Homeಅಂತರಾಷ್ಟ್ರೀಯಅಫ್ಘಾನ್‌ನ ಹೊಸ ನಾಯಕರಾಗಲಿರುವ ತಾಲಿಬಾನ್‌‌ ಮುಖಂಡರಿವರು

ಅಫ್ಘಾನ್‌ನ ಹೊಸ ನಾಯಕರಾಗಲಿರುವ ತಾಲಿಬಾನ್‌‌ ಮುಖಂಡರಿವರು

ಅಘ್ಘನ್ ಅನ್ನು ವಶಪಡಿಸಿಕೊಂಡಿರುವ ತಾಲಿಬಾನ್ ಆಡಳಿತಕ್ಕೆ ಮುಂದಾಗಿದೆ. ಅದರ ಮುಖಂಡರ ಪರಿಚಯ ಇಲ್ಲಿದೆ

- Advertisement -
- Advertisement -

ಭಯೋತ್ಪಾದಕರನ್ನು ಮಟ್ಟ ಹಾಕುತ್ತೇನೆ ಎಂದು ಅಫ್ಘಾನ್‌ಗೆ ತನ್ನ ಪಡೆಯನ್ನು ಇಳಿಸಿದ್ದ ಅಮೆರಿಕಾ, ಬರೋಬ್ಬರಿ 20 ವರ್ಷಗಳ ನಂತರ ಮತ್ತೆ ತಾಲಿಬಾನ್‌ ಕೈಯಲ್ಲಿ ಅಧಿಕಾರ ಕೊಟ್ಟು ಹೊರಟು ಹೋಗಿದೆ. 20 ವರ್ಷಗಳ ಹಿಂದೆ ಯಾರ ಕೈಯ್ಯಲ್ಲಿ ಅಫ್ಘಾನ್‌ ಇತ್ತೋ ಅದೇ ತಾಲಿಬಾನ್‌ ಕೈಯ್ಯಲ್ಲಿ ಇವತ್ತು ಅಫ್ಘಾನ್‌ ಇದೆ. ಧರ್ಮದ ಆಧಾರದಲ್ಲಿ ಅಧಿಕಾರ ಹಿಡಿದರೆ ಏನಾಗುತ್ತದೆ ಎಂದು ತಾಲಿಬಾನ್‌ ಇಪ್ಪತ್ತು ವರ್ಷಗಳ ಹಿಂದೆ ಜಗತ್ತಿಗೆ ತೋರಿಸಿದೆ.

ಪ್ರಸ್ತುತ ತಾಲಿಬಾನ್‌ ತಾವು ಶತ್ರಗಳಿಗೆ ಕ್ಷಮೆ ನೀಡಿದ್ದೇವೆ, ವಿವಿಧ ಜನಾಂಗಗಳನ್ನು ಒಳಗೊಂಡ ಸರ್ಕಾರವನ್ನು ರಚಿಸುತ್ತೇವೆ, ಅಫ್ಘಾನ್ ನೆಲದಿಂದ ಭಯೋತ್ಪಾದಕ ಗುಂಪುಗಳನ್ನು ದೂರವಿಡುತ್ತೇವೆ ಮತ್ತು ಮಹಿಳೆಯರಿಗೆ ಶರಿಯಾ ಕಾನೂನಿನ ಮಿತಿಯಲ್ಲಿ ಕೆಲಸ ಮಾಡಲು ಅವಕಾಶ ನೀಡುತ್ತೇವೆ ಎಂದು ಹೇಳುತ್ತಿದೆ. ಇದೇ ಸಂದರ್ಭದಲ್ಲಿ ಅಫ್ಘಾನ್ ಸ್ವಾತಂತ್ರ್ಯ ದಿನ ಮೆರವಣಿಗೆ ಹೊರಟವರ ಮೇಲೆ ತಾಲಿಬಾನ್ ಗುಂಡಿನ ದಾಳಿ ಮಾಡಿದೆ ಎಂಬ ವರದಿಗಳು ಬರುತ್ತಿವೆ. ಇನ್ನು ಅಮೆರಿಕಾ ಮತ್ತು ಅದರ ಮಿತ್ರರಾಷ್ಟ್ರಗಳು ತಾಲಿಬಾನ್‌ ಅನ್ನು ಅಫ್ಘಾನಿಸ್ತಾನದ ಕಾನೂನುಬದ್ಧ ಹೊಸ ಆಡಳಿತಗಾರರು ಎಂದು ಗುಂಪನ್ನು ಗುರುತಿಸಲು ಹಲವು ಷರತ್ತುಗಳನ್ನು ವಿಧಿಸಿದೆ.

ಇದನ್ನೂ ಓದಿ: ಅಫ್ಘಾನ್ ತಾಲಿಬಾನ್ ಗೆಲುವು: ಒಂದು ಎಡಪಂಥೀಯ ನೋಟ

ತಾಲಿಬಾನ್‌ನ ಹಿರಿಯ ನಾಯಕತ್ವವು, 1980 ರಲ್ಲಿ ಸೋವಿಯತ್ ಒಕ್ಕೂಟದ ವಿರುದ್ಧ ಹೋರಾಡಲು ಅಮೆರಿಕಾದಿಂದ ತರಬೇತಿ ಪಡೆದ ಮುಜಾಹಿದ್ದೀನ್ ಬಂಡೂಕೋರರನ್ನು ಒಳಗೊಂಡಿದೆ. ತಾಲಿಬಾನ್‌ನಲ್ಲಿ ಬಹುಪಾಲು ಪಶ್ತೂನ್‌‌ ಜನಾಂದವರೆ ಹೆಚ್ಚಿದ್ದು, ಅಘ್ಘಾನ್‌ನ ದಕ್ಷಿಣ ಭಾಗದಲ್ಲಿ ಹೆಚ್ಚು ಪ್ರಬಲವಾಗಿದೆ.

ತಾಲಿಬಾನ್‌‌ನ ಏಳು ಪ್ರಭಾವಿ ನಾಯಕರ ಪಟ್ಟಿ ಹೀಗಿದೆ

ಹೈಬತುಲ್ಲಾ ಅಖುಂಜದಾ, ಸುಪ್ರೀಂ ಕಮಾಂಡರ್

1961 ರಲ್ಲಿ ಜನಿಸಿದ ಅಖುಂಜದಾ ತಾಲಿಬಾನ್‌ನ ಅತ್ಯುನ್ನತ ನಾಯಕ. 2016 ರಲ್ಲಿ ತಾಲಿಬಾನ್‌‌ನ ಮೂರನೇ ಸುಪ್ರೀಂ ಕಮಾಂಡರ್ ಆದರು. ಅವರ ಪೂರ್ವಾಧಿಕಾರಿಯನ್ನು ಅಮೆರಿಕಾ ಅದೇ ಸಮಯದಲ್ಲಿ ಡ್ರೋನ್‌ ಸ್ಟ್ರೈಕ್‌ ಮೂಲಕ ಕೊಂದು ಹಾಕಿತ್ತು. ಅಖುಂಜದಾ ಮಿಲಿಟರಿ ಕಮಾಂಡರ್‌ಗಿಂತ ಧಾರ್ಮಿಕ ನಾಯಕನಾಗಿ ಹೆಚ್ಚು ಹೆಸರುವಾಸಿಯಾಗಿದ್ದು, ಇವರು ಹೆಚ್ಚಾಗಿ ಪ್ರಚಾರಕ್ಕೆ ಬಂದಿಲ್ಲ.

ಹೈಬತುಲ್ಲಾ ಅಖುಂಜದಾ

ಅಲ್ಲದೆ ತಾಲಿಬಾನ್‌ನ ಅಗ್ರ ನಾಯಕನಾದ ನಂತರ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರ ಕೆಲವೇ ಕೆಲವು ಫೋಟೋಗಳು ಲಭ್ಯವಿವೆ. ಅಖುಂಜದಾ ತನ್ನ ಕೊನೆಯ ಸಾರ್ವಜನಿಕ ಹೇಳಿಕೆಯನ್ನು ಮೇ ತಿಂಗಳ ಈದ್ ಅಲ್-ಫಿತರ್ ಹಬ್ಬದ ದಿನ ನೀಡಿದ್ದರು.

ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

ಅಬ್ದುಲ್ ಘನಿ ಬರದಾರ್, ಉಪ ನಾಯಕ

ಅಬ್ದುಲ್ ಘನಿ ಬರದಾರ್‌ ತಾಲಿಬಾನ್‌ನ ಉಪ ನಾಯಕರಾಗಿದ್ದಾರೆ. ಜೊತೆಗೆ ತಾಲಿಬಾನ್‌ನ ಮುಖ್ಯ ಸಾರ್ವಜನಿಕ ಮುಖ ಕೂಡಾ ಆಗಿದ್ದು, ಅಫ್ಘಾನ್‌ನ ಮುಂದಿನ ಸರ್ಕಾರದ ಮುಖ್ಯಸ್ಥರಾಗಿರುತ್ತಾರೆ. ಒಸಾಮಾ ಬಿನ್ ಲಾಡೆನ್ ಜೊತೆ ನಿಕಟ ಸಂಬಂಧ ಹೊಂದಿದ್ದವರಲ್ಲಿ ಇವರು ಕೂಡಾ ಒಬ್ಬರು. ತಾಲಿಬಾನ್‌ನ ಮೊದಲ ಸುಪ್ರೀಂ ಕಮಾಂಡರ್‌ ಆಗಿದ್ದ ಮುಲ್ಲಾ ಮೊಹಮ್ಮದ್ ಒಮರ್ ಜೊತೆಗೆ ತಾಲಿಬಾನ್ ಅನ್ನು ಸ್ಥಾಪಿಸಿದವರು.

2010 ರಲ್ಲಿ ಪಾಕಿಸ್ತಾನದ ಬಂದರು ನಗರವಾದ ಕರಾಚಿಯಲ್ಲಿ ಅಮೆರಿಕದ ಗುಪ್ತಚರ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಬರದಾರನ್ನು ಸೆರೆಹಿಡಿಯಲಾಯಿತು. ಅಫ್ಘಾನಿಸ್ತಾನದ ಅಮೆರಿಕಾ ವಿಶೇಷ ಪ್ರತಿನಿಧಿ ಟ್ರಂಪ್ ಆಡಳಿತದೊಂದಿಗೆ ಶಾಂತಿ ಮಾತುಕತೆಗೆ ಮುಂಚಿತವಾಗಿ 2018 ರಲ್ಲಿ ಆತನ ಬಿಡುಗಡೆಗೆ ಸಹಾಯ ಮಾಡಿದರು ಎಂದು ವರದಿಯಾಗಿದೆ.

ಅಬ್ದುಲ್ ಘನಿ ಬರದಾರ್

ಅವರು ಮಂಗಳವಾರ ತಾಲಿಬಾನ್‌‌ನ ಜನ್ಮಸ್ಥಳವಾದ ಕಂದಹಾರ್‌ಗೆ ಮರಳಿದ್ದಾರೆ ಎಂದು ವರದಿಯಾಗಿದೆ. ಅಲ್ಲಿವರೆಗೂ ತಾಲಿಬಾನ್‌ಗಳ ರಾಜಕೀಯ ಕಚೇರಿಯಿರುವ ಕತಾರ್‌ನ ದೋಹಾದಲ್ಲಿ ಅವರು ವಾಸುತ್ತಿದ್ದರು. ತಾಲಿಬಾನ್‌ನ ರಾಜತಾಂತ್ರಿಕ ನಾಯಕನಾಗಿರುವ ಅವರು, 2020ರ ಫೆಬ್ರವರಿಯಲ್ಲಿ ಟ್ರಂಪ್ ಆಡಳಿತದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದರು. ಈ ಒಪ್ಪಂದವೆ ಅಫ್ಘಾನಿಸ್ತಾನದಿಂದ ಅಮೆರಿಕಾ ಮತ್ತು ನ್ಯಾಟೋ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಮಾಡಿತು. ಅಬ್ದುಲ್ ಘನಿ ಬರದಾರ್ ಈ ತಿಂಗಳ ಆರಂಭದಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿಯನ್ನು ಟಿಯಾಂಜಿನ್‌ನಲ್ಲಿ ಭೇಟಿಯಾಗಿ ಮಾತನಾಡಿದ್ದಾರೆ.

ಇದನ್ನೂ ಓದಿ: ಕಾಬೂಲ್‌: ಗುರುದ್ವಾರಕ್ಕೆ ಭೇಟಿ ನೀಡಿ ಸಿಖ್ಖರು, ಹಿಂದೂಗಳೊಂದಿಗೆ ಮಾತನಾಡಿದ ತಾಲಿಬಾನಿಗಳು

ಸಿರಾಜುದ್ದೀನ್ ಹಕ್ಕಾನಿ, ಅಮೆರಿಕಾ ಗುರುತಿಸಿದ ಭಯೋತ್ಪಾದಕ ಗುಂಪಿನ ನಾಯಕ

ಸಿರಾಜುದ್ದೀನ್ ಹಕ್ಕಾನಿ ‘ಹಕ್ಕಾನಿ ನೆಟ್‌ವರ್ಕ್‌’ನ ನಾಯಕ. ಅಮೆರಿಕಾ ಇದನ್ನು ಭಯೋತ್ಪಾದಕ ಸಂಘಟನೆ ಎಂದು ಗುರುತಿಸಿದೆ. 2016 ರಲ್ಲಿ ಈ ಗುಂಪುಗಳು ತಾಲಿಬಾನ್‌ ಜೊತೆ ವಿಲೀನಗೊಂಡಿತು. ಇದರ ನಂತರ ಹಕ್ಕಾನಿ ತಾಲಿಬಾನ್‌ನ ಎರಡನೆ ಉಪ ನಾಯಕನಾದರು. ಇವರು ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ಓಡಾಡಿಕೊಂಡು ಎರಡು ದೇಶಗಳಾದ್ಯಂತ ಮಿಲಿಟರಿ ಮತ್ತು ಸೈನ್ಯವನ್ನು ನೋಡಿಕೊಳ್ಳುತ್ತಾರೆ ಎಂದು ಹೇಳಲಾಗಿದೆ.

ಸಿರಾಜುದ್ದೀನ್ ಹಕ್ಕಾನಿ

ತಾಲಿಬಾನ್ ಜೊತೆ ನಡೆಯುತ್ತಿರುವ ಮಾತುಕತೆಯ ಭಾಗವಾಗಿ ಹಕ್ಕಾನಿ ನೆಟ್ವರ್ಕ್ ಅನ್ನು ಅಮೆರಿಕಾ ಹೇಗೆ ಪರಿಗಣಿಸುತ್ತದೆ ಎಂಬುದು ಸ್ಪಷ್ಟವಾಗಿಲ್ಲ. ಅವರ ಸಹೋದರ, ಪ್ರಮುಖ ತಾಲಿಬಾನ್ ನಾಯಕನೂ ಆಗಿದ್ದು, 2014 ರಲ್ಲಿ ಬಹರೈನ್‌ನಲ್ಲಿ ಅಮೆರಿಕಾ ಪಡೆಗಳಿಂದ ಸೆರೆಹಿಡಿಯಲ್ಪಟ್ಟರು. ನಾಲ್ಕು ವರ್ಷಗಳ ನಂತರ ಬಿಡುಗಡೆಯಾದರು.

ಮೊಹಮ್ಮದ್ ಯಾಕೂಬ್, ತಾಲಿಬಾನ್‌ ಸಂಸ್ಥಾಪಕನ ಮಗ

ಮೊಹಮ್ಮದ್ ಯಾಕೂಬ್

ಯಾಕೂಬ್ ತಾಲಿಬಾನ್ ಸಂಸ್ಥಾಪಕ ಮುಲ್ಲಾ ಒಮರ್‌ ಪುತ್ರ. ತನ್ನ ತಂದೆಯ ಕಾರಣಕ್ಕೆ ಒಮ್ಮೆ ತಾಲಿಬಾನ್‌ನ ಉನ್ನತ ಹುದ್ದೆಗೆ ಸ್ಪರ್ಧಿಯಾಗಿದ್ದರು. ಯಾಕೂಬ್‌ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಿಲ್ಲ. ನೆರೆಯ ಪಾಕಿಸ್ತಾನದಲ್ಲಿನ ಸೆಮಿನರಿಯಲ್ಲಿ ಶಿಕ್ಷಣ ಪಡೆದಿದ್ದ ಯಾಕೂಬ್‌, ಪ್ರಸ್ತುತ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದಾರೆ ಎಂದು ಸುದ್ದಿಗಳು ಸೂಚಿಸುತ್ತವೆ. ಸಿರಾಜುದ್ದೀನ್ ಹಕ್ಕಾನಿಯೊಂದಿಗೆ ತಾಲಿಬಾನ್‌ನ ಸೇನಾ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದೂ ನಂಬಲಾಗಿದೆ.

ಇದನ್ನೂ ಓದಿ: ಅಫ್ಘಾನ್‌‌ ಪತನ: ‘ಭಾರತದ ಹಿತಾಸಕ್ತಿಗಳನ್ನು ಕಾಪಾಡಲು ಏನು ಮಾಡಿದ್ದೀರಿ?’ – ಮೋದಿಗೆ ಕಾಂಗ್ರೆಸ್ ಪ್ರಶ್ನೆ

ಅಬ್ದುಲ್ ಹಕೀಂ ಹಕ್ಕಾನಿ, ಪ್ರಮುಖ ಸಂಧಾನಕಾರ

ಅಬ್ದುಲ್ ಹಕೀಂ ಹಕ್ಕಾನಿ

ಸುಪ್ರೀಂ ಕಮಾಂಡರ್ ಅಖುಂಜದಾ ಆಪ್ತನೆಂದು ನಂಬಲಾಗಿರುವ ಹಕೀಂ ಹಕ್ಕಾನಿ, ತಾಲಿಬಾನ್‌ನ ಸಂಧಾನ ತಂಡದ ಮುಖ್ಯಸ್ಥರಾಗಿದ್ದಾರೆ. ಅಫ್ಘಾನ್‌ನ ಹಿಂದಿನ ಅಮೆರಿಕಾ ಬೆಂಬಲಿತ ಸರ್ಕಾರದೊಂದಿಗೆ ಶಾಂತಿ ಮಾತುಕತೆಯ ಉಸ್ತುವಾರಿ ವಹಿಸಿದ್ದರು. ಜೊತೆಗೆ ಧಾರ್ಮಿಕ ವಿದ್ವಾಂಸರ ಹಿರಿಯ ಮಂಡಳಿಯ ಮುಖ್ಯಸ್ಥರಾಗಿದ್ದಾರೆ.

ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನಿಕ್‌ಜಾಯ್, ಪ್ರಮುಖ ರಾಜತಾಂತ್ರಿಕ

ಗುಂಪಿನ ಇತರ ನಾಯಕರಂತಲ್ಲದೆ, ಸ್ಟಾನಿಕ್‌ಜಾಯ್ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುತ್ತಾರೆ. ಕಳೆದ ಬಾರಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಅಧಿಕಾರ ಹಿಡಿದಿದ್ದಾಗ ಉಪ ವಿದೇಶಾಂಗ ಮಂತ್ರಿಯಾಗಿ ಪ್ರಪಂಚದಾದ್ಯಂತ ವ್ಯಾಪಕವಾಗಿ ಪ್ರಯಾಣಿಸಿದ್ದರು. 1996 ರಲ್ಲಿ, ತಾಲಿಬಾನ್ ಸರ್ಕಾರವನ್ನು ಒಪ್ಪಿಕೊಳ್ಳುವಂತೆ ಕ್ಲಿಂಟನ್ ಆಡಳಿತವನ್ನು ಮನವೊಲಿಸಲು ನಡೆಸಿದ ವಿಫಲವಾದ ಕಾರ್ಯಾಚರಣೆಯಲ್ಲಿ ಸ್ಟಾನಿಕ್‌ಜಾಯ್‌ ವಾಷಿಂಗ್ಟನ್‌ಗೆ ಭೇಟಿ ನೀಡಿದ್ದರು.

ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನಿಕ್‌ಜಾಯ್

ರಾಯಿಟರ್ಸ್ ವರದಿಯ ಪ್ರಕಾರ, ಸ್ಟಾನಿಕ್‌ಜಾಯ್‌ ತನ್ನ ನಿಯೋಗಗಳನ್ನು ಚೀನಾದ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಲು ಕರೆದೊಯ್ದಿದ್ದಾರೆ. ಅಫ್ಘಾನ್‌ನ ಸರ್ಕಾರಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿರುವ ಅಬ್ದುಲ್ ಹಕೀಮ್ ಹಕ್ಕಾನಿ ಅವರ ಉಪ ಸಮಾಲೋಚಕರಾಗಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

ಜಬಿಹುಲ್ಲಾ ಮುಜಾಹಿದ್, ಮುಖ್ಯ ವಕ್ತಾರ

ಜಬಿಹುಲ್ಲಾ ಮುಜಾಹಿದ್ ಈ ವಾರದ ಆರಂಭದಲ್ಲಿ ಕಾಬೂಲ್‌ನಲ್ಲಿ ನಡೆದ ತಾಲಿಬಾನ್‌ನ ಮೊದಲ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅಂತರಾಷ್ಟ್ರೀಯ ಸಮುದಾಯಕ್ಕೆ ತಾಲಿಬಾನ್‌ನ ಸಂದೇಶವನ್ನು ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆಯಿದೆ.

ಜಬಿಹುಲ್ಲಾ ಮುಜಾಹಿದ್

20 ವರ್ಷಗಳ ಯುದ್ಧದ ಸಮಯದಲ್ಲಿ, ಅವರು ಪತ್ರಕರ್ತರೊಂದಿಗೆ ದೂರವಾಣಿ ಮೂಲಕ ಅಥವಾ ಪಠ್ಯ ಸಂದೇಶಗಳ ಮೂಲಕ ಮಾತ್ರ ಸಂವಹನ ನಡೆಸಿದ್ದರು. ಆಗಸ್ಟ್ 17 ರಂದು ಪತ್ರಿಕಾಗೋಷ್ಠಿಯ ಸಂವಹನದಲ್ಲಿ ಅವರು ಸಾರ್ವಜನಿಕವಾಗಿ ಮೊದಲ ಬಾರಿಗೆ ಕಾಣಿಸಿಕೊಂಡರು.

ಇದನ್ನೂ ಓದಿ: ತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತು ಪತ್ತೆಯಾದ ನಂತರ, ಕೊಂದಿದ್ದಾರೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...