Homeಕರೋನಾ ತಲ್ಲಣಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು: ಸಿದ್ದರಾಮಯ್ಯ ತಿರುಗೇಟು

ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂಬ ಆರೋಪದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ’ಅವರು ಕೌರವರಾಗಲೂ ಅರ್ಹತೆಯಿಲ್ಲದ ದುಷ್ಟರು’ ಎಂದು ರಾಜ್ಯ ಸರ್ಕಾರದ ವಿರುದ್ದ ಮತ್ತೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೊರೊನಾ ನಿರ್ವಹಣೆಯಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ನಿನ್ನೆ ಪತ್ರಿಕಾಗೋಷ್ಟಿ ನಡೆಸಿದ್ದ ಡಿಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರರಿಗೆ ಆಡಳಿತ ಪಕ್ಷದ ಐವರು ಸಚಿವರು ನಿನ್ನೆಯೆ ಪತ್ರಿಕಾಗೋಷ್ಟಿ ನಡೆಸಿ ಪ್ರತ್ಯುತ್ತರ ನೀಡಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಪಾರದರ್ಶಕವಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.


ಓದಿ: ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ


ಇಂದು ಮತ್ತೇ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, “ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?. ಸರ್ಕಾರ ಅಕ್ರಮ‌‌‌ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಕೊರೊನಾ ಖರೀದಿ ಅವ್ಯವಹಾರದ 14 ದಾಖಲೆಗಳನ್ನು ಕೊಟ್ಟಿದ್ದೇವೆ. ಅವು ಸರ್ಕಾರದ್ದೇ ದಾಖಲೆಗಳು. ಅವುಗಳನ್ನು ಸಚಿವರು ನಿರಾಕರಿಸುತ್ತಾರೆ ಎಂದಾದರೆ, ನಿನ್ನೆ ಸರ್ಕಾರದ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದವರು ಮಂತ್ರಿಗಳಾಗಿರುವುದು ನಿಜನಾ? ಸುಳ್ಳಾ? ಎಂದು ಅವರು ಪ್ರಶ್ನಿಸಿದ್ದಾರೆ.

ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕಾದರೆ ನ್ಯಾಯಾಂಗ ತನಿಖೆಯಾಗಲಿ. ಸತ್ಯ ಹೊರ ಬಂದರೆ ಜನ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ. ನಮ್ಮದು ಸುಳ್ಳು ಅವರದ್ದು ಸತ್ಯ ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಎಂದು ಮುಖ್ಯಂತ್ರಿಯನ್ನು ಉಲ್ಲೇಖಿಸಿದ್ದಾರೆ.

ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ. ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ. ನಾವು ತನಿಖೆಗೆ ಆಗ್ರಹಿಸಿದ ಮೇಲೆ ಉಪಕರಣಗಳ ಖರೀದಿಗೆ ನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು ಎಂದು ಬರೆದಿದ್ದಾರೆ.

“2,000 ಕೋಟಿ ವೆಚ್ಚದಲ್ಲಿ 50,000 ವೆಂಟಿಲೇಟರ್‌ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ” ಎಂದು ಪ್ರಧಾನಿ‌ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. “ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‌ಗಳು ಕಳಪೆ” ಎಂದು ಈ ಮಂತ್ರಿಗಳು ಹೇಳಲಿ ನೋಡೋಣ ಎಂದು ಸವಾಲು ಎಸೆದಿದ್ದಾರೆ.

ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರು, ಮೊಬೈಲ್ ಎಲ್ಲದರಲ್ಲಿಯೂ‌ ಸಾಮಾನ್ಯ, ಐಷಾರಾಮಿ‌ ಎರಡೂ ಇರುತ್ತವೆ. ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬಹುದಿತ್ತಲ್ಲವೇ? ಯಾಕೆ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದರು? ಇದಕ್ಕೆ ಮಂತ್ರಿಗಳಲ್ಲಿ ಉತ್ತರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.


ಓದಿ: ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ


ಕಾರ್ಮಿಕ ಇಲಾಖೆಯಲ್ಲಿ 1,000 ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಹೇಳಿಲ್ಲ, ಅಷ್ಟು ಖರ್ಚಾಗಿದೆ ಎಂದಿದ್ದೇನೆ. ಆದರೆ ಫುಡ್ ಪ್ಯಾಕೇಟ್ ಕೊಡುವಲ್ಲಿ ಅವ್ಯವಹಾರ ಆಗಿದೆ, ಒಂದು ಸಾವಿರ ಕೋಟಿ ಖರ್ಚಾಗಿದೆ ಅದಕ್ಕೆ ಲೆಕ್ಕ ಕೊಡಿ ಅಂದಿದ್ದೆ.  ಕಾರ್ಮಿಕ‌ ಸಚಿವರು ಮೊದಲು ಆ ಲೆಕ್ಕ‌‌ ಕೊಡಲಿ ಎಂದು ಆಗ್ರಹಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದು ನಿಜ. ತಜ್ಞರ ಶಿಫಾರಸು ಇಲ್ಲದೆ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ‌ ಟಿಪ್ಪಣಿ ಬರೆಯಲಾಗಿರುವುದು ನಿಜ. ಈ ಟಿಪ್ಪಣಿಯ ಮಹತ್ವ ಏನು? ಎಂದು ಕೇಳಿದ್ದಾರೆ.

