Homeಮುಖಪುಟಚಪ್ಪಾಳೆ ತಟ್ಟುವವರೂ ಅವರೇ, ಉಲ್ಲಂಘಿಸುವವರೂ ಅವರೇ!: ಮಧ್ಯಮ ವರ್ಗ ಮತ್ತು ಕೊರೊನಾ

ಚಪ್ಪಾಳೆ ತಟ್ಟುವವರೂ ಅವರೇ, ಉಲ್ಲಂಘಿಸುವವರೂ ಅವರೇ!: ಮಧ್ಯಮ ವರ್ಗ ಮತ್ತು ಕೊರೊನಾ

ಹೇಳಿಕೊಳ್ಳಲು ಭಾರತದಲ್ಲಿ ಕಠಿಣವಾದ ಲಾಕ್‌ಡೌನ್ ಹೇರಲಾಗಿದೆಯಾದರೂ, ಎಲ್ಲರಿಗೂ ಒಂದೇ ರೀತಿಯಲ್ಲ. ಅಥವಾ ಎಲ್ಲಾ ಕಡೆ ಒಂದೇ ರೀತಿಯಲ್ಲ. ಅನಿವಾರ್ಯತೆ ಇರುವವರಿಗೆ ಬಿಗಿ ಮತ್ತು ಪ್ರಭಾವಿ, ಉಳ್ಳವರ ಮಟ್ಟಿಗೆ ಸಡಿಲ ಎಂಬಂತಾಗಿದೆ ಲಾಕ್‌ಡೌನ್. ಉದಾಹರಣೆಗೆ ಹಲವಾರು ಕುಟುಂಬಗಳು ತಮ್ಮ ಮನೆಗೆಲಸದವರನ್ನು ಉಳಿಸಿಕೊಂಡಿದ್ದು, ಅವರು ತಮ್ಮ ಮನೆಗಳಿಗೆ ತೆರಳಿ ರೋಗ ಹರಡುತ್ತಿದ್ದಾರೆ.

- Advertisement -
- Advertisement -

ಶೊಯೈಬ್ ಧನಿಯಾಲ್

ಅನುವಾದ: ನಿಖಿಲ್ ಕೋಲ್ಪೆ

ತನ್ನನ್ನು ತಾನು ಕೊರೋನ ವೈರಸ್ ಪಿಡುಗಿನಿಂದ ರಕ್ಷಿಸಿಕೊಳ್ಳಲು ಭಾರತವು ಮರಗಟ್ಟಿಸುವ ಲಾಕ್‌ಡೌನ್ ಅನುಷ್ಟಾನಗೊಳಿಸಿದೆ. ಇದು ಪ್ರಪಂಚದಲ್ಲಿಯೇ ಅತ್ಯಂತ ಕಠಿಣ ಲಾಕ್‌ಡೌನ್. ದೇಶವು ಸಂಚಾರ ಮತ್ತು ಉದ್ಯೋಗಗಳ ಮೇಲೆ ಹಿಂದೆಂದೂ ಕಾಣದಂತಹ  ನಿಯಂತ್ರಣಗಳನ್ನು ಹೇರಿದ್ದು, ಬಡವರು ಅಪ್ಪಚ್ಚಿಯಾಗುತ್ತಿದ್ದಾರೆ. ಆದರೂ, ಭಾರತದ ಈ ಯತ್ನದಲ್ಲಿ ದೊಡ್ಡದಾದ ತೂತೊಂದಿದೆ. ಆದೆಂದರೆ, ಬಡವರ ಮೇಲೆ ಹೇರಲಾಗಿರುವ ರೀತಿಯಲ್ಲಿಯೇ ಈ ನಿಯಂತ್ರಣವನ್ನು ಮಧ್ಯಮ ವರ್ಗ ಮತ್ತು ಶ್ರೀಮಂತರ ಮೇಲೆ ಹೇರಲಾಗದ ಆದರ ಅಸಾಮರ್ಥ್ಯ.

