Homeಕರೋನಾ ತಲ್ಲಣಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂಬ ಆರೋಪದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ’ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು’ ಎಂದು ರಾಜ್ಯ ಸರ್ಕಾರದ ವಿರುದ್ದ ಮತ್ತೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ನಿರ್ವಹಣೆಯಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ನಿನ್ನೆ ಪತ್ರಿಕಾಗೋಷ್ಟಿ ನಡೆಸಿದ್ದ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರರಿಗೆ ಆಡಳಿತ ಪಕ್ಷದ ಐವರು ಸಚಿವರು ನಿನ್ನೆಯೆ ಪತ್ರಿಕಾಗೋಷ್ಟಿ ನಡೆಸಿ ಪ್ರತ್ಯುತ್ತರ ನೀಡಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಪಾರದರ್ಶಕವಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.


ಓದಿ: ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ


ಇಂದು ಮತ್ತೇ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?. ಸರ್ಕಾರ ಅಕ್ರಮ‌‌‌ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಕೊರೊನಾ ಖರೀದಿ ಅವ್ಯವಹಾರದ 14 ದಾಖಲೆಗಳನ್ನು ಕೊಟ್ಟಿದ್ದೇವೆ. ಅವು ಸರ್ಕಾರದ್ದೇ ದಾಖಲೆಗಳು. ಅವುಗಳನ್ನು ಸಚಿವರು ನಿರಾಕರಿಸುತ್ತಾರೆ ಎಂದಾದರೆ, ನಿನ್ನೆ ಸರ್ಕಾರದ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದವರು ಮಂತ್ರಿಗಳಾಗಿರುವುದು ನಿಜನಾ? ಸುಳ್ಳಾ? ಎಂದು ಅವರು ಪ್ರಶ್ನಿಸಿದ್ದಾರೆ.

ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕಾದರೆ ನ್ಯಾಯಾಂಗ ತನಿಖೆಯಾಗಲಿ. ಸತ್ಯ ಹೊರ ಬಂದರೆ ಜನ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ. ನಮ್ಮದು ಸುಳ್ಳು ಅವರದ್ದು ಸತ್ಯ ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಎಂದು ಮುಖ್ಯಂತ್ರಿಯನ್ನು ಉಲ್ಲೇಖಿಸಿದ್ದಾರೆ.

ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ. ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ. ನಾವು ತನಿಖೆಗೆ ಆಗ್ರಹಿಸಿದ ಮೇಲೆ ಉಪಕರಣಗಳ ಖರೀದಿಗೆ ನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು ಎಂದು ಬರೆದಿದ್ದಾರೆ.

“2,000 ಕೋಟಿ ವೆಚ್ಚದಲ್ಲಿ 50,000 ವೆಂಟಿಲೇಟರ್‌ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ” ಎಂದು ಪ್ರಧಾನಿ‌ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. “ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‌ಗಳು ಕಳಪೆ” ಎಂದು ಈ ಮಂತ್ರಿಗಳು ಹೇಳಲಿ ನೋಡೋಣ ಎಂದು ಸವಾಲು ಎಸೆದಿದ್ದಾರೆ.

ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರು, ಮೊಬೈಲ್ ಎಲ್ಲದರಲ್ಲಿಯೂ‌ ಸಾಮಾನ್ಯ, ಐಷಾರಾಮಿ‌ ಎರಡೂ ಇರುತ್ತವೆ. ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬಹುದಿತ್ತಲ್ಲವೇ? ಯಾಕೆ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದರು? ಇದಕ್ಕೆ ಮಂತ್ರಿಗಳಲ್ಲಿ ಉತ್ತರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.


ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ


ಕಾರ್ಮಿಕ ಇಲಾಖೆಯಲ್ಲಿ 1,000 ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಹೇಳಿಲ್ಲ, ಅಷ್ಟು ಖರ್ಚಾಗಿದೆ ಎಂದಿದ್ದೇನೆ. ಆದರೆ ಫುಡ್ ಪ್ಯಾಕೇಟ್ ಕೊಡುವಲ್ಲಿ ಅವ್ಯವಹಾರ ಆಗಿದೆ, ಒಂದು ಸಾವಿರ ಕೋಟಿ ಖರ್ಚಾಗಿದೆ ಅದಕ್ಕೆ ಲೆಕ್ಕ ಕೊಡಿ ಅಂದಿದ್ದೆ.  ಕಾರ್ಮಿಕ‌ ಸಚಿವರು ಮೊದಲು ಆ ಲೆಕ್ಕ‌‌ ಕೊಡಲಿ ಎಂದು ಆಗ್ರಹಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದು ನಿಜ. ತಜ್ಞರ ಶಿಫಾರಸು ಇಲ್ಲದೆ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ‌ ಟಿಪ್ಪಣಿ ಬರೆಯಲಾಗಿರುವುದು ನಿಜ. ಈ ಟಿಪ್ಪಣಿಯ ಮಹತ್ವ ಏನು? ಎಂದು ಕೇಳಿದ್ದಾರೆ.

ಪ್ರಸ್ತಾವನೆ,ಅನುಮೋದನೆ ಮಂಜೂರಾತಿ, ಖರ್ಚು-ವೆಚ್ಚ ಗೊತ್ತಿದ್ದೇ ನಾನು 13 ಬಜೆಟ್ ಮಂಡಿಸಿದ್ದು. ಆದರೆ ಈ ಸುಧಾಕರ್‌ ಯಾರು? ಹೇಗೆ ಎಂದು ಸರಿಯಾಗಿ ಗೊತ್ತಿರಲಿಲ್ಲ. ಅವರಿಗೆ ಟಿಕೆಟ್ ನೀಡಿದ್ದೇ ತಪ್ಪಾಯಿತು. ಮೊದಲ ಬಾರಿ ಸಚಿವರಾದವರು 13 ಬಾರಿ ಬಜೆಟ್ ಮಂಡಿಸಿದ್ದವರಿಗೆ‌ ಪಾಠ ಹೇಳ್ತಾರೆ ಎಂದು ವ್ಯಂಗ್ಯವಾಗಿ ಬರೆದಿದ್ದಾರೆ.

ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಗಳ ಬಗ್ಗೆ ಅವರು ಆರೋಪ‌‌ ಮಾಡಿದ್ದಾರೆ. ನಾನು ಆಗ ಸರ್ಕಾರದಲ್ಲಿ ಇರಲಿಲ್ಲ. ದಾಖಲೆಗಳು ಅವರ ಬಳಿಯೇ ಇದೆ ಅಲ್ಲವೇ ? ಆ ಬಗ್ಗೆಯೂ ತನಿಖೆ ಮಾಡಿಸಿ ಸತ್ಯ ಹೊರತನ್ನಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಹಾಭಾರತದ ಪಾಂಡವರು- ಕೌರವರ ಚರ್ಚೆ ಈಗ ಯಾಕೆ? ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಎಳೆದು ತರುವುದೇಕೆ ? ಅವರು ಕೌರವರಾಗಲೂ ಅರ್ಹತೆ ಇಲ್ಲದ ದುಷ್ಟರು. ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ. ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಬಿಜೆಪಿ ನಾಯಕರಿಗೆ ರಾಮಾಯಣ-ಮಹಾಭಾರತ ಎಂದರೆ ರಾಜಕೀಯ ಅಸ್ತ್ರಗಳು. ನಮಗೆ‌ ಅದು ಬದುಕಿನ‌ ಪಾಠದ ಪುಸ್ತಕಗಳು. ಅದರಿಂದ ನಾವು ನಿತ್ಯ‌ ಒಳ್ಳೆಯದನ್ನು ಕಲಿಯುತ್ತೇವೆ. ಇವರಿಗೆ ಕೌರವರದ್ದೇ ಧ್ಯಾನ,‌ ಅವರವರ ಯೋಗ್ಯತೆಗೆ ತಕ್ಕ ಹಾಗೆ ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣದ ವಿಚಾರದಲ್ಲಿ ರಾಜಕೀಯ ಮಾಡುವ ಉದ್ದೇಶ ನಮಗಿಲ್ಲ,
ಅದರ ಅಗತ್ಯವೂ ಇಲ್ಲ. ಇದಕ್ಕಾಗಿಯೇ ಇವರ ಇತರ ಕರ್ಮ‌ಕಾಂಡಗಳ ಬಗ್ಗೆ ನಾವು ಈಗ ಮಾತನಾಡುತ್ತಿಲ್ಲ. ಆದರೆ ಕೊರೊನಾ ಸಂಬಂಧಿತ ಭ್ರಷ್ಟಾಚಾರಕ್ಕೆ ಜನ ಬಲಿಯಾಗುತ್ತಿರುವುದನ್ನು ನೋಡುತ್ತಾ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಆರೋಪದಿಂದ ಅಧಿಕಾರಿಗಳ‌ ನೈತಿಕ ಸ್ಥೈರ್ಯ ಕುಸಿಯುತ್ತದೆ‌ ಎಂದು
ಬಿಜೆಪಿ ಸಚಿವರು ಕಣ್ಣೀರು ಹಾಕಿದ್ದಾರೆ. ಬಿಬಿಎಂಪಿ ಆಯುಕ್ತರ ಏಕಾಏಕಿ ವರ್ಗಾವಣೆ ಯಾಕಾಯ್ತು? ಯಾವ ಸಚಿವರ ಭ್ರಷ್ಟಾಚಾರ ಮುಚ್ಚಿಡಲು ಅವರನ್ನು ಬಲಿ‌ಕೊಟ್ಟಿರಿ ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯಲಿಲ್ಲವೇ?

ನಮ್ಮ ಆರೋಪಕ್ಕೆ ಪ್ರತಿಕ್ರಿಯಿಸಲು ಐವರು ಸಚಿವರು ಓಡೋಡಿ ಬಂದಿದ್ದಾರೆ. ‘ಮಾಡಿದ್ದಿರಲ್ಲಾ, ಅನುಭವಿಸಿ’ ಎಂದು ಮುಖ್ಯಮಂತ್ರಿ ಅವರೇ ಗದರಿಸಿ ಕಳಿಸಿರಬಹುದು. ಈ ಒಗ್ಗಟ್ಟನ್ನು ಕೊರೊನಾ ನಿಯಂತ್ರಣದಲ್ಲಿ ತೋರಿಸಿದ್ದರೆ ಪರಿಸ್ಥಿತಿ ಈಗಿನಂತೆ ಕೈ ಮೀರಿ ಹೋಗುತ್ತಿರಲಿಲ್ಲ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಓದಿ: ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...