ ಮುಂದಾಗುವ ಅಪಾಯಕ್ಕೆ ಅವರೇ ಹೊಣೆ’: ಸಶಸ್ತ್ರ ಪಡೆಗಳಿಗೆ ‘ಕೊನ್ಯಾಕ್’ ಎಚ್ಚರಿಕೆ

ಕೊನ್ಯಾಕ್‌‌ ಯೂನಿಯನ್‌ ನಾಗಾಲ್ಯಾಂಡ್‌ ಸೇರಿದಂತೆ ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಸಂಘಟನೆಯಾಗಿದೆ.

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಭಾರತೀಯ ಸೇನೆ 14 ನಾಗರಿಕರನ್ನು ಹತ್ಯೆ ಮಾಡಿರುವ ಹಿನ್ನಲೆಯಲ್ಲಿ, ಕೊನ್ಯಾಕ್‌ ವಿದ್ಯಾರ್ಥಿ ಒಕ್ಕೂಟವು ರಾಜ್ಯದಾದ್ಯಂತ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ ಸಶಸ್ತ್ರ ಪಡೆಗಳು ಸೋಮ ಜಿಲ್ಲೆಯಲ್ಲಿ ಓಡಾಡದಂತೆ ವಿದ್ಯಾರ್ಥಿ ಒಕ್ಕೂಟ ‘ಎಚ್ಚರಿಕೆ’ ನೀಡಿದೆ. ಕೊನ್ಯಾಕ್‌‌ ಯೂನಿಯನ್‌ ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಸಂಘಟನೆಯಾಗಿದೆ.

“ಯಾವುದೇ ಮಿಲಿಟರಿ ಸಿಬ್ಬಂದಿ ಈ ಆದೇಶವನ್ನು ಉಲ್ಲಂಘಿಸಿಕೊಂಡು ಓಡಾಡಿದರೆ, ನಡೆಯುವ ಅಪಾಯಕ್ಕೆ ಅವರೇ ಜವಾಬ್ದಾರಿ. ಇದು ನಮ್ಮ ಎಚ್ಚರಿಕೆಯಾಗಿದ್ದು, ನಾವು ಏಳು ದಿನಗಳವರೆಗೆ ಶೋಕಾಚರಣೆ ಮಾಡುತ್ತಿದ್ದೇವೆ. ನಮ್ಮ ಜನರ ಸುರಕ್ಷತೆಗಾಗಿ, ನಮ್ಮ ಗ್ರಾಮ ಮತ್ತು ನಮ್ಮ ಅಧಿಕಾರ ವ್ಯಾಪ್ತಿಯಿಂದ ಅಸ್ಸಾಂ ರೈಫಲ್ಸ್ ಅನ್ನು ತೆಗೆದುಹಾಕಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ” ಎಂದು ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆಂದು ಇಂಡಿಯಾ ಟುಡೇ ವರದಿ ಮಾಡಿದೆ.

ಪ್ರಭಾವಿ ವಿದ್ಯಾರ್ಥಿ ಒಕ್ಕೂಟವಾದ ಕೊನ್ಯಾಕ್ ಡಿಸೆಂಬರ್ 7 ರಿಂದ ಏಳು ದಿನಗಳ ಶೋಕಾಚರಣೆ ಅವಧಿಯನ್ನು ಘೋಷಿಸಿದೆ.

ಇದನ್ನೂ ಓದಿ:ಮುಗ್ಧ ನಾಗರಿಕರ ಮೇಲೆ ಯೋಜಿತ ದಾಳಿ ಮಾಡಲಾಗಿದೆ: ಈಶಾನ್ಯ ಭಾರತದ ಪ್ರಭಾವಿ ಬುಡಕಟ್ಟು ಒಕ್ಕೂಟ ಆರೋಪ

“ಕೊನ್ಯಾಕ್ ವಿದ್ಯಾರ್ಥಿ ಒಕ್ಕೂಟವು, ತೀವ್ರ ಶೋಕಾಚರಣೆಯ ವಾರದ ಸಮಯದಲ್ಲಿ ಸೋಮ ಜಿಲ್ಲೆಯೊಳಗೆ ಮಿಲಿಟರಿ ಸಿಬ್ಬಂದಿಯ ಓಡಾಟವನ್ನು ನಿಷೇಧಿಸುವ ಆದೇಶ ನೀಡಿದೆ” ಎಂದು ನೋಕ್ಲೆಮ್ ಹೇಳಿದ್ದಾರೆ.