ಪ್ರಸ್ತಾವನೆ,ಅನುಮೋದನೆ ಮಂಜೂರಾತಿ, ಖರ್ಚು-ವೆಚ್ಚ ಗೊತ್ತಿದ್ದೇ ನಾನು 13 ಬಜೆಟ್ ಮಂಡಿಸಿದ್ದು. ಆದರೆ ಈ ಸುಧಾಕರ್‌ ಯಾರು? ಹೇಗೆ ಎಂದು ಸರಿಯಾಗಿ ಗೊತ್ತಿರಲಿಲ್ಲ. ಅವರಿಗೆ ಟಿಕೆಟ್ ನೀಡಿದ್ದೇ ತಪ್ಪಾಯಿತು. ಮೊದಲ ಬಾರಿ ಸಚಿವರಾದವರು 13 ಬಾರಿ ಬಜೆಟ್ ಮಂಡಿಸಿದ್ದವರಿಗೆ‌ ಪಾಠ ಹೇಳ್ತಾರೆ ಎಂದು ವ್ಯಂಗ್ಯವಾಗಿ ಬರೆದಿದ್ದಾರೆ.

ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಗಳ ಬಗ್ಗೆ ಅವರು ಆರೋಪ‌‌ ಮಾಡಿದ್ದಾರೆ. ನಾನು ಆಗ ಸರ್ಕಾರದಲ್ಲಿ ಇರಲಿಲ್ಲ. ದಾಖಲೆಗಳು ಅವರ ಬಳಿಯೇ ಇದೆ ಅಲ್ಲವೇ ? ಆ ಬಗ್ಗೆಯೂ ತನಿಖೆ ಮಾಡಿಸಿ ಸತ್ಯ ಹೊರತನ್ನಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಹಾಭಾರತದ ಪಾಂಡವರು- ಕೌರವರ ಚರ್ಚೆ ಈಗ ಯಾಕೆ? ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಎಳೆದು ತರುವುದೇಕೆ ? ಅವರು ಕೌರವರಾಗಲೂ ಅರ್ಹತೆ ಇಲ್ಲದ ದುಷ್ಟರು. ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ. ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ, ಐಯಾಮ್ ಸಿದ್ದರಾಮಯ್ಯ ಓನ್ಲಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಬಿಜೆಪಿ ನಾಯಕರಿಗೆ ರಾಮಾಯಣ-ಮಹಾಭಾರತ ಎಂದರೆ ರಾಜಕೀಯ ಅಸ್ತ್ರಗಳು. ನಮಗೆ‌ ಅದು ಬದುಕಿನ‌ ಪಾಠದ ಪುಸ್ತಕಗಳು. ಅದರಿಂದ ನಾವು ನಿತ್ಯ‌ ಒಳ್ಳೆಯದನ್ನು ಕಲಿಯುತ್ತೇವೆ. ಇವರಿಗೆ ಕೌರವರದ್ದೇ ಧ್ಯಾನ,‌ ಅವರವರ ಯೋಗ್ಯತೆಗೆ ತಕ್ಕ ಹಾಗೆ ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣದ ವಿಚಾರದಲ್ಲಿ ರಾಜಕೀಯ ಮಾಡುವ ಉದ್ದೇಶ ನಮಗಿಲ್ಲ,
ಅದರ ಅಗತ್ಯವೂ ಇಲ್ಲ. ಇದಕ್ಕಾಗಿಯೇ ಇವರ ಇತರ ಕರ್ಮ‌ಕಾಂಡಗಳ ಬಗ್ಗೆ ನಾವು ಈಗ ಮಾತನಾಡುತ್ತಿಲ್ಲ. ಆದರೆ ಕೊರೊನಾ ಸಂಬಂಧಿತ ಭ್ರಷ್ಟಾಚಾರಕ್ಕೆ ಜನ ಬಲಿಯಾಗುತ್ತಿರುವುದನ್ನು ನೋಡುತ್ತಾ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ಆರೋಪದಿಂದ ಅಧಿಕಾರಿಗಳ‌ ನೈತಿಕ ಸ್ಥೈರ್ಯ ಕುಸಿಯುತ್ತದೆ‌ ಎಂದು
ಬಿಜೆಪಿ ಸಚಿವರು ಕಣ್ಣೀರು ಹಾಕಿದ್ದಾರೆ. ಬಿಬಿಎಂಪಿ ಆಯುಕ್ತರ ಏಕಾಏಕಿ ವರ್ಗಾವಣೆ ಯಾಕಾಯ್ತು? ಯಾವ ಸಚಿವರ ಭ್ರಷ್ಟಾಚಾರ ಮುಚ್ಚಿಡಲು ಅವರನ್ನು ಬಲಿ‌ಕೊಟ್ಟಿರಿ ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯಲಿಲ್ಲವೇ?

ನಮ್ಮ ಆರೋಪಕ್ಕೆ ಪ್ರತಿಕ್ರಿಯಿಸಲು ಐವರು ಸಚಿವರು ಓಡೋಡಿ ಬಂದಿದ್ದಾರೆ. ‘ಮಾಡಿದ್ದಿರಲ್ಲಾ, ಅನುಭವಿಸಿ’ ಎಂದು ಮುಖ್ಯಮಂತ್ರಿ ಅವರೇ ಗದರಿಸಿ ಕಳಿಸಿರಬಹುದು. ಈ ಒಗ್ಗಟ್ಟನ್ನು ಕೊರೊನಾ ನಿಯಂತ್ರಣದಲ್ಲಿ ತೋರಿಸಿದ್ದರೆ ಪರಿಸ್ಥಿತಿ ಈಗಿನಂತೆ ಕೈ ಮೀರಿ ಹೋಗುತ್ತಿರಲಿಲ್ಲ, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಓದಿ: ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...