ದಿಲ್ಲಿಯ ಡಿಫೆನ್ಸ್ ಕಾಲನಿ ವಸತಿ ಪ್ರದೇಶದ ಒಂದು ಪ್ರಕರಣವನ್ನು ತೆಗೆದುಕೊಳ್ಳೋಣ. ಈ ಐಷಾರಾಮಿ ಪ್ರದೇಶದಲ್ಲಿ ಕಳೆದ ವಾರ ಮೂರು ಮಂದಿ ಸೋಂಕಿತರು ಪರೀಕ್ಷೆಯಲ್ಲಿ ಪತ್ತೆಯಾದರು. ದಿಲ್ಲಿ ಪೊಲೀಸರು ಈ ಕುಟುಂಬದ ಭದ್ರತಾ ಕಾವಲುಗಾರನನ್ನು ಸೋಂಕು ಹರಡಿದ ಆರೋಪ ಹೊರಿಸಿ ಆತನ ವಿರುದ್ಧ ಎಫ್‌ಐಆರ್ ದಾಖಲಿಸಿದರು. ಆದರೆ, ಪೊಲೀಸರು ಯಾಕೆ ಆತನನ್ನು ಮಾತ್ರ ಸೋಂಕು ಹರಡಿದ್ದಕ್ಕಾಗಿ ಸಂಶಯಿಸಿದರು? ಆತನಿಗೆ ಸೋಂಕು ತಗಲಿಸಿದ್ದಾರೆ ಎಂದು ಆ ಮನೆಯವರನ್ನು ಯಾಕೆ ಶಂಕಿಸಲಿಲ್ಲ? ಇದಿನ್ನೂ ಅಸ್ಪಷ್ಟವಾಗಿದೆ.

ಕೊರೋನ ಸಮಯದಲ್ಲಿ ಸಿರಿವಂತರನ್ನು ಕಾಯುತ್ತಿರುವ ಸೆಕ್ಯುರಿಟಿ ಗಾರ್ಡ್‌ಗಳು.

ಹಲವಾರು ಮಂದಿ ಸೋಂಕಿಗೆ ಒಳಗಾದ ಧಾರ್ಮಿಕ ಸಭೆಯೊಂದರಲ್ಲಿ ಈ ಕಾವಲುಗಾರ ಭಾಗವಹಿಸಿದ್ದಾನೆಂಬುದು ಆರೋಪ. ಆದರೆ, ಈ ಕುಟುಂಬದವರು ಈ ಕಾವಲುಗಾರನನ್ನು ತಮ್ಮ ಮನೆಯ ಒಳಗೆ ಹೊರಗೆ ಹೋಗಲು ಬಿಡುವುದರಿಂದ ಲಾಕ್‌ಡೌನ್ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎಂಬುದರ ಬಗ್ಗೆ ಯಾರೂ ಕಿಂಚಿತ್ ಗಮನವನ್ನೂ ಹರಿಸಿಲ್ಲ. ಅಲ್ಲದೇ, ಇಡೀ ಡಿಫೆನ್ಸ್ ಕಾಲನಿ ವಸತಿ ಪ್ರದೇಶವನ್ನು ಅಪಾಯಕ್ಕೆ ತಳ್ಳಿದಕ್ಕಾಗಿ ಮತ್ತು ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಈ ಕುಟುಂಬದ ವಿರುದ್ಧ ಯಾವುದೇ ಪೊಲೀಸ್ ಕಾರ್ಯಾಚರಣೆ ನಡೆದಿಲ್ಲ ಎಂಬ ಬಗ್ಗೆ ಯಾವುದೇ ವಿವರಣೆಯಿಲ್ಲ.

ಇದು ಇಂತಹಾ ಒಂದೇ ಉಲ್ಲಂಘನೆಯಲ್ಲ.  ಡಿಫೆನ್ಸ್ ಕಾಲನಿಯ ಹಲವಾರು ಕುಟುಂಬಗಳು ಇನ್ನೂ ಕಾವಲುಗಾರರು, ಮನೆಗೆಲಸದವರನ್ನು ಉಪಯೋಗಿಸಿಕೊಳ್ಳುತ್ತಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವಂತೆ, ಮನೆಗೆಲಸದವರು, ಚಾಲಕರು ಮತ್ತು ಕಾವಲುಗಾರರ ಮೇಲೆ ಕಣ್ಣಿಡುವಂತೆ ಅಲ್ಲಿನ ನಿವಾಸಿಗಳಿಗೆ ಹೇಳುವ ಮೂಲಕ ದಿಲ್ಲಿ ಪೊಲೀಸರು ಇಂತಹಾ ಕೃತ್ಯಗಳಿಗೆ ಪರೋಕ್ಷ ಸಮ್ಮತಿ ನೀಡಿದ್ದಾರೆ ಎಂದು ಪತ್ರಿಕಾ ವರದಿ ಹೇಳಿದೆ.

ಶ್ರೀಮಂತ ಮತ್ತು ಮಧ್ಯಮ ವರ್ಗಗಳ ಜನರು ಲಾಕ್‌ಡೌನ್ ಅವಧಿಯಲ್ಲಿ ಮನೆಗೆಲಸದವರ ಸೇವೆಯನ್ನು ಮುಂದುವರಿಸಿರುವ ಪ್ರಕರಣ ಇದೊಂದೇ ಅಲ್ಲ. ಕಳೆದ ಬುಧವಾರ  ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿ‌ಆರ್)ನ ಕೊಳೆಗೇರಿಯಲ್ಲಿ ವಾಸಿಸುವ ಮನೆಗೆಲಸದ ಮಹಿಳೆಯೊಬ್ಬರಿಗೆ ಸೋಂಕು ತಗಲಿದಾಗ ಇಡೀ ಕೊಳೆಗೇರಿಯನ್ನು ದಿಗ್ಬಬಂಧನದಲ್ಲಿ ಇರಿಸಲಾಯಿತು. ಆಕೆಗೆ ಆಕೆ ಕೆಲಸ ಮಾಡುವ ಮನೆ ಮಾಲಕರಿಂದ ಸೋಂಕು ತಗುಲಿದೆ ಎಂದು ಗೊತ್ತಾಗಿತ್ತು. ಈ ಮಾಲಕ ಅಗ್ನಿಸುರಕ್ಷಾ ಸಂಸ್ಥೆಯೊಂದರ ಉದ್ಯೋಗಿ. ಕಳೆದ ಬುಧವಾರದ ಒಳಗೆ ನೋಯ್ಡಾದಲ್ಲಿ ಸೋಂಕು ದೃಢಪಟ್ಟಿರುವ 58 ಮಂದಿಯಲ್ಲಿ 39 ಮಂದಿಗೆ ಇದೇ ಸಂಸ್ಥೆಯ ಉದ್ಯೋಗಿಗಳಿಂದ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.

ಮುಚ್ಚಿದ ಪೇಟೆಯಲ್ಲಿ ಮನೆಗೆಲಸಕ್ಕೆ ತೆರಳುತ್ತಿರುವ ಮಹಿಳೆ.

ಸಿರಿವಂತರಿಗೆ ಸಡಿಲಬಿಟ್ಟುದರ ಪರಿಣಾಮದ ಇನ್ನೊಂದು ನಂಬಲಸಾಧ್ಯವಾದ ಕತೆ ಬೆಳಕಿಗೆ ಬಂದಿದೆ. ಅದರಲ್ಲಿ ಮಧ್ಯಪ್ರದೇಶದ ದೊಡ್ಡ ಸಂಖ್ಯೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಕೊರೋನ ವೈರಸ್ ಸೋಂಕಿತರಾಗಿದ್ದಾರೆ. ಎನ್‌ಡಿಟಿವಿ ವರದಿ ಮಾಡಿರುವಂತೆ, ಭೋಪಾಲ್‌ನಲ್ಲಿರುವ 85 ಸೋಂಕು ಪ್ರಕರಣಗಳಲ್ಲಿ ಕನಿಷ್ಟ 40  ಪ್ರರಕರಣಗಳು ಮಧ್ಯಪ್ರದೇಶ ಆರೋಗ್ಯ ಇಲಾಖೆಯೊಳಗೇ ನಡೆದಿವೆ. ಕೊರೋನ ವೈರಸ್ ನಿಯಂತ್ರಣಕ್ಕಾಗಿ ರೂಪಿಸಲಾದ ನಿಯಮಗಳನ್ನು ಬದಿಗೆ ಸರಿಸಿದ ಆರೋಪವನ್ನು ಇಲಾಖೆಯ ಉನ್ನತ ಅಧಿಕಾರಿಗಳು ಎದುರಿಸುತ್ತಿದ್ದಾರೆ.

ಇದರ ಮೂಲ ಇರುವುದು ಇಲಾಖಾ ನಿರ್ದೇಶಕರಲ್ಲಿ ಎಂದು ಆರೋಪಿಸಲಾಗಿದೆ. ಅವರು ತನಗೆ ಸೋಕು ಇದೆಯೆಂದು ಪರೀಕ್ಷೆಯಲ್ಲಿ ತಿಳಿದುಬಂದರೂ, ತನ್ನನ್ನು ಸ್ವಯಂದಿಗ್ಬಂಧನಕ್ಕೆ ಒಳಪಡಿಸದೆ, ಕೆಲಸಕ್ಕೆ ಬರುವುದನ್ನು ಮುಂದುವರಿಸಿದ್ದರು ಎಂದು ನ್ಯೂಸ್ 18 ಚಾನೆಲ್ ವರದಿ ಮಾಡಿದೆ. ಮಧ್ಯಪ್ರದೇಶ ಸರಕಾರ ಈ ಪ್ರಕರಣದ  ಕುರಿತು ತನಿಖೆಗೆ ಆದೇಶಿರುವಂತೆಯೇ, ಅದರ ಪರಿಣಾಮಗಳು ಮಾತ್ರ ಆಘಾತಕಾರಿಯಾಗಿವೆ. ಈಗ ರಾಜಧಾನಿ ಭೋಪಾಲ್‌ನಲ್ಲಿ ಗುರುತಿಸಲಾಗಿರುವ ಪ್ರತೀ ಇಬ್ಬರು ಸೋಂಕಿತರಲ್ಲಿ ಒಬ್ಬ ಆರೋಗ್ಯ ಇಲಾಖೆಯ ನೌಕರ.

ಊರು ಕೊಳ್ಳೆಹೋದ ಮೇಲೆ ದಿಡ್ಡಿ ಬಾಗಿಲು: ಆಸ್ಪತ್ರೆಯೊಂದರಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಪಾಟೀಲ್.

ರಜಾದ ಮಜಾ

ಇನ್ನೂ ಕೆಲವು ಪ್ರಕರಣಗಳಲ್ಲಿ ಸರಕಾರಗಳು ಉಳ್ಳವರಿಗೆ ಸಡಿಲ ತೋರುವುದಕ್ಕಿಂತಲೂ ಮುಂದುವರಿವರಿದು, ನೇರವಾಗಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸುವ ತನಕ ಮುಟ್ಟಿದೆ. ಕಳೆದ ಗುರುವಾರ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೋರೇಷನ್‌ನ ಪ್ರವರ್ತಕರಾಗಿರುವ ವಾಧ್ವಾನ್ ಕುಟುಂಬವು ಲಾಕ್‌ಡೌನ್ ಉಲ್ಲಂಘಿಸಿ ಮಹಾರಾಷ್ಟ್ರದ ಗಿರಿಧಾಮವೊಂದಕ್ಕೆ ಹೋಗಿತ್ತು. ಕುಟುಂಬದ ಬಳಿ ಹಿರಿಯ ಅಧಿಕಾರಿಯೊಬ್ಬ ನೀಡಿದ ವಿಶೇಷ ತುರ್ತು ಪಾಸು ಇದ್ದುದರಿಂದ ಅವರು ಪೊಲೀಸ್ ತಪಾಸಣಾ ಠಾಣೆಗಳನ್ನು ಹಾದುಹೋಗಲು ಸಾಧ್ಯವಾಯಿತು ಎಂದು “ಟೈಮ್ಸ್‌ನೌ” ವರದಿ ಹೇಳುತ್ತದೆ.

ಇಂತದ್ದೇ ಘಟನೆಯನ್ನು “ದೈನಿಕ್ ಭಾಸ್ಕರ್” ವರದಿ ಮಾಡಿದ್ದು, ಗುಜರಾತ್ ಸರಕಾರವು ರಾಜ್ಯಗಳ ಗಡಿಗಳನ್ನು ಮುಚ್ಚಬೇಕು ಎಂಬ ಕಠಿಣ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ, ಉತ್ತರಖಂಡದಲ್ಲಿದ್ದ 1,800 ಗುಜರಾತಿಗಳನ್ನು ಮರಳಿತಂದಿತ್ತು. ನಗರದಿಂದ ನಗರಕ್ಕೆ ಸಂಚಾರವನ್ನೂ ನಿಷೇಧಿಸಿರುವುದರಿಂದ ಲಕ್ಷಾಂತರ ವಲಸೆ ಕಾರ್ಮಿಕರು ಇರುವಲ್ಲಿಯೂ ಬದುಕಲಾಗದೆ, ಮನೆಗೂ ಮರಳಲಾಗದೆ ಒದ್ದಾಡುತ್ತಿರುವ ಸಂದರ್ಭದಲ್ಲಿ ಇಂತವು ನಡೆದಿವೆ.

ತಾತ್ವಿಕವಾಗಿ ಭಾರತವು ಬಹಳಷ್ಟು ಕಠಿಣವಾದ ಲಾಕ್‌ಡೌನ್ ನಿಯಮಗಳನ್ನು ಹೇರಿದೆಯಾದರೂ, ನೆಲಮಟ್ಟದಲ್ಲಿ ಇದು ರಂಧ್ರಗಳಿಂದ ಕೂಡಿದೆ, ಬಡವರು ಮತ್ತು ಅವಗಣಿತ ವರ್ಗಗಳ ನಡುವೆ ಲಾಕ್‌ಡೌನ್ ಅನುಷ್ಟಾನಗೊಳಿಸುವುದರಲ್ಲಿ ಭಾರತ ಸರಕಾರ ಹೆಚ್ಚಿನ ಯಶಸ್ಸು ಕಂಡಿದೆಯಾದರೂ, ಪ್ರಭಾವಿ ಮಧ್ಯಮ ವರ್ಗ ಮತ್ತು ಶ್ರೀಮಂತರು ನಿಯಮವನ್ನು ಎಗ್ಗಿಲ್ಲದೇ ಉಲ್ಲಂಘಿಸಿ ಬಚಾವಾಗುತ್ತಿದ್ದಾರೆ. ಇದು ಒಳಗೊಳಗೇ ಅನ್ಯಾಯ ಮಾತ್ರವಲ್ಲ, ನಾಚಿಗೆಗೇಡಿನ ಮತ್ತು ಹಾನಿಕಾರಕ ವಿಷಯ. ಪ್ರತಿಯೊಬ್ಬ ನಿವಾಸಿಗೆ ಲಾಕ್‌ಡೌನ್ ನಿಯಮಗಳನ್ನು ಮನದಟ್ಟು ಮಾಡಲು ಭಾರತ ಸರಕಾರದ ಅಸಾಮರ್ಥ್ಯವು ಖಂಡಿತವಾಗಿಯೂ ಸಾಮಾಜಿಕ ಅಂತರ (ದೈಹಿಕ ಅಂತರ) ಕಾಯ್ದುಕೊಳ್ಳುವ ಮತ್ತು ಈ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಡುವ ಅದರ ಪ್ರಯತ್ನಗಳಿಗೆ ಹಿನ್ನಡೆ ಉಂಟುಮಾಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...