“AFSPA(ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ) ಯ ಲಾಭವನ್ನು ಪಡೆದುಕೊಂಡು, ಭದ್ರತಾ ಪಡೆಗಳು ಇತರ ನ್ಯಾಯವ್ಯಾಪ್ತಿಗಳಿಂದ ನಮ್ಮ ಅಧಿಕಾರ ವ್ಯಾಪ್ತಿಗೆ ಬರುತ್ತಿವೆ. ಅವರಿಗೆ ಅದರ ಬಗ್ಗೆ ತಿಳಿದಿಲ್ಲ. ಯಾವುದರ ಅರಿವೂ ಇಲ್ಲದೇ ಕಾರ್ಯಾಚರಣೆ ನಡೆಸಿ ನಮ್ಮ ಜನರಿಗೆ ಕಿರುಕುಳ ನೀಡುತ್ತಿದ್ದಾರೆ, ಇದನ್ನು ಸಹಿಸಲಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

“ಶೋಕದ ಅವಧಿಯಲ್ಲಿ, ಸಶಸ್ತ್ರ ಪಡೆಗಳು ನಮ್ಮ ಪ್ರದೇಶದಲ್ಲಿ, ಇಡೀ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಬಾರದು, ತಿರುಗಾಡಬಾರದು” ಎಂದು ಅವರು ಹೇಳಿದ್ದಾರೆ.

ಹತ್ಯೆಯ ಬಗ್ಗೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ‘ಸುಳ್ಳು’ ಹೇಳಿಕೆ ನೀಡಿದ್ದಾರೆ ಎಂದು ಕೋನ್ಯಾಕ್ ವಿದ್ಯಾರ್ಥಿ ಸಂಘ ಆಪಾದಿಸಿದ್ದು, ಅದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ.

“ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಸುಳ್ಳು ಹೇಳಿಕೆ ನೀಡಿದ್ದಾರೆ. ಸಚಿವರು ತಮ್ಮ ಮಾತು ಮತ್ತು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿದ್ದೇವೆ. ಅವರು ತಮ್ಮ ಹೇಳಿಕೆಯನ್ನು ಹಿಂದಕ್ಕೆ ತೆಗೆದುಕೊಳ್ಳದಿದ್ದರೆ, ನಾವು ಮುಂದೆ ಹೋಗುತ್ತೇವೆ. ನಮ್ಮ ಆಳವಾದ ಶೋಕಾಚರಣೆಯ ವಾರ ನಿನ್ನೆ ಪ್ರಾರಂಭವಾಯಿತು ಮತ್ತು ಮುಂದಿನ ಆರು ದಿನಗಳವರೆಗೆ ನಾವು ಶೋಕಿಸುತ್ತೇವೆ” ಎಂದು ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆ.

ನಾಗಾಲ್ಯಾಂಡ್‌ನಿಂದ AFSPA ಹಿಂಪಡೆಯಬೇಕು ಮತ್ತು ಕಾನೂನನ್ನು ರದ್ದುಪಡಿಸುವವರೆಗೆ ಕೊನ್ಯಾಕ್ ವಿದ್ಯಾರ್ಥಿ ಸಂಘವು ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

“AFSPA ರದ್ದುಪಡಿಸುವವರೆಗೆ ನಾವು ಹೋರಾಡುತ್ತೇವೆ. ನೀವು ಹಣದಿಂದ ವ್ಯಕ್ತಿಯ ಜೀವನವನ್ನು ಖರೀದಿಸಬಹುದೇ? ನಾವು ಯಾವುದೇ ವಿಷಾದಕ್ಕಾಗಿ ವಿನಂತಿಸುತ್ತಿಲ್ಲ. ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳು ಏನೇ ಹೇಳಿದರೂ ನಾವು ವಿಷಾದಕ್ಕೆ ಬಗ್ಗುವುದಿಲ್ಲ” ಎಂದು ನೋಕ್ಲೆಮ್ ಕೊನ್ಯಾಕ್ ಹೇಳಿದ್ದಾರೆ.

ಕೊನೆಯ ಶೋಕಾಚರಣೆಯ ದಿನದವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳು, ಎಲ್ಲಾ ಅಧೀನ ಅಧಿಕಾರಿಗಳ ಕಚೇರಿಗಳು ಮತ್ತು ಫೆಡರೇಶನ್ ಘಟಕಗಳು ಮತ್ತು ಎಲ್ಲಾ ವ್ಯಾಪಾರ ಸಂಸ್ಥೆಗಳು ತಮ್ಮ ಕಟ್ಟಡಗಳ ಮೇಲೆ ಕಪ್ಪು ಬಾವುಟವನ್ನು ಹಾರಿಸುವಂತೆ ಕೊನ್ಯಾಕ್ ವಿದ್ಯಾರ್ಥಿಗಳ ಒಕ್ಕೂಟವು ಕೇಳಿಕೊಂಡಿದೆ.

7 ದಿನಗಳ ಶೋಕಾಚರಣೆಯ ಅವಧಿಯಲ್ಲಿ ದ್ವಿಚಕ್ರ ವಾಹನಗಳು ಸೇರಿದಂತೆ ಎಲ್ಲಾ ವಾಹನಗಳ ಮೇಲೆ ಕಪ್ಪು ಬಾವುಟ ಪ್ರದರ್ಶಿಸುವಂತೆ ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಮ್ಮ ತೋಳುಗಳಿಗೆ ಕಪ್ಪು ಬ್ಯಾಡ್ಜ್ ಅಥವಾ ಕಪ್ಪು ರಿಬ್ಬನ್‌ಗಳನ್ನು ಧರಿಸಲು ವಿದ್ಯಾರ್ಥಿ ಒಕ್ಕೂಟ ಕೇಳಿಕೊಂಡಿದೆ.

ಮಂಗಳವಾರ, ನಾಗಾಲ್ಯಾಂಡ್ ಸಚಿವ ಸಂಪುಟವು ರಾಜ್ಯದಲ್ಲಿ ತಕ್ಷಣವೇ AFSPA-1958 ಕಾಯ್ದೆಯನ್ನು ರದ್ದುಗೊಳಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿದೆ.

ಈಶಾನ್ಯ ಭಾರತದಲ್ಲಿ ಹಲವಾರು ಸಂಘಟನೆಗಳು, ಬುಡಕಟ್ಟು ಸಂಸ್ಥೆಗಳು, ವಿದ್ಯಾರ್ಥಿಗಳ ಸಂಘಟನೆಗಳು, ನಾಗರಿಕ ಹಕ್ಕುಗಳ ಗುಂಪುಗಳು ಮತ್ತು ರಾಜಕೀಯ ಪಕ್ಷಗಳು AFSPA ಅನ್ನು ತೆಗೆದುಹಾಕಬೇಕೆಂದು ನಿರಂತರವಾಗಿ ಒತ್ತಾಯಿಸುತ್ತಿವೆ.

AFSPA ಕಾಯ್ದೆಯು ಸಶಸ್ತ್ರ ಪಡೆಗಳಿಗೆ ವಿಶೇಷ ಅಧಿಕಾರವನ್ನು ನೀಡುತ್ತದೆ. ಕಾನೂನು ಉಲ್ಲಂಘನೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಯ ವಿರುದ್ಧ ಗುಂಡು ಹಾರಿಸಲು, ಬಲವನ್ನು ಬಳಸಲು ಅಧಿಕಾರವನ್ನು, ಯಾವುದೇ ವ್ಯಕ್ತಿ ಅಪರಾಧ ಎಸಗಿರುವ ಶಂಕೆಯಿದ್ದಲ್ಲಿ ವಾರಂಟ್ ಇಲ್ಲದೆ ಬಂಧಿಸುವ ಅಧಿಕಾರ, ವಾರಂಟ್ ಇಲ್ಲದೆ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಇಟ್ಟುಕೊಂಡಿದ್ದಾರೆ ಎಂದು ಯಾವುದೆ ಶಂಕಿತ ವಕ್ತಿಯ ಮನೆ ಪ್ರವೇಶಿಸಿ ಹುಡುಕಬಹುದಾದ ಅಧಿಕಾರವನ್ನು ಸೈನ್ಯಕ್ಕೆ ಈ ಕಾನೂನು ನೀಡಿದೆ.

ಇದನ್ನೂ ಓದಿ: ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...