Homeಮುಖಪುಟಚಪ್ಪಾಳೆ ತಟ್ಟುವವರೂ ಅವರೇ, ಉಲ್ಲಂಘಿಸುವವರೂ ಅವರೇ!: ಮಧ್ಯಮ ವರ್ಗ ಮತ್ತು ಕೊರೊನಾ

ಚಪ್ಪಾಳೆ ತಟ್ಟುವವರೂ ಅವರೇ, ಉಲ್ಲಂಘಿಸುವವರೂ ಅವರೇ!: ಮಧ್ಯಮ ವರ್ಗ ಮತ್ತು ಕೊರೊನಾ

ಹೇಳಿಕೊಳ್ಳಲು ಭಾರತದಲ್ಲಿ ಕಠಿಣವಾದ ಲಾಕ್‌ಡೌನ್ ಹೇರಲಾಗಿದೆಯಾದರೂ, ಎಲ್ಲರಿಗೂ ಒಂದೇ ರೀತಿಯಲ್ಲ. ಅಥವಾ ಎಲ್ಲಾ ಕಡೆ ಒಂದೇ ರೀತಿಯಲ್ಲ. ಅನಿವಾರ್ಯತೆ ಇರುವವರಿಗೆ ಬಿಗಿ ಮತ್ತು ಪ್ರಭಾವಿ, ಉಳ್ಳವರ ಮಟ್ಟಿಗೆ ಸಡಿಲ ಎಂಬಂತಾಗಿದೆ ಲಾಕ್‌ಡೌನ್. ಉದಾಹರಣೆಗೆ ಹಲವಾರು ಕುಟುಂಬಗಳು ತಮ್ಮ ಮನೆಗೆಲಸದವರನ್ನು ಉಳಿಸಿಕೊಂಡಿದ್ದು, ಅವರು ತಮ್ಮ ಮನೆಗಳಿಗೆ ತೆರಳಿ ರೋಗ ಹರಡುತ್ತಿದ್ದಾರೆ.

- Advertisement -
- Advertisement -

ಶೊಯೈಬ್ ಧನಿಯಾಲ್

ಅನುವಾದ: ನಿಖಿಲ್ ಕೋಲ್ಪೆ

ತನ್ನನ್ನು ತಾನು ಕೊರೋನ ವೈರಸ್ ಪಿಡುಗಿನಿಂದ ರಕ್ಷಿಸಿಕೊಳ್ಳಲು ಭಾರತವು ಮರಗಟ್ಟಿಸುವ ಲಾಕ್‌ಡೌನ್ ಅನುಷ್ಟಾನಗೊಳಿಸಿದೆ. ಇದು ಪ್ರಪಂಚದಲ್ಲಿಯೇ ಅತ್ಯಂತ ಕಠಿಣ ಲಾಕ್‌ಡೌನ್. ದೇಶವು ಸಂಚಾರ ಮತ್ತು ಉದ್ಯೋಗಗಳ ಮೇಲೆ ಹಿಂದೆಂದೂ ಕಾಣದಂತಹ  ನಿಯಂತ್ರಣಗಳನ್ನು ಹೇರಿದ್ದು, ಬಡವರು ಅಪ್ಪಚ್ಚಿಯಾಗುತ್ತಿದ್ದಾರೆ. ಆದರೂ, ಭಾರತದ ಈ ಯತ್ನದಲ್ಲಿ ದೊಡ್ಡದಾದ ತೂತೊಂದಿದೆ. ಆದೆಂದರೆ, ಬಡವರ ಮೇಲೆ ಹೇರಲಾಗಿರುವ ರೀತಿಯಲ್ಲಿಯೇ ಈ ನಿಯಂತ್ರಣವನ್ನು ಮಧ್ಯಮ ವರ್ಗ ಮತ್ತು ಶ್ರೀಮಂತರ ಮೇಲೆ ಹೇರಲಾಗದ ಆದರ ಅಸಾಮರ್ಥ್ಯ.

ದಿಲ್ಲಿಯ ಡಿಫೆನ್ಸ್ ಕಾಲನಿ ವಸತಿ ಪ್ರದೇಶದ ಒಂದು ಪ್ರಕರಣವನ್ನು ತೆಗೆದುಕೊಳ್ಳೋಣ. ಈ ಐಷಾರಾಮಿ ಪ್ರದೇಶದಲ್ಲಿ ಕಳೆದ ವಾರ ಮೂರು ಮಂದಿ ಸೋಂಕಿತರು ಪರೀಕ್ಷೆಯಲ್ಲಿ ಪತ್ತೆಯಾದರು. ದಿಲ್ಲಿ ಪೊಲೀಸರು ಈ ಕುಟುಂಬದ ಭದ್ರತಾ ಕಾವಲುಗಾರನನ್ನು ಸೋಂಕು ಹರಡಿದ ಆರೋಪ ಹೊರಿಸಿ ಆತನ ವಿರುದ್ಧ ಎಫ್‌ಐಆರ್ ದಾಖಲಿಸಿದರು. ಆದರೆ, ಪೊಲೀಸರು ಯಾಕೆ ಆತನನ್ನು ಮಾತ್ರ ಸೋಂಕು ಹರಡಿದ್ದಕ್ಕಾಗಿ ಸಂಶಯಿಸಿದರು? ಆತನಿಗೆ ಸೋಂಕು ತಗಲಿಸಿದ್ದಾರೆ ಎಂದು ಆ ಮನೆಯವರನ್ನು ಯಾಕೆ ಶಂಕಿಸಲಿಲ್ಲ? ಇದಿನ್ನೂ ಅಸ್ಪಷ್ಟವಾಗಿದೆ.

ಕೊರೋನ ಸಮಯದಲ್ಲಿ ಸಿರಿವಂತರನ್ನು ಕಾಯುತ್ತಿರುವ ಸೆಕ್ಯುರಿಟಿ ಗಾರ್ಡ್‌ಗಳು.

ಹಲವಾರು ಮಂದಿ ಸೋಂಕಿಗೆ ಒಳಗಾದ ಧಾರ್ಮಿಕ ಸಭೆಯೊಂದರಲ್ಲಿ ಈ ಕಾವಲುಗಾರ ಭಾಗವಹಿಸಿದ್ದಾನೆಂಬುದು ಆರೋಪ. ಆದರೆ, ಈ ಕುಟುಂಬದವರು ಈ ಕಾವಲುಗಾರನನ್ನು ತಮ್ಮ ಮನೆಯ ಒಳಗೆ ಹೊರಗೆ ಹೋಗಲು ಬಿಡುವುದರಿಂದ ಲಾಕ್‌ಡೌನ್ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎಂಬುದರ ಬಗ್ಗೆ ಯಾರೂ ಕಿಂಚಿತ್ ಗಮನವನ್ನೂ ಹರಿಸಿಲ್ಲ. ಅಲ್ಲದೇ, ಇಡೀ ಡಿಫೆನ್ಸ್ ಕಾಲನಿ ವಸತಿ ಪ್ರದೇಶವನ್ನು ಅಪಾಯಕ್ಕೆ ತಳ್ಳಿದಕ್ಕಾಗಿ ಮತ್ತು ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಈ ಕುಟುಂಬದ ವಿರುದ್ಧ ಯಾವುದೇ ಪೊಲೀಸ್ ಕಾರ್ಯಾಚರಣೆ ನಡೆದಿಲ್ಲ ಎಂಬ ಬಗ್ಗೆ ಯಾವುದೇ ವಿವರಣೆಯಿಲ್ಲ.

ಇದು ಇಂತಹಾ ಒಂದೇ ಉಲ್ಲಂಘನೆಯಲ್ಲ.  ಡಿಫೆನ್ಸ್ ಕಾಲನಿಯ ಹಲವಾರು ಕುಟುಂಬಗಳು ಇನ್ನೂ ಕಾವಲುಗಾರರು, ಮನೆಗೆಲಸದವರನ್ನು ಉಪಯೋಗಿಸಿಕೊಳ್ಳುತ್ತಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವಂತೆ, ಮನೆಗೆಲಸದವರು, ಚಾಲಕರು ಮತ್ತು ಕಾವಲುಗಾರರ ಮೇಲೆ ಕಣ್ಣಿಡುವಂತೆ ಅಲ್ಲಿನ ನಿವಾಸಿಗಳಿಗೆ ಹೇಳುವ ಮೂಲಕ ದಿಲ್ಲಿ ಪೊಲೀಸರು ಇಂತಹಾ ಕೃತ್ಯಗಳಿಗೆ ಪರೋಕ್ಷ ಸಮ್ಮತಿ ನೀಡಿದ್ದಾರೆ ಎಂದು ಪತ್ರಿಕಾ ವರದಿ ಹೇಳಿದೆ.

ಶ್ರೀಮಂತ ಮತ್ತು ಮಧ್ಯಮ ವರ್ಗಗಳ ಜನರು ಲಾಕ್‌ಡೌನ್ ಅವಧಿಯಲ್ಲಿ ಮನೆಗೆಲಸದವರ ಸೇವೆಯನ್ನು ಮುಂದುವರಿಸಿರುವ ಪ್ರಕರಣ ಇದೊಂದೇ ಅಲ್ಲ. ಕಳೆದ ಬುಧವಾರ  ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿ‌ಆರ್)ನ ಕೊಳೆಗೇರಿಯಲ್ಲಿ ವಾಸಿಸುವ ಮನೆಗೆಲಸದ ಮಹಿಳೆಯೊಬ್ಬರಿಗೆ ಸೋಂಕು ತಗಲಿದಾಗ ಇಡೀ ಕೊಳೆಗೇರಿಯನ್ನು ದಿಗ್ಬಬಂಧನದಲ್ಲಿ ಇರಿಸಲಾಯಿತು. ಆಕೆಗೆ ಆಕೆ ಕೆಲಸ ಮಾಡುವ ಮನೆ ಮಾಲಕರಿಂದ ಸೋಂಕು ತಗುಲಿದೆ ಎಂದು ಗೊತ್ತಾಗಿತ್ತು. ಈ ಮಾಲಕ ಅಗ್ನಿಸುರಕ್ಷಾ ಸಂಸ್ಥೆಯೊಂದರ ಉದ್ಯೋಗಿ. ಕಳೆದ ಬುಧವಾರದ ಒಳಗೆ ನೋಯ್ಡಾದಲ್ಲಿ ಸೋಂಕು ದೃಢಪಟ್ಟಿರುವ 58 ಮಂದಿಯಲ್ಲಿ 39 ಮಂದಿಗೆ ಇದೇ ಸಂಸ್ಥೆಯ ಉದ್ಯೋಗಿಗಳಿಂದ ಸೋಂಕು ಹರಡಿದೆ ಎಂದು ತಿಳಿದುಬಂದಿದೆ.

ಮುಚ್ಚಿದ ಪೇಟೆಯಲ್ಲಿ ಮನೆಗೆಲಸಕ್ಕೆ ತೆರಳುತ್ತಿರುವ ಮಹಿಳೆ.

ಸಿರಿವಂತರಿಗೆ ಸಡಿಲಬಿಟ್ಟುದರ ಪರಿಣಾಮದ ಇನ್ನೊಂದು ನಂಬಲಸಾಧ್ಯವಾದ ಕತೆ ಬೆಳಕಿಗೆ ಬಂದಿದೆ. ಅದರಲ್ಲಿ ಮಧ್ಯಪ್ರದೇಶದ ದೊಡ್ಡ ಸಂಖ್ಯೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಕೊರೋನ ವೈರಸ್ ಸೋಂಕಿತರಾಗಿದ್ದಾರೆ. ಎನ್‌ಡಿಟಿವಿ ವರದಿ ಮಾಡಿರುವಂತೆ, ಭೋಪಾಲ್‌ನಲ್ಲಿರುವ 85 ಸೋಂಕು ಪ್ರಕರಣಗಳಲ್ಲಿ ಕನಿಷ್ಟ 40  ಪ್ರರಕರಣಗಳು ಮಧ್ಯಪ್ರದೇಶ ಆರೋಗ್ಯ ಇಲಾಖೆಯೊಳಗೇ ನಡೆದಿವೆ. ಕೊರೋನ ವೈರಸ್ ನಿಯಂತ್ರಣಕ್ಕಾಗಿ ರೂಪಿಸಲಾದ ನಿಯಮಗಳನ್ನು ಬದಿಗೆ ಸರಿಸಿದ ಆರೋಪವನ್ನು ಇಲಾಖೆಯ ಉನ್ನತ ಅಧಿಕಾರಿಗಳು ಎದುರಿಸುತ್ತಿದ್ದಾರೆ.

ಇದರ ಮೂಲ ಇರುವುದು ಇಲಾಖಾ ನಿರ್ದೇಶಕರಲ್ಲಿ ಎಂದು ಆರೋಪಿಸಲಾಗಿದೆ. ಅವರು ತನಗೆ ಸೋಕು ಇದೆಯೆಂದು ಪರೀಕ್ಷೆಯಲ್ಲಿ ತಿಳಿದುಬಂದರೂ, ತನ್ನನ್ನು ಸ್ವಯಂದಿಗ್ಬಂಧನಕ್ಕೆ ಒಳಪಡಿಸದೆ, ಕೆಲಸಕ್ಕೆ ಬರುವುದನ್ನು ಮುಂದುವರಿಸಿದ್ದರು ಎಂದು ನ್ಯೂಸ್ 18 ಚಾನೆಲ್ ವರದಿ ಮಾಡಿದೆ. ಮಧ್ಯಪ್ರದೇಶ ಸರಕಾರ ಈ ಪ್ರಕರಣದ  ಕುರಿತು ತನಿಖೆಗೆ ಆದೇಶಿರುವಂತೆಯೇ, ಅದರ ಪರಿಣಾಮಗಳು ಮಾತ್ರ ಆಘಾತಕಾರಿಯಾಗಿವೆ. ಈಗ ರಾಜಧಾನಿ ಭೋಪಾಲ್‌ನಲ್ಲಿ ಗುರುತಿಸಲಾಗಿರುವ ಪ್ರತೀ ಇಬ್ಬರು ಸೋಂಕಿತರಲ್ಲಿ ಒಬ್ಬ ಆರೋಗ್ಯ ಇಲಾಖೆಯ ನೌಕರ.

ಊರು ಕೊಳ್ಳೆಹೋದ ಮೇಲೆ ದಿಡ್ಡಿ ಬಾಗಿಲು: ಆಸ್ಪತ್ರೆಯೊಂದರಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಪಾಟೀಲ್.

ರಜಾದ ಮಜಾ

ಇನ್ನೂ ಕೆಲವು ಪ್ರಕರಣಗಳಲ್ಲಿ ಸರಕಾರಗಳು ಉಳ್ಳವರಿಗೆ ಸಡಿಲ ತೋರುವುದಕ್ಕಿಂತಲೂ ಮುಂದುವರಿವರಿದು, ನೇರವಾಗಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸುವ ತನಕ ಮುಟ್ಟಿದೆ. ಕಳೆದ ಗುರುವಾರ ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೋರೇಷನ್‌ನ ಪ್ರವರ್ತಕರಾಗಿರುವ ವಾಧ್ವಾನ್ ಕುಟುಂಬವು ಲಾಕ್‌ಡೌನ್ ಉಲ್ಲಂಘಿಸಿ ಮಹಾರಾಷ್ಟ್ರದ ಗಿರಿಧಾಮವೊಂದಕ್ಕೆ ಹೋಗಿತ್ತು. ಕುಟುಂಬದ ಬಳಿ ಹಿರಿಯ ಅಧಿಕಾರಿಯೊಬ್ಬ ನೀಡಿದ ವಿಶೇಷ ತುರ್ತು ಪಾಸು ಇದ್ದುದರಿಂದ ಅವರು ಪೊಲೀಸ್ ತಪಾಸಣಾ ಠಾಣೆಗಳನ್ನು ಹಾದುಹೋಗಲು ಸಾಧ್ಯವಾಯಿತು ಎಂದು “ಟೈಮ್ಸ್‌ನೌ” ವರದಿ ಹೇಳುತ್ತದೆ.

ಇಂತದ್ದೇ ಘಟನೆಯನ್ನು “ದೈನಿಕ್ ಭಾಸ್ಕರ್” ವರದಿ ಮಾಡಿದ್ದು, ಗುಜರಾತ್ ಸರಕಾರವು ರಾಜ್ಯಗಳ ಗಡಿಗಳನ್ನು ಮುಚ್ಚಬೇಕು ಎಂಬ ಕಠಿಣ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ, ಉತ್ತರಖಂಡದಲ್ಲಿದ್ದ 1,800 ಗುಜರಾತಿಗಳನ್ನು ಮರಳಿತಂದಿತ್ತು. ನಗರದಿಂದ ನಗರಕ್ಕೆ ಸಂಚಾರವನ್ನೂ ನಿಷೇಧಿಸಿರುವುದರಿಂದ ಲಕ್ಷಾಂತರ ವಲಸೆ ಕಾರ್ಮಿಕರು ಇರುವಲ್ಲಿಯೂ ಬದುಕಲಾಗದೆ, ಮನೆಗೂ ಮರಳಲಾಗದೆ ಒದ್ದಾಡುತ್ತಿರುವ ಸಂದರ್ಭದಲ್ಲಿ ಇಂತವು ನಡೆದಿವೆ.

ತಾತ್ವಿಕವಾಗಿ ಭಾರತವು ಬಹಳಷ್ಟು ಕಠಿಣವಾದ ಲಾಕ್‌ಡೌನ್ ನಿಯಮಗಳನ್ನು ಹೇರಿದೆಯಾದರೂ, ನೆಲಮಟ್ಟದಲ್ಲಿ ಇದು ರಂಧ್ರಗಳಿಂದ ಕೂಡಿದೆ, ಬಡವರು ಮತ್ತು ಅವಗಣಿತ ವರ್ಗಗಳ ನಡುವೆ ಲಾಕ್‌ಡೌನ್ ಅನುಷ್ಟಾನಗೊಳಿಸುವುದರಲ್ಲಿ ಭಾರತ ಸರಕಾರ ಹೆಚ್ಚಿನ ಯಶಸ್ಸು ಕಂಡಿದೆಯಾದರೂ, ಪ್ರಭಾವಿ ಮಧ್ಯಮ ವರ್ಗ ಮತ್ತು ಶ್ರೀಮಂತರು ನಿಯಮವನ್ನು ಎಗ್ಗಿಲ್ಲದೇ ಉಲ್ಲಂಘಿಸಿ ಬಚಾವಾಗುತ್ತಿದ್ದಾರೆ. ಇದು ಒಳಗೊಳಗೇ ಅನ್ಯಾಯ ಮಾತ್ರವಲ್ಲ, ನಾಚಿಗೆಗೇಡಿನ ಮತ್ತು ಹಾನಿಕಾರಕ ವಿಷಯ. ಪ್ರತಿಯೊಬ್ಬ ನಿವಾಸಿಗೆ ಲಾಕ್‌ಡೌನ್ ನಿಯಮಗಳನ್ನು ಮನದಟ್ಟು ಮಾಡಲು ಭಾರತ ಸರಕಾರದ ಅಸಾಮರ್ಥ್ಯವು ಖಂಡಿತವಾಗಿಯೂ ಸಾಮಾಜಿಕ ಅಂತರ (ದೈಹಿಕ ಅಂತರ) ಕಾಯ್ದುಕೊಳ್ಳುವ ಮತ್ತು ಈ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಡುವ ಅದರ ಪ್ರಯತ್ನಗಳಿಗೆ ಹಿನ್ನಡೆ ಉಂಟುಮಾಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....