Homeಕರ್ನಾಟಕಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ಮಾಂಸಾಹಾರಕ್ಕೆ ಸಸ್ಯಾಹಾರ ಪರ್ಯಾಯವಲ್ಲ ಎನ್ನುತ್ತಾರೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ.

- Advertisement -
- Advertisement -

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಕೋಳಿ ಮೊಟ್ಟೆ ಕೊಡುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬೀದರ್‌ ನಗರದಲ್ಲಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ, ಅಕ್ಕನಾಗಲಾಂಬಿಕಾ ಮಹಿಳಾ ಗಣ ಹಾಗೂ ಲಿಂಗಾಯತ ಸಮಾಜದ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಬೀದರ್‌ ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತದ ಅಧಿಕಾರಿಗೆ ಪ್ರತಿಭಟನಾಕಾರರು ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿರುವ ಬಸವ ಮಂಟಪದ ಪ್ರಧಾನ ಸಂಚಾಲಕರಾದ ಮಾತೆ ಸತ್ಯಾದೇವಿ, “ಅನುದಾನಿತ ಮತ್ತು ಸರ್ಕಾರಿ ಶಾಲೆಗಳ 1 ರಿಂದ 8ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಕೋಳಿಮೊಟ್ಟೆ ಕೊಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಮೊಟ್ಟೆ ಮಾಂಸಾಹಾರ, ಇದರಿಂದ ಮಕ್ಕಳ ಮಾನಸಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸುವ ಕಳಕಳಿ ಇದ್ದಲ್ಲಿ ಹಣ್ಣು, ದ್ವಿದಳ ಧಾನ್ಯಗಳು ಮತ್ತು ಮೊಳಕೆ ಕಾಳು ಕೊಡುವ ವ್ಯವಸ್ಥೆ ಮಾಡಲಿ” ಎಂದು ಸಲಹೆ ನೀಡಿದ್ದಾರೆ.

“ಶಾಲೆಯಲ್ಲಿ ಮುಗ್ಧ ಮಕ್ಕಳಿಗೆ ಕೋಳಿಮೊಟ್ಟೆ ನೀಡಿದರೆ ಉದ್ದೇಶಪೂರ್ವಕವಾಗಿ ಮಾಂಸಾಹಾರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಮೊಟ್ಟೆ ತಿನ್ನುವ ಮಕ್ಕಳು ಮತ್ತು ತಿನ್ನದ ಮಕ್ಕಳೆಂದು ಶಾಲೆಯಲ್ಲಿ ನೀವೇ ಭೇದಭಾವ ಮೂಡಿಸಿದಂತಾಗುತ್ತದೆ. ಜೈನ ಮತ್ತು ಲಿಂಗಾಯತ ಧರ್ಮದ ಪ್ರಕಾರ ಮೊಟ್ಟೆ ಮಾಂಸಾಹಾರ ಪದ್ಧತಿಯಾಗಿದೆ. ಇದರಿಂದ ಸಸ್ಯಾಹಾರಿ ಪದ್ಧತಿ ಅಳವಡಿಸಿಕೊಂಡವರಿಗೆ ಇದು ಅವಮಾನ ಮಾಡಿದಂತಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿರ್ಣಯವನ್ನು ಹಿಂಪಡೆಯಬೇಕು” ಎಂದು ಮಾತಾಜಿ ಆಗ್ರಹಿಸಿದ್ದಾರೆ.

“ಮೊಟ್ಟೆ ಸಸ್ಯಾಹಾರ, ಮಾಂಸಾಹಾರ ಅಲ್ಲ. ಅದು ಪೌಷ್ಟಿಕಾಂಶಗಳಿಂದ ತುಂಬಿದ ದ್ರವ. ಮೊಟ್ಟೆಗೆ ಧರ್ಮ, ಜಾತಿ ಲೇಪನ ಮಾಡಬಾರದು” ಎಂದು ಆರ್‌ಪಿಐ, ಭಾರತೀಯ ವಿದ್ಯಾರ್ಥಿ ಸಂಘಟನೆಗಳು ಹೇಳಿವೆ. ಮೊಟ್ಟೆಯನ್ನು ಸಸ್ಯಾಹಾರವೆಂದು ಬಣ್ಣಿಸಿ, ಅದರ ಉಪಯೋಗವನ್ನು ಪಡೆಯುವುದು ಮತ್ತೊಂದು ರೀತಿಯ ದ್ವಂದ್ವ ನಿಲುವು. ಆದರೆ ಎಲ್ಲ ಚರ್ಚೆಗಳಾಚೆಗೆ ‘ಮೊಟ್ಟೆ’ ಪೌಷ್ಟಿಕಯುಕ್ತ ಆಹಾರ ಎಂಬುದು ಎಲ್ಲ ವೈದ್ಯರ ಅಭಿಪ್ರಾಯ.

ಮಾಂಸಾಹಾರಕ್ಕೆ ಸಸ್ಯಾಹಾರ ಪರಿಹಾರವಲ್ಲ: ಡಾ.ಕಕ್ಕಿಲ್ಲಾಯ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು, “ಕೇರಳ ಮತ್ತು ತಮಿಳುನಾಡಿನಲ್ಲಿ ವಾರಕ್ಕೆ ಐದು ದಿನ ಮಕ್ಕಳಿಗೆ ಮೊಟ್ಟೆ ಕೊಡುತ್ತಿದ್ದಾರೆ. ಅಲ್ಲಿ ಮಕ್ಕಳ ಕುಪೋಷಣೆ ಇಡೀ ದೇಶದಲ್ಲಿ ಕನಿಷ್ಠ ಮಟ್ಟದಲ್ಲಿದೆ. ಕರ್ನಾಟಕದಲ್ಲಿ 2007-2008ರಲ್ಲಿ ಈ ಪ್ರಸ್ತಾಪ ಬಂದ ದಿನದಿಂದ ಈ ಕಾಟವನ್ನು ಸ್ವಾಮೀಜಿಗಳು ಕೊಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮಕ್ಕಳಲ್ಲಿ ಕುಪೋಷಣೆ ಶೇ. 38 ಇದೆ. ಹಿಂದುಳಿದ ಜಿಲ್ಲೆಗಳಲ್ಲಿ ಈ ಪ್ರಮಾಣ ಇನ್ನೂ ಹೆಚ್ಚಾಗಿದೆ. ವೈಜ್ಞಾನಿಕ ಕಾರಣದಿಂದ ಈ ಹಿಂದುಳಿದ ಜಿಲ್ಲೆಗಳಲ್ಲಿ ಮೊಟ್ಟೆಯನ್ನು ಕೊಡಲು ಸರ್ಕಾರ ಮುಂದಾಗಿದೆ. ಇದಕ್ಕೆ ವಿರೋಧ ಸಲ್ಲದು” ಎಂದರು.

“ಮಾಂಸಾಹಾರಕ್ಕೆ ಪರ್ಯಾಯ ಇಲ್ಲ. ಮಕ್ಕಳಿಗೆ ಬೇಕಾದಷ್ಟು ಪ್ರೋಟೀನ್‌‌ ಯಾವುದೇ ಸಸ್ಯಾಹಾರದಲ್ಲಿ ಸಿಗುವುದಿಲ್ಲ. ರಾಜ್ಯದಲ್ಲಿ ಶೇ. 80ರಿಂದ 88ರಷ್ಟು ಜನರು ಮಾಂಸಾಹಾರವನ್ನು ಸೇವಿಸುತ್ತಾರೆ. 12ರಿಂದ 20 ಶೇಕಡಾ ಜನರು ಮನೆಯಲ್ಲಿ ಸಸ್ಯಾಹಾರಿಗಳು. ಇವರ ಮಕ್ಕಳಿಗೆ ಮನೆಯಲ್ಲಿ ಮೊಟ್ಟೆಯನ್ನು ಕೊಡಬೇಡಿ” ಎಂಬುದು ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರ ಅಭಿಪ್ರಾಯ.

ಅಪೌಷ್ಟಿಕತೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಐದನೇ ಸ್ಥಾನ

“ಭಾರತದಲ್ಲಿ 33 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ, ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅಪೌಷ್ಟಿಕ ಮಕ್ಕಳಿದ್ದಾರೆ” ಎಂದು ಪಿಟಿಐ ವರದಿ ಮಾಡಿತ್ತು. ಪಿಟಿಐ ಸುದ್ದಿಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಈ ಮಾಹಿತಿಯನ್ನು ಪಡೆದುಕೊಂಡಿತ್ತು.

ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಚಿವಾಲಯದ ಅಕ್ಟೋಬರ್‌ 14ರವರೆಗಿನ ಮಾಹಿತಿ ಪ್ರಕಾರ, ಅಪೌಷ್ಟಿಕತೆಯನ್ನು ಹೊಂದಿರುವ ಅರ್ಧದಷ್ಟು ಮಕ್ಕಳು ತೀವ್ರತರನಾದ ಅಪೌಷ್ಟಿಕತೆಯನ್ನು ಹೊಂದಿವೆ. 17,76,902 ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇದ್ದು, 15,46,420 ಮಕ್ಕಳಲ್ಲಿ ಮಧ್ಯಮ ತೀವ್ರ ಅಪೌಷ್ಟಿಕತೆ ಇದೆ.

ಎತ್ತರಕ್ಕೆ ಅನುಗುಣವಾಗಿ ಇಲ್ಲದ ತೂಕ, ತೋಳಿನ ಮಧ್ಯದ ಸುತ್ತಳತೆ 115 ಮಿಲಿಮೀಟರ್‌ಗಿಂತ ಕಡಿಮೆ ಇರುವುದು ತೀವ್ರ ಅಪೌಷ್ಟಿಕತೆಯನ್ನು ಸೂಚಿಸುತ್ತದೆ ಎಂದು ವಿಶ್ವಸಂಸ್ಥೆ ಹೇಳಿದೆ. ತೋಳಿನ ಮಧ್ಯದ ಸುತ್ತಳತೆ 115 ಮಿಲಿಮೀಟರ್‌ಗಳಿಗಿಂತ ಹೆಚ್ಚು ಆದರೆ 125 ಮಿಲಿಮೀಟರ್‌ಗಳಿಗಿಂತ ಕಡಿಮೆ ಇದ್ದರೆ ಅದನ್ನು ಮಧ್ಯಮ ತೀವ್ರ ಅಪೌಷ್ಟಿಕತೆ ಎಂದು ವಿಶ್ವಸಂಸ್ಥೆ ವ್ಯಾಖ್ಯಾನಿಸಿದೆ.

ವರದಿಯ ಪ್ರಕಾರ, 6,16,772 ಅಪೌಷ್ಟಿಕ ಮಕ್ಕಳನ್ನು ಹೊಂದಿರುವ ಮಹಾರಾಷ್ಟ್ರ ರಾಜ್ಯ ಮೊದಲ ಸ್ಥಾನದಲ್ಲಿದೆ. ಬಿಹಾರದಲ್ಲಿ 4,75,824, ಗುಜರಾತ್‌ನಲ್ಲಿ 3,20,465, ಆಂಧ್ರಪ್ರದೇಶದಲ್ಲಿ 2,67,228, ಕರ್ನಾಟಕದಲ್ಲಿ 2,49,463, ಉತ್ತರ ಪ್ರದೇಶದಲ್ಲಿ 1,86,640 ಅಪೌಷ್ಟಿಕ ಮಕ್ಕಳಿದ್ದಾರೆ.

ನವೆಂಬರ್ 2020 ಮತ್ತು ಈ ವರ್ಷದ ಅಕ್ಟೋಬರ್ 14ರ ನಡುವೆ ತೀವ್ರತರವಾದ ಅಪೌಷ್ಟಿಕತೆಯ ಮಕ್ಕಳ ಸಂಖ್ಯೆಯಲ್ಲಿ 91% ಏರಿಕೆಯಾಗಿದೆ. ನವೆಂಬರ್ 2020ರಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ 9,27,606 ಆಗಿತ್ತು. ಪಿಟಿಐ ವರದಿ ಪ್ರಕಾರ, ಎರಡು ವಿಧದಲ್ಲಿ ಅಪೌಷ್ಟಿಕ ಮಕ್ಕಳ ಅಂಕಿ-ಅಂಶಗಳನ್ನು ಸರ್ಕಾರ ದಾಖಲಿಸಿದೆ. ಕಳೆದ ವರ್ಷದ ಅಂಕಿಅಂಶಗಳನ್ನು ರಾಜ್ಯ ಸರ್ಕಾರಗಳು ಸಂಗ್ರಹಿಸಿ ಕೇಂದ್ರಕ್ಕೆ ರವಾನಿಸಿದ್ದರೆ, ಈ ವರ್ಷದ ಅಂಕಿಅಂಶಗಳನ್ನು ಅಂಗನವಾಡಿ ಕಾರ್ಯಕರ್ತೆಯರು ನೇರವಾಗಿ ಪೋಷಣ್‌ ಟ್ರ್ಯಾಕರ್ ಅಪ್ಲಿಕೇಶನ್‌ನಲ್ಲಿ ನಮೂದಿಸಿ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ.

ಕಳೆದ ವರ್ಷದ ದತ್ತಾಂಶವು ಆರು ತಿಂಗಳಿಂದ ಆರು ವರ್ಷಗಳವರೆಗಿನ ಮಕ್ಕಳ ಗುಂಪಿಗೆ ಸಂಬಂಧಿಸಿದ್ದು, ಈ ವರ್ಷದ ದತ್ತಾಂಶದಲ್ಲಿ ಮಕ್ಕಳ ವಯಸ್ಸಿನ ಗುಂಪನ್ನು ನಿರ್ದಿಷ್ಟಪಡಿಸಲಾಗಿಲ್ಲ. ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಅವುಗಳ ಫಲಾನುಭವಿಗಳನ್ನು ಪತ್ತೆಹಚ್ಚಲು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪೋಷಣ್‌ ಟ್ರ್ಯಾಕರ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದೆ.

ಹಿಂದಿನ ಅಂಕಿ-ಅಂಶಗಳ ಪ್ರಕಾರ ಅಪೌಷ್ಟಿಕತೆ, ರಕ್ತಹೀನತೆ ಹೊಂದಿರುವ ಶಾಲಾ ಮಕ್ಕಳ ಶೇಕಡಾವಾರು ಪ್ರಮಾಣ ಕರ್ನಾಟಕದಲ್ಲಿ ತೀವ್ರತರನಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಶೇ. 74ರಷ್ಟು ಅಪೌಷ್ಟಿಕತೆ ಇದೆ. ಕಲಬುರಗಿಯಲ್ಲಿ ಶೇ. 72.4, ಬಳ್ಳಾರಿಯಲ್ಲಿ ಶೇ. 72.3, ಕೊಪ್ಪಳದಲ್ಲಿ ಶೇ. 70.7, ರಾಯಚೂರಿನಲ್ಲಿ ಶೇ. 70.6, ಬೀದರ್‌ನಲ್ಲಿ ಶೇ. 69.1, ವಿಜಯಪುರದಲ್ಲಿ ಶೇ. 68ರಷ್ಟು ಅಪೌಷ್ಟಿಕತೆ ವರದಿಯಾಗಿದೆ.

ಸಸ್ಯಾಹಾರ, ಮಾಂಸಾಹಾರ ಭಿನ್ನತೆ ಸಲ್ಲದು ಎಂದಿದ್ದರು ಬಸವಣ್ಣ

ಮೊಟ್ಟೆ ಮಾಂಸಾಹಾರವಾಗಿದ್ದು, ಅದನ್ನು ಮಕ್ಕಳಿಗೆ ಕೊಡಬೇಡಿ ಎಂದು ಇಂದು ದನಿ ಎತ್ತಿರುವವರು ಬಸವಣ್ಣನವರ ಅನುಯಾಯಿಗಳು ಎಂದು ಬಿಂಬಿಸಿಕೊಂಡಿದ್ದಾರೆ. ಆಹಾರ ಸಂಸ್ಕೃತಿಯ ಕುರಿತು ಬಸವಣ್ಣ ಇಂತಹ ಯಾವುದೇ ತಾತ್ಸರವನ್ನು ಹೊಂದಿರಲಿಲ್ಲ. ಬಸವಣ್ಣನವರ ಒಂದು ವಚನ ನಮ್ಮನ್ನು ಚಿಂತನೆಗೆ ಹಚ್ಚಬೇಕು.

“ಮರ ಗಿಡ ಬಳ್ಳಿ ಧಾನ್ಯಂಗಳ ಬೆಳಸೆಲ್ಲವ ತರಿತರಿದು

ಪ್ರಾಣವ ಕೊಂದುಂಡು, ಶರೀರವ ಹೊರೆವ ದೋಷಕ್ಕೆ

ಇನ್ಯಾವುದು ವಿಧಿಯಯ್ಯಾ

ಒಂದಿಂದ್ರಿಯ ಮೊದಲಾಗಿ ಐದಿಂದ್ರಿಯ ಕಡೆಯಾದ

ಜೀವಜಾಲದಲ್ಲಿದೆ ಚರಾಚರವೆಲ್ಲ

ಅದು ಕಾರಣ,

ಕೂಡಲ ಸಂಗನ ಶರಣರು ಲಿಂಗಕ್ಕರ್ಪಿಸಿ ಪ್ರಸಾದವ ಕೊಂಡು

ನಿರ್ದೋಷಿಗಳಾಗಿ ಬದುಕಿದರು.

ಇತ್ತೀಚೆಗೆ ಮಧುಮೇಹದ ಕುರಿತು ಮಾತನಾಡುತ್ತಾ ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವರು ಬಸವಣ್ಣನವರ ಈ ವಚನವನ್ನು ಉಲ್ಲೇಖಿಸಿದ್ದರು. “ನಾವು ಮರ, ಗಿಡ, ಬಳ್ಳಿಗಳನ್ನೆಲ್ಲ ಕತ್ತರಿಸಿ ತಿನ್ನುತ್ತೇವೆ, ಪ್ರಾಣಿಗಳನ್ನು ಕೊಂದು ತಿನ್ನುತ್ತೇವೆ. ಈ ಇವುಗಳಿಂದ ಶರೀರವನ್ನು ಹೊರೆಯುತ್ತೇವೆ. ಇವೆಲ್ಲವೂ ಆಹಾರವೇ. ಇದು ದೋಷ. ಇದಕ್ಕೆ ಉತ್ತರ ಏನು? ಬಸವಣ್ಣ ಹೇಳುತ್ತಾರೆ- ಒಂದಿದ್ರಿಯ ಮೊದಲಾಗಿ ಐದಿಂದ್ರಿಯ ಕಡೆಯಾದ ಜೀವಜಾಲದಲ್ಲಿದೆ ಚರ ಅಚರವೆಲ್ಲ; ಅದು ಕಾರಣ ಕೂಡಲ ಸಂಗನ ಶರಣರು ಲಿಂಗಕ್ಕರ್ಪಿಸಿ ಪ್ರಸಾದವ ಕೊಂಡು ನಿರ್ದೋರ್ಷಿಗಳಾಗಿ ಬದುಕಿದರು- ಎಂದು. ಅಂದರೆ ಮಾಂಸಾಹಾರ ತಿಂದರೂ, ಸಸ್ಯಾಹಾರ ತಿಂದರೂ ಜೀವಹಾನಿಯನ್ನು ಮಾಡಿದ ಹಾಗೆಯೇ. ನಾವು ಬದುಕಬೇಕಾದರೆ ನಾವು ಜೀವಿಗಳನ್ನೇ ತಿನ್ನಬೇಕಾಗುತ್ತದೆ. ಎಲ್ಲ ಜೀವಿಗಳಿಗೂ ಸಂವೇದನೆ ಇದೆ. ಅದು ಒಂದಿದ್ರಿಯ ಜೀವಿಯಾಗಲೀ, ಐದಿಂದ್ರಿಯ ಜೀವಿಯಾಗಿರಲಿ. ಹೀಗಾಗಿ ಪ್ರಕೃತಿ ಕೊಟ್ಟಿದ್ದನ್ನು ಲಿಂಗಕ್ಕೆ ಅರ್ಪಿಸಿ, ನೀವು ಇದನ್ನು ಸ್ವೀಕರಿಸಿದರೆ ಇದು ದೋಷ ಅನಿಸುವುದಿಲ್ಲ ಎಂದು ಹನ್ನೆರಡನೇ ಶತನಮಾನದಲ್ಲೇ ಹೇಳಿದ ಬಹುದೊಡ್ಡ ದಾರ್ಶನಿಕ ಬಸವಣ್ಣ” ಎನ್ನುತ್ತಾರೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ.

ಬಸವಣ್ಣನವರ ಬ್ಯಾನರ್‌ ಹಿಡಿದು ಮಾಂಸಾಹಾರ, ಸಸ್ಯಾಹಾರದ ವಿವಾದ ಸೃಷ್ಟಿಸುವವರಿಗೆ ಇದು ಅರ್ಥವಾಗುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...