Homeಕರೋನಾ ತಲ್ಲಣಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂಬ ಆರೋಪದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ’ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು’ ಎಂದು ರಾಜ್ಯ ಸರ್ಕಾರದ ವಿರುದ್ದ ಮತ್ತೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ನಿರ್ವಹಣೆಯಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ನಿನ್ನೆ ಪತ್ರಿಕಾಗೋಷ್ಟಿ ನಡೆಸಿದ್ದ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರರಿಗೆ ಆಡಳಿತ ಪಕ್ಷದ ಐವರು ಸಚಿವರು ನಿನ್ನೆಯೆ ಪತ್ರಿಕಾಗೋಷ್ಟಿ ನಡೆಸಿ ಪ್ರತ್ಯುತ್ತರ ನೀಡಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಪಾರದರ್ಶಕವಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.


ಓದಿ: ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ


ಇಂದು ಮತ್ತೇ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?. ಸರ್ಕಾರ ಅಕ್ರಮ‌‌‌ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಕೊರೊನಾ ಖರೀದಿ ಅವ್ಯವಹಾರದ 14 ದಾಖಲೆಗಳನ್ನು ಕೊಟ್ಟಿದ್ದೇವೆ. ಅವು ಸರ್ಕಾರದ್ದೇ ದಾಖಲೆಗಳು. ಅವುಗಳನ್ನು ಸಚಿವರು ನಿರಾಕರಿಸುತ್ತಾರೆ ಎಂದಾದರೆ, ನಿನ್ನೆ ಸರ್ಕಾರದ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದವರು ಮಂತ್ರಿಗಳಾಗಿರುವುದು ನಿಜನಾ? ಸುಳ್ಳಾ? ಎಂದು ಅವರು ಪ್ರಶ್ನಿಸಿದ್ದಾರೆ.

ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕಾದರೆ ನ್ಯಾಯಾಂಗ ತನಿಖೆಯಾಗಲಿ. ಸತ್ಯ ಹೊರ ಬಂದರೆ ಜನ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ. ನಮ್ಮದು ಸುಳ್ಳು ಅವರದ್ದು ಸತ್ಯ ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಎಂದು ಮುಖ್ಯಂತ್ರಿಯನ್ನು ಉಲ್ಲೇಖಿಸಿದ್ದಾರೆ.

ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ. ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ. ನಾವು ತನಿಖೆಗೆ ಆಗ್ರಹಿಸಿದ ಮೇಲೆ ಉಪಕರಣಗಳ ಖರೀದಿಗೆ ನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು ಎಂದು ಬರೆದಿದ್ದಾರೆ.

“2,000 ಕೋಟಿ ವೆಚ್ಚದಲ್ಲಿ 50,000 ವೆಂಟಿಲೇಟರ್‌ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ” ಎಂದು ಪ್ರಧಾನಿ‌ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. “ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‌ಗಳು ಕಳಪೆ” ಎಂದು ಈ ಮಂತ್ರಿಗಳು ಹೇಳಲಿ ನೋಡೋಣ ಎಂದು ಸವಾಲು ಎಸೆದಿದ್ದಾರೆ.

ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರು, ಮೊಬೈಲ್ ಎಲ್ಲದರಲ್ಲಿಯೂ‌ ಸಾಮಾನ್ಯ, ಐಷಾರಾಮಿ‌ ಎರಡೂ ಇರುತ್ತವೆ. ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬಹುದಿತ್ತಲ್ಲವೇ? ಯಾಕೆ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದರು? ಇದಕ್ಕೆ ಮಂತ್ರಿಗಳಲ್ಲಿ ಉತ್ತರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.


ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ


ಕಾರ್ಮಿಕ ಇಲಾಖೆಯಲ್ಲಿ 1,000 ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಹೇಳಿಲ್ಲ, ಅಷ್ಟು ಖರ್ಚಾಗಿದೆ ಎಂದಿದ್ದೇನೆ. ಆದರೆ ಫುಡ್ ಪ್ಯಾಕೇಟ್ ಕೊಡುವಲ್ಲಿ ಅವ್ಯವಹಾರ ಆಗಿದೆ, ಒಂದು ಸಾವಿರ ಕೋಟಿ ಖರ್ಚಾಗಿದೆ ಅದಕ್ಕೆ ಲೆಕ್ಕ ಕೊಡಿ ಅಂದಿದ್ದೆ.  ಕಾರ್ಮಿಕ‌ ಸಚಿವರು ಮೊದಲು ಆ ಲೆಕ್ಕ‌‌ ಕೊಡಲಿ ಎಂದು ಆಗ್ರಹಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದು ನಿಜ. ತಜ್ಞರ ಶಿಫಾರಸು ಇಲ್ಲದೆ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ‌ ಟಿಪ್ಪಣಿ ಬರೆಯಲಾಗಿರುವುದು ನಿಜ. ಈ ಟಿಪ್ಪಣಿಯ ಮಹತ್ವ ಏನು? ಎಂದು ಕೇಳಿದ್ದಾರೆ.

ಪ್ರಸ್ತಾವನೆ,ಅನುಮೋದನೆ ಮಂಜೂರಾತಿ, ಖರ್ಚು-ವೆಚ್ಚ ಗೊತ್ತಿದ್ದೇ ನಾನು 13 ಬಜೆಟ್ ಮಂಡಿಸಿದ್ದು. ಆದರೆ ಈ ಸುಧಾಕರ್‌ ಯಾರು? ಹೇಗೆ ಎಂದು ಸರಿಯಾಗಿ ಗೊತ್ತಿರಲಿಲ್ಲ. ಅವರಿಗೆ ಟಿಕೆಟ್ ನೀಡಿದ್ದೇ ತಪ್ಪಾಯಿತು. ಮೊದಲ ಬಾರಿ ಸಚಿವರಾದವರು 13 ಬಾರಿ ಬಜೆಟ್ ಮಂಡಿಸಿದ್ದವರಿಗೆ‌ ಪಾಠ ಹೇಳ್ತಾರೆ ಎಂದು ವ್ಯಂಗ್ಯವಾಗಿ ಬರೆದಿದ್ದಾರೆ.

ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಗಳ ಬಗ್ಗೆ ಅವರು ಆರೋಪ‌‌ ಮಾಡಿದ್ದಾರೆ. ನಾನು ಆಗ ಸರ್ಕಾರದಲ್ಲಿ ಇರಲಿಲ್ಲ. ದಾಖಲೆಗಳು ಅವರ ಬಳಿಯೇ ಇದೆ ಅಲ್ಲವೇ ? ಆ ಬಗ್ಗೆಯೂ ತನಿಖೆ ಮಾಡಿಸಿ ಸತ್ಯ ಹೊರತನ್ನಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಹಾಭಾರತದ ಪಾಂಡವರು- ಕೌರವರ ಚರ್ಚೆ ಈಗ ಯಾಕೆ? ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಎಳೆದು ತರುವುದೇಕೆ ? ಅವರು ಕೌರವರಾಗಲೂ ಅರ್ಹತೆ ಇಲ್ಲದ ದುಷ್ಟರು. ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ. ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಬಿಜೆಪಿ ನಾಯಕರಿಗೆ ರಾಮಾಯಣ-ಮಹಾಭಾರತ ಎಂದರೆ ರಾಜಕೀಯ ಅಸ್ತ್ರಗಳು. ನಮಗೆ‌ ಅದು ಬದುಕಿನ‌ ಪಾಠದ ಪುಸ್ತಕಗಳು. ಅದರಿಂದ ನಾವು ನಿತ್ಯ‌ ಒಳ್ಳೆಯದನ್ನು ಕಲಿಯುತ್ತೇವೆ. ಇವರಿಗೆ ಕೌರವರದ್ದೇ ಧ್ಯಾನ,‌ ಅವರವರ ಯೋಗ್ಯತೆಗೆ ತಕ್ಕ ಹಾಗೆ ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣದ ವಿಚಾರದಲ್ಲಿ ರಾಜಕೀಯ ಮಾಡುವ ಉದ್ದೇಶ ನಮಗಿಲ್ಲ,
ಅದರ ಅಗತ್ಯವೂ ಇಲ್ಲ. ಇದಕ್ಕಾಗಿಯೇ ಇವರ ಇತರ ಕರ್ಮ‌ಕಾಂಡಗಳ ಬಗ್ಗೆ ನಾವು ಈಗ ಮಾತನಾಡುತ್ತಿಲ್ಲ. ಆದರೆ ಕೊರೊನಾ ಸಂಬಂಧಿತ ಭ್ರಷ್ಟಾಚಾರಕ್ಕೆ ಜನ ಬಲಿಯಾಗುತ್ತಿರುವುದನ್ನು ನೋಡುತ್ತಾ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಆರೋಪದಿಂದ ಅಧಿಕಾರಿಗಳ‌ ನೈತಿಕ ಸ್ಥೈರ್ಯ ಕುಸಿಯುತ್ತದೆ‌ ಎಂದು
ಬಿಜೆಪಿ ಸಚಿವರು ಕಣ್ಣೀರು ಹಾಕಿದ್ದಾರೆ. ಬಿಬಿಎಂಪಿ ಆಯುಕ್ತರ ಏಕಾಏಕಿ ವರ್ಗಾವಣೆ ಯಾಕಾಯ್ತು? ಯಾವ ಸಚಿವರ ಭ್ರಷ್ಟಾಚಾರ ಮುಚ್ಚಿಡಲು ಅವರನ್ನು ಬಲಿ‌ಕೊಟ್ಟಿರಿ ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯಲಿಲ್ಲವೇ?

ನಮ್ಮ ಆರೋಪಕ್ಕೆ ಪ್ರತಿಕ್ರಿಯಿಸಲು ಐವರು ಸಚಿವರು ಓಡೋಡಿ ಬಂದಿದ್ದಾರೆ. ‘ಮಾಡಿದ್ದಿರಲ್ಲಾ, ಅನುಭವಿಸಿ’ ಎಂದು ಮುಖ್ಯಮಂತ್ರಿ ಅವರೇ ಗದರಿಸಿ ಕಳಿಸಿರಬಹುದು. ಈ ಒಗ್ಗಟ್ಟನ್ನು ಕೊರೊನಾ ನಿಯಂತ್ರಣದಲ್ಲಿ ತೋರಿಸಿದ್ದರೆ ಪರಿಸ್ಥಿತಿ ಈಗಿನಂತೆ ಕೈ ಮೀರಿ ಹೋಗುತ್ತಿರಲಿಲ್ಲ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಓದಿ: ